Homeಸಿನಿಮಾಕ್ರೀಡೆಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ಭಾರತದ ಮಹಿಳಾ ತಂಡ...

ಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ಭಾರತದ ಮಹಿಳಾ ತಂಡ…

- Advertisement -
- Advertisement -

ಭಾರತೀಯ ಮಹಿಳಾ ಕ್ರಿಕೆಟ್‌ ತಂಡವು ಅಘೋಘ ಸಾಧನೆಯೊಂದಿಗೆ ಇತಿಹಾಸದಲ್ಲಿ ಮೊದಲ ಬಾರಿಗೆ 20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಸಿಡ್ನಿಯಲ್ಲಿ ಇಂದು ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯ ಮಳೆಯಿಂದ ರದ್ದಾದ ನಂತರ ಲೀಗ್‌ ಹಂತದಲ್ಲಿ ನಾಲ್ಕೂ ಪಂದ್ಯಗಳಲ್ಲಿ ಜಯಗಲಿಸಿ ಅಗ್ರಸ್ಥಾನದಲ್ಲಿದ್ದ ಕಾರಣ ಭಾರತ ನೇರ ಫೈನಲ್‌ಗೆ ಪ್ರವೇಶಿಸಿದೆ.

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವು ಗ್ರೂಪ್‌ ಹಂತದ ನಾಲ್ಕು ಪಂದ್ಯಗಳಲ್ಲಿ ಜಯಗಳಿಸಿ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ ಇಂಗ್ಲೆಂಡ್‌ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದ್ದ ಕಾರಣ ಭಾರತಕ್ಕೆ ಪೈನಲ್‌ ಹಾದಿ ಸುಗಮವಾಗಿದೆ. ಸೆಮಿಫೈನಲ್‌ ಮತ್ತೊಂದು ದಿನ ನಡೆಸಲು ಅವಕಾಶವಿಲ್ಲದ ಕಾರಣ ಲೀಗ್‌ ಹಂತದಲ್ಲಿ ಉತ್ತಮ ಸ್ಥಿತಿಯಲ್ಲಿದ್ದ ತಂಡ ಫೈನಲ್‌ ಪ್ರವೇಶಿಸುತ್ತದೆ ಎಂದು ಈ ಮೊದಲೇ ನಿರ್ಧರಿಸಲಾಗಿತ್ತು.

ಇನ್ನೊಂದು ಸೆಮಿಫೈನಲ್‌ ಪಂದ್ಯ ಇಂದು ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಲಿದ್ದು ಗೆದ್ದ ತಂಡ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ. ಭಾನುವಾರ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯ ನಡೆಯಲಿದೆ.

ಇಂದು ಬೆಳಿಗ್ಗೆ 10;44ರವರೆಗೆ ಕಾದ ರೆಫರಿಗಳು, ಮಳೆ ನಿಲ್ಲದ ಕಾರಣ ಪಂದ್ಯವನ್ನು ರದ್ದುಗೊಳಿಸಿ ಭಾರತ ಫೈನಲ್‌ ಪ್ರವೇಶಿಸಿದೆ ಎಂದು ಘೋಷಿಸಿದರು.

ಈ ಸಾಧನೆಗಾಗಿ ಖ್ಯಾತ ಕ್ರಿಕೆಟ್‌ ಪಟುಗಳು ಟ್ವಿಟ್ಟರ್‌ನಲ್ಲಿ ಮಹಿಳಾ ತಂಡಕ್ಕೆ ಶುಭಾಶಯಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಭಾರತದ ಪುರುಷರ ತಂಡದ ನಾಯಕ ವಿರಾಟ್ ಕೊಹ್ಲಿ ಮಹಿಳಾ ತಂಡವನ್ನು ಅಭಿನಂದಿಸಿದ್ದು, ಫೈನಲ್‌ಗೆ ಶುಭ ಹಾರೈಸಿದ್ದಾರೆ. “ಟಿ 20 ವರ್ಲ್ಡ್ ಕಪ್ ಫೈನಲ್‌ಗೆ ಅರ್ಹತೆ ಪಡೆದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆಗಳು. ನಮ್ಮ ಹೆಣ್ಣುಮಕ್ಕಳ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ ಮತ್ತು ಫೈನಲ್‌ ಪಂದ್ಯಕ್ಕೆ ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ” ಎಂದು ವಿರಾಟ್ ಟ್ವೀಟ್ ಮಾಡಿದ್ದಾರೆ.

ಅಲ್ಲದೇ ಕನ್ನಡಿಗ ಕೆ.ಎಲ್‌ ರಾಹುಲ್‌, ಮಾಜಿ ಆಟಗಾರರಾದ ಸುರೇಶ್‌ ರೈನಾ, ವಿವಿಎಸ್‌ ಲಕ್ಷ್ಮಣ್‌, ಮಾಜಿ ನಾಯಕಿ ಮಿಥಾಲಿ ರಾಜ್‌ ಸೇರಿ ಬಹಳಷ್ಟು ಮಂದಿ ಟ್ವಿಟ್ಟರ್‌ನಲ್ಲಿ ಶುಭ ಹಾರೈಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...