Homeಮುಖಪುಟನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ

- Advertisement -
- Advertisement -

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಪಾವತಿ ವಿಳಂಬವಾಗುತ್ತಿದೆ, ಕಾರ್ಮಿಕರು ತಮ್ಮ ದುಡಿಮೆಯ ಹಣವನ್ನು ಪಡೆಯಲು ಕಷ್ಟಪಡುತ್ತಿದ್ದಾರೆ, ಎಷ್ಟೋ ಜನಕ್ಕೆ ಈ ಹಣ ಕೊನೆಯ ಹಂತದಲ್ಲಿ ಸರಿಯಾಗಿ ತಲುಪದೆ ವಾಪಾಸಾಗುತ್ತಿದೆ, ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ ಹೀಗೆ ಹತ್ತು ಹಲವು ಸಂಗತಿಗಳನ್ನು ಬಿಚ್ಚಿಡುತ್ತದೆ ಇತ್ತೀಚೆಗಿನ ಸಂಶೋಧನಾ ವರದಿ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MNREGA)ಯ ಈ ಯೋಜನೆಯಡಿ ಭಾರತದ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ವರ್ಷಕ್ಕೆ 100 ದಿನಗಳ ಉದ್ಯೋಗವನ್ನು ಒದಗಿಸುತ್ತದೆ. ಕೇಂದ್ರದ ಈ ಜನಪ್ರಿಯ ಯೋಜನೆಯಿಂದ ಹಳ್ಳಿಯಿಂದ ಕೆಲಸ ಹುಡುಕಿ ನಗರಕ್ಕೆ ವಲಸೆ ಬರುವ ಅನಿಶ್ಚಿತತೆ ಸೇರಿದಂತೆ ನಿರುದ್ಯೋಗ ಸಮಸ್ಯೆಗೆ ಕೂಡಾ ತುಸು ಪರಿಹಾರ ಸಿಕ್ಕಿತ್ತು. ಈ ಯೋಜನೆಯಡಿ ದುಡಿದವರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (ಡಿಬಿಟಿ) ಉಪಕ್ರಮದಡಿಯಲ್ಲಿ ಭಾರತ ಸರ್ಕಾರವು ಪರಿಹಾರವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ.

ಇದನ್ನೂ ಓದಿ:ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ 

ಈ ಕಾರ್ಮಿಕರ ಬಗ್ಗೆ ಲಿಬ್‌ಟೆಕ್ ಇಂಡಿಯಾ ಸಂಸ್ಥೆ, ಬೆಂಗಳೂರಿನ ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ ಅನುದಾನದಿಂದ ಸಮೀಕ್ಷೆಯನ್ನು ನಡೆಸಿದ್ದು “ಲೆಂತ್‌ ಆಫ್‌ ದಿ ಲಾಸ್ಟ್ ಮೈಲ್- ನರೇಗ ಪಾವತಿಯಲ್ಲಿನ ವಿಳಂಬ ಮತ್ತು ಅಡಚಣೆಗಳು” ಎಂಬ ಸಂಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ 2018 ರ ಸಪ್ಟೆಂಬರ್‌ ಮತ್ತು ನವೆಂಬರ್‌ ನಡುವೆ ಆಂಧ್ರಪ್ರದೇಶ, ಜಾರ್ಖಂಡ್ ಮತ್ತು ರಾಜಸ್ಥಾನಗಳಲ್ಲಿ ಒಟ್ಟು 1947 ನರೇಗ ಕಾರ್ಮಿಕರನ್ನು ಸಮೀಕ್ಷೆಯಲ್ಲಿ ಒಳಗೊಂಡಿದೆ.

ಸರ್ಕಾರ ಪಾವತಿಸುವ ಹಣವನ್ನು ಪಡೆಯಲು ಬ್ಯಾಂಕು, ಗ್ರಾಹಕ ಸೇವಾಕೇಂದ್ರ, ಇತರ ವ್ಯವಹಾರ ಕೇಂದ್ರ, ಅಂಚೆ ಕಚೇರಿ ಸೇರಿದಂತೆ ಎಟಿಎಂಗಳಲ್ಲಿ ಉದ್ಯೋಗಿಗಳು ಪಡುವ ಕಷ್ಟಗಳ ಬಗ್ಗೆ ಕೂಡಾ ಸಮೀಕ್ಷ ನಡೆಸಲಾಗಿದೆ. ಒಟ್ಟಾರೆಯಾಗಿ, ಪರಿಹಾರ ವಿತರಣೆಯ ಸಮಯದಲ್ಲಿ, ಆಂಧ್ರ ಪ್ರದೇಶದ ಕಾರ್ಮಿಕರು ಕಡಿಮೆ ಕಷ್ಟಗಳನ್ನು ಅನುಭವಿಸಿದರೆ, ಜಾರ್ಖಂಡ್‌‌ನಲ್ಲಿರುವವರು ಹೆಚ್ಚು ಕಷ್ಟಗಳನ್ನು ಎದುರಿಸುತ್ತಾರೆ ಎಂದು ಸಮೀಕ್ಷೆಯು ತಿಳಿಸುತ್ತದೆ.

ಮೂರು ರಾಜ್ಯಗಳಲ್ಲಿ ಆಂಧ್ರಪ್ರದೇಶದಲ್ಲಿ ಮಾತ್ರ ಅಂಚೆ ಕಚೇರಿಗಳನ್ನು ಬಳಕೆ ಮಾಡುತ್ತಿದ್ದು, ಅಲ್ಲಿನ ಸೇವೆಗಳ ಗುಣಮಟ್ಟದಲ್ಲಿದ್ದು ಕಾರ್ಮಿಕರು ಹೆಚ್ಚು ತೃಪ್ತರಾಗಿದ್ದಾರೆ. ಮೂರೂ ರಾಜ್ಯಗಳಲ್ಲಿರುವ ಗ್ರಾಮೀಣ ಬ್ಯಾಂಕುಗಳಲ್ಲೇ ಹೆಚ್ಚು ಜನದಟ್ಟಣೆ ಇರುತ್ತವೆ. ಬ್ಯಾಂಕುಗಳು ತಮ್ಮ ಪಂಚಾಯತ್‌ನಿಂದ ದೂರದಲ್ಲಿರುವುದು ಕಾರ್ಮಿಕರಿಗೆ ಹಣ ಪಡೆಯುವುದು ತ್ರಾಸದಾಯಕವಾಗುತ್ತದೆ. ಅನೇಕ ಸಂದರ್ಭಗಳಲ್ಲಿ, ಕಾರ್ಮಿಕರು ತಮ್ಮ ವೇತನವನ್ನು ಪಡೆಯಲು ಅನೇಕ ಸಾರಿ ಅಲೆದಾಡಬೇಕಾಗುತ್ತದೆ.

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜಾರ್ಖಂಡ್‌‌ನಲ್ಲಿ 42% ಮತ್ತು ರಾಜಸ್ಥಾನದಲ್ಲಿ 38% ಜನರು ಬ್ಯಾಂಕುಗಳಿಂದ ತಮ್ಮ ವೇತನವನ್ನು ಪಡೆಯಲು 4 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತಾರೆ. ಇದಕ್ಕೆ ವಿರುದ್ಧವಾಗಿ, ಇದು ಆಂಧ್ರಪ್ರದೇಶದಲ್ಲಿ ಕೇವಲ 2% ಜನರಿಗಷ್ಟೇ ಆಗುತ್ತದೆ. ಒಟ್ಟಾರೆಯಾಗಿ, ಅಂದಾಜು 45% ಜನರು ತಮ್ಮ ಹಣ ಪಡೆಯಲು ಬ್ಯಾಂಕ್‌ಗೆ ಅನೇಕ ಬಾರಿ ಭೇಟಿ ನೀಡಬೇಕಾಗುತ್ತದೆ.

ಗ್ರಾಹಕ ಸೇವಾ ಕೇಂದ್ರ ಹಾಗೂ ಇತರ ವ್ಯವಹಾರ ಕೇಂದ್ರಗಳು ಬ್ಯಾಂಕಿಗಿಂತಲೂ ಉತ್ತಮ ಪರ್ಯಾಯವಾಗಿ ಕಾಣಿಸಿಕೊಂಡಿದ್ದರೂ, ಅಂದಾಜು 40% ಜನರು ಬಯೋ ಮೆಟ್ರಿಕ್ ವೈಫಲ್ಯದಿಂದಾಗಿ ಅನೇಕ ಬಾರಿ ಅಲ್ಲಿಗೆ ಭೇಟಿ ನೀಡಬೇಕಾಗುತ್ತದೆ. ಈ ಕೇಂದ್ರಗಳಲ್ಲಿ ಪಾಸ್‌ಬುಕ್ ಅಪ್ಡೇಟ್ ಸೌಲಭ್ಯವನ್ನು ಹೊಂದಿಲ್ಲ. ಇದಕ್ಕೆ ಹೋಲಿಸಿದರೆ, ಆಂದ್ರ ಪ್ರದೇಶದಲ್ಲಿ ಅಂಚೆ ಖಾತೆಗಳನ್ನು ಹೊಂದಿರುವ ಜನರು ತಮ್ಮ ಪ್ರತಿ ವಹಿವಾಟಿಗೆ ಪಾಸ್‌ಬುಕ್‌ಗಳನ್ನು ನವೀಕರಿಸುತ್ತಾರೆ. ಆಂಧ್ರ ಪ್ರದೇಶದಲ್ಲಿ ಗ್ರಾಹಕ ಸೇವಾ ಕೇಂದ್ರದಲ್ಲಿ ಹಣ ಪಡೆದಾಗ ರಶೀದಿಗಳನ್ನು ಪಡೆದರೆ, ಜಾರ್ಖಂಡ್ ಮತ್ತು ರಾಜಸ್ಥಾನ್‌ಗಳಲ್ಲಿ ರಶೀದಿಗಳನ್ನು ವಿರಳವಾಗಿ ನೀಡಲಾಗುತ್ತದೆ.

ಈ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಕೆಲವು ಕಾರ್ಮಿಕರಿಂದ ಅಲ್ಲಿ ವಹಿವಾಟು ನಡೆಸಲು ಶುಲ್ಕ ಪಡೆಯುತ್ತಾರೆ. ಜಾರ್ಖಂಡ್‌ನಲ್ಲಿ ಇದು ಅತ್ಯಧಿಕವಾಗಿದ್ದು, ಅಲ್ಲಿ 45% ಜನರಿಗೆ ಶುಲ್ಕ ವಿಧಿಸಲಾಗುತ್ತದೆ. ಇದರಾಚೆಗೂ ಕಾರ್ಮಿಕರು ಹೆಚ್ಚು ನಂಬಿಕೆ ಉಳಿಸಿರುವ ಸಂಸ್ಥೆಯಾಗಿ ಬ್ಯಾಂಕುಗಳು ಉಳಿದಿವೆ ಎಂದು ಸಮೀಕ್ಷಯು ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು – ಡಾ. ಬಿ.ಸಿ.ಬಸವರಾಜ್

 

ನರೇಗ
PC: PTI

ಆಧಾರ್ ಆಧಾರಿತ ಪಾವತಿ ಮತ್ತು ಕೇಂದ್ರೀಕರಣ ವ್ಯವಸ್ಥೆಯಿಂದಾಗಿ ಕಾರ್ಮಿಕರಿಗೆ ಕೆಲವೊಮ್ಮೆ ತಮ್ಮ ವೇತನ ಎಲ್ಲಿ ಬರುತ್ತದೆ ಎಂಬ ಮಾಹಿತಿಯಾಗಲೀ ಮತ್ತು ಅವರ ಪಾವತಿಗಳನ್ನು ತಿರಸ್ಕರಿಸುವುದರ ಬಗ್ಗೆ ಸ್ವಲ್ಪವು ಸುಳಿವು ಹೊಂದಿರುವುದಿಲ್ಲ ಎಂದು ಸಮೀಕ್ಷೆಯು ಹೇಳುತ್ತದೆ. ಸರಿಯಾದ ಖಾತೆ ಸಂಖ್ಯೆಗಳು ಇಲ್ಲದಿರುವುದು ಹಾಗೂ ಈ ಸಂಖ್ಯೆಗಳಿಗೆ ಆಧಾರ್‌‌ ಮ್ಯಾಪಿಂಗ್‌‌ನ ತಾಂತ್ರಿಕ ಅಡಚಣೆಯಿಂದಾಗಿ ಇವರ ಪಾವತಿಯನ್ನು ತಿರಸ್ಕರಿಸಲಾಗುತ್ತಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಜುಲೈ 2020 ರಂತೆ, ಕಳೆದ ಐದು ವರ್ಷಗಳಲ್ಲಿ, ಸುಮಾರು ರೂ. 4,800 ಕೋಟಿ ಮೌಲ್ಯದ ಪಾವತಿಗಳನ್ನು ಭಾರತದಾದ್ಯಂತ ತಿರಸ್ಕರಿಸಲಾಗಿದೆ ಮತ್ತು ಸುಮಾರು 1,274 ಕೋಟಿ ರೂ.ಗಳನ್ನು ಕಾರ್ಮಿಕರಿಗೆ ಪಾವತಿಸಲು ಬಾಕಿ ಇದೆ. ಒಟ್ಟಾರೆ ಬ್ಯಾಂಕಿಂಗ್ ಬಗ್ಗೆ ಮತ್ತು ತಮ್ಮ ಹಕ್ಕುಗಳ ಬಗ್ಗೆ ಇವರಲ್ಲಿ ಜಾಗೃತಿ ಕಡಿಮೆಯಾಗಿದೆ. ಈ ಎಲ್ಲಾ ಅನಾನುಕೂಲತೆಗಳ ಹೊರತಾಗಿಯೂ ಕಾರ್ಮಿಕರು ಬ್ಯಾಂಕ್‌ಗಳಿಗೆ ತಮ್ಮ ಆದ್ಯತೆ ನೀಡುತ್ತಾರೆ. ಸಂಬಳ ಪಡೆಯುವಲ್ಲಿ ತೊಂದರೆ ಆದವರಲ್ಲಿ ಕೇವಲ 28% ಜನರಷ್ಟೇ ದೂರು ನೀಡುತ್ತಾರೆ ಎಂದು ಸಮೀಕ್ಷೆ ತಿಳಿಸುತ್ತದೆ. ಬಹುತೇಕ ಮಂದಿ ಕಾರ್ಮಿಕರಿಗೆ ಮೌಖಿಕ ದೂರು ನೀಡಲು ಮಾತ್ರ ಸಾಧ್ಯವಾಗುತ್ತದೆ ಎಂದು ಕೂಡ ವರದಿ ತಿಳಿಸಿದೆ.

ಇದನ್ನೂ ಓದಿ: ಮಹಿಳಾ ರೈತರ ಹಿತದೃಷ್ಟಿಗೆ ಮಾರಕವಾದ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...