Homeಮುಖಪುಟದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

ದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳ ಹೈಕೋರ್ಟ್, ತನ್ನ ಎರಡು ತೀರ್ಪಗಳನ್ನು ಮಲಯಾಳಂ ಭಾಷೆಗೆ ಅನುವಾದಿಸಿ ಪ್ರಕಟಿಸಲು ಪ್ರಾರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಎರಡು ತೀರ್ಪುಗಳು WA 1638/2022, ಮತ್ತು WA 926/2016, ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಮಲಯಾಳಂ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಇದರಿಂದ ದೇಶದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತೀರ್ಪನ್ನು ಪ್ರಕಟಿಸಲು ಪ್ರಾರಂಭಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕೇರಳ ಹೈಕೋರ್ಟ್ ಪಾತ್ರವಾಗಿದೆ.

ಜನವರಿ 2023ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ದೇಶದ ನಾಲ್ಕು ಭಾಷೆಗಳಾದ ಹಿಂದಿ, ಗುಜರಾತಿ, ಒಡಿಯಾ ಮತ್ತು ತಮಿಳು ಭಾಷೆಗೆ ಅನುವಾದಿಸಲಾಗುವುದು ಎಂದು ಹೇಳಿದ್ದರು. ಏಕೆಂದರೆ 99.9% ಭಾರತೀಯ ನಾಗರಿಕರಿಗೆ ಇಂಗ್ಲೀಷ್ ಭಾಷೆಯಲ್ಲಿನ ಕಾನೂನು ಪರಿಭಾಷೆಗಳನ್ನು ಗ್ರಹಿಸಲು ಕಷ್ಟವಾಗುತ್ತದೆ ಎಂದು ಹೇಳಿದ್ದರು.

ನಾಗರಿಕರು ಮಾತನಾಡುವ ಮತ್ತು ಗ್ರಹಿಸುವ ಭಾಷೆಯಲ್ಲಿ ತೀರ್ಪು ನೀಡದಿದ್ದರೆ ಪ್ರಕರಣದ ನ್ಯಾಯವನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಾವು ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಸುಪ್ರೀಂ ಕೋರ್ಟ್‌ನಲ್ಲಿನ ತೀರ್ಪುಗಳನ್ನು ನಾಲ್ಕು ಭಾಷೆಗಳಲ್ಲಿ ನೀಡುತ್ತೇವೆ ಎಂದು ಸಿಜೆಐ ಹೇಳಿದರು.

ಇದನ್ನೂ ಓದಿ: ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ಈ ವರ್ಷ ಗಣರಾಜ್ಯೋತ್ಸವದಂದು 13 ಭಾರತೀಯ ಭಾಷೆಗಳಲ್ಲಿ ತನ್ನ 1,268 ತೀರ್ಪುಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿತ್ತು. ಅದರಲ್ಲಿ 1,091 ತೀರ್ಪುಗಳು ಹಿಂದಿಗೆ, 21 ಒಡಿಯಾಗೆ, 14 ಮರಾಠಿಗೆ, 4 ಅಸ್ಸಾಮಿಗೆ, 1 ಗಾರೊಗೆ, 17 ಕನ್ನಡಕ್ಕೆ, 1 ಖಾಸಿಗೆ, 29 ಮಲಯಾಳಂಗೆ, 28 ತೆಲುಗಿಗೆ, ಮೂರು ನೇಪಾಳಿಗೆ, 4 ಪಂಜಾಬಿಗೆ, 3 ಉರ್ದು ಭಾಷೆಗೆ ಮತ್ತು 52 ತಮಿಳಿಗೆ ಅನುವಾದಿಸಲಾಗಿದೆ.

ಈ ಪ್ರಸ್ತಾವನೆಯನ್ನು ಆರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಡಿಸಿದ್ದರು. ತೀರ್ಪುಗಳ ಪ್ರಮಾಣೀಕೃತ ಅನುವಾದಿತ ಪ್ರತಿಗಳು ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ವಿಕಸನಗೊಳಿಸಬಹುದು ಎಂದು ಅವರು ಹೇಳಿದ್ದರು.

“ಜನರಿಗೆ ನ್ಯಾಯವನ್ನು ನೀಡುವುದು ಮಾತ್ರವಲ್ಲ, ಆ ವ್ಯಾಜ್ಯದ ನ್ಯಾಯ ಅವರಿಗೆ ತಿಳಿದಿರುವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ಹೈಕೋರ್ಟ್‌ಗಳು ಇಂಗ್ಲಿಷ್‌ನಲ್ಲಿ ತೀರ್ಪು ನೀಡುತ್ತವೆ, ಆದರೆ ನಮ್ಮದು ವೈವಿಧ್ಯಮಯ ಭಾಷೆಗಳ ದೇಶ. ದಾವೆದಾರನು ಇಂಗ್ಲಿಷ್‌ನಲ್ಲಿ ಮಾತನಾಡದೇ ಇರಬಹುದು ಮತ್ತು ತೀರ್ಪಿನ ಸೂಕ್ಷ್ಮ ಅಂಶಗಳು ಅವನಿಗೆ  ಅಥವಾ ಅವಳಿಗೆ ಅರ್ಥವಾಗದೇ ಹೋಗಬಹುದು. ಹೀಗಾಗಿ ಮೊಕದ್ದಮೆ ಹೂಡಿದವರು ತೀರ್ಪನ್ನು ಅರ್ಥ ಮಾಡಿಕೊಳ್ಳಲು ವಕೀಲರು ಅಥವಾ ಇನ್ನೊಬ್ಬ ವ್ಯಕ್ತಿಯ ಮೇಲೆ ಅವಲಂಬಿತರಾಗಿರುತ್ತಾರೆ. ಇದು ಸಮಯ ಮತ್ತು ವೆಚ್ಚವನ್ನು ಹೆಚ್ಚಿಸುತ್ತದೆ. ಹಾಗಾಗಿ ತೀರ್ಪು ಪ್ರಕಟವಾದ 24 ಅಥವಾ 36 ಗಂಟೆಯೊಳಗೆ ತೀರ್ಪುಗಳ ಅನುವಾದಿತ ಪ್ರತಿಗಳು ಲಭ್ಯವಾಗಬೇಕು” ಎಂದು ರಾಮನಾಥ್ ಕೋವಿಂದ್ ಒತ್ತಿ ಹೇಳದ್ದರು.

2019 ರಲ್ಲಿ ಅಂದಿನ ಸಿಜೆಐ ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಈ ಪ್ರಸ್ತಾಪವನ್ನು ಪರಿಗಣಿಸಿತ್ತು ಮತ್ತು ತೀರ್ಪುಗಳನ್ನು ಆರು ದೇಶೀಯ ಭಾಷೆಗಳಾದ ಅಸ್ಸಾಮಿ, ಹಿಂದಿ, ಕನ್ನಡ, ಮರಾಠಿ, ಒಡಿಯಾ ಮತ್ತು ತೆಲುಗು ಭಾಷೆಗಳಿಗೆ ಭಾಷಾಂತರಿಸಲು ನಿರ್ಧರಿಸಿತ್ತು.

ಜುಲೈ 2019ರ ಹೊತ್ತಿಗೆ, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಪೋರ್ಟಲ್‌ನಲ್ಲಿ ‘ವರ್ನಾಕ್ಯುಲರ್ ಜಡ್ಜ್‌ಮೆಂಟ್ಸ್’ ಶೀರ್ಷಿಕೆಯಡಿ ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಲು ಪ್ರಾರಂಭಿಸಿತು.  ಒಂದು ನಿರ್ದಿಷ್ಟ ರಾಜ್ಯದಿಂದ ಹುಟ್ಟಿಕೊಂಡ ಪ್ರಕರಣದ ತೀರ್ಪುಗಳನ್ನು ಆ ರಾಜ್ಯದ ಭಾಷೆಗೆ ಅನುವಾದಿಸಲಾಗಿದೆ ಮತ್ತು ಆರು ಸ್ಥಳೀಯ ಭಾಷೆಗಳಲ್ಲಿ ಅನುವಾದಿಸಿದ ತೀರ್ಪುಗಳು ಲಭ್ಯವಾಗುವಂತೆ ಮಾಡಲಾಗಿದೆ. 2020ರ ಹೊತ್ತಿಗೆ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಇನ್ನೂ ಭಾಷೆಗಳಲ್ಲಿ ತೀರ್ಪುಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...