Homeಮುಖಪುಟನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ

- Advertisement -
- Advertisement -

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಪಾವತಿ ವಿಳಂಬವಾಗುತ್ತಿದೆ, ಕಾರ್ಮಿಕರು ತಮ್ಮ ದುಡಿಮೆಯ ಹಣವನ್ನು ಪಡೆಯಲು ಕಷ್ಟಪಡುತ್ತಿದ್ದಾರೆ, ಎಷ್ಟೋ ಜನಕ್ಕೆ ಈ ಹಣ ಕೊನೆಯ ಹಂತದಲ್ಲಿ ಸರಿಯಾಗಿ ತಲುಪದೆ ವಾಪಾಸಾಗುತ್ತಿದೆ, ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ ಹೀಗೆ ಹತ್ತು ಹಲವು ಸಂಗತಿಗಳನ್ನು ಬಿಚ್ಚಿಡುತ್ತದೆ ಇತ್ತೀಚೆಗಿನ ಸಂಶೋಧನಾ ವರದಿ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MNREGA)ಯ ಈ ಯೋಜನೆಯಡಿ ಭಾರತದ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ವರ್ಷಕ್ಕೆ 100 ದಿನಗಳ ಉದ್ಯೋಗವನ್ನು ಒದಗಿಸುತ್ತದೆ. ಕೇಂದ್ರದ ಈ ಜನಪ್ರಿಯ ಯೋಜನೆಯಿಂದ ಹಳ್ಳಿಯಿಂದ ಕೆಲಸ ಹುಡುಕಿ ನಗರಕ್ಕೆ ವಲಸೆ ಬರುವ ಅನಿಶ್ಚಿತತೆ ಸೇರಿದಂತೆ ನಿರುದ್ಯೋಗ ಸಮಸ್ಯೆಗೆ ಕೂಡಾ ತುಸು ಪರಿಹಾರ ಸಿಕ್ಕಿತ್ತು. ಈ ಯೋಜನೆಯಡಿ ದುಡಿದವರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (ಡಿಬಿಟಿ) ಉಪಕ್ರಮದಡಿಯಲ್ಲಿ ಭಾರತ ಸರ್ಕಾರವು ಪರಿಹಾರವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ.

ಇದನ್ನೂ ಓದಿ:ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ 

ಈ ಕಾರ್ಮಿಕರ ಬಗ್ಗೆ ಲಿಬ್‌ಟೆಕ್ ಇಂಡಿಯಾ ಸಂಸ್ಥೆ, ಬೆಂಗಳೂರಿನ ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ ಅನುದಾನದಿಂದ ಸಮೀಕ್ಷೆಯನ್ನು ನಡೆಸಿದ್ದು “ಲೆಂತ್‌ ಆಫ್‌ ದಿ ಲಾಸ್ಟ್ ಮೈಲ್- ನರೇಗ ಪಾವತಿಯಲ್ಲಿನ ವಿಳಂಬ ಮತ್ತು ಅಡಚಣೆಗಳು” ಎಂಬ ಸಂಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ 2018 ರ ಸಪ್ಟೆಂಬರ್‌ ಮತ್ತು ನವೆಂಬರ್‌ ನಡುವೆ ಆಂಧ್ರಪ್ರದೇಶ, ಜಾರ್ಖಂಡ್ ಮತ್ತು ರಾಜಸ್ಥಾನಗಳಲ್ಲಿ ಒಟ್ಟು 1947 ನರೇಗ ಕಾರ್ಮಿಕರನ್ನು ಸಮೀಕ್ಷೆಯಲ್ಲಿ ಒಳಗೊಂಡಿದೆ.

ಸರ್ಕಾರ ಪಾವತಿಸುವ ಹಣವನ್ನು ಪಡೆಯಲು ಬ್ಯಾಂಕು, ಗ್ರಾಹಕ ಸೇವಾಕೇಂದ್ರ, ಇತರ ವ್ಯವಹಾರ ಕೇಂದ್ರ, ಅಂಚೆ ಕಚೇರಿ ಸೇರಿದಂತೆ ಎಟಿಎಂಗಳಲ್ಲಿ ಉದ್ಯೋಗಿಗಳು ಪಡುವ ಕಷ್ಟಗಳ ಬಗ್ಗೆ ಕೂಡಾ ಸಮೀಕ್ಷ ನಡೆಸಲಾಗಿದೆ. ಒಟ್ಟಾರೆಯಾಗಿ, ಪರಿಹಾರ ವಿತರಣೆಯ ಸಮಯದಲ್ಲಿ, ಆಂಧ್ರ ಪ್ರದೇಶದ ಕಾರ್ಮಿಕರು ಕಡಿಮೆ ಕಷ್ಟಗಳನ್ನು ಅನುಭವಿಸಿದರೆ, ಜಾರ್ಖಂಡ್‌‌ನಲ್ಲಿರುವವರು ಹೆಚ್ಚು ಕಷ್ಟಗಳನ್ನು ಎದುರಿಸುತ್ತಾರೆ ಎಂದು ಸಮೀಕ್ಷೆಯು ತಿಳಿಸುತ್ತದೆ.

ಮೂರು ರಾಜ್ಯಗಳಲ್ಲಿ ಆಂಧ್ರಪ್ರದೇಶದಲ್ಲಿ ಮಾತ್ರ ಅಂಚೆ ಕಚೇರಿಗಳನ್ನು ಬಳಕೆ ಮಾಡುತ್ತಿದ್ದು, ಅಲ್ಲಿನ ಸೇವೆಗಳ ಗುಣಮಟ್ಟದಲ್ಲಿದ್ದು ಕಾರ್ಮಿಕರು ಹೆಚ್ಚು ತೃಪ್ತರಾಗಿದ್ದಾರೆ. ಮೂರೂ ರಾಜ್ಯಗಳಲ್ಲಿರುವ ಗ್ರಾಮೀಣ ಬ್ಯಾಂಕುಗಳಲ್ಲೇ ಹೆಚ್ಚು ಜನದಟ್ಟಣೆ ಇರುತ್ತವೆ. ಬ್ಯಾಂಕುಗಳು ತಮ್ಮ ಪಂಚಾಯತ್‌ನಿಂದ ದೂರದಲ್ಲಿರುವುದು ಕಾರ್ಮಿಕರಿಗೆ ಹಣ ಪಡೆಯುವುದು ತ್ರಾಸದಾಯಕವಾಗುತ್ತದೆ. ಅನೇಕ ಸಂದರ್ಭಗಳಲ್ಲಿ, ಕಾರ್ಮಿಕರು ತಮ್ಮ ವೇತನವನ್ನು ಪಡೆಯಲು ಅನೇಕ ಸಾರಿ ಅಲೆದಾಡಬೇಕಾಗುತ್ತದೆ.

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜಾರ್ಖಂಡ್‌‌ನಲ್ಲಿ 42% ಮತ್ತು ರಾಜಸ್ಥಾನದಲ್ಲಿ 38% ಜನರು ಬ್ಯಾಂಕುಗಳಿಂದ ತಮ್ಮ ವೇತನವನ್ನು ಪಡೆಯಲು 4 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತಾರೆ. ಇದಕ್ಕೆ ವಿರುದ್ಧವಾಗಿ, ಇದು ಆಂಧ್ರಪ್ರದೇಶದಲ್ಲಿ ಕೇವಲ 2% ಜನರಿಗಷ್ಟೇ ಆಗುತ್ತದೆ. ಒಟ್ಟಾರೆಯಾಗಿ, ಅಂದಾಜು 45% ಜನರು ತಮ್ಮ ಹಣ ಪಡೆಯಲು ಬ್ಯಾಂಕ್‌ಗೆ ಅನೇಕ ಬಾರಿ ಭೇಟಿ ನೀಡಬೇಕಾಗುತ್ತದೆ.

ಗ್ರಾಹಕ ಸೇವಾ ಕೇಂದ್ರ ಹಾಗೂ ಇತರ ವ್ಯವಹಾರ ಕೇಂದ್ರಗಳು ಬ್ಯಾಂಕಿಗಿಂತಲೂ ಉತ್ತಮ ಪರ್ಯಾಯವಾಗಿ ಕಾಣಿಸಿಕೊಂಡಿದ್ದರೂ, ಅಂದಾಜು 40% ಜನರು ಬಯೋ ಮೆಟ್ರಿಕ್ ವೈಫಲ್ಯದಿಂದಾಗಿ ಅನೇಕ ಬಾರಿ ಅಲ್ಲಿಗೆ ಭೇಟಿ ನೀಡಬೇಕಾಗುತ್ತದೆ. ಈ ಕೇಂದ್ರಗಳಲ್ಲಿ ಪಾಸ್‌ಬುಕ್ ಅಪ್ಡೇಟ್ ಸೌಲಭ್ಯವನ್ನು ಹೊಂದಿಲ್ಲ. ಇದಕ್ಕೆ ಹೋಲಿಸಿದರೆ, ಆಂದ್ರ ಪ್ರದೇಶದಲ್ಲಿ ಅಂಚೆ ಖಾತೆಗಳನ್ನು ಹೊಂದಿರುವ ಜನರು ತಮ್ಮ ಪ್ರತಿ ವಹಿವಾಟಿಗೆ ಪಾಸ್‌ಬುಕ್‌ಗಳನ್ನು ನವೀಕರಿಸುತ್ತಾರೆ. ಆಂಧ್ರ ಪ್ರದೇಶದಲ್ಲಿ ಗ್ರಾಹಕ ಸೇವಾ ಕೇಂದ್ರದಲ್ಲಿ ಹಣ ಪಡೆದಾಗ ರಶೀದಿಗಳನ್ನು ಪಡೆದರೆ, ಜಾರ್ಖಂಡ್ ಮತ್ತು ರಾಜಸ್ಥಾನ್‌ಗಳಲ್ಲಿ ರಶೀದಿಗಳನ್ನು ವಿರಳವಾಗಿ ನೀಡಲಾಗುತ್ತದೆ.

ಈ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಕೆಲವು ಕಾರ್ಮಿಕರಿಂದ ಅಲ್ಲಿ ವಹಿವಾಟು ನಡೆಸಲು ಶುಲ್ಕ ಪಡೆಯುತ್ತಾರೆ. ಜಾರ್ಖಂಡ್‌ನಲ್ಲಿ ಇದು ಅತ್ಯಧಿಕವಾಗಿದ್ದು, ಅಲ್ಲಿ 45% ಜನರಿಗೆ ಶುಲ್ಕ ವಿಧಿಸಲಾಗುತ್ತದೆ. ಇದರಾಚೆಗೂ ಕಾರ್ಮಿಕರು ಹೆಚ್ಚು ನಂಬಿಕೆ ಉಳಿಸಿರುವ ಸಂಸ್ಥೆಯಾಗಿ ಬ್ಯಾಂಕುಗಳು ಉಳಿದಿವೆ ಎಂದು ಸಮೀಕ್ಷಯು ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು – ಡಾ. ಬಿ.ಸಿ.ಬಸವರಾಜ್

 

ನರೇಗ
PC: PTI

ಆಧಾರ್ ಆಧಾರಿತ ಪಾವತಿ ಮತ್ತು ಕೇಂದ್ರೀಕರಣ ವ್ಯವಸ್ಥೆಯಿಂದಾಗಿ ಕಾರ್ಮಿಕರಿಗೆ ಕೆಲವೊಮ್ಮೆ ತಮ್ಮ ವೇತನ ಎಲ್ಲಿ ಬರುತ್ತದೆ ಎಂಬ ಮಾಹಿತಿಯಾಗಲೀ ಮತ್ತು ಅವರ ಪಾವತಿಗಳನ್ನು ತಿರಸ್ಕರಿಸುವುದರ ಬಗ್ಗೆ ಸ್ವಲ್ಪವು ಸುಳಿವು ಹೊಂದಿರುವುದಿಲ್ಲ ಎಂದು ಸಮೀಕ್ಷೆಯು ಹೇಳುತ್ತದೆ. ಸರಿಯಾದ ಖಾತೆ ಸಂಖ್ಯೆಗಳು ಇಲ್ಲದಿರುವುದು ಹಾಗೂ ಈ ಸಂಖ್ಯೆಗಳಿಗೆ ಆಧಾರ್‌‌ ಮ್ಯಾಪಿಂಗ್‌‌ನ ತಾಂತ್ರಿಕ ಅಡಚಣೆಯಿಂದಾಗಿ ಇವರ ಪಾವತಿಯನ್ನು ತಿರಸ್ಕರಿಸಲಾಗುತ್ತಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಜುಲೈ 2020 ರಂತೆ, ಕಳೆದ ಐದು ವರ್ಷಗಳಲ್ಲಿ, ಸುಮಾರು ರೂ. 4,800 ಕೋಟಿ ಮೌಲ್ಯದ ಪಾವತಿಗಳನ್ನು ಭಾರತದಾದ್ಯಂತ ತಿರಸ್ಕರಿಸಲಾಗಿದೆ ಮತ್ತು ಸುಮಾರು 1,274 ಕೋಟಿ ರೂ.ಗಳನ್ನು ಕಾರ್ಮಿಕರಿಗೆ ಪಾವತಿಸಲು ಬಾಕಿ ಇದೆ. ಒಟ್ಟಾರೆ ಬ್ಯಾಂಕಿಂಗ್ ಬಗ್ಗೆ ಮತ್ತು ತಮ್ಮ ಹಕ್ಕುಗಳ ಬಗ್ಗೆ ಇವರಲ್ಲಿ ಜಾಗೃತಿ ಕಡಿಮೆಯಾಗಿದೆ. ಈ ಎಲ್ಲಾ ಅನಾನುಕೂಲತೆಗಳ ಹೊರತಾಗಿಯೂ ಕಾರ್ಮಿಕರು ಬ್ಯಾಂಕ್‌ಗಳಿಗೆ ತಮ್ಮ ಆದ್ಯತೆ ನೀಡುತ್ತಾರೆ. ಸಂಬಳ ಪಡೆಯುವಲ್ಲಿ ತೊಂದರೆ ಆದವರಲ್ಲಿ ಕೇವಲ 28% ಜನರಷ್ಟೇ ದೂರು ನೀಡುತ್ತಾರೆ ಎಂದು ಸಮೀಕ್ಷೆ ತಿಳಿಸುತ್ತದೆ. ಬಹುತೇಕ ಮಂದಿ ಕಾರ್ಮಿಕರಿಗೆ ಮೌಖಿಕ ದೂರು ನೀಡಲು ಮಾತ್ರ ಸಾಧ್ಯವಾಗುತ್ತದೆ ಎಂದು ಕೂಡ ವರದಿ ತಿಳಿಸಿದೆ.

ಇದನ್ನೂ ಓದಿ: ಮಹಿಳಾ ರೈತರ ಹಿತದೃಷ್ಟಿಗೆ ಮಾರಕವಾದ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...