Homeಮುಖಪುಟಮಹಾರಾಷ್ಟ್ರಕ್ಕಾಗಿ 'ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು' ಬದಿಗಿಡಲು ಸಿದ್ಧರಿದ್ದೇವೆ ಎಂದ ಉದ್ಧವ್, ರಾಜ್ ಠಾಕ್ರೆ!

ಮಹಾರಾಷ್ಟ್ರಕ್ಕಾಗಿ ‘ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು’ ಬದಿಗಿಡಲು ಸಿದ್ಧರಿದ್ದೇವೆ ಎಂದ ಉದ್ಧವ್, ರಾಜ್ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಹಿತಾಸಕ್ತಿಗಾಗಿ ತಮ್ಮ “ಸಣ್ಣ ಭಿನ್ನಾಭಿಪ್ರಾಯಗಳನ್ನು” ಬದಿಗಿಡಲು ಸಿದ್ಧರಿದ್ದೇವೆ ಎಂದು ದೂರವಾದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಶನಿವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷದ ನೇತೃತ್ವ ವಹಿಸಿದ್ದರೆ, ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಎಂಬ ಪಕ್ಷದ ನೇತೃತ್ವ ವಹಿಸಿದ್ದಾರೆ. ಮಹಾರಾಷ್ಟ್ರಕ್ಕಾಗಿ

2005 ರಲ್ಲಿ ಶಿವಸೇನೆಯ ಸಂಸ್ಥಾಪಕ ಬಾಳಾ ಠಾಕ್ರೆ ತಮ್ಮ ಪುತ್ರ ಉದ್ಧವ್ ಠಾಕ್ರೆ ಅವರನ್ನು ಉತ್ತರಾಧಿಕಾರಿಯಾಗಿ ಹೆಸರಿಸಿದ ನಂತರ ರಾಜ್ ಠಾಕ್ರೆ ಆಗಿನ ಅವಿಭಜಿತ ಶಿವಸೇನೆಯನ್ನು ತೊರೆದಿದ್ದರು. ಒಂದು ವರ್ಷದ ನಂತರ, ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯನ್ನು ಪ್ರಾರಂಭಿಸಿದ್ದರು.

ಶನಿವಾರ ಚಲನಚಿತ್ರ ನಿರ್ಮಾಪಕ ಮಹೇಶ್ ಮಂಜ್ರೇಕರ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡುತ್ತಾ, “ನನಗೆ, ಮಹಾರಾಷ್ಟ್ರದ ಹಿತಾಸಕ್ತಿ ದೊಡ್ಡದಾಗಿದ್ದು, ಉಳಿದೆಲ್ಲವೂ ಗೌಣವಾಗಿದೆ. ಅದಕ್ಕಾಗಿ ನಮ್ಮ ಸಣ್ಣ ವಿವಾದಗಳನ್ನು ನಾವು ಬದಿಗಿಡಬಹುದು.” ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಶಿವಸೇನೆ (ಯುಬಿಟಿ) ಮುಖ್ಯಸ್ಥರಾದ ಉದ್ಧವ್ ಠಾಕ್ರೆ ತಮ್ಮೊಂದಿಗೆ ಕೆಲಸ ಮಾಡಲು ಸಿದ್ಧರಿದ್ದಾರೆಯೇ ಎಂಬುದು ಒಂದೇ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

“ಪ್ರಮುಖ ಸಮಸ್ಯೆಗಳು ಉದ್ಭವಿಸಿದಾಗ, ನಮ್ಮ ನಡುವಿನ ವಿವಾದಗಳು ಮತ್ತು ಜಗಳಗಳು ಚಿಕ್ಕದಾಗಿರುತ್ತವೆ. ಮಹಾರಾಷ್ಟ್ರ ಮತ್ತು ಮರಾಠಿ ಜನರ ವಿಚಾರದಲ್ಲಿ ನಮ್ಮ ನಡುವಿನ ಸಂಘರ್ಷಗಳು ಅಷ್ಟೆನೂ ದೊಡ್ಡ ವಿಚಾರವಲ್ಲ” ಎಂದು ಅವರು ಹೇಳಿದ್ದಾರೆ.

ಅವರ ಈ ಹೇಳಿಕೆಯ ನಂತರ ಉದ್ಧವ್ ಠಾಕ್ರೆ ಅವರು ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಹಾರಾಷ್ಟ್ರದ ಹಿತದೃಷ್ಟಿಯಿಂದ ತಮ್ಮ ವಿವಾದಗಳನ್ನು ಬದಿಗಿಡಲು ಸಿದ್ಧರಿರುವುದಾಗಿ ಹೇಳಿದ್ದಾರೆ. “ಸಣ್ಣ ಜಗಳಗಳನ್ನು ಬದಿಗಿಟ್ಟು ಮರಾಠಿ ಸಮುದಾಯದ ಹಿತಾಸಕ್ತಿಗಾಗಿ ಒಟ್ಟಿಗೆ ಸೇರಲು ನಾನು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಮೊದಲು, ಮಹಾರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸುವವರನ್ನು ಮನೆಗೆ ಆಹ್ವಾನಿಸುವುದನ್ನು ಮತ್ತು ಅವರಿಗೆ  ಊಟ ಬಡಿಸುವುದನ್ನು ನಿಲ್ಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಿ. ನಂತರ ರಾಜ್ಯದ ಕಲ್ಯಾಣದ ಬಗ್ಗೆ ಮಾತನಾಡಬೇಕು.” ಎಂದು ಅವರು ಹೇಳುದ್ದಾರೆ. ಅವರು ಈ ಹೇಳಿಕೆಗಳನ್ನು 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯೊಂದಿಗೆ ರಾಜ್ ಠಾಕ್ರೆ ಅವರ ಮೈತ್ರಿಯನ್ನು ಉಲ್ಲೇಖಿಸಿ ಹೇಳಿದ್ದಾಗಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ಕೈಗಾರಿಕೆಗಳನ್ನು ಮಹಾರಾಷ್ಟ್ರದಿಂದ ಗುಜರಾತ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ನಾನು ಹೇಳುತ್ತಿದ್ದೆ. ಆ ಸಮಯದಲ್ಲಿ ಈ ಬಗ್ಗೆ ವಿರೋಧಿಸುತ್ತಿದ್ದರೆ, ಇಂದು ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಇರುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಶನಿವಾರದ ಬೆಳವಣಿಗೆಯ ಕುರಿತು ಮಾತನಾಡಿದ ಉದ್ಧವ್ ನೇತೃತ್ವದ ಶಿವಸೇನೆಯ ವಕ್ತಾರ ಸಂಜಯ್ ರಾವತ್, ಮಹಾರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವವರೊಂದಿಗೆ ರಾಜ್ ಠಾಕ್ರೆ ವ್ಯವಹರಿಸಬೇಕು ಎಂದು ಪುನರುಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅವರು [ರಾಜ್] ಒಬ್ಬ ಠಾಕ್ರೆ. ಉದ್ಧವ್ ಕೂಡ ಒಬ್ಬ ಠಾಕ್ರೆ. ಅವರ ಸಂಬಂಧ ಶಾಶ್ವತ. ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ, ಅವರು ಪ್ರತ್ಯೇಕ ಮಾರ್ಗಗಳನ್ನು ಆರಿಸಿಕೊಂಡಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ಮಹಾರಾಷ್ಟ್ರದ ಶತ್ರುಗಳಿಗೆ ಯಾವುದೇ ರೀತಿಯ ಸಹಾಯವನ್ನು ನೀಡಬಾರದು ಎಂದು ನಾವು ಸ್ಪಷ್ಟಪಡಿಸಿದ್ದೆವು. ಮಹಾರಾಷ್ಟ್ರವನ್ನು ಕಡಿಮೆ ಅಂದಾಜು ಮಾಡುವ ಕೆಲವು ಶಕ್ತಿಗಳಿವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದರು. ಅವರು ಮರಾಠಿ ಜನರ ಹಿತಾಸಕ್ತಿಗಳ ವಿರುದ್ಧ ಪಿತೂರಿ ನಡೆಸುತ್ತಲೇ ಇದ್ದಾರೆ.” ಎಂದು ಸಂಜಯ್ ಹೇಳಿದ್ದಾರೆ

ಅಂತಹ ಶಕ್ತಿಗಳೊಂದಿಗೆ ರಾಜ್ ಠಾಕ್ರೆ ಬೆರೆಯಬಾರದು ಅಥವಾ ಕುಳಿತುಕೊಳ್ಳಬಾರದು. ಅವರು [ರಾಜ್] ಈ ನಿಲುವನ್ನು ಅಳವಡಿಸಿಕೊಳ್ಳಬೇಕು. ಅವರು ಈ ನಿಲುವನ್ನು ತೆಗೆದುಕೊಂಡರೆ, ನಾವು … ಚರ್ಚೆಗಳನ್ನು ನಡೆಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...