Homeಮುಖಪುಟನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ

- Advertisement -
- Advertisement -

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಪಾವತಿ ವಿಳಂಬವಾಗುತ್ತಿದೆ, ಕಾರ್ಮಿಕರು ತಮ್ಮ ದುಡಿಮೆಯ ಹಣವನ್ನು ಪಡೆಯಲು ಕಷ್ಟಪಡುತ್ತಿದ್ದಾರೆ, ಎಷ್ಟೋ ಜನಕ್ಕೆ ಈ ಹಣ ಕೊನೆಯ ಹಂತದಲ್ಲಿ ಸರಿಯಾಗಿ ತಲುಪದೆ ವಾಪಾಸಾಗುತ್ತಿದೆ, ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ ಹೀಗೆ ಹತ್ತು ಹಲವು ಸಂಗತಿಗಳನ್ನು ಬಿಚ್ಚಿಡುತ್ತದೆ ಇತ್ತೀಚೆಗಿನ ಸಂಶೋಧನಾ ವರದಿ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MNREGA)ಯ ಈ ಯೋಜನೆಯಡಿ ಭಾರತದ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ವರ್ಷಕ್ಕೆ 100 ದಿನಗಳ ಉದ್ಯೋಗವನ್ನು ಒದಗಿಸುತ್ತದೆ. ಕೇಂದ್ರದ ಈ ಜನಪ್ರಿಯ ಯೋಜನೆಯಿಂದ ಹಳ್ಳಿಯಿಂದ ಕೆಲಸ ಹುಡುಕಿ ನಗರಕ್ಕೆ ವಲಸೆ ಬರುವ ಅನಿಶ್ಚಿತತೆ ಸೇರಿದಂತೆ ನಿರುದ್ಯೋಗ ಸಮಸ್ಯೆಗೆ ಕೂಡಾ ತುಸು ಪರಿಹಾರ ಸಿಕ್ಕಿತ್ತು. ಈ ಯೋಜನೆಯಡಿ ದುಡಿದವರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (ಡಿಬಿಟಿ) ಉಪಕ್ರಮದಡಿಯಲ್ಲಿ ಭಾರತ ಸರ್ಕಾರವು ಪರಿಹಾರವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ.

ಇದನ್ನೂ ಓದಿ:ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ 

ಈ ಕಾರ್ಮಿಕರ ಬಗ್ಗೆ ಲಿಬ್‌ಟೆಕ್ ಇಂಡಿಯಾ ಸಂಸ್ಥೆ, ಬೆಂಗಳೂರಿನ ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ ಅನುದಾನದಿಂದ ಸಮೀಕ್ಷೆಯನ್ನು ನಡೆಸಿದ್ದು “ಲೆಂತ್‌ ಆಫ್‌ ದಿ ಲಾಸ್ಟ್ ಮೈಲ್- ನರೇಗ ಪಾವತಿಯಲ್ಲಿನ ವಿಳಂಬ ಮತ್ತು ಅಡಚಣೆಗಳು” ಎಂಬ ಸಂಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ 2018 ರ ಸಪ್ಟೆಂಬರ್‌ ಮತ್ತು ನವೆಂಬರ್‌ ನಡುವೆ ಆಂಧ್ರಪ್ರದೇಶ, ಜಾರ್ಖಂಡ್ ಮತ್ತು ರಾಜಸ್ಥಾನಗಳಲ್ಲಿ ಒಟ್ಟು 1947 ನರೇಗ ಕಾರ್ಮಿಕರನ್ನು ಸಮೀಕ್ಷೆಯಲ್ಲಿ ಒಳಗೊಂಡಿದೆ.

ಸರ್ಕಾರ ಪಾವತಿಸುವ ಹಣವನ್ನು ಪಡೆಯಲು ಬ್ಯಾಂಕು, ಗ್ರಾಹಕ ಸೇವಾಕೇಂದ್ರ, ಇತರ ವ್ಯವಹಾರ ಕೇಂದ್ರ, ಅಂಚೆ ಕಚೇರಿ ಸೇರಿದಂತೆ ಎಟಿಎಂಗಳಲ್ಲಿ ಉದ್ಯೋಗಿಗಳು ಪಡುವ ಕಷ್ಟಗಳ ಬಗ್ಗೆ ಕೂಡಾ ಸಮೀಕ್ಷ ನಡೆಸಲಾಗಿದೆ. ಒಟ್ಟಾರೆಯಾಗಿ, ಪರಿಹಾರ ವಿತರಣೆಯ ಸಮಯದಲ್ಲಿ, ಆಂಧ್ರ ಪ್ರದೇಶದ ಕಾರ್ಮಿಕರು ಕಡಿಮೆ ಕಷ್ಟಗಳನ್ನು ಅನುಭವಿಸಿದರೆ, ಜಾರ್ಖಂಡ್‌‌ನಲ್ಲಿರುವವರು ಹೆಚ್ಚು ಕಷ್ಟಗಳನ್ನು ಎದುರಿಸುತ್ತಾರೆ ಎಂದು ಸಮೀಕ್ಷೆಯು ತಿಳಿಸುತ್ತದೆ.

ಮೂರು ರಾಜ್ಯಗಳಲ್ಲಿ ಆಂಧ್ರಪ್ರದೇಶದಲ್ಲಿ ಮಾತ್ರ ಅಂಚೆ ಕಚೇರಿಗಳನ್ನು ಬಳಕೆ ಮಾಡುತ್ತಿದ್ದು, ಅಲ್ಲಿನ ಸೇವೆಗಳ ಗುಣಮಟ್ಟದಲ್ಲಿದ್ದು ಕಾರ್ಮಿಕರು ಹೆಚ್ಚು ತೃಪ್ತರಾಗಿದ್ದಾರೆ. ಮೂರೂ ರಾಜ್ಯಗಳಲ್ಲಿರುವ ಗ್ರಾಮೀಣ ಬ್ಯಾಂಕುಗಳಲ್ಲೇ ಹೆಚ್ಚು ಜನದಟ್ಟಣೆ ಇರುತ್ತವೆ. ಬ್ಯಾಂಕುಗಳು ತಮ್ಮ ಪಂಚಾಯತ್‌ನಿಂದ ದೂರದಲ್ಲಿರುವುದು ಕಾರ್ಮಿಕರಿಗೆ ಹಣ ಪಡೆಯುವುದು ತ್ರಾಸದಾಯಕವಾಗುತ್ತದೆ. ಅನೇಕ ಸಂದರ್ಭಗಳಲ್ಲಿ, ಕಾರ್ಮಿಕರು ತಮ್ಮ ವೇತನವನ್ನು ಪಡೆಯಲು ಅನೇಕ ಸಾರಿ ಅಲೆದಾಡಬೇಕಾಗುತ್ತದೆ.

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜಾರ್ಖಂಡ್‌‌ನಲ್ಲಿ 42% ಮತ್ತು ರಾಜಸ್ಥಾನದಲ್ಲಿ 38% ಜನರು ಬ್ಯಾಂಕುಗಳಿಂದ ತಮ್ಮ ವೇತನವನ್ನು ಪಡೆಯಲು 4 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತಾರೆ. ಇದಕ್ಕೆ ವಿರುದ್ಧವಾಗಿ, ಇದು ಆಂಧ್ರಪ್ರದೇಶದಲ್ಲಿ ಕೇವಲ 2% ಜನರಿಗಷ್ಟೇ ಆಗುತ್ತದೆ. ಒಟ್ಟಾರೆಯಾಗಿ, ಅಂದಾಜು 45% ಜನರು ತಮ್ಮ ಹಣ ಪಡೆಯಲು ಬ್ಯಾಂಕ್‌ಗೆ ಅನೇಕ ಬಾರಿ ಭೇಟಿ ನೀಡಬೇಕಾಗುತ್ತದೆ.

ಗ್ರಾಹಕ ಸೇವಾ ಕೇಂದ್ರ ಹಾಗೂ ಇತರ ವ್ಯವಹಾರ ಕೇಂದ್ರಗಳು ಬ್ಯಾಂಕಿಗಿಂತಲೂ ಉತ್ತಮ ಪರ್ಯಾಯವಾಗಿ ಕಾಣಿಸಿಕೊಂಡಿದ್ದರೂ, ಅಂದಾಜು 40% ಜನರು ಬಯೋ ಮೆಟ್ರಿಕ್ ವೈಫಲ್ಯದಿಂದಾಗಿ ಅನೇಕ ಬಾರಿ ಅಲ್ಲಿಗೆ ಭೇಟಿ ನೀಡಬೇಕಾಗುತ್ತದೆ. ಈ ಕೇಂದ್ರಗಳಲ್ಲಿ ಪಾಸ್‌ಬುಕ್ ಅಪ್ಡೇಟ್ ಸೌಲಭ್ಯವನ್ನು ಹೊಂದಿಲ್ಲ. ಇದಕ್ಕೆ ಹೋಲಿಸಿದರೆ, ಆಂದ್ರ ಪ್ರದೇಶದಲ್ಲಿ ಅಂಚೆ ಖಾತೆಗಳನ್ನು ಹೊಂದಿರುವ ಜನರು ತಮ್ಮ ಪ್ರತಿ ವಹಿವಾಟಿಗೆ ಪಾಸ್‌ಬುಕ್‌ಗಳನ್ನು ನವೀಕರಿಸುತ್ತಾರೆ. ಆಂಧ್ರ ಪ್ರದೇಶದಲ್ಲಿ ಗ್ರಾಹಕ ಸೇವಾ ಕೇಂದ್ರದಲ್ಲಿ ಹಣ ಪಡೆದಾಗ ರಶೀದಿಗಳನ್ನು ಪಡೆದರೆ, ಜಾರ್ಖಂಡ್ ಮತ್ತು ರಾಜಸ್ಥಾನ್‌ಗಳಲ್ಲಿ ರಶೀದಿಗಳನ್ನು ವಿರಳವಾಗಿ ನೀಡಲಾಗುತ್ತದೆ.

ಈ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಕೆಲವು ಕಾರ್ಮಿಕರಿಂದ ಅಲ್ಲಿ ವಹಿವಾಟು ನಡೆಸಲು ಶುಲ್ಕ ಪಡೆಯುತ್ತಾರೆ. ಜಾರ್ಖಂಡ್‌ನಲ್ಲಿ ಇದು ಅತ್ಯಧಿಕವಾಗಿದ್ದು, ಅಲ್ಲಿ 45% ಜನರಿಗೆ ಶುಲ್ಕ ವಿಧಿಸಲಾಗುತ್ತದೆ. ಇದರಾಚೆಗೂ ಕಾರ್ಮಿಕರು ಹೆಚ್ಚು ನಂಬಿಕೆ ಉಳಿಸಿರುವ ಸಂಸ್ಥೆಯಾಗಿ ಬ್ಯಾಂಕುಗಳು ಉಳಿದಿವೆ ಎಂದು ಸಮೀಕ್ಷಯು ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು – ಡಾ. ಬಿ.ಸಿ.ಬಸವರಾಜ್

 

ನರೇಗ
PC: PTI

ಆಧಾರ್ ಆಧಾರಿತ ಪಾವತಿ ಮತ್ತು ಕೇಂದ್ರೀಕರಣ ವ್ಯವಸ್ಥೆಯಿಂದಾಗಿ ಕಾರ್ಮಿಕರಿಗೆ ಕೆಲವೊಮ್ಮೆ ತಮ್ಮ ವೇತನ ಎಲ್ಲಿ ಬರುತ್ತದೆ ಎಂಬ ಮಾಹಿತಿಯಾಗಲೀ ಮತ್ತು ಅವರ ಪಾವತಿಗಳನ್ನು ತಿರಸ್ಕರಿಸುವುದರ ಬಗ್ಗೆ ಸ್ವಲ್ಪವು ಸುಳಿವು ಹೊಂದಿರುವುದಿಲ್ಲ ಎಂದು ಸಮೀಕ್ಷೆಯು ಹೇಳುತ್ತದೆ. ಸರಿಯಾದ ಖಾತೆ ಸಂಖ್ಯೆಗಳು ಇಲ್ಲದಿರುವುದು ಹಾಗೂ ಈ ಸಂಖ್ಯೆಗಳಿಗೆ ಆಧಾರ್‌‌ ಮ್ಯಾಪಿಂಗ್‌‌ನ ತಾಂತ್ರಿಕ ಅಡಚಣೆಯಿಂದಾಗಿ ಇವರ ಪಾವತಿಯನ್ನು ತಿರಸ್ಕರಿಸಲಾಗುತ್ತಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಜುಲೈ 2020 ರಂತೆ, ಕಳೆದ ಐದು ವರ್ಷಗಳಲ್ಲಿ, ಸುಮಾರು ರೂ. 4,800 ಕೋಟಿ ಮೌಲ್ಯದ ಪಾವತಿಗಳನ್ನು ಭಾರತದಾದ್ಯಂತ ತಿರಸ್ಕರಿಸಲಾಗಿದೆ ಮತ್ತು ಸುಮಾರು 1,274 ಕೋಟಿ ರೂ.ಗಳನ್ನು ಕಾರ್ಮಿಕರಿಗೆ ಪಾವತಿಸಲು ಬಾಕಿ ಇದೆ. ಒಟ್ಟಾರೆ ಬ್ಯಾಂಕಿಂಗ್ ಬಗ್ಗೆ ಮತ್ತು ತಮ್ಮ ಹಕ್ಕುಗಳ ಬಗ್ಗೆ ಇವರಲ್ಲಿ ಜಾಗೃತಿ ಕಡಿಮೆಯಾಗಿದೆ. ಈ ಎಲ್ಲಾ ಅನಾನುಕೂಲತೆಗಳ ಹೊರತಾಗಿಯೂ ಕಾರ್ಮಿಕರು ಬ್ಯಾಂಕ್‌ಗಳಿಗೆ ತಮ್ಮ ಆದ್ಯತೆ ನೀಡುತ್ತಾರೆ. ಸಂಬಳ ಪಡೆಯುವಲ್ಲಿ ತೊಂದರೆ ಆದವರಲ್ಲಿ ಕೇವಲ 28% ಜನರಷ್ಟೇ ದೂರು ನೀಡುತ್ತಾರೆ ಎಂದು ಸಮೀಕ್ಷೆ ತಿಳಿಸುತ್ತದೆ. ಬಹುತೇಕ ಮಂದಿ ಕಾರ್ಮಿಕರಿಗೆ ಮೌಖಿಕ ದೂರು ನೀಡಲು ಮಾತ್ರ ಸಾಧ್ಯವಾಗುತ್ತದೆ ಎಂದು ಕೂಡ ವರದಿ ತಿಳಿಸಿದೆ.

ಇದನ್ನೂ ಓದಿ: ಮಹಿಳಾ ರೈತರ ಹಿತದೃಷ್ಟಿಗೆ ಮಾರಕವಾದ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...