Homeಮುಖಪುಟಠೇವಣಿಯನ್ನೂ ಉಳಿಸಿಕೊಳ್ಳಲಾಗದ ಕಾಂಗ್ರೆಸ್‌ಗೆ ಕ್ಷೇತ್ರ ಬಿಟ್ಟು ಕೊಡಬೇಕಿತ್ತೆ?: ಲಾಲು

ಠೇವಣಿಯನ್ನೂ ಉಳಿಸಿಕೊಳ್ಳಲಾಗದ ಕಾಂಗ್ರೆಸ್‌ಗೆ ಕ್ಷೇತ್ರ ಬಿಟ್ಟು ಕೊಡಬೇಕಿತ್ತೆ?: ಲಾಲು

- Advertisement -
- Advertisement -

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಮೈತ್ರಿಪಕ್ಷ ಕಾಂಗ್ರೆಸ್‌ನ ಉಪಯುಕ್ತತೆಯನ್ನು ಪ್ರಶ್ನಿಸಿದ್ದಾರೆ. ಠೇವಣಿಯನ್ನೂ ಉಳಿಸಿಕೊಳ್ಳಲು ಆಗದ ಕಾಂಗ್ರೆಸ್‌ಗೆ ಒಂದು ವಿಧಾನಸಭಾ ಉಪಚುನಾವಣೆಯನ್ನು ಬಿಟ್ಟು ಕೊಡಬೇಕಿತ್ತೇ ಎಂದು ಅವರು ಆಶ್ಚರ್ಯಪಟ್ಟಿದ್ದಾರೆ. ಇತ್ತೀಚೆಗಷ್ಟೇ ಬಿಹಾರದ ಮಹಾಮೈತ್ರಿಯಿಂದ ಹೊರ ನಡೆದ ಕಾಂಗ್ರೆಸ್‌ಗೆ ಲಾಲು ಪ್ರಸಾದ್ ಯಾದವ್‌ ತಿರುಗೇಟು ನೀಡಿದ್ದಾರೆ.

“ಕಾಂಗ್ರೆಸ್‌ನ ಮಹಾಮೈತ್ರಿ ಎಂದರೇನು?” ಎಂದು ಲಾಲು ಪ್ರಸಾದ್ ಕೇಳಿದ್ದಾರೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕ್ಷೇತ್ರವನ್ನು ಬಿಟ್ಟುಕೊಡಲು RJD ನಿರಾಕರಿಸಿದ್ದಕ್ಕಾಗಿ ತಮ್ಮ ಮೈತ್ರಿಯನ್ನು ಕಾಂಗ್ರೆಸ್‌ ಮುರಿದುಕೊಂಡಿದ್ದರ ಬಗ್ಗೆ ಮಾತನಾಡುತ್ತಿದ್ದರು.

ಇದನ್ನೂ ಓದಿ: ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

“ತನ್ನ ಠೇವಣಿಯನ್ನೂ ಉಳಿಸಿಕೊಳ್ಳಲು ಆಗದ ಕಾಂಗ್ರೆಸ್‌ಗೆ ಸೋಲಲು ಬೇಕಾಗಿ ನಾವು ಒಂದು ಸ್ಥಾನವನ್ನು ಬಿಟ್ಟುಕೊಡಬೇಕಿತ್ತೇ?” ಎಂದು ಅವರು ತಿರಸ್ಕಾರದಿಂದ ಹೇಳಿದ್ದಾರೆ. ಕಳೆದ ವಿಧಾನಸಭಾ ಚುಣಾವಣೆಯಲ್ಲಿ ಆರ್‌ಜೆಡಿಯ ಉತ್ತಮವಾಗಿ ಪ್ರದರ್ಶನ ನೀಡಿದ್ದು, ಆದರೆ ಮತ್ರಿ ಪಕ್ಷವಾದ ಕಾಂಗ್ರೆಸ್‌ ಕಳಪೆಯಾಗಿ ಪ್ರದರ್ಶನ ನೀಡಿತ್ತು. ಈ ಹಿನ್ನಲೆಯಲ್ಲಿ ಅವರು ಕಾಂಗ್ರೆಸ್‌ ಅನ್ನು ಕಾಲೆಳೆದಿದ್ದಾರೆ. ಮಹಾಮೈತ್ರಿಯನ್ನು ಮುರಿದು ಆರ್‌ಜೆಡಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಬಿಹಾರ ಕಾಂಗ್ರೆಸ್‌ ನಾಯಕ ಚರಣ್ ದಾಸ್‌ ಅವರನ್ನು ಲಾಲು ಪ್ರಸಾದ್ ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಆರ್‌ಜೆಡಿ ನೇತೃತ್ವದ ಮೈತ್ರಿಕೂಟದೊಂದಿಗೆ ಕಾಂಗ್ರೆಸ್ ಇನ್ನು ಮುಂದೆ ಇರುವುದುಲ್ಲ ಎಂದು ಚರಣ್‌ ದಾಸ್ ಇತ್ತೀಚೆಗೆ ಹೇಳಿದ್ದರು ಮತ್ತು ಆರ್‌ಜೆಡಿ ಬಿಜೆಪಿಯೊಂದಿಗೆ ತೆರೆಮರೆಯಲ್ಲಿ ಸಂಬಂಧ ಹೊಂದಿದೆ ಎಂದು ಆರೋಪಿಸಿದ್ದರು.

ಅಕ್ಟೋಬರ್ 30 ರಂದು ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಗಳ ಕ್ಷೇತ್ರ ಹಂಚಿಕೆಯಲ್ಲಿ ಮಹಾಮೈತ್ರಿಯ ಪ್ರಮುಖ ಪಕ್ಷಗಳ ನಡುವೆ ಬಿರುಕು ಮೂಡಿದೆ. ಕಾಂಗ್ರೆಸ್‌ ಮೈತ್ರಿಯಿಂದ ಹೊರ ಬಂದು ಸ್ವಂತ ಬಲದಿಂದ ಸ್ಪರ್ಧಿಸುವುದಾಗಿ ಹೇಳಿದೆ. ಜೊತೆಗೆ ಆರ್‌ಜೆಡಿ ಕೂಡಾ ಎರಡು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...