Homeಮುಖಪುಟದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

ದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳ ಹೈಕೋರ್ಟ್, ತನ್ನ ಎರಡು ತೀರ್ಪಗಳನ್ನು ಮಲಯಾಳಂ ಭಾಷೆಗೆ ಅನುವಾದಿಸಿ ಪ್ರಕಟಿಸಲು ಪ್ರಾರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಎರಡು ತೀರ್ಪುಗಳು WA 1638/2022, ಮತ್ತು WA 926/2016, ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಮಲಯಾಳಂ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಇದರಿಂದ ದೇಶದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತೀರ್ಪನ್ನು ಪ್ರಕಟಿಸಲು ಪ್ರಾರಂಭಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕೇರಳ ಹೈಕೋರ್ಟ್ ಪಾತ್ರವಾಗಿದೆ.

ಜನವರಿ 2023ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ದೇಶದ ನಾಲ್ಕು ಭಾಷೆಗಳಾದ ಹಿಂದಿ, ಗುಜರಾತಿ, ಒಡಿಯಾ ಮತ್ತು ತಮಿಳು ಭಾಷೆಗೆ ಅನುವಾದಿಸಲಾಗುವುದು ಎಂದು ಹೇಳಿದ್ದರು. ಏಕೆಂದರೆ 99.9% ಭಾರತೀಯ ನಾಗರಿಕರಿಗೆ ಇಂಗ್ಲೀಷ್ ಭಾಷೆಯಲ್ಲಿನ ಕಾನೂನು ಪರಿಭಾಷೆಗಳನ್ನು ಗ್ರಹಿಸಲು ಕಷ್ಟವಾಗುತ್ತದೆ ಎಂದು ಹೇಳಿದ್ದರು.

ನಾಗರಿಕರು ಮಾತನಾಡುವ ಮತ್ತು ಗ್ರಹಿಸುವ ಭಾಷೆಯಲ್ಲಿ ತೀರ್ಪು ನೀಡದಿದ್ದರೆ ಪ್ರಕರಣದ ನ್ಯಾಯವನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಾವು ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಸುಪ್ರೀಂ ಕೋರ್ಟ್‌ನಲ್ಲಿನ ತೀರ್ಪುಗಳನ್ನು ನಾಲ್ಕು ಭಾಷೆಗಳಲ್ಲಿ ನೀಡುತ್ತೇವೆ ಎಂದು ಸಿಜೆಐ ಹೇಳಿದರು.

ಇದನ್ನೂ ಓದಿ: ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ಈ ವರ್ಷ ಗಣರಾಜ್ಯೋತ್ಸವದಂದು 13 ಭಾರತೀಯ ಭಾಷೆಗಳಲ್ಲಿ ತನ್ನ 1,268 ತೀರ್ಪುಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿತ್ತು. ಅದರಲ್ಲಿ 1,091 ತೀರ್ಪುಗಳು ಹಿಂದಿಗೆ, 21 ಒಡಿಯಾಗೆ, 14 ಮರಾಠಿಗೆ, 4 ಅಸ್ಸಾಮಿಗೆ, 1 ಗಾರೊಗೆ, 17 ಕನ್ನಡಕ್ಕೆ, 1 ಖಾಸಿಗೆ, 29 ಮಲಯಾಳಂಗೆ, 28 ತೆಲುಗಿಗೆ, ಮೂರು ನೇಪಾಳಿಗೆ, 4 ಪಂಜಾಬಿಗೆ, 3 ಉರ್ದು ಭಾಷೆಗೆ ಮತ್ತು 52 ತಮಿಳಿಗೆ ಅನುವಾದಿಸಲಾಗಿದೆ.

ಈ ಪ್ರಸ್ತಾವನೆಯನ್ನು ಆರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಡಿಸಿದ್ದರು. ತೀರ್ಪುಗಳ ಪ್ರಮಾಣೀಕೃತ ಅನುವಾದಿತ ಪ್ರತಿಗಳು ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ವಿಕಸನಗೊಳಿಸಬಹುದು ಎಂದು ಅವರು ಹೇಳಿದ್ದರು.

“ಜನರಿಗೆ ನ್ಯಾಯವನ್ನು ನೀಡುವುದು ಮಾತ್ರವಲ್ಲ, ಆ ವ್ಯಾಜ್ಯದ ನ್ಯಾಯ ಅವರಿಗೆ ತಿಳಿದಿರುವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ಹೈಕೋರ್ಟ್‌ಗಳು ಇಂಗ್ಲಿಷ್‌ನಲ್ಲಿ ತೀರ್ಪು ನೀಡುತ್ತವೆ, ಆದರೆ ನಮ್ಮದು ವೈವಿಧ್ಯಮಯ ಭಾಷೆಗಳ ದೇಶ. ದಾವೆದಾರನು ಇಂಗ್ಲಿಷ್‌ನಲ್ಲಿ ಮಾತನಾಡದೇ ಇರಬಹುದು ಮತ್ತು ತೀರ್ಪಿನ ಸೂಕ್ಷ್ಮ ಅಂಶಗಳು ಅವನಿಗೆ  ಅಥವಾ ಅವಳಿಗೆ ಅರ್ಥವಾಗದೇ ಹೋಗಬಹುದು. ಹೀಗಾಗಿ ಮೊಕದ್ದಮೆ ಹೂಡಿದವರು ತೀರ್ಪನ್ನು ಅರ್ಥ ಮಾಡಿಕೊಳ್ಳಲು ವಕೀಲರು ಅಥವಾ ಇನ್ನೊಬ್ಬ ವ್ಯಕ್ತಿಯ ಮೇಲೆ ಅವಲಂಬಿತರಾಗಿರುತ್ತಾರೆ. ಇದು ಸಮಯ ಮತ್ತು ವೆಚ್ಚವನ್ನು ಹೆಚ್ಚಿಸುತ್ತದೆ. ಹಾಗಾಗಿ ತೀರ್ಪು ಪ್ರಕಟವಾದ 24 ಅಥವಾ 36 ಗಂಟೆಯೊಳಗೆ ತೀರ್ಪುಗಳ ಅನುವಾದಿತ ಪ್ರತಿಗಳು ಲಭ್ಯವಾಗಬೇಕು” ಎಂದು ರಾಮನಾಥ್ ಕೋವಿಂದ್ ಒತ್ತಿ ಹೇಳದ್ದರು.

2019 ರಲ್ಲಿ ಅಂದಿನ ಸಿಜೆಐ ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಈ ಪ್ರಸ್ತಾಪವನ್ನು ಪರಿಗಣಿಸಿತ್ತು ಮತ್ತು ತೀರ್ಪುಗಳನ್ನು ಆರು ದೇಶೀಯ ಭಾಷೆಗಳಾದ ಅಸ್ಸಾಮಿ, ಹಿಂದಿ, ಕನ್ನಡ, ಮರಾಠಿ, ಒಡಿಯಾ ಮತ್ತು ತೆಲುಗು ಭಾಷೆಗಳಿಗೆ ಭಾಷಾಂತರಿಸಲು ನಿರ್ಧರಿಸಿತ್ತು.

ಜುಲೈ 2019ರ ಹೊತ್ತಿಗೆ, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಪೋರ್ಟಲ್‌ನಲ್ಲಿ ‘ವರ್ನಾಕ್ಯುಲರ್ ಜಡ್ಜ್‌ಮೆಂಟ್ಸ್’ ಶೀರ್ಷಿಕೆಯಡಿ ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಲು ಪ್ರಾರಂಭಿಸಿತು.  ಒಂದು ನಿರ್ದಿಷ್ಟ ರಾಜ್ಯದಿಂದ ಹುಟ್ಟಿಕೊಂಡ ಪ್ರಕರಣದ ತೀರ್ಪುಗಳನ್ನು ಆ ರಾಜ್ಯದ ಭಾಷೆಗೆ ಅನುವಾದಿಸಲಾಗಿದೆ ಮತ್ತು ಆರು ಸ್ಥಳೀಯ ಭಾಷೆಗಳಲ್ಲಿ ಅನುವಾದಿಸಿದ ತೀರ್ಪುಗಳು ಲಭ್ಯವಾಗುವಂತೆ ಮಾಡಲಾಗಿದೆ. 2020ರ ಹೊತ್ತಿಗೆ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಇನ್ನೂ ಭಾಷೆಗಳಲ್ಲಿ ತೀರ್ಪುಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...