Homeಮುಖಪುಟದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

ದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳ ಹೈಕೋರ್ಟ್, ತನ್ನ ಎರಡು ತೀರ್ಪಗಳನ್ನು ಮಲಯಾಳಂ ಭಾಷೆಗೆ ಅನುವಾದಿಸಿ ಪ್ರಕಟಿಸಲು ಪ್ರಾರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಎರಡು ತೀರ್ಪುಗಳು WA 1638/2022, ಮತ್ತು WA 926/2016, ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಮಲಯಾಳಂ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಇದರಿಂದ ದೇಶದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತೀರ್ಪನ್ನು ಪ್ರಕಟಿಸಲು ಪ್ರಾರಂಭಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕೇರಳ ಹೈಕೋರ್ಟ್ ಪಾತ್ರವಾಗಿದೆ.

ಜನವರಿ 2023ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ದೇಶದ ನಾಲ್ಕು ಭಾಷೆಗಳಾದ ಹಿಂದಿ, ಗುಜರಾತಿ, ಒಡಿಯಾ ಮತ್ತು ತಮಿಳು ಭಾಷೆಗೆ ಅನುವಾದಿಸಲಾಗುವುದು ಎಂದು ಹೇಳಿದ್ದರು. ಏಕೆಂದರೆ 99.9% ಭಾರತೀಯ ನಾಗರಿಕರಿಗೆ ಇಂಗ್ಲೀಷ್ ಭಾಷೆಯಲ್ಲಿನ ಕಾನೂನು ಪರಿಭಾಷೆಗಳನ್ನು ಗ್ರಹಿಸಲು ಕಷ್ಟವಾಗುತ್ತದೆ ಎಂದು ಹೇಳಿದ್ದರು.

ನಾಗರಿಕರು ಮಾತನಾಡುವ ಮತ್ತು ಗ್ರಹಿಸುವ ಭಾಷೆಯಲ್ಲಿ ತೀರ್ಪು ನೀಡದಿದ್ದರೆ ಪ್ರಕರಣದ ನ್ಯಾಯವನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಾವು ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಸುಪ್ರೀಂ ಕೋರ್ಟ್‌ನಲ್ಲಿನ ತೀರ್ಪುಗಳನ್ನು ನಾಲ್ಕು ಭಾಷೆಗಳಲ್ಲಿ ನೀಡುತ್ತೇವೆ ಎಂದು ಸಿಜೆಐ ಹೇಳಿದರು.

ಇದನ್ನೂ ಓದಿ: ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ಈ ವರ್ಷ ಗಣರಾಜ್ಯೋತ್ಸವದಂದು 13 ಭಾರತೀಯ ಭಾಷೆಗಳಲ್ಲಿ ತನ್ನ 1,268 ತೀರ್ಪುಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿತ್ತು. ಅದರಲ್ಲಿ 1,091 ತೀರ್ಪುಗಳು ಹಿಂದಿಗೆ, 21 ಒಡಿಯಾಗೆ, 14 ಮರಾಠಿಗೆ, 4 ಅಸ್ಸಾಮಿಗೆ, 1 ಗಾರೊಗೆ, 17 ಕನ್ನಡಕ್ಕೆ, 1 ಖಾಸಿಗೆ, 29 ಮಲಯಾಳಂಗೆ, 28 ತೆಲುಗಿಗೆ, ಮೂರು ನೇಪಾಳಿಗೆ, 4 ಪಂಜಾಬಿಗೆ, 3 ಉರ್ದು ಭಾಷೆಗೆ ಮತ್ತು 52 ತಮಿಳಿಗೆ ಅನುವಾದಿಸಲಾಗಿದೆ.

ಈ ಪ್ರಸ್ತಾವನೆಯನ್ನು ಆರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಡಿಸಿದ್ದರು. ತೀರ್ಪುಗಳ ಪ್ರಮಾಣೀಕೃತ ಅನುವಾದಿತ ಪ್ರತಿಗಳು ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ವಿಕಸನಗೊಳಿಸಬಹುದು ಎಂದು ಅವರು ಹೇಳಿದ್ದರು.

“ಜನರಿಗೆ ನ್ಯಾಯವನ್ನು ನೀಡುವುದು ಮಾತ್ರವಲ್ಲ, ಆ ವ್ಯಾಜ್ಯದ ನ್ಯಾಯ ಅವರಿಗೆ ತಿಳಿದಿರುವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ಹೈಕೋರ್ಟ್‌ಗಳು ಇಂಗ್ಲಿಷ್‌ನಲ್ಲಿ ತೀರ್ಪು ನೀಡುತ್ತವೆ, ಆದರೆ ನಮ್ಮದು ವೈವಿಧ್ಯಮಯ ಭಾಷೆಗಳ ದೇಶ. ದಾವೆದಾರನು ಇಂಗ್ಲಿಷ್‌ನಲ್ಲಿ ಮಾತನಾಡದೇ ಇರಬಹುದು ಮತ್ತು ತೀರ್ಪಿನ ಸೂಕ್ಷ್ಮ ಅಂಶಗಳು ಅವನಿಗೆ  ಅಥವಾ ಅವಳಿಗೆ ಅರ್ಥವಾಗದೇ ಹೋಗಬಹುದು. ಹೀಗಾಗಿ ಮೊಕದ್ದಮೆ ಹೂಡಿದವರು ತೀರ್ಪನ್ನು ಅರ್ಥ ಮಾಡಿಕೊಳ್ಳಲು ವಕೀಲರು ಅಥವಾ ಇನ್ನೊಬ್ಬ ವ್ಯಕ್ತಿಯ ಮೇಲೆ ಅವಲಂಬಿತರಾಗಿರುತ್ತಾರೆ. ಇದು ಸಮಯ ಮತ್ತು ವೆಚ್ಚವನ್ನು ಹೆಚ್ಚಿಸುತ್ತದೆ. ಹಾಗಾಗಿ ತೀರ್ಪು ಪ್ರಕಟವಾದ 24 ಅಥವಾ 36 ಗಂಟೆಯೊಳಗೆ ತೀರ್ಪುಗಳ ಅನುವಾದಿತ ಪ್ರತಿಗಳು ಲಭ್ಯವಾಗಬೇಕು” ಎಂದು ರಾಮನಾಥ್ ಕೋವಿಂದ್ ಒತ್ತಿ ಹೇಳದ್ದರು.

2019 ರಲ್ಲಿ ಅಂದಿನ ಸಿಜೆಐ ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಈ ಪ್ರಸ್ತಾಪವನ್ನು ಪರಿಗಣಿಸಿತ್ತು ಮತ್ತು ತೀರ್ಪುಗಳನ್ನು ಆರು ದೇಶೀಯ ಭಾಷೆಗಳಾದ ಅಸ್ಸಾಮಿ, ಹಿಂದಿ, ಕನ್ನಡ, ಮರಾಠಿ, ಒಡಿಯಾ ಮತ್ತು ತೆಲುಗು ಭಾಷೆಗಳಿಗೆ ಭಾಷಾಂತರಿಸಲು ನಿರ್ಧರಿಸಿತ್ತು.

ಜುಲೈ 2019ರ ಹೊತ್ತಿಗೆ, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಪೋರ್ಟಲ್‌ನಲ್ಲಿ ‘ವರ್ನಾಕ್ಯುಲರ್ ಜಡ್ಜ್‌ಮೆಂಟ್ಸ್’ ಶೀರ್ಷಿಕೆಯಡಿ ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಲು ಪ್ರಾರಂಭಿಸಿತು.  ಒಂದು ನಿರ್ದಿಷ್ಟ ರಾಜ್ಯದಿಂದ ಹುಟ್ಟಿಕೊಂಡ ಪ್ರಕರಣದ ತೀರ್ಪುಗಳನ್ನು ಆ ರಾಜ್ಯದ ಭಾಷೆಗೆ ಅನುವಾದಿಸಲಾಗಿದೆ ಮತ್ತು ಆರು ಸ್ಥಳೀಯ ಭಾಷೆಗಳಲ್ಲಿ ಅನುವಾದಿಸಿದ ತೀರ್ಪುಗಳು ಲಭ್ಯವಾಗುವಂತೆ ಮಾಡಲಾಗಿದೆ. 2020ರ ಹೊತ್ತಿಗೆ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಇನ್ನೂ ಭಾಷೆಗಳಲ್ಲಿ ತೀರ್ಪುಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...