Homeಮುಖಪುಟಮಹಾರಾಷ್ಟ್ರಕ್ಕಾಗಿ 'ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು' ಬದಿಗಿಡಲು ಸಿದ್ಧರಿದ್ದೇವೆ ಎಂದ ಉದ್ಧವ್, ರಾಜ್ ಠಾಕ್ರೆ!

ಮಹಾರಾಷ್ಟ್ರಕ್ಕಾಗಿ ‘ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು’ ಬದಿಗಿಡಲು ಸಿದ್ಧರಿದ್ದೇವೆ ಎಂದ ಉದ್ಧವ್, ರಾಜ್ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಹಿತಾಸಕ್ತಿಗಾಗಿ ತಮ್ಮ “ಸಣ್ಣ ಭಿನ್ನಾಭಿಪ್ರಾಯಗಳನ್ನು” ಬದಿಗಿಡಲು ಸಿದ್ಧರಿದ್ದೇವೆ ಎಂದು ದೂರವಾದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಶನಿವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷದ ನೇತೃತ್ವ ವಹಿಸಿದ್ದರೆ, ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಎಂಬ ಪಕ್ಷದ ನೇತೃತ್ವ ವಹಿಸಿದ್ದಾರೆ. ಮಹಾರಾಷ್ಟ್ರಕ್ಕಾಗಿ

2005 ರಲ್ಲಿ ಶಿವಸೇನೆಯ ಸಂಸ್ಥಾಪಕ ಬಾಳಾ ಠಾಕ್ರೆ ತಮ್ಮ ಪುತ್ರ ಉದ್ಧವ್ ಠಾಕ್ರೆ ಅವರನ್ನು ಉತ್ತರಾಧಿಕಾರಿಯಾಗಿ ಹೆಸರಿಸಿದ ನಂತರ ರಾಜ್ ಠಾಕ್ರೆ ಆಗಿನ ಅವಿಭಜಿತ ಶಿವಸೇನೆಯನ್ನು ತೊರೆದಿದ್ದರು. ಒಂದು ವರ್ಷದ ನಂತರ, ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯನ್ನು ಪ್ರಾರಂಭಿಸಿದ್ದರು.

ಶನಿವಾರ ಚಲನಚಿತ್ರ ನಿರ್ಮಾಪಕ ಮಹೇಶ್ ಮಂಜ್ರೇಕರ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡುತ್ತಾ, “ನನಗೆ, ಮಹಾರಾಷ್ಟ್ರದ ಹಿತಾಸಕ್ತಿ ದೊಡ್ಡದಾಗಿದ್ದು, ಉಳಿದೆಲ್ಲವೂ ಗೌಣವಾಗಿದೆ. ಅದಕ್ಕಾಗಿ ನಮ್ಮ ಸಣ್ಣ ವಿವಾದಗಳನ್ನು ನಾವು ಬದಿಗಿಡಬಹುದು.” ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಶಿವಸೇನೆ (ಯುಬಿಟಿ) ಮುಖ್ಯಸ್ಥರಾದ ಉದ್ಧವ್ ಠಾಕ್ರೆ ತಮ್ಮೊಂದಿಗೆ ಕೆಲಸ ಮಾಡಲು ಸಿದ್ಧರಿದ್ದಾರೆಯೇ ಎಂಬುದು ಒಂದೇ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

“ಪ್ರಮುಖ ಸಮಸ್ಯೆಗಳು ಉದ್ಭವಿಸಿದಾಗ, ನಮ್ಮ ನಡುವಿನ ವಿವಾದಗಳು ಮತ್ತು ಜಗಳಗಳು ಚಿಕ್ಕದಾಗಿರುತ್ತವೆ. ಮಹಾರಾಷ್ಟ್ರ ಮತ್ತು ಮರಾಠಿ ಜನರ ವಿಚಾರದಲ್ಲಿ ನಮ್ಮ ನಡುವಿನ ಸಂಘರ್ಷಗಳು ಅಷ್ಟೆನೂ ದೊಡ್ಡ ವಿಚಾರವಲ್ಲ” ಎಂದು ಅವರು ಹೇಳಿದ್ದಾರೆ.

ಅವರ ಈ ಹೇಳಿಕೆಯ ನಂತರ ಉದ್ಧವ್ ಠಾಕ್ರೆ ಅವರು ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಹಾರಾಷ್ಟ್ರದ ಹಿತದೃಷ್ಟಿಯಿಂದ ತಮ್ಮ ವಿವಾದಗಳನ್ನು ಬದಿಗಿಡಲು ಸಿದ್ಧರಿರುವುದಾಗಿ ಹೇಳಿದ್ದಾರೆ. “ಸಣ್ಣ ಜಗಳಗಳನ್ನು ಬದಿಗಿಟ್ಟು ಮರಾಠಿ ಸಮುದಾಯದ ಹಿತಾಸಕ್ತಿಗಾಗಿ ಒಟ್ಟಿಗೆ ಸೇರಲು ನಾನು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಮೊದಲು, ಮಹಾರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸುವವರನ್ನು ಮನೆಗೆ ಆಹ್ವಾನಿಸುವುದನ್ನು ಮತ್ತು ಅವರಿಗೆ  ಊಟ ಬಡಿಸುವುದನ್ನು ನಿಲ್ಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಿ. ನಂತರ ರಾಜ್ಯದ ಕಲ್ಯಾಣದ ಬಗ್ಗೆ ಮಾತನಾಡಬೇಕು.” ಎಂದು ಅವರು ಹೇಳುದ್ದಾರೆ. ಅವರು ಈ ಹೇಳಿಕೆಗಳನ್ನು 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯೊಂದಿಗೆ ರಾಜ್ ಠಾಕ್ರೆ ಅವರ ಮೈತ್ರಿಯನ್ನು ಉಲ್ಲೇಖಿಸಿ ಹೇಳಿದ್ದಾಗಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ಕೈಗಾರಿಕೆಗಳನ್ನು ಮಹಾರಾಷ್ಟ್ರದಿಂದ ಗುಜರಾತ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ನಾನು ಹೇಳುತ್ತಿದ್ದೆ. ಆ ಸಮಯದಲ್ಲಿ ಈ ಬಗ್ಗೆ ವಿರೋಧಿಸುತ್ತಿದ್ದರೆ, ಇಂದು ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಇರುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಶನಿವಾರದ ಬೆಳವಣಿಗೆಯ ಕುರಿತು ಮಾತನಾಡಿದ ಉದ್ಧವ್ ನೇತೃತ್ವದ ಶಿವಸೇನೆಯ ವಕ್ತಾರ ಸಂಜಯ್ ರಾವತ್, ಮಹಾರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವವರೊಂದಿಗೆ ರಾಜ್ ಠಾಕ್ರೆ ವ್ಯವಹರಿಸಬೇಕು ಎಂದು ಪುನರುಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅವರು [ರಾಜ್] ಒಬ್ಬ ಠಾಕ್ರೆ. ಉದ್ಧವ್ ಕೂಡ ಒಬ್ಬ ಠಾಕ್ರೆ. ಅವರ ಸಂಬಂಧ ಶಾಶ್ವತ. ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ, ಅವರು ಪ್ರತ್ಯೇಕ ಮಾರ್ಗಗಳನ್ನು ಆರಿಸಿಕೊಂಡಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ಮಹಾರಾಷ್ಟ್ರದ ಶತ್ರುಗಳಿಗೆ ಯಾವುದೇ ರೀತಿಯ ಸಹಾಯವನ್ನು ನೀಡಬಾರದು ಎಂದು ನಾವು ಸ್ಪಷ್ಟಪಡಿಸಿದ್ದೆವು. ಮಹಾರಾಷ್ಟ್ರವನ್ನು ಕಡಿಮೆ ಅಂದಾಜು ಮಾಡುವ ಕೆಲವು ಶಕ್ತಿಗಳಿವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದರು. ಅವರು ಮರಾಠಿ ಜನರ ಹಿತಾಸಕ್ತಿಗಳ ವಿರುದ್ಧ ಪಿತೂರಿ ನಡೆಸುತ್ತಲೇ ಇದ್ದಾರೆ.” ಎಂದು ಸಂಜಯ್ ಹೇಳಿದ್ದಾರೆ

ಅಂತಹ ಶಕ್ತಿಗಳೊಂದಿಗೆ ರಾಜ್ ಠಾಕ್ರೆ ಬೆರೆಯಬಾರದು ಅಥವಾ ಕುಳಿತುಕೊಳ್ಳಬಾರದು. ಅವರು [ರಾಜ್] ಈ ನಿಲುವನ್ನು ಅಳವಡಿಸಿಕೊಳ್ಳಬೇಕು. ಅವರು ಈ ನಿಲುವನ್ನು ತೆಗೆದುಕೊಂಡರೆ, ನಾವು … ಚರ್ಚೆಗಳನ್ನು ನಡೆಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...