Homeಮುಖಪುಟನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ

- Advertisement -
- Advertisement -

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಪಾವತಿ ವಿಳಂಬವಾಗುತ್ತಿದೆ, ಕಾರ್ಮಿಕರು ತಮ್ಮ ದುಡಿಮೆಯ ಹಣವನ್ನು ಪಡೆಯಲು ಕಷ್ಟಪಡುತ್ತಿದ್ದಾರೆ, ಎಷ್ಟೋ ಜನಕ್ಕೆ ಈ ಹಣ ಕೊನೆಯ ಹಂತದಲ್ಲಿ ಸರಿಯಾಗಿ ತಲುಪದೆ ವಾಪಾಸಾಗುತ್ತಿದೆ, ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ ಹೀಗೆ ಹತ್ತು ಹಲವು ಸಂಗತಿಗಳನ್ನು ಬಿಚ್ಚಿಡುತ್ತದೆ ಇತ್ತೀಚೆಗಿನ ಸಂಶೋಧನಾ ವರದಿ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MNREGA)ಯ ಈ ಯೋಜನೆಯಡಿ ಭಾರತದ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ವರ್ಷಕ್ಕೆ 100 ದಿನಗಳ ಉದ್ಯೋಗವನ್ನು ಒದಗಿಸುತ್ತದೆ. ಕೇಂದ್ರದ ಈ ಜನಪ್ರಿಯ ಯೋಜನೆಯಿಂದ ಹಳ್ಳಿಯಿಂದ ಕೆಲಸ ಹುಡುಕಿ ನಗರಕ್ಕೆ ವಲಸೆ ಬರುವ ಅನಿಶ್ಚಿತತೆ ಸೇರಿದಂತೆ ನಿರುದ್ಯೋಗ ಸಮಸ್ಯೆಗೆ ಕೂಡಾ ತುಸು ಪರಿಹಾರ ಸಿಕ್ಕಿತ್ತು. ಈ ಯೋಜನೆಯಡಿ ದುಡಿದವರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (ಡಿಬಿಟಿ) ಉಪಕ್ರಮದಡಿಯಲ್ಲಿ ಭಾರತ ಸರ್ಕಾರವು ಪರಿಹಾರವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ.

ಇದನ್ನೂ ಓದಿ:ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ 

ಈ ಕಾರ್ಮಿಕರ ಬಗ್ಗೆ ಲಿಬ್‌ಟೆಕ್ ಇಂಡಿಯಾ ಸಂಸ್ಥೆ, ಬೆಂಗಳೂರಿನ ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ ಅನುದಾನದಿಂದ ಸಮೀಕ್ಷೆಯನ್ನು ನಡೆಸಿದ್ದು “ಲೆಂತ್‌ ಆಫ್‌ ದಿ ಲಾಸ್ಟ್ ಮೈಲ್- ನರೇಗ ಪಾವತಿಯಲ್ಲಿನ ವಿಳಂಬ ಮತ್ತು ಅಡಚಣೆಗಳು” ಎಂಬ ಸಂಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ 2018 ರ ಸಪ್ಟೆಂಬರ್‌ ಮತ್ತು ನವೆಂಬರ್‌ ನಡುವೆ ಆಂಧ್ರಪ್ರದೇಶ, ಜಾರ್ಖಂಡ್ ಮತ್ತು ರಾಜಸ್ಥಾನಗಳಲ್ಲಿ ಒಟ್ಟು 1947 ನರೇಗ ಕಾರ್ಮಿಕರನ್ನು ಸಮೀಕ್ಷೆಯಲ್ಲಿ ಒಳಗೊಂಡಿದೆ.

ಸರ್ಕಾರ ಪಾವತಿಸುವ ಹಣವನ್ನು ಪಡೆಯಲು ಬ್ಯಾಂಕು, ಗ್ರಾಹಕ ಸೇವಾಕೇಂದ್ರ, ಇತರ ವ್ಯವಹಾರ ಕೇಂದ್ರ, ಅಂಚೆ ಕಚೇರಿ ಸೇರಿದಂತೆ ಎಟಿಎಂಗಳಲ್ಲಿ ಉದ್ಯೋಗಿಗಳು ಪಡುವ ಕಷ್ಟಗಳ ಬಗ್ಗೆ ಕೂಡಾ ಸಮೀಕ್ಷ ನಡೆಸಲಾಗಿದೆ. ಒಟ್ಟಾರೆಯಾಗಿ, ಪರಿಹಾರ ವಿತರಣೆಯ ಸಮಯದಲ್ಲಿ, ಆಂಧ್ರ ಪ್ರದೇಶದ ಕಾರ್ಮಿಕರು ಕಡಿಮೆ ಕಷ್ಟಗಳನ್ನು ಅನುಭವಿಸಿದರೆ, ಜಾರ್ಖಂಡ್‌‌ನಲ್ಲಿರುವವರು ಹೆಚ್ಚು ಕಷ್ಟಗಳನ್ನು ಎದುರಿಸುತ್ತಾರೆ ಎಂದು ಸಮೀಕ್ಷೆಯು ತಿಳಿಸುತ್ತದೆ.

ಮೂರು ರಾಜ್ಯಗಳಲ್ಲಿ ಆಂಧ್ರಪ್ರದೇಶದಲ್ಲಿ ಮಾತ್ರ ಅಂಚೆ ಕಚೇರಿಗಳನ್ನು ಬಳಕೆ ಮಾಡುತ್ತಿದ್ದು, ಅಲ್ಲಿನ ಸೇವೆಗಳ ಗುಣಮಟ್ಟದಲ್ಲಿದ್ದು ಕಾರ್ಮಿಕರು ಹೆಚ್ಚು ತೃಪ್ತರಾಗಿದ್ದಾರೆ. ಮೂರೂ ರಾಜ್ಯಗಳಲ್ಲಿರುವ ಗ್ರಾಮೀಣ ಬ್ಯಾಂಕುಗಳಲ್ಲೇ ಹೆಚ್ಚು ಜನದಟ್ಟಣೆ ಇರುತ್ತವೆ. ಬ್ಯಾಂಕುಗಳು ತಮ್ಮ ಪಂಚಾಯತ್‌ನಿಂದ ದೂರದಲ್ಲಿರುವುದು ಕಾರ್ಮಿಕರಿಗೆ ಹಣ ಪಡೆಯುವುದು ತ್ರಾಸದಾಯಕವಾಗುತ್ತದೆ. ಅನೇಕ ಸಂದರ್ಭಗಳಲ್ಲಿ, ಕಾರ್ಮಿಕರು ತಮ್ಮ ವೇತನವನ್ನು ಪಡೆಯಲು ಅನೇಕ ಸಾರಿ ಅಲೆದಾಡಬೇಕಾಗುತ್ತದೆ.

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜಾರ್ಖಂಡ್‌‌ನಲ್ಲಿ 42% ಮತ್ತು ರಾಜಸ್ಥಾನದಲ್ಲಿ 38% ಜನರು ಬ್ಯಾಂಕುಗಳಿಂದ ತಮ್ಮ ವೇತನವನ್ನು ಪಡೆಯಲು 4 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತಾರೆ. ಇದಕ್ಕೆ ವಿರುದ್ಧವಾಗಿ, ಇದು ಆಂಧ್ರಪ್ರದೇಶದಲ್ಲಿ ಕೇವಲ 2% ಜನರಿಗಷ್ಟೇ ಆಗುತ್ತದೆ. ಒಟ್ಟಾರೆಯಾಗಿ, ಅಂದಾಜು 45% ಜನರು ತಮ್ಮ ಹಣ ಪಡೆಯಲು ಬ್ಯಾಂಕ್‌ಗೆ ಅನೇಕ ಬಾರಿ ಭೇಟಿ ನೀಡಬೇಕಾಗುತ್ತದೆ.

ಗ್ರಾಹಕ ಸೇವಾ ಕೇಂದ್ರ ಹಾಗೂ ಇತರ ವ್ಯವಹಾರ ಕೇಂದ್ರಗಳು ಬ್ಯಾಂಕಿಗಿಂತಲೂ ಉತ್ತಮ ಪರ್ಯಾಯವಾಗಿ ಕಾಣಿಸಿಕೊಂಡಿದ್ದರೂ, ಅಂದಾಜು 40% ಜನರು ಬಯೋ ಮೆಟ್ರಿಕ್ ವೈಫಲ್ಯದಿಂದಾಗಿ ಅನೇಕ ಬಾರಿ ಅಲ್ಲಿಗೆ ಭೇಟಿ ನೀಡಬೇಕಾಗುತ್ತದೆ. ಈ ಕೇಂದ್ರಗಳಲ್ಲಿ ಪಾಸ್‌ಬುಕ್ ಅಪ್ಡೇಟ್ ಸೌಲಭ್ಯವನ್ನು ಹೊಂದಿಲ್ಲ. ಇದಕ್ಕೆ ಹೋಲಿಸಿದರೆ, ಆಂದ್ರ ಪ್ರದೇಶದಲ್ಲಿ ಅಂಚೆ ಖಾತೆಗಳನ್ನು ಹೊಂದಿರುವ ಜನರು ತಮ್ಮ ಪ್ರತಿ ವಹಿವಾಟಿಗೆ ಪಾಸ್‌ಬುಕ್‌ಗಳನ್ನು ನವೀಕರಿಸುತ್ತಾರೆ. ಆಂಧ್ರ ಪ್ರದೇಶದಲ್ಲಿ ಗ್ರಾಹಕ ಸೇವಾ ಕೇಂದ್ರದಲ್ಲಿ ಹಣ ಪಡೆದಾಗ ರಶೀದಿಗಳನ್ನು ಪಡೆದರೆ, ಜಾರ್ಖಂಡ್ ಮತ್ತು ರಾಜಸ್ಥಾನ್‌ಗಳಲ್ಲಿ ರಶೀದಿಗಳನ್ನು ವಿರಳವಾಗಿ ನೀಡಲಾಗುತ್ತದೆ.

ಈ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಕೆಲವು ಕಾರ್ಮಿಕರಿಂದ ಅಲ್ಲಿ ವಹಿವಾಟು ನಡೆಸಲು ಶುಲ್ಕ ಪಡೆಯುತ್ತಾರೆ. ಜಾರ್ಖಂಡ್‌ನಲ್ಲಿ ಇದು ಅತ್ಯಧಿಕವಾಗಿದ್ದು, ಅಲ್ಲಿ 45% ಜನರಿಗೆ ಶುಲ್ಕ ವಿಧಿಸಲಾಗುತ್ತದೆ. ಇದರಾಚೆಗೂ ಕಾರ್ಮಿಕರು ಹೆಚ್ಚು ನಂಬಿಕೆ ಉಳಿಸಿರುವ ಸಂಸ್ಥೆಯಾಗಿ ಬ್ಯಾಂಕುಗಳು ಉಳಿದಿವೆ ಎಂದು ಸಮೀಕ್ಷಯು ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು – ಡಾ. ಬಿ.ಸಿ.ಬಸವರಾಜ್

 

ನರೇಗ
PC: PTI

ಆಧಾರ್ ಆಧಾರಿತ ಪಾವತಿ ಮತ್ತು ಕೇಂದ್ರೀಕರಣ ವ್ಯವಸ್ಥೆಯಿಂದಾಗಿ ಕಾರ್ಮಿಕರಿಗೆ ಕೆಲವೊಮ್ಮೆ ತಮ್ಮ ವೇತನ ಎಲ್ಲಿ ಬರುತ್ತದೆ ಎಂಬ ಮಾಹಿತಿಯಾಗಲೀ ಮತ್ತು ಅವರ ಪಾವತಿಗಳನ್ನು ತಿರಸ್ಕರಿಸುವುದರ ಬಗ್ಗೆ ಸ್ವಲ್ಪವು ಸುಳಿವು ಹೊಂದಿರುವುದಿಲ್ಲ ಎಂದು ಸಮೀಕ್ಷೆಯು ಹೇಳುತ್ತದೆ. ಸರಿಯಾದ ಖಾತೆ ಸಂಖ್ಯೆಗಳು ಇಲ್ಲದಿರುವುದು ಹಾಗೂ ಈ ಸಂಖ್ಯೆಗಳಿಗೆ ಆಧಾರ್‌‌ ಮ್ಯಾಪಿಂಗ್‌‌ನ ತಾಂತ್ರಿಕ ಅಡಚಣೆಯಿಂದಾಗಿ ಇವರ ಪಾವತಿಯನ್ನು ತಿರಸ್ಕರಿಸಲಾಗುತ್ತಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಜುಲೈ 2020 ರಂತೆ, ಕಳೆದ ಐದು ವರ್ಷಗಳಲ್ಲಿ, ಸುಮಾರು ರೂ. 4,800 ಕೋಟಿ ಮೌಲ್ಯದ ಪಾವತಿಗಳನ್ನು ಭಾರತದಾದ್ಯಂತ ತಿರಸ್ಕರಿಸಲಾಗಿದೆ ಮತ್ತು ಸುಮಾರು 1,274 ಕೋಟಿ ರೂ.ಗಳನ್ನು ಕಾರ್ಮಿಕರಿಗೆ ಪಾವತಿಸಲು ಬಾಕಿ ಇದೆ. ಒಟ್ಟಾರೆ ಬ್ಯಾಂಕಿಂಗ್ ಬಗ್ಗೆ ಮತ್ತು ತಮ್ಮ ಹಕ್ಕುಗಳ ಬಗ್ಗೆ ಇವರಲ್ಲಿ ಜಾಗೃತಿ ಕಡಿಮೆಯಾಗಿದೆ. ಈ ಎಲ್ಲಾ ಅನಾನುಕೂಲತೆಗಳ ಹೊರತಾಗಿಯೂ ಕಾರ್ಮಿಕರು ಬ್ಯಾಂಕ್‌ಗಳಿಗೆ ತಮ್ಮ ಆದ್ಯತೆ ನೀಡುತ್ತಾರೆ. ಸಂಬಳ ಪಡೆಯುವಲ್ಲಿ ತೊಂದರೆ ಆದವರಲ್ಲಿ ಕೇವಲ 28% ಜನರಷ್ಟೇ ದೂರು ನೀಡುತ್ತಾರೆ ಎಂದು ಸಮೀಕ್ಷೆ ತಿಳಿಸುತ್ತದೆ. ಬಹುತೇಕ ಮಂದಿ ಕಾರ್ಮಿಕರಿಗೆ ಮೌಖಿಕ ದೂರು ನೀಡಲು ಮಾತ್ರ ಸಾಧ್ಯವಾಗುತ್ತದೆ ಎಂದು ಕೂಡ ವರದಿ ತಿಳಿಸಿದೆ.

ಇದನ್ನೂ ಓದಿ: ಮಹಿಳಾ ರೈತರ ಹಿತದೃಷ್ಟಿಗೆ ಮಾರಕವಾದ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...