Homeಚಳವಳಿಪ್ರೀತಿಸುವುದು ಅಪರಾಧವಲ್ಲ: ಲವ್ ಜಿಹಾದ್ ಕಾನೂನಿನ ವಿರುದ್ಧ ನಾಳೆ ಪ್ರತಿಭಟನೆ

ಪ್ರೀತಿಸುವುದು ಅಪರಾಧವಲ್ಲ: ಲವ್ ಜಿಹಾದ್ ಕಾನೂನಿನ ವಿರುದ್ಧ ನಾಳೆ ಪ್ರತಿಭಟನೆ

ಪ್ರೀತಿಸುವುದು ಅಪರಾಧವಲ್ಲ. ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಲವ್ ಜಿಹಾದ್‌ನಂತಹ ಕೋಮುವಾದಿ ಕಾನೂನುಗಳನ್ನು ತಿರಸ್ಕರಿಸೋಣ.

- Advertisement -
- Advertisement -

ಕರ್ನಾಟಕ ಸೇರಿದಂತೆ ಬಿಜೆಪಿ ನೇತೃತ್ವದ ಸರ್ಕಾರಗಳು ಲವ್ ಜಿಹಾದ್ ನಡೆಯುತ್ತಿದೆ, ಅದನ್ನು ತಡೆಯಲು ಕಾನೂನು ತರುವುದಾಗಿ ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಾಳೆ ಪ್ರೀತಿಗಾಗಿ ಪ್ರತಿಭಟನೆ ನಡೆಯುತ್ತಿದೆ.

ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಲವ್ ಜಿಹಾದ್‌ನಂತಹ ಇಲ್ಲದಿರುವ ಬಿಕ್ಕಟ್ಟುಗಳನ್ನು ನಿಯಂತ್ರಿಸುವ ನೆಪದಲ್ಲಿ ತರುತ್ತಿರುವ ಕೋಮುವಾದಿ ಕಾನೂನುಗಳನ್ನು ತಿರಸ್ಕರಿಸೋಣ ಎಂದು ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಆಂದೋಲನ ಸಮಿತಿ ಕರೆ ನೀಡಿದೆ.

ಡಿಸೆಂಬರ್ 01 ರ ಮಂಗಳವಾರ ಮಧ್ಯಾಹ್ನ 3:30 ಗಂಟೆಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಪ್ರೀತಿಸುವುದು ಅಪರಾಧವಲ್ಲ, ನಮ್ಮ ಬಾಳಸಂಗಾತಿಯಾಗಿ ಯಾರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದಕ್ಕೆ ಬಿಜೆಪಿಯ ಅನುಮತಿ ಬೇಕಿಲ್ಲ ಎಂದು ಸಾರಲು ಸಮಿತಿ ಸಿದ್ದವಾಗಿದೆ.

ಬಿಜೆಪಿಯ ಆಡಳಿತ ವೈಫಲ್ಯದಿಂದಾಗಿ ದೇಶದಲ್ಲಿ ನಾನಾ ಸಮಸ್ಯೆಗಳು ತಲೆದೋರಿವೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ಧೀರೋದಾತ್ತವಾಗಿ ಹೋರಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿಯು ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ ಎಂದು ಸಮಿತಿ ಕಿಡಿಕಾರಿದೆ.

ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಲವ್ ಜಿಹಾದ್ ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿಯವರು 2020ರ ಫೆಬ್ರವರಿಯಲ್ಲಿ ಲೋಕಸಭೆಗೆ ತಿಳಿಸಿದ್ದಾರೆ. ಕರ್ನಾಟಕ ಸೇರಿದಂತೆ ಹಲವು ಹೈಕೋರ್ಟ್‌ಗಳು ಲವ್ ಜಿಹಾದ್ ಎಂಬುದು ಇಲ್ಲವೇ ಇಲ್ಲ ಎಂದು ತೀರ್ಪು ನೀಡಿವೆ. ಆದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ದ್ವೇಷ ಹರಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ದೇಶದ ಸರ್ವೋಚ್ಛ ನ್ಯಾಯಾಲಯವು “ವಯಸ್ಸಿಗೆ ಬಂದ ಪ್ರತಿ ಪ್ರಜೆಗೂ ತಮ್ಮ ಬಾಳಸಂಗಾತಿ ಯಾರೆಂದು ಆಯ್ಕೆ ಮಾಡಿಕೊಳ್ಳುವ ಹಕ್ಕು ಇದೆ. ಇದನ್ನು ನಿರ್ಬಂಧಿಸಲು ಸರ್ಕಾರ ಅಥವಾ ಬೇರೆ ಯಾರಿಗೂ ಅಧಿಕಾರವಿಲ್ಲ ಎಂದಿದೆ. ಅಲ್ಲದೇ ದೇಶದಲ್ಲಿ ನಡೆಯುವ ಅಂತರ್‌ಜಾತಿ-ಅಂತರ್ ಧರ್ಮೀಯ ವಿವಾಹಿತರಿಗೆ ಸರ್ಕಾರ ರಕ್ಷಣೆ ನೀಡಬೇಕೇಂದು ತೀರ್ಪು ನೀಡಿದೆ. ಆದರೆ ಸರ್ಕಾರ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದು ಸಮಿತಿ ಕಿಡಿಕಾರಿದೆ. ಅಲ್ಲದೆ ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ಕೂಡ ಬಿಜೆಪಿಯ ಲವ್ ಜಿಹಾದ್ ಕಾಯ್ದೆಗೆ ವಿರುದ್ಧವಾಗಿ ತೀರ್ಪು ನೀಡಿದ್ದನ್ನು ಸ್ಮರಿಸಬಹುದು.

ಹಾಗಾಗಿ ಬಸವಣ್ಣ, ಪೆರಿಯಾರ್, ಗಾಂಧಿ, ಅಂಬೇಡ್ಕರ್, ಮತ್ತು ಇತರ ನಾಯಕ-ನಾಯಕಿಯರು ಅಂರ್ತಜಾತಿ ಮತ್ತು ಅಂತರ್‌ಧರ್ಮೀಯ ವಿಹಾಗಳನ್ನು ಪ್ರೋತ್ಸಾಹಿಸಿ, ಇವುಗಳಿಂದಲೇ ಭಾತೃತ್ವ ಮತ್ತು ಸಮಾನತಾವಾದದ ಸಮಾಜ ಸಾಧ್ಯ ಎಂದಿದ್ದರು. ಅದನ್ನು ಸಾಕಾರಗೊಳಿಸಲು ಹೋರಾಡೋಣ ಎಂದು ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...