Homeಎಕಾನಮಿಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. - ಪ್ರಶಾಂತ್ ಭೂಷಣ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ (ಎಲ್‌ಐಸಿ)ವು ಅದಾನಿ ಸಮೂಹದ ಐದು ದೊಡ್ಡ ಕಂಪನಿಗಳಲ್ಲಿ  ಹೂಡಿದ್ದ ಷೇರುಗಳ ಮಾರುಕಟ್ಟೆ ಮೌಲ್ಯವು ಮೊದಲ ಬಾರಿಗೆ ಅದರ ಖರೀದಿ ಮೌಲ್ಯಕ್ಕಿಂತ ಕಡಿಮೆಯಾಗಿದ್ದು ನಿವ್ವಳ ನಷ್ಟಕ್ಕೆ ಸಿಲುಕಿದೆ.

ಗುರುವಾರದ ಅಂತ್ಯದ ವೇಳೆಗೆ ಅದಾನಿ ಗ್ರೂಪ್ ಕಂಪನಿಗಳಲ್ಲಿ (ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿ ಹೊರತುಪಡಿಸಿ) ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯವು ರೂ 26,861 ಕೋಟಿಗಳಿಗೆ ಕುಸಿದೆ. ಅದರ ಖರೀದಿ ಮೌಲ್ಯ ರೂ 30,127 ಕೋಟಿಗಿಂತ ಶೇಕಡ 11ರಷ್ಟು ಕಡಿಮೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

LIC ಅದಾನಿ ಗ್ರೂಪ್ ಕಂಪನಿಗಳಲ್ಲಿ ಅತಿದೊಡ್ಡ ದೇಶೀಯ ಸಾಂಸ್ಥಿಕ ಷೇರುದಾರರಾಗಿದೆ. ಅದು 2022 ರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಅದಾನಿ ಪೋರ್ಟ್ಸ್‌ನಲ್ಲಿ 9.14%, ಅದಾನಿ ಟೋಟಲ್ ಗ್ಯಾಸ್‌ನಲ್ಲಿ 5.96%, ಅದಾನಿ ಎಂಟರ್‌ಪ್ರೈಸಸ್‌ನಲ್ಲಿ 4.23%, ಅದಾನಿ ಟ್ರಾನ್ಸ್‌ಮಿಷನ್‌ನಲ್ಲಿ3.65% ಮತ್ತು ಅದಾನಿ ಗ್ರೀನ್ ಎನರ್ಜಿಯಲ್ಲಿ 1.28% ರಷ್ಟು ಪಾಲು ಹೊಂದಿದೆ.

ಡಿಸೆಂಬರ್ ಅಂತ್ಯದ ವೇಳೆದ ಅದಾನಿ ಗ್ರೂಪ್‌ನಲ್ಲಿನ ಎಲ್‌ಐಸಿ ಹೂಡಿಕೆಯ ಮಾರುಕಟ್ಟೆ ಮೌಲ್ಯ 72,193 ಕೋಟಿ ರೂಗಳಾಗಿತ್ತು. ಆದರೆ ಅದಾನಿ ಸಮೂಹ ವಂಚನೆ ಮತ್ತು ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿ ಪ್ರಕಟವಾದ ನಂತರ ಜನವರಿ 27ರ ಹೊತ್ತಿಗೆ 56,142 ಕೋಟಿ ರೂಗಳಿಗೆ ಕುಸಿದಿತ್ತು. ಆಗಲೂ ಎಲ್‌ಐಸಿ ನಷ್ಟದಲ್ಲಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈಗ ಎಲ್‌ಐಸಿಯ ಮಾರುಕಟ್ಟೆ ಮೌಲ್ಯ 26,861 ಕೋಟಿ ರೂಗಳಿಗೆ ಕುಸಿದು ನಷ್ಟಕ್ಕೆ ಒಳಗಾಗಿದೆ. ಒಟ್ಟಾರೆಯಾಗಿ ಐದು ದೊಡ್ಡ ಅದಾನಿ ಗ್ರೂಪ್ ಕಂಪನಿಗಳಲ್ಲಿ ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯದಲ್ಲಿ 62.8 ಪ್ರತಿಶತದಷ್ಟು ಕುಸಿತ ಕಂಡಿದೆ.

ಅದಾನಿ ಹಗರಣ ಹೊರಬರುತ್ತಿದ್ದಂತೆ ಎಲ್‌ಐಸಿ ಮತ್ತು ಎಸ್‌ಬಿಐ ರೀತಿಯ ಸರ್ಕಾರಿ ವಲಯದ ಸಂಸ್ಥೆಗಳು ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿರುವ ಹಣ ನಷ್ಟಕ್ಕೆ ಸಿಲುಕುತ್ತದೆ ಎಂಬ ಆತಂಕಗಳು ವ್ಯಕ್ತವಾಗಿದ್ದವು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, “ಹಾಗೇನೂ ಆಗುವುದಿಲ್ಲ, ಇದು ಟೀ ಲೋಟದೊಳಗಿನ ಗಾಳಿಯಷ್ಟೆ, ಇದರಿಂದ ದೇಶದ ಆರ್ಥಿಕ ಬುನಾದಿಗೆ ಹೊಡೆತವಾಗುವುದಿಲ್ಲ” ಎಂದಿದ್ದರು. ಆದರೆ ಈಗ ಎಲ್‌ಐಸಿ ಹೂಡಿಕೆ ಹಣದಲ್ಲಿ ನಷ್ಟಕ್ಕೆ ಒಳಗಾಗಿದೆ. ಅದು ಮತ್ತಷ್ಟು ನಷ್ಟಕ್ಕೆ ಸಿಲುಕುವ ಅಪಾಯವಿದೆ ಎಂದು ಹಲವರು ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಹಿತ್ರ ಟ್ವೀಟ್ ಮಾಡಿ, “ಅದಾನಿ ಕಂಪನಿಗಳಲ್ಲಿ ಎಲ್‌ಐಸಿ ಹೂಡಿದ್ದ ಹಣದಲ್ಲಿ 3200 ಕೋಟಿ ರೂ ನಷ್ಟವಾಗಿದೆ. ದೇಶದ ಜನರ ಹಿತಾಸಕ್ತಿ ಬಲಿ ಕೊಟ್ಟು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಲು ಒತ್ತಾಯಿಸಿದವರು ಯಾರು ಎಂಬುದನ್ನು ನಿರ್ಮಲಾ ಸೀತಾರಾಮನ್ ಉತ್ತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. ಆದರೂ LIC ಅಧ್ಯಕ್ಷರು ಅದಾನಿ ಕಂಪನಿಗಳಿನ ಹೂಡಿಕೆ ವಿಸ್ತರಣೆ ಮಾಡಿದ್ದಾರೆ. ಸಾರ್ವಜನಿಕ ಹಣವನ್ನು ಹೀಗೆ ಅದಾನಿ ಮೇಲೆ ಹಾಕುವುದು ಏಕೆ ಎಂದು ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದಾರೆ.

ಇನ್ನು ಹಿಂಡೆನ್‌ಬರ್ಗ್‌ ವರದಿಯ ನಂತರ ಅದಾನಿ ಸಂಪತ್ತಿನಲ್ಲಿ ಗಣನೀಯ ಕುಸಿತ ಉಂಟಾಗಿದೆ. ತಿಂಗಳ ಹಿಂದಷ್ಟೆ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಶ್ರೀಮಂತರಾಗಿದ್ದ ಅವರು ಈಗ $42.2 ಶತಕೋಟಿ ನಿವ್ವಳ ಮೌಲ್ಯದೊಂದಿಗೆ 26 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ: ನಟ ನಾಸಿರುದ್ದೀನ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...