Homeಎಕಾನಮಿಅಸಮಾನತೆ ನಿವಾರಣೆಗಾಗಿ ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.

ಅಸಮಾನತೆ ನಿವಾರಣೆಗಾಗಿ ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.

ಆಫ್ರಿಕಾ ಖಂಡದ ಅಮೇರಿಕದವನೊಬ್ಬ ಹೀಗೆ ಬರೆದುಕೊಂಡಿದ್ದಾನೆ, ನನಗೆ ಅವಮಾನ ಮತ್ತು ದ್ವೇಷ ತಿಳಿದಿರಲಿಲ್ಲ. ಅದನ್ನು ತಿಳಿಯಲು ಶಾಲೆಗೆ ಹೋಗಬೇಕಾಯಿತು.

- Advertisement -
- Advertisement -

ಆಫ್ರಿಕಾ ಖಂಡದ ಅಮೇರಿಕದವನೊಬ್ಬ ಹೀಗೆ ಬರೆದುಕೊಂಡಿದ್ದಾನೆ, ನನಗೆ ಅವಮಾನ ಮತ್ತು ದ್ವೇಷ ತಿಳಿದಿರಲಿಲ್ಲ. ಅದನ್ನು ತಿಳಿಯಲು ಶಾಲೆಗೆ ಹೋಗಬೇಕಾಯಿತು. ಸಿಮೋನ್ ಡಿ ಬೋವಾ ನಾನು ಮಹಿಳೆಯಾಗಿ ಹುಟ್ಟಲಿಲ್ಲ, ಆದರೆ ಆಗಲ್ಪಟ್ಟೆ ಎಂದಿದ್ದರು. ಸಮಾಜ ವ್ಯಕ್ತಿ ಮತ್ತು ವ್ಯಕ್ತಿತ್ವದ ಸೃಷ್ಟಿಗೆ ನೀಡುವ ಅಪಾರವಾದ ಸಕಾರಾತ್ಮಕ ಅಥವ ನಕಾರಾತ್ಮಕ ಕೊಡುಗೆಯನ್ನು ಈ ಹೇಳಿಕೆಗಳಲ್ಲಿ ಕಾಣಬಹುದು.

ಥಾಮಸ್ ಪಿಕೆಟಿ

ಈ ಶತಮಾನದ ಅತಿ ಹೆಚ್ಚು ಪ್ರಭಾವಿಸಿದ ಅರ್ಥಶಾಸ್ರಜ್ಞರನ್ನಾಗಿ ಥಾಮಸ್ ಪಿಕೆಟಿಯವರನ್ನು ಗುರುತಿಸುತ್ತಾರೆ. ಅವರ ಕ್ಯಾಪಿಟಲ್ ಇನ್ ದಿ 21ನೇ ಶತಮಾನದ ಒಂದು ಮೈಲುಗಲ್ಲು ಎಂದೇ ಪರಿಗಣಿಸಲಾಗಿದೆ. ಅವರ ಇತ್ತೀಚಿನ ಪುಸ್ತಕ ಕ್ಯಾಪಿಟಲ್ ಅಂಡ್ ಐಡಿಯಾಲಜಿ ಕೂಡಾ ಅದೇ ಮಟ್ಟದಲ್ಲಿ ಜಗತ್ತಿನಾದ್ಯಂತ ಚರ್ಚೆ ಆಗುತ್ತಿರುವ ಪುಸ್ತಕ. 1039 ಪುಟದ ಈ ಪುಸ್ತಕ ಒತ್ತಿ ಹೇಳುವುದು ಆರ್ಥಿಕ ಅಸಮಾನತೆಗೆ ಸಾಮಾಜಿಕ, ಸಾಂಸ್ಥಿಕ, ಸೈದ್ಧಾಂತಿಕ ಮತ್ತು ರಾಜಕೀಯ ಆಯಾಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು.

ಕಾರ್ಲ್ ಮಾರ್ಕ್ಸ್ ನ ವರ್ಗ ಸಂಘರ್ಷದ ಹೊರತಾಗಿ, ಸಾಮಾಜಿಕ ಆಯಾಮಗಳಾದ ಜಾತಿ, ಲಿಂಗ, ಬಣ್ಣ, ಧಾರ್ಮಿಕ ಸಂಘಟನೆಗಳು ವ್ಯಕ್ತಿಯನ್ನು ಕೃತಕವಾಗಿ ಮೇಲಿನ ಸ್ಥರದಲ್ಲಿಟ್ಟು ಬಹುಜನರನ್ನು ಹತ್ತಿಕ್ಕಿ ಹತೋಟಿಯಲ್ಲಿಡುವ ಕಾರ್ಯವನ್ನು ಪಿಕೆಟಿ ಐತಿಹಾಸಿಕವಾಗಿ ವಿಸ್ತರಿಸುತ್ತಾ ಹೋಗುತ್ತಾರೆ. ಅಂಕಿ ಅಂಶಗಳಿಲ್ಲದೆ ಪಿಕೆಟಿ ಏನನ್ನೂ ಹೇಳಹೋಗುವುದಿಲ್ಲ. ನಮ್ಮಲ್ಲಿ ಹೀಗೆ ಹೇಳುವುದುಂಟು, ದತ್ತಾಂಶಗಳನ್ನು ನೀಡಿದರೆ ನನ್ನ ದಿಕ್ಕು ಬದಲಿಸುತ್ತೇನೆ ಎಂದು. ಇದಕ್ಕೆ ತಕ್ಕಂತೆ ಪಿಕೆಟಿ ಅನೇಕ ದೇಶಗಳ ಮತ್ತು ಸಾಮ್ರಾಜ್ಯಗಳ ಆಡಳಿತ, ಶ್ರೇಣೀಕೃತ ವರ್ಗ, ಕಾನೂನು ಮತ್ತು ತೆರಿಗೆಗಳ ಮೂಲಕ ಹೇಗೆ ಆರ್ಥಿಕ ಅಸಮಾನತೆಯನ್ನು ಉಂಟುಮಾಡಿವೆ ಎನ್ನುವುದನ್ನು ವಿಸ್ತರಿಸುತ್ತಾರೆ.

ವಿಜಯನಗರ ಸಾಮ್ರಾಜ್ಯದಲ್ಲಿ ಬ್ರಾಹ್ಮಣ ಕ್ಷತ್ರಿಯ ವರ್ಣಗಳ ಒಡಂಬಡಿಕೆ, ಬ್ರಾಹ್ಮಣರಿಗೆ ಭೂದಾನಗಳನ್ನು ಮಾಡಿದ್ದು ಹಾಗೂ ಪುದುಕೊಟ್ಟೆಯಲ್ಲಿ ಕಲಾರ್ಸ್ ದಲಿತರು ಪಟ್ಟಕ್ಕೇರಿದ ಮೇಲೇ ಅವರನ್ನು ಕ್ಷತ್ರಿಯ ವರ್ಣಕ್ಕೆ ಸೇರಿಸಲು ಬ್ರಾಹ್ಮಣ ವರ್ಗದ ಮುದ್ರೆಯ ಅವಶ್ಯಕತೆ ಉಂಟುಮಾಡಿ, ಆ ಪಟ್ಟಕ್ಕಾಗಿ ಬ್ರಾಹ್ಮಣರು ಗಿಟ್ಟಿಸಿಕೊಂಡ ಭೂಮಿ ಮತ್ತು ಗಳಿಸಿದ ಸಂಪತ್ತನ್ನು ವಿವರಿಸುತ್ತಾನೆ. ಶಿವಾಜಿ ಮಹರಾಜ ಕೂಡಾ ಇದೇ ರೀತಿಯ ಒಡಂಬಡಿಕೆ ಮಾಡಿಕೊಳ್ಳಬೇಕಾದ ಪ್ರಸಂಗವು ಬರುತ್ತದೆ. ಈ ರೀತಿ ಆರ್ಥಿಕ ಮುಗ್ಗಟ್ಟಿಗೆ ಅಸಮಾನತೆಗೆ ಸಾಮಾಜಿಕ ಆಯಾಮ ಹೇಗೆ ಕಾರಣ ಎಂದು ಗಣನೀಯವಾಗಿ ಪರಿಗಣಿಸಿ ವಿವರಿಸುತ್ತಾರೆ ಪಿಕೆಟಿ.

ಇಂದಿಗೂ ಸಹ ರಾಜಕಾರಣ, ರಾಜ್ಯ ಮತ್ತು ಕೈಗಾರಿಕೋದ್ಯಮಿಗಳು ಹೇಗೆ ಪರಸ್ಪರ ತಮ್ಮ ತಮ್ಮನ್ನು ಭದ್ರಪಡಿಸಿಕೊಳ್ಳಲು ತಮಗೆ ಬೇಕಾದ ಕಾನೂನು ಮತ್ತು ನಿಯಮಾವಳಿಗಳನ್ನು ಆಗ್ಗಿಂದಾಗ್ಗೆ ರೂಪಿಸಿಕೊಳ್ಳುತ್ತಾರೆ (Regulated regulate regulators)ಎಂಬುದನ್ನು ವಿವರಿಸುತ್ತಾರೆ. ಇದೇ ಸಮಯದಲ್ಲಿ ಈ ಪ್ರಸಂಗ ನೆನಪಾಗುತ್ತದೆ: ಹಿಂದೊಮ್ಮೆ ಆಯವ್ಯಯದ ಮುಂಗಡ ಪತ್ರ ಲೋಕಸಭೆಯಲ್ಲಿ ಮಂಡನೆಯಾಗುವ ಮೊದಲೇ ಅಂಬಾನಿ ಮನೆಯಲ್ಲಿ ರೇಡ್ ಆದಾಗ ಸಿಕ್ಕಿಬಿತ್ತು. ಆಗ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಇದು ಹಣಕಾಸು ಸಚಿವಾಲಯ ಅಂಬಾನಿಗೆ ಮೊದಲೇ ಕೊಟ್ಟಿದ್ದೋ ಅಥವಾ ಅಂಬಾನಿಯೇ ಕೊಟ್ಟ ಪ್ರತಿಯೋ ಎಂದು ಬರೆದಿದ್ದರು. ನ್ಯೂಯಾರ್ಕರ್ ನಿಯತಕಾಲಿಕದ ಕಾರ್ಟೂನ್ ಒಂದು ಹೀಗೆ ಹೇಳುತ್ತದೆ., ಉದ್ಯೋಗಪತಿಗೆ ಒಬ್ಬ ಕೇಳುತ್ತಾನೆ, ನೀವು ಟೀಂ ಪ್ಲೇಯರ್ರೇ?ಎಂದು. ಆತ ಹೇಳುತ್ತಾನೆ, ಇಲ್ಲ, ನಾನು ಟೀಂ ಓನರೆಂದು. ನಮ್ಮ ಕ್ರಿಕೆಟ್ ಟೀಂಗೂ ಇದನ್ನು ಹೋಲಿಸಬಹುದು.

ಭಾರತದೇಶ ಸಾಮಾಜಿಕ ಚಲನಶೀಲತೆಯಲ್ಲಿ ಅತ್ಯಂತ ಕಳಪೆ ಸ್ಥಾನವನ್ನು ಹೊಂದಿದೆ. ಕಳೆದ ವರ್ಷ 82 ದೇಶಗಳಲ್ಲಿ 76ನೇ ಸ್ಥಾನವನ್ನು ಪಡೆದಿತ್ತು. ಅತ್ಯಂತ ಕೆಳಮಟ್ಟದ ಈ ಸ್ಥಾನಕ್ಕೆ ನಮ್ಮಲ್ಲಿನ ಜಾತಿ, ವರ್ಣಬೇಧ ನೀತಿ, ಆರ್ಥಿಕ ಅಸಮಾನತೆ ಕಾರಣ. ಇವೆಲ್ಲವೂ ಸಾಮಾಜಿಕ ಮುಗ್ಗಟ್ಟಿನ ಚಕ್ರವ್ಯೂಹದಿಂದ ಹೊರಕ್ಕೆ ದಾಟಿ ಹೋಗದಂತೆ ತಡೆಗೋಡೆ ಹಾಕಿ ನೋಡಿಕೊಳ್ಳುತ್ತವೆ. ಸೋಶಿಯಲ್ ಮೊಬಿಲಿಟಿ ಇಂಡೆಕ್ಸ್ ಎಂದು ಹೇಳುವ ಈ ಸಾಮಾಜಿಕ ಚಲನಶೀಲತೆಗೆ ನಮ್ಮ ಸಾಂಸ್ಥಿಕ ಸಂಘಟನೆಗಳು, ಧರ್ಮ ಮತ್ತು ಜಾತಿ ವ್ಯವಸ್ಥೆ ಬಲಿಷ್ಟ ತಡೆಗೋಡೆಗಳಾಗಿ ನಿಂತಿವೆ. ಆರ್ಥಿಕ ಅಸಮಾನತೆ ಇಂದು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಂಗತಿ. ವಿಪರ್ಯಾಸವೆಂದರೆ ಕೊರೊನ ಮಹಾಮಾರಿಯ ಕಾಲದಲ್ಲೂ ಬಿಲಿಯನೇರ್‌ಗಳ ಆಸ್ತಿ ಕೊರೋನ ಸೋಂಕು ಮತ್ತು ಸಾವನ್ನು ಮೀರಿ ಬೆಳೆಯುತ್ತಿದೆ. ಅಮೇರಿಕಾದ ಪ್ರಜಾಪ್ರಭುತ್ವವನ್ನು,‘by the 1%, of the 1%, for the 1%’  ಎನ್ನುವುದುಂಟು. ಆಸ್ತಿ ತೆರಿಗೆಯನ್ನು ಸಮಗ್ರವಾಗಿ ಅನುಸ್ಠಾನಗೊಳಿಸಿದ್ದಲ್ಲಿ ಆರ್ಥಿಕ ಅಸಮಾನತೆಯನ್ನು ಹೇಗೆ ತಡೆಗಟ್ಟಬಹುದು ಎನ್ನುವುದನ್ನು ಪಿಕೆಟಿ ಅನೇಕ ಉದಾಹರಣೆಗೊಳೊಂದಿಗೆ ವಿವರಿಸುತ್ತಾನೆ. ಫ್ರಾನ್ಸ್ ದೇಶದಲ್ಲಿ 19ನೇ ಶತಮಾನದಲ್ಲಿ ಪೀಳಿಗೆಯಿಂದ ಪೀಳಿಗೆಗೆ ಬರುವ ಆಸ್ತಿಯ ಮೇಲೆ ಹಾಕಿದ ಕನಿಷ್ಟ ತೆರಿಗೆಯಿಂದ ಹೇಗೆ ಅಸಮಾನತೆಯನ್ನು ಹಿಂದಿಕ್ಕಲು ಸಾಧ್ಯವಾಯಿತೆಂದು ವಿವರಿಸುತ್ತಾನೆ. ಇಂದಿನ ಈ 1% ಪ್ರಜಾಪ್ರಭುತ್ವವನ್ನು ತಡೆಗಟ್ಟಲು ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.


ಇದನ್ನೂ ಓದಿ: ಭಾರತದಲ್ಲಿ ಧರ್ಮಗಳು ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ಅರಿತ್ತಿದ್ದೇವೆಯೇ? : ಬಿ. ಶ್ರೀಪಾದ ಭಟ್

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...