Homeಮುಖಪುಟದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

ದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳ ಹೈಕೋರ್ಟ್, ತನ್ನ ಎರಡು ತೀರ್ಪಗಳನ್ನು ಮಲಯಾಳಂ ಭಾಷೆಗೆ ಅನುವಾದಿಸಿ ಪ್ರಕಟಿಸಲು ಪ್ರಾರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಎರಡು ತೀರ್ಪುಗಳು WA 1638/2022, ಮತ್ತು WA 926/2016, ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಮಲಯಾಳಂ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಇದರಿಂದ ದೇಶದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತೀರ್ಪನ್ನು ಪ್ರಕಟಿಸಲು ಪ್ರಾರಂಭಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕೇರಳ ಹೈಕೋರ್ಟ್ ಪಾತ್ರವಾಗಿದೆ.

ಜನವರಿ 2023ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ದೇಶದ ನಾಲ್ಕು ಭಾಷೆಗಳಾದ ಹಿಂದಿ, ಗುಜರಾತಿ, ಒಡಿಯಾ ಮತ್ತು ತಮಿಳು ಭಾಷೆಗೆ ಅನುವಾದಿಸಲಾಗುವುದು ಎಂದು ಹೇಳಿದ್ದರು. ಏಕೆಂದರೆ 99.9% ಭಾರತೀಯ ನಾಗರಿಕರಿಗೆ ಇಂಗ್ಲೀಷ್ ಭಾಷೆಯಲ್ಲಿನ ಕಾನೂನು ಪರಿಭಾಷೆಗಳನ್ನು ಗ್ರಹಿಸಲು ಕಷ್ಟವಾಗುತ್ತದೆ ಎಂದು ಹೇಳಿದ್ದರು.

ನಾಗರಿಕರು ಮಾತನಾಡುವ ಮತ್ತು ಗ್ರಹಿಸುವ ಭಾಷೆಯಲ್ಲಿ ತೀರ್ಪು ನೀಡದಿದ್ದರೆ ಪ್ರಕರಣದ ನ್ಯಾಯವನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಾವು ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಸುಪ್ರೀಂ ಕೋರ್ಟ್‌ನಲ್ಲಿನ ತೀರ್ಪುಗಳನ್ನು ನಾಲ್ಕು ಭಾಷೆಗಳಲ್ಲಿ ನೀಡುತ್ತೇವೆ ಎಂದು ಸಿಜೆಐ ಹೇಳಿದರು.

ಇದನ್ನೂ ಓದಿ: ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ಈ ವರ್ಷ ಗಣರಾಜ್ಯೋತ್ಸವದಂದು 13 ಭಾರತೀಯ ಭಾಷೆಗಳಲ್ಲಿ ತನ್ನ 1,268 ತೀರ್ಪುಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿತ್ತು. ಅದರಲ್ಲಿ 1,091 ತೀರ್ಪುಗಳು ಹಿಂದಿಗೆ, 21 ಒಡಿಯಾಗೆ, 14 ಮರಾಠಿಗೆ, 4 ಅಸ್ಸಾಮಿಗೆ, 1 ಗಾರೊಗೆ, 17 ಕನ್ನಡಕ್ಕೆ, 1 ಖಾಸಿಗೆ, 29 ಮಲಯಾಳಂಗೆ, 28 ತೆಲುಗಿಗೆ, ಮೂರು ನೇಪಾಳಿಗೆ, 4 ಪಂಜಾಬಿಗೆ, 3 ಉರ್ದು ಭಾಷೆಗೆ ಮತ್ತು 52 ತಮಿಳಿಗೆ ಅನುವಾದಿಸಲಾಗಿದೆ.

ಈ ಪ್ರಸ್ತಾವನೆಯನ್ನು ಆರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಡಿಸಿದ್ದರು. ತೀರ್ಪುಗಳ ಪ್ರಮಾಣೀಕೃತ ಅನುವಾದಿತ ಪ್ರತಿಗಳು ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ವಿಕಸನಗೊಳಿಸಬಹುದು ಎಂದು ಅವರು ಹೇಳಿದ್ದರು.

“ಜನರಿಗೆ ನ್ಯಾಯವನ್ನು ನೀಡುವುದು ಮಾತ್ರವಲ್ಲ, ಆ ವ್ಯಾಜ್ಯದ ನ್ಯಾಯ ಅವರಿಗೆ ತಿಳಿದಿರುವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ಹೈಕೋರ್ಟ್‌ಗಳು ಇಂಗ್ಲಿಷ್‌ನಲ್ಲಿ ತೀರ್ಪು ನೀಡುತ್ತವೆ, ಆದರೆ ನಮ್ಮದು ವೈವಿಧ್ಯಮಯ ಭಾಷೆಗಳ ದೇಶ. ದಾವೆದಾರನು ಇಂಗ್ಲಿಷ್‌ನಲ್ಲಿ ಮಾತನಾಡದೇ ಇರಬಹುದು ಮತ್ತು ತೀರ್ಪಿನ ಸೂಕ್ಷ್ಮ ಅಂಶಗಳು ಅವನಿಗೆ  ಅಥವಾ ಅವಳಿಗೆ ಅರ್ಥವಾಗದೇ ಹೋಗಬಹುದು. ಹೀಗಾಗಿ ಮೊಕದ್ದಮೆ ಹೂಡಿದವರು ತೀರ್ಪನ್ನು ಅರ್ಥ ಮಾಡಿಕೊಳ್ಳಲು ವಕೀಲರು ಅಥವಾ ಇನ್ನೊಬ್ಬ ವ್ಯಕ್ತಿಯ ಮೇಲೆ ಅವಲಂಬಿತರಾಗಿರುತ್ತಾರೆ. ಇದು ಸಮಯ ಮತ್ತು ವೆಚ್ಚವನ್ನು ಹೆಚ್ಚಿಸುತ್ತದೆ. ಹಾಗಾಗಿ ತೀರ್ಪು ಪ್ರಕಟವಾದ 24 ಅಥವಾ 36 ಗಂಟೆಯೊಳಗೆ ತೀರ್ಪುಗಳ ಅನುವಾದಿತ ಪ್ರತಿಗಳು ಲಭ್ಯವಾಗಬೇಕು” ಎಂದು ರಾಮನಾಥ್ ಕೋವಿಂದ್ ಒತ್ತಿ ಹೇಳದ್ದರು.

2019 ರಲ್ಲಿ ಅಂದಿನ ಸಿಜೆಐ ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಈ ಪ್ರಸ್ತಾಪವನ್ನು ಪರಿಗಣಿಸಿತ್ತು ಮತ್ತು ತೀರ್ಪುಗಳನ್ನು ಆರು ದೇಶೀಯ ಭಾಷೆಗಳಾದ ಅಸ್ಸಾಮಿ, ಹಿಂದಿ, ಕನ್ನಡ, ಮರಾಠಿ, ಒಡಿಯಾ ಮತ್ತು ತೆಲುಗು ಭಾಷೆಗಳಿಗೆ ಭಾಷಾಂತರಿಸಲು ನಿರ್ಧರಿಸಿತ್ತು.

ಜುಲೈ 2019ರ ಹೊತ್ತಿಗೆ, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಪೋರ್ಟಲ್‌ನಲ್ಲಿ ‘ವರ್ನಾಕ್ಯುಲರ್ ಜಡ್ಜ್‌ಮೆಂಟ್ಸ್’ ಶೀರ್ಷಿಕೆಯಡಿ ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಲು ಪ್ರಾರಂಭಿಸಿತು.  ಒಂದು ನಿರ್ದಿಷ್ಟ ರಾಜ್ಯದಿಂದ ಹುಟ್ಟಿಕೊಂಡ ಪ್ರಕರಣದ ತೀರ್ಪುಗಳನ್ನು ಆ ರಾಜ್ಯದ ಭಾಷೆಗೆ ಅನುವಾದಿಸಲಾಗಿದೆ ಮತ್ತು ಆರು ಸ್ಥಳೀಯ ಭಾಷೆಗಳಲ್ಲಿ ಅನುವಾದಿಸಿದ ತೀರ್ಪುಗಳು ಲಭ್ಯವಾಗುವಂತೆ ಮಾಡಲಾಗಿದೆ. 2020ರ ಹೊತ್ತಿಗೆ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಇನ್ನೂ ಭಾಷೆಗಳಲ್ಲಿ ತೀರ್ಪುಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...