Homeಚಳವಳಿಪ್ರೀತಿಸುವುದು ಅಪರಾಧವಲ್ಲ: ಲವ್ ಜಿಹಾದ್ ಕಾನೂನಿನ ವಿರುದ್ಧ ನಾಳೆ ಪ್ರತಿಭಟನೆ

ಪ್ರೀತಿಸುವುದು ಅಪರಾಧವಲ್ಲ: ಲವ್ ಜಿಹಾದ್ ಕಾನೂನಿನ ವಿರುದ್ಧ ನಾಳೆ ಪ್ರತಿಭಟನೆ

ಪ್ರೀತಿಸುವುದು ಅಪರಾಧವಲ್ಲ. ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಲವ್ ಜಿಹಾದ್‌ನಂತಹ ಕೋಮುವಾದಿ ಕಾನೂನುಗಳನ್ನು ತಿರಸ್ಕರಿಸೋಣ.

- Advertisement -
- Advertisement -

ಕರ್ನಾಟಕ ಸೇರಿದಂತೆ ಬಿಜೆಪಿ ನೇತೃತ್ವದ ಸರ್ಕಾರಗಳು ಲವ್ ಜಿಹಾದ್ ನಡೆಯುತ್ತಿದೆ, ಅದನ್ನು ತಡೆಯಲು ಕಾನೂನು ತರುವುದಾಗಿ ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಾಳೆ ಪ್ರೀತಿಗಾಗಿ ಪ್ರತಿಭಟನೆ ನಡೆಯುತ್ತಿದೆ.

ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಲವ್ ಜಿಹಾದ್‌ನಂತಹ ಇಲ್ಲದಿರುವ ಬಿಕ್ಕಟ್ಟುಗಳನ್ನು ನಿಯಂತ್ರಿಸುವ ನೆಪದಲ್ಲಿ ತರುತ್ತಿರುವ ಕೋಮುವಾದಿ ಕಾನೂನುಗಳನ್ನು ತಿರಸ್ಕರಿಸೋಣ ಎಂದು ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಆಂದೋಲನ ಸಮಿತಿ ಕರೆ ನೀಡಿದೆ.

ಡಿಸೆಂಬರ್ 01 ರ ಮಂಗಳವಾರ ಮಧ್ಯಾಹ್ನ 3:30 ಗಂಟೆಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಪ್ರೀತಿಸುವುದು ಅಪರಾಧವಲ್ಲ, ನಮ್ಮ ಬಾಳಸಂಗಾತಿಯಾಗಿ ಯಾರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದಕ್ಕೆ ಬಿಜೆಪಿಯ ಅನುಮತಿ ಬೇಕಿಲ್ಲ ಎಂದು ಸಾರಲು ಸಮಿತಿ ಸಿದ್ದವಾಗಿದೆ.

ಬಿಜೆಪಿಯ ಆಡಳಿತ ವೈಫಲ್ಯದಿಂದಾಗಿ ದೇಶದಲ್ಲಿ ನಾನಾ ಸಮಸ್ಯೆಗಳು ತಲೆದೋರಿವೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ಧೀರೋದಾತ್ತವಾಗಿ ಹೋರಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿಯು ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ ಎಂದು ಸಮಿತಿ ಕಿಡಿಕಾರಿದೆ.

ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಲವ್ ಜಿಹಾದ್ ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿಯವರು 2020ರ ಫೆಬ್ರವರಿಯಲ್ಲಿ ಲೋಕಸಭೆಗೆ ತಿಳಿಸಿದ್ದಾರೆ. ಕರ್ನಾಟಕ ಸೇರಿದಂತೆ ಹಲವು ಹೈಕೋರ್ಟ್‌ಗಳು ಲವ್ ಜಿಹಾದ್ ಎಂಬುದು ಇಲ್ಲವೇ ಇಲ್ಲ ಎಂದು ತೀರ್ಪು ನೀಡಿವೆ. ಆದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ದ್ವೇಷ ಹರಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ದೇಶದ ಸರ್ವೋಚ್ಛ ನ್ಯಾಯಾಲಯವು “ವಯಸ್ಸಿಗೆ ಬಂದ ಪ್ರತಿ ಪ್ರಜೆಗೂ ತಮ್ಮ ಬಾಳಸಂಗಾತಿ ಯಾರೆಂದು ಆಯ್ಕೆ ಮಾಡಿಕೊಳ್ಳುವ ಹಕ್ಕು ಇದೆ. ಇದನ್ನು ನಿರ್ಬಂಧಿಸಲು ಸರ್ಕಾರ ಅಥವಾ ಬೇರೆ ಯಾರಿಗೂ ಅಧಿಕಾರವಿಲ್ಲ ಎಂದಿದೆ. ಅಲ್ಲದೇ ದೇಶದಲ್ಲಿ ನಡೆಯುವ ಅಂತರ್‌ಜಾತಿ-ಅಂತರ್ ಧರ್ಮೀಯ ವಿವಾಹಿತರಿಗೆ ಸರ್ಕಾರ ರಕ್ಷಣೆ ನೀಡಬೇಕೇಂದು ತೀರ್ಪು ನೀಡಿದೆ. ಆದರೆ ಸರ್ಕಾರ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದು ಸಮಿತಿ ಕಿಡಿಕಾರಿದೆ. ಅಲ್ಲದೆ ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ಕೂಡ ಬಿಜೆಪಿಯ ಲವ್ ಜಿಹಾದ್ ಕಾಯ್ದೆಗೆ ವಿರುದ್ಧವಾಗಿ ತೀರ್ಪು ನೀಡಿದ್ದನ್ನು ಸ್ಮರಿಸಬಹುದು.

ಹಾಗಾಗಿ ಬಸವಣ್ಣ, ಪೆರಿಯಾರ್, ಗಾಂಧಿ, ಅಂಬೇಡ್ಕರ್, ಮತ್ತು ಇತರ ನಾಯಕ-ನಾಯಕಿಯರು ಅಂರ್ತಜಾತಿ ಮತ್ತು ಅಂತರ್‌ಧರ್ಮೀಯ ವಿಹಾಗಳನ್ನು ಪ್ರೋತ್ಸಾಹಿಸಿ, ಇವುಗಳಿಂದಲೇ ಭಾತೃತ್ವ ಮತ್ತು ಸಮಾನತಾವಾದದ ಸಮಾಜ ಸಾಧ್ಯ ಎಂದಿದ್ದರು. ಅದನ್ನು ಸಾಕಾರಗೊಳಿಸಲು ಹೋರಾಡೋಣ ಎಂದು ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...