Homeಮುಖಪುಟದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

ದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳ ಹೈಕೋರ್ಟ್, ತನ್ನ ಎರಡು ತೀರ್ಪಗಳನ್ನು ಮಲಯಾಳಂ ಭಾಷೆಗೆ ಅನುವಾದಿಸಿ ಪ್ರಕಟಿಸಲು ಪ್ರಾರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಎರಡು ತೀರ್ಪುಗಳು WA 1638/2022, ಮತ್ತು WA 926/2016, ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಮಲಯಾಳಂ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಇದರಿಂದ ದೇಶದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತೀರ್ಪನ್ನು ಪ್ರಕಟಿಸಲು ಪ್ರಾರಂಭಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕೇರಳ ಹೈಕೋರ್ಟ್ ಪಾತ್ರವಾಗಿದೆ.

ಜನವರಿ 2023ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ದೇಶದ ನಾಲ್ಕು ಭಾಷೆಗಳಾದ ಹಿಂದಿ, ಗುಜರಾತಿ, ಒಡಿಯಾ ಮತ್ತು ತಮಿಳು ಭಾಷೆಗೆ ಅನುವಾದಿಸಲಾಗುವುದು ಎಂದು ಹೇಳಿದ್ದರು. ಏಕೆಂದರೆ 99.9% ಭಾರತೀಯ ನಾಗರಿಕರಿಗೆ ಇಂಗ್ಲೀಷ್ ಭಾಷೆಯಲ್ಲಿನ ಕಾನೂನು ಪರಿಭಾಷೆಗಳನ್ನು ಗ್ರಹಿಸಲು ಕಷ್ಟವಾಗುತ್ತದೆ ಎಂದು ಹೇಳಿದ್ದರು.

ನಾಗರಿಕರು ಮಾತನಾಡುವ ಮತ್ತು ಗ್ರಹಿಸುವ ಭಾಷೆಯಲ್ಲಿ ತೀರ್ಪು ನೀಡದಿದ್ದರೆ ಪ್ರಕರಣದ ನ್ಯಾಯವನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಾವು ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಸುಪ್ರೀಂ ಕೋರ್ಟ್‌ನಲ್ಲಿನ ತೀರ್ಪುಗಳನ್ನು ನಾಲ್ಕು ಭಾಷೆಗಳಲ್ಲಿ ನೀಡುತ್ತೇವೆ ಎಂದು ಸಿಜೆಐ ಹೇಳಿದರು.

ಇದನ್ನೂ ಓದಿ: ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ಈ ವರ್ಷ ಗಣರಾಜ್ಯೋತ್ಸವದಂದು 13 ಭಾರತೀಯ ಭಾಷೆಗಳಲ್ಲಿ ತನ್ನ 1,268 ತೀರ್ಪುಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿತ್ತು. ಅದರಲ್ಲಿ 1,091 ತೀರ್ಪುಗಳು ಹಿಂದಿಗೆ, 21 ಒಡಿಯಾಗೆ, 14 ಮರಾಠಿಗೆ, 4 ಅಸ್ಸಾಮಿಗೆ, 1 ಗಾರೊಗೆ, 17 ಕನ್ನಡಕ್ಕೆ, 1 ಖಾಸಿಗೆ, 29 ಮಲಯಾಳಂಗೆ, 28 ತೆಲುಗಿಗೆ, ಮೂರು ನೇಪಾಳಿಗೆ, 4 ಪಂಜಾಬಿಗೆ, 3 ಉರ್ದು ಭಾಷೆಗೆ ಮತ್ತು 52 ತಮಿಳಿಗೆ ಅನುವಾದಿಸಲಾಗಿದೆ.

ಈ ಪ್ರಸ್ತಾವನೆಯನ್ನು ಆರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಡಿಸಿದ್ದರು. ತೀರ್ಪುಗಳ ಪ್ರಮಾಣೀಕೃತ ಅನುವಾದಿತ ಪ್ರತಿಗಳು ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ವಿಕಸನಗೊಳಿಸಬಹುದು ಎಂದು ಅವರು ಹೇಳಿದ್ದರು.

“ಜನರಿಗೆ ನ್ಯಾಯವನ್ನು ನೀಡುವುದು ಮಾತ್ರವಲ್ಲ, ಆ ವ್ಯಾಜ್ಯದ ನ್ಯಾಯ ಅವರಿಗೆ ತಿಳಿದಿರುವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ಹೈಕೋರ್ಟ್‌ಗಳು ಇಂಗ್ಲಿಷ್‌ನಲ್ಲಿ ತೀರ್ಪು ನೀಡುತ್ತವೆ, ಆದರೆ ನಮ್ಮದು ವೈವಿಧ್ಯಮಯ ಭಾಷೆಗಳ ದೇಶ. ದಾವೆದಾರನು ಇಂಗ್ಲಿಷ್‌ನಲ್ಲಿ ಮಾತನಾಡದೇ ಇರಬಹುದು ಮತ್ತು ತೀರ್ಪಿನ ಸೂಕ್ಷ್ಮ ಅಂಶಗಳು ಅವನಿಗೆ  ಅಥವಾ ಅವಳಿಗೆ ಅರ್ಥವಾಗದೇ ಹೋಗಬಹುದು. ಹೀಗಾಗಿ ಮೊಕದ್ದಮೆ ಹೂಡಿದವರು ತೀರ್ಪನ್ನು ಅರ್ಥ ಮಾಡಿಕೊಳ್ಳಲು ವಕೀಲರು ಅಥವಾ ಇನ್ನೊಬ್ಬ ವ್ಯಕ್ತಿಯ ಮೇಲೆ ಅವಲಂಬಿತರಾಗಿರುತ್ತಾರೆ. ಇದು ಸಮಯ ಮತ್ತು ವೆಚ್ಚವನ್ನು ಹೆಚ್ಚಿಸುತ್ತದೆ. ಹಾಗಾಗಿ ತೀರ್ಪು ಪ್ರಕಟವಾದ 24 ಅಥವಾ 36 ಗಂಟೆಯೊಳಗೆ ತೀರ್ಪುಗಳ ಅನುವಾದಿತ ಪ್ರತಿಗಳು ಲಭ್ಯವಾಗಬೇಕು” ಎಂದು ರಾಮನಾಥ್ ಕೋವಿಂದ್ ಒತ್ತಿ ಹೇಳದ್ದರು.

2019 ರಲ್ಲಿ ಅಂದಿನ ಸಿಜೆಐ ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಈ ಪ್ರಸ್ತಾಪವನ್ನು ಪರಿಗಣಿಸಿತ್ತು ಮತ್ತು ತೀರ್ಪುಗಳನ್ನು ಆರು ದೇಶೀಯ ಭಾಷೆಗಳಾದ ಅಸ್ಸಾಮಿ, ಹಿಂದಿ, ಕನ್ನಡ, ಮರಾಠಿ, ಒಡಿಯಾ ಮತ್ತು ತೆಲುಗು ಭಾಷೆಗಳಿಗೆ ಭಾಷಾಂತರಿಸಲು ನಿರ್ಧರಿಸಿತ್ತು.

ಜುಲೈ 2019ರ ಹೊತ್ತಿಗೆ, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಪೋರ್ಟಲ್‌ನಲ್ಲಿ ‘ವರ್ನಾಕ್ಯುಲರ್ ಜಡ್ಜ್‌ಮೆಂಟ್ಸ್’ ಶೀರ್ಷಿಕೆಯಡಿ ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಲು ಪ್ರಾರಂಭಿಸಿತು.  ಒಂದು ನಿರ್ದಿಷ್ಟ ರಾಜ್ಯದಿಂದ ಹುಟ್ಟಿಕೊಂಡ ಪ್ರಕರಣದ ತೀರ್ಪುಗಳನ್ನು ಆ ರಾಜ್ಯದ ಭಾಷೆಗೆ ಅನುವಾದಿಸಲಾಗಿದೆ ಮತ್ತು ಆರು ಸ್ಥಳೀಯ ಭಾಷೆಗಳಲ್ಲಿ ಅನುವಾದಿಸಿದ ತೀರ್ಪುಗಳು ಲಭ್ಯವಾಗುವಂತೆ ಮಾಡಲಾಗಿದೆ. 2020ರ ಹೊತ್ತಿಗೆ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಇನ್ನೂ ಭಾಷೆಗಳಲ್ಲಿ ತೀರ್ಪುಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...