Homeಎಕಾನಮಿಅಸಮಾನತೆ ನಿವಾರಣೆಗಾಗಿ ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.

ಅಸಮಾನತೆ ನಿವಾರಣೆಗಾಗಿ ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.

ಆಫ್ರಿಕಾ ಖಂಡದ ಅಮೇರಿಕದವನೊಬ್ಬ ಹೀಗೆ ಬರೆದುಕೊಂಡಿದ್ದಾನೆ, ನನಗೆ ಅವಮಾನ ಮತ್ತು ದ್ವೇಷ ತಿಳಿದಿರಲಿಲ್ಲ. ಅದನ್ನು ತಿಳಿಯಲು ಶಾಲೆಗೆ ಹೋಗಬೇಕಾಯಿತು.

- Advertisement -
- Advertisement -

ಆಫ್ರಿಕಾ ಖಂಡದ ಅಮೇರಿಕದವನೊಬ್ಬ ಹೀಗೆ ಬರೆದುಕೊಂಡಿದ್ದಾನೆ, ನನಗೆ ಅವಮಾನ ಮತ್ತು ದ್ವೇಷ ತಿಳಿದಿರಲಿಲ್ಲ. ಅದನ್ನು ತಿಳಿಯಲು ಶಾಲೆಗೆ ಹೋಗಬೇಕಾಯಿತು. ಸಿಮೋನ್ ಡಿ ಬೋವಾ ನಾನು ಮಹಿಳೆಯಾಗಿ ಹುಟ್ಟಲಿಲ್ಲ, ಆದರೆ ಆಗಲ್ಪಟ್ಟೆ ಎಂದಿದ್ದರು. ಸಮಾಜ ವ್ಯಕ್ತಿ ಮತ್ತು ವ್ಯಕ್ತಿತ್ವದ ಸೃಷ್ಟಿಗೆ ನೀಡುವ ಅಪಾರವಾದ ಸಕಾರಾತ್ಮಕ ಅಥವ ನಕಾರಾತ್ಮಕ ಕೊಡುಗೆಯನ್ನು ಈ ಹೇಳಿಕೆಗಳಲ್ಲಿ ಕಾಣಬಹುದು.

ಥಾಮಸ್ ಪಿಕೆಟಿ

ಈ ಶತಮಾನದ ಅತಿ ಹೆಚ್ಚು ಪ್ರಭಾವಿಸಿದ ಅರ್ಥಶಾಸ್ರಜ್ಞರನ್ನಾಗಿ ಥಾಮಸ್ ಪಿಕೆಟಿಯವರನ್ನು ಗುರುತಿಸುತ್ತಾರೆ. ಅವರ ಕ್ಯಾಪಿಟಲ್ ಇನ್ ದಿ 21ನೇ ಶತಮಾನದ ಒಂದು ಮೈಲುಗಲ್ಲು ಎಂದೇ ಪರಿಗಣಿಸಲಾಗಿದೆ. ಅವರ ಇತ್ತೀಚಿನ ಪುಸ್ತಕ ಕ್ಯಾಪಿಟಲ್ ಅಂಡ್ ಐಡಿಯಾಲಜಿ ಕೂಡಾ ಅದೇ ಮಟ್ಟದಲ್ಲಿ ಜಗತ್ತಿನಾದ್ಯಂತ ಚರ್ಚೆ ಆಗುತ್ತಿರುವ ಪುಸ್ತಕ. 1039 ಪುಟದ ಈ ಪುಸ್ತಕ ಒತ್ತಿ ಹೇಳುವುದು ಆರ್ಥಿಕ ಅಸಮಾನತೆಗೆ ಸಾಮಾಜಿಕ, ಸಾಂಸ್ಥಿಕ, ಸೈದ್ಧಾಂತಿಕ ಮತ್ತು ರಾಜಕೀಯ ಆಯಾಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು.

ಕಾರ್ಲ್ ಮಾರ್ಕ್ಸ್ ನ ವರ್ಗ ಸಂಘರ್ಷದ ಹೊರತಾಗಿ, ಸಾಮಾಜಿಕ ಆಯಾಮಗಳಾದ ಜಾತಿ, ಲಿಂಗ, ಬಣ್ಣ, ಧಾರ್ಮಿಕ ಸಂಘಟನೆಗಳು ವ್ಯಕ್ತಿಯನ್ನು ಕೃತಕವಾಗಿ ಮೇಲಿನ ಸ್ಥರದಲ್ಲಿಟ್ಟು ಬಹುಜನರನ್ನು ಹತ್ತಿಕ್ಕಿ ಹತೋಟಿಯಲ್ಲಿಡುವ ಕಾರ್ಯವನ್ನು ಪಿಕೆಟಿ ಐತಿಹಾಸಿಕವಾಗಿ ವಿಸ್ತರಿಸುತ್ತಾ ಹೋಗುತ್ತಾರೆ. ಅಂಕಿ ಅಂಶಗಳಿಲ್ಲದೆ ಪಿಕೆಟಿ ಏನನ್ನೂ ಹೇಳಹೋಗುವುದಿಲ್ಲ. ನಮ್ಮಲ್ಲಿ ಹೀಗೆ ಹೇಳುವುದುಂಟು, ದತ್ತಾಂಶಗಳನ್ನು ನೀಡಿದರೆ ನನ್ನ ದಿಕ್ಕು ಬದಲಿಸುತ್ತೇನೆ ಎಂದು. ಇದಕ್ಕೆ ತಕ್ಕಂತೆ ಪಿಕೆಟಿ ಅನೇಕ ದೇಶಗಳ ಮತ್ತು ಸಾಮ್ರಾಜ್ಯಗಳ ಆಡಳಿತ, ಶ್ರೇಣೀಕೃತ ವರ್ಗ, ಕಾನೂನು ಮತ್ತು ತೆರಿಗೆಗಳ ಮೂಲಕ ಹೇಗೆ ಆರ್ಥಿಕ ಅಸಮಾನತೆಯನ್ನು ಉಂಟುಮಾಡಿವೆ ಎನ್ನುವುದನ್ನು ವಿಸ್ತರಿಸುತ್ತಾರೆ.

ವಿಜಯನಗರ ಸಾಮ್ರಾಜ್ಯದಲ್ಲಿ ಬ್ರಾಹ್ಮಣ ಕ್ಷತ್ರಿಯ ವರ್ಣಗಳ ಒಡಂಬಡಿಕೆ, ಬ್ರಾಹ್ಮಣರಿಗೆ ಭೂದಾನಗಳನ್ನು ಮಾಡಿದ್ದು ಹಾಗೂ ಪುದುಕೊಟ್ಟೆಯಲ್ಲಿ ಕಲಾರ್ಸ್ ದಲಿತರು ಪಟ್ಟಕ್ಕೇರಿದ ಮೇಲೇ ಅವರನ್ನು ಕ್ಷತ್ರಿಯ ವರ್ಣಕ್ಕೆ ಸೇರಿಸಲು ಬ್ರಾಹ್ಮಣ ವರ್ಗದ ಮುದ್ರೆಯ ಅವಶ್ಯಕತೆ ಉಂಟುಮಾಡಿ, ಆ ಪಟ್ಟಕ್ಕಾಗಿ ಬ್ರಾಹ್ಮಣರು ಗಿಟ್ಟಿಸಿಕೊಂಡ ಭೂಮಿ ಮತ್ತು ಗಳಿಸಿದ ಸಂಪತ್ತನ್ನು ವಿವರಿಸುತ್ತಾನೆ. ಶಿವಾಜಿ ಮಹರಾಜ ಕೂಡಾ ಇದೇ ರೀತಿಯ ಒಡಂಬಡಿಕೆ ಮಾಡಿಕೊಳ್ಳಬೇಕಾದ ಪ್ರಸಂಗವು ಬರುತ್ತದೆ. ಈ ರೀತಿ ಆರ್ಥಿಕ ಮುಗ್ಗಟ್ಟಿಗೆ ಅಸಮಾನತೆಗೆ ಸಾಮಾಜಿಕ ಆಯಾಮ ಹೇಗೆ ಕಾರಣ ಎಂದು ಗಣನೀಯವಾಗಿ ಪರಿಗಣಿಸಿ ವಿವರಿಸುತ್ತಾರೆ ಪಿಕೆಟಿ.

ಇಂದಿಗೂ ಸಹ ರಾಜಕಾರಣ, ರಾಜ್ಯ ಮತ್ತು ಕೈಗಾರಿಕೋದ್ಯಮಿಗಳು ಹೇಗೆ ಪರಸ್ಪರ ತಮ್ಮ ತಮ್ಮನ್ನು ಭದ್ರಪಡಿಸಿಕೊಳ್ಳಲು ತಮಗೆ ಬೇಕಾದ ಕಾನೂನು ಮತ್ತು ನಿಯಮಾವಳಿಗಳನ್ನು ಆಗ್ಗಿಂದಾಗ್ಗೆ ರೂಪಿಸಿಕೊಳ್ಳುತ್ತಾರೆ (Regulated regulate regulators)ಎಂಬುದನ್ನು ವಿವರಿಸುತ್ತಾರೆ. ಇದೇ ಸಮಯದಲ್ಲಿ ಈ ಪ್ರಸಂಗ ನೆನಪಾಗುತ್ತದೆ: ಹಿಂದೊಮ್ಮೆ ಆಯವ್ಯಯದ ಮುಂಗಡ ಪತ್ರ ಲೋಕಸಭೆಯಲ್ಲಿ ಮಂಡನೆಯಾಗುವ ಮೊದಲೇ ಅಂಬಾನಿ ಮನೆಯಲ್ಲಿ ರೇಡ್ ಆದಾಗ ಸಿಕ್ಕಿಬಿತ್ತು. ಆಗ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಇದು ಹಣಕಾಸು ಸಚಿವಾಲಯ ಅಂಬಾನಿಗೆ ಮೊದಲೇ ಕೊಟ್ಟಿದ್ದೋ ಅಥವಾ ಅಂಬಾನಿಯೇ ಕೊಟ್ಟ ಪ್ರತಿಯೋ ಎಂದು ಬರೆದಿದ್ದರು. ನ್ಯೂಯಾರ್ಕರ್ ನಿಯತಕಾಲಿಕದ ಕಾರ್ಟೂನ್ ಒಂದು ಹೀಗೆ ಹೇಳುತ್ತದೆ., ಉದ್ಯೋಗಪತಿಗೆ ಒಬ್ಬ ಕೇಳುತ್ತಾನೆ, ನೀವು ಟೀಂ ಪ್ಲೇಯರ್ರೇ?ಎಂದು. ಆತ ಹೇಳುತ್ತಾನೆ, ಇಲ್ಲ, ನಾನು ಟೀಂ ಓನರೆಂದು. ನಮ್ಮ ಕ್ರಿಕೆಟ್ ಟೀಂಗೂ ಇದನ್ನು ಹೋಲಿಸಬಹುದು.

ಭಾರತದೇಶ ಸಾಮಾಜಿಕ ಚಲನಶೀಲತೆಯಲ್ಲಿ ಅತ್ಯಂತ ಕಳಪೆ ಸ್ಥಾನವನ್ನು ಹೊಂದಿದೆ. ಕಳೆದ ವರ್ಷ 82 ದೇಶಗಳಲ್ಲಿ 76ನೇ ಸ್ಥಾನವನ್ನು ಪಡೆದಿತ್ತು. ಅತ್ಯಂತ ಕೆಳಮಟ್ಟದ ಈ ಸ್ಥಾನಕ್ಕೆ ನಮ್ಮಲ್ಲಿನ ಜಾತಿ, ವರ್ಣಬೇಧ ನೀತಿ, ಆರ್ಥಿಕ ಅಸಮಾನತೆ ಕಾರಣ. ಇವೆಲ್ಲವೂ ಸಾಮಾಜಿಕ ಮುಗ್ಗಟ್ಟಿನ ಚಕ್ರವ್ಯೂಹದಿಂದ ಹೊರಕ್ಕೆ ದಾಟಿ ಹೋಗದಂತೆ ತಡೆಗೋಡೆ ಹಾಕಿ ನೋಡಿಕೊಳ್ಳುತ್ತವೆ. ಸೋಶಿಯಲ್ ಮೊಬಿಲಿಟಿ ಇಂಡೆಕ್ಸ್ ಎಂದು ಹೇಳುವ ಈ ಸಾಮಾಜಿಕ ಚಲನಶೀಲತೆಗೆ ನಮ್ಮ ಸಾಂಸ್ಥಿಕ ಸಂಘಟನೆಗಳು, ಧರ್ಮ ಮತ್ತು ಜಾತಿ ವ್ಯವಸ್ಥೆ ಬಲಿಷ್ಟ ತಡೆಗೋಡೆಗಳಾಗಿ ನಿಂತಿವೆ. ಆರ್ಥಿಕ ಅಸಮಾನತೆ ಇಂದು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಂಗತಿ. ವಿಪರ್ಯಾಸವೆಂದರೆ ಕೊರೊನ ಮಹಾಮಾರಿಯ ಕಾಲದಲ್ಲೂ ಬಿಲಿಯನೇರ್‌ಗಳ ಆಸ್ತಿ ಕೊರೋನ ಸೋಂಕು ಮತ್ತು ಸಾವನ್ನು ಮೀರಿ ಬೆಳೆಯುತ್ತಿದೆ. ಅಮೇರಿಕಾದ ಪ್ರಜಾಪ್ರಭುತ್ವವನ್ನು,‘by the 1%, of the 1%, for the 1%’  ಎನ್ನುವುದುಂಟು. ಆಸ್ತಿ ತೆರಿಗೆಯನ್ನು ಸಮಗ್ರವಾಗಿ ಅನುಸ್ಠಾನಗೊಳಿಸಿದ್ದಲ್ಲಿ ಆರ್ಥಿಕ ಅಸಮಾನತೆಯನ್ನು ಹೇಗೆ ತಡೆಗಟ್ಟಬಹುದು ಎನ್ನುವುದನ್ನು ಪಿಕೆಟಿ ಅನೇಕ ಉದಾಹರಣೆಗೊಳೊಂದಿಗೆ ವಿವರಿಸುತ್ತಾನೆ. ಫ್ರಾನ್ಸ್ ದೇಶದಲ್ಲಿ 19ನೇ ಶತಮಾನದಲ್ಲಿ ಪೀಳಿಗೆಯಿಂದ ಪೀಳಿಗೆಗೆ ಬರುವ ಆಸ್ತಿಯ ಮೇಲೆ ಹಾಕಿದ ಕನಿಷ್ಟ ತೆರಿಗೆಯಿಂದ ಹೇಗೆ ಅಸಮಾನತೆಯನ್ನು ಹಿಂದಿಕ್ಕಲು ಸಾಧ್ಯವಾಯಿತೆಂದು ವಿವರಿಸುತ್ತಾನೆ. ಇಂದಿನ ಈ 1% ಪ್ರಜಾಪ್ರಭುತ್ವವನ್ನು ತಡೆಗಟ್ಟಲು ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.


ಇದನ್ನೂ ಓದಿ: ಭಾರತದಲ್ಲಿ ಧರ್ಮಗಳು ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ಅರಿತ್ತಿದ್ದೇವೆಯೇ? : ಬಿ. ಶ್ರೀಪಾದ ಭಟ್

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...