Homeಚಳವಳಿಪ್ರೀತಿಸುವುದು ಅಪರಾಧವಲ್ಲ: ಲವ್ ಜಿಹಾದ್ ಕಾನೂನಿನ ವಿರುದ್ಧ ನಾಳೆ ಪ್ರತಿಭಟನೆ

ಪ್ರೀತಿಸುವುದು ಅಪರಾಧವಲ್ಲ: ಲವ್ ಜಿಹಾದ್ ಕಾನೂನಿನ ವಿರುದ್ಧ ನಾಳೆ ಪ್ರತಿಭಟನೆ

ಪ್ರೀತಿಸುವುದು ಅಪರಾಧವಲ್ಲ. ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಲವ್ ಜಿಹಾದ್‌ನಂತಹ ಕೋಮುವಾದಿ ಕಾನೂನುಗಳನ್ನು ತಿರಸ್ಕರಿಸೋಣ.

- Advertisement -
- Advertisement -

ಕರ್ನಾಟಕ ಸೇರಿದಂತೆ ಬಿಜೆಪಿ ನೇತೃತ್ವದ ಸರ್ಕಾರಗಳು ಲವ್ ಜಿಹಾದ್ ನಡೆಯುತ್ತಿದೆ, ಅದನ್ನು ತಡೆಯಲು ಕಾನೂನು ತರುವುದಾಗಿ ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಾಳೆ ಪ್ರೀತಿಗಾಗಿ ಪ್ರತಿಭಟನೆ ನಡೆಯುತ್ತಿದೆ.

ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಲವ್ ಜಿಹಾದ್‌ನಂತಹ ಇಲ್ಲದಿರುವ ಬಿಕ್ಕಟ್ಟುಗಳನ್ನು ನಿಯಂತ್ರಿಸುವ ನೆಪದಲ್ಲಿ ತರುತ್ತಿರುವ ಕೋಮುವಾದಿ ಕಾನೂನುಗಳನ್ನು ತಿರಸ್ಕರಿಸೋಣ ಎಂದು ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಆಂದೋಲನ ಸಮಿತಿ ಕರೆ ನೀಡಿದೆ.

ಡಿಸೆಂಬರ್ 01 ರ ಮಂಗಳವಾರ ಮಧ್ಯಾಹ್ನ 3:30 ಗಂಟೆಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಪ್ರೀತಿಸುವುದು ಅಪರಾಧವಲ್ಲ, ನಮ್ಮ ಬಾಳಸಂಗಾತಿಯಾಗಿ ಯಾರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದಕ್ಕೆ ಬಿಜೆಪಿಯ ಅನುಮತಿ ಬೇಕಿಲ್ಲ ಎಂದು ಸಾರಲು ಸಮಿತಿ ಸಿದ್ದವಾಗಿದೆ.

ಬಿಜೆಪಿಯ ಆಡಳಿತ ವೈಫಲ್ಯದಿಂದಾಗಿ ದೇಶದಲ್ಲಿ ನಾನಾ ಸಮಸ್ಯೆಗಳು ತಲೆದೋರಿವೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ಧೀರೋದಾತ್ತವಾಗಿ ಹೋರಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿಯು ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ ಎಂದು ಸಮಿತಿ ಕಿಡಿಕಾರಿದೆ.

ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಲವ್ ಜಿಹಾದ್ ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿಯವರು 2020ರ ಫೆಬ್ರವರಿಯಲ್ಲಿ ಲೋಕಸಭೆಗೆ ತಿಳಿಸಿದ್ದಾರೆ. ಕರ್ನಾಟಕ ಸೇರಿದಂತೆ ಹಲವು ಹೈಕೋರ್ಟ್‌ಗಳು ಲವ್ ಜಿಹಾದ್ ಎಂಬುದು ಇಲ್ಲವೇ ಇಲ್ಲ ಎಂದು ತೀರ್ಪು ನೀಡಿವೆ. ಆದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ದ್ವೇಷ ಹರಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ದೇಶದ ಸರ್ವೋಚ್ಛ ನ್ಯಾಯಾಲಯವು “ವಯಸ್ಸಿಗೆ ಬಂದ ಪ್ರತಿ ಪ್ರಜೆಗೂ ತಮ್ಮ ಬಾಳಸಂಗಾತಿ ಯಾರೆಂದು ಆಯ್ಕೆ ಮಾಡಿಕೊಳ್ಳುವ ಹಕ್ಕು ಇದೆ. ಇದನ್ನು ನಿರ್ಬಂಧಿಸಲು ಸರ್ಕಾರ ಅಥವಾ ಬೇರೆ ಯಾರಿಗೂ ಅಧಿಕಾರವಿಲ್ಲ ಎಂದಿದೆ. ಅಲ್ಲದೇ ದೇಶದಲ್ಲಿ ನಡೆಯುವ ಅಂತರ್‌ಜಾತಿ-ಅಂತರ್ ಧರ್ಮೀಯ ವಿವಾಹಿತರಿಗೆ ಸರ್ಕಾರ ರಕ್ಷಣೆ ನೀಡಬೇಕೇಂದು ತೀರ್ಪು ನೀಡಿದೆ. ಆದರೆ ಸರ್ಕಾರ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದು ಸಮಿತಿ ಕಿಡಿಕಾರಿದೆ. ಅಲ್ಲದೆ ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ಕೂಡ ಬಿಜೆಪಿಯ ಲವ್ ಜಿಹಾದ್ ಕಾಯ್ದೆಗೆ ವಿರುದ್ಧವಾಗಿ ತೀರ್ಪು ನೀಡಿದ್ದನ್ನು ಸ್ಮರಿಸಬಹುದು.

ಹಾಗಾಗಿ ಬಸವಣ್ಣ, ಪೆರಿಯಾರ್, ಗಾಂಧಿ, ಅಂಬೇಡ್ಕರ್, ಮತ್ತು ಇತರ ನಾಯಕ-ನಾಯಕಿಯರು ಅಂರ್ತಜಾತಿ ಮತ್ತು ಅಂತರ್‌ಧರ್ಮೀಯ ವಿಹಾಗಳನ್ನು ಪ್ರೋತ್ಸಾಹಿಸಿ, ಇವುಗಳಿಂದಲೇ ಭಾತೃತ್ವ ಮತ್ತು ಸಮಾನತಾವಾದದ ಸಮಾಜ ಸಾಧ್ಯ ಎಂದಿದ್ದರು. ಅದನ್ನು ಸಾಕಾರಗೊಳಿಸಲು ಹೋರಾಡೋಣ ಎಂದು ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...