Homeಎಕಾನಮಿಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. - ಪ್ರಶಾಂತ್ ಭೂಷಣ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ (ಎಲ್‌ಐಸಿ)ವು ಅದಾನಿ ಸಮೂಹದ ಐದು ದೊಡ್ಡ ಕಂಪನಿಗಳಲ್ಲಿ  ಹೂಡಿದ್ದ ಷೇರುಗಳ ಮಾರುಕಟ್ಟೆ ಮೌಲ್ಯವು ಮೊದಲ ಬಾರಿಗೆ ಅದರ ಖರೀದಿ ಮೌಲ್ಯಕ್ಕಿಂತ ಕಡಿಮೆಯಾಗಿದ್ದು ನಿವ್ವಳ ನಷ್ಟಕ್ಕೆ ಸಿಲುಕಿದೆ.

ಗುರುವಾರದ ಅಂತ್ಯದ ವೇಳೆಗೆ ಅದಾನಿ ಗ್ರೂಪ್ ಕಂಪನಿಗಳಲ್ಲಿ (ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿ ಹೊರತುಪಡಿಸಿ) ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯವು ರೂ 26,861 ಕೋಟಿಗಳಿಗೆ ಕುಸಿದೆ. ಅದರ ಖರೀದಿ ಮೌಲ್ಯ ರೂ 30,127 ಕೋಟಿಗಿಂತ ಶೇಕಡ 11ರಷ್ಟು ಕಡಿಮೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

LIC ಅದಾನಿ ಗ್ರೂಪ್ ಕಂಪನಿಗಳಲ್ಲಿ ಅತಿದೊಡ್ಡ ದೇಶೀಯ ಸಾಂಸ್ಥಿಕ ಷೇರುದಾರರಾಗಿದೆ. ಅದು 2022 ರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಅದಾನಿ ಪೋರ್ಟ್ಸ್‌ನಲ್ಲಿ 9.14%, ಅದಾನಿ ಟೋಟಲ್ ಗ್ಯಾಸ್‌ನಲ್ಲಿ 5.96%, ಅದಾನಿ ಎಂಟರ್‌ಪ್ರೈಸಸ್‌ನಲ್ಲಿ 4.23%, ಅದಾನಿ ಟ್ರಾನ್ಸ್‌ಮಿಷನ್‌ನಲ್ಲಿ3.65% ಮತ್ತು ಅದಾನಿ ಗ್ರೀನ್ ಎನರ್ಜಿಯಲ್ಲಿ 1.28% ರಷ್ಟು ಪಾಲು ಹೊಂದಿದೆ.

ಡಿಸೆಂಬರ್ ಅಂತ್ಯದ ವೇಳೆದ ಅದಾನಿ ಗ್ರೂಪ್‌ನಲ್ಲಿನ ಎಲ್‌ಐಸಿ ಹೂಡಿಕೆಯ ಮಾರುಕಟ್ಟೆ ಮೌಲ್ಯ 72,193 ಕೋಟಿ ರೂಗಳಾಗಿತ್ತು. ಆದರೆ ಅದಾನಿ ಸಮೂಹ ವಂಚನೆ ಮತ್ತು ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿ ಪ್ರಕಟವಾದ ನಂತರ ಜನವರಿ 27ರ ಹೊತ್ತಿಗೆ 56,142 ಕೋಟಿ ರೂಗಳಿಗೆ ಕುಸಿದಿತ್ತು. ಆಗಲೂ ಎಲ್‌ಐಸಿ ನಷ್ಟದಲ್ಲಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈಗ ಎಲ್‌ಐಸಿಯ ಮಾರುಕಟ್ಟೆ ಮೌಲ್ಯ 26,861 ಕೋಟಿ ರೂಗಳಿಗೆ ಕುಸಿದು ನಷ್ಟಕ್ಕೆ ಒಳಗಾಗಿದೆ. ಒಟ್ಟಾರೆಯಾಗಿ ಐದು ದೊಡ್ಡ ಅದಾನಿ ಗ್ರೂಪ್ ಕಂಪನಿಗಳಲ್ಲಿ ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯದಲ್ಲಿ 62.8 ಪ್ರತಿಶತದಷ್ಟು ಕುಸಿತ ಕಂಡಿದೆ.

ಅದಾನಿ ಹಗರಣ ಹೊರಬರುತ್ತಿದ್ದಂತೆ ಎಲ್‌ಐಸಿ ಮತ್ತು ಎಸ್‌ಬಿಐ ರೀತಿಯ ಸರ್ಕಾರಿ ವಲಯದ ಸಂಸ್ಥೆಗಳು ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿರುವ ಹಣ ನಷ್ಟಕ್ಕೆ ಸಿಲುಕುತ್ತದೆ ಎಂಬ ಆತಂಕಗಳು ವ್ಯಕ್ತವಾಗಿದ್ದವು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, “ಹಾಗೇನೂ ಆಗುವುದಿಲ್ಲ, ಇದು ಟೀ ಲೋಟದೊಳಗಿನ ಗಾಳಿಯಷ್ಟೆ, ಇದರಿಂದ ದೇಶದ ಆರ್ಥಿಕ ಬುನಾದಿಗೆ ಹೊಡೆತವಾಗುವುದಿಲ್ಲ” ಎಂದಿದ್ದರು. ಆದರೆ ಈಗ ಎಲ್‌ಐಸಿ ಹೂಡಿಕೆ ಹಣದಲ್ಲಿ ನಷ್ಟಕ್ಕೆ ಒಳಗಾಗಿದೆ. ಅದು ಮತ್ತಷ್ಟು ನಷ್ಟಕ್ಕೆ ಸಿಲುಕುವ ಅಪಾಯವಿದೆ ಎಂದು ಹಲವರು ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಹಿತ್ರ ಟ್ವೀಟ್ ಮಾಡಿ, “ಅದಾನಿ ಕಂಪನಿಗಳಲ್ಲಿ ಎಲ್‌ಐಸಿ ಹೂಡಿದ್ದ ಹಣದಲ್ಲಿ 3200 ಕೋಟಿ ರೂ ನಷ್ಟವಾಗಿದೆ. ದೇಶದ ಜನರ ಹಿತಾಸಕ್ತಿ ಬಲಿ ಕೊಟ್ಟು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಲು ಒತ್ತಾಯಿಸಿದವರು ಯಾರು ಎಂಬುದನ್ನು ನಿರ್ಮಲಾ ಸೀತಾರಾಮನ್ ಉತ್ತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. ಆದರೂ LIC ಅಧ್ಯಕ್ಷರು ಅದಾನಿ ಕಂಪನಿಗಳಿನ ಹೂಡಿಕೆ ವಿಸ್ತರಣೆ ಮಾಡಿದ್ದಾರೆ. ಸಾರ್ವಜನಿಕ ಹಣವನ್ನು ಹೀಗೆ ಅದಾನಿ ಮೇಲೆ ಹಾಕುವುದು ಏಕೆ ಎಂದು ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದಾರೆ.

ಇನ್ನು ಹಿಂಡೆನ್‌ಬರ್ಗ್‌ ವರದಿಯ ನಂತರ ಅದಾನಿ ಸಂಪತ್ತಿನಲ್ಲಿ ಗಣನೀಯ ಕುಸಿತ ಉಂಟಾಗಿದೆ. ತಿಂಗಳ ಹಿಂದಷ್ಟೆ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಶ್ರೀಮಂತರಾಗಿದ್ದ ಅವರು ಈಗ $42.2 ಶತಕೋಟಿ ನಿವ್ವಳ ಮೌಲ್ಯದೊಂದಿಗೆ 26 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ: ನಟ ನಾಸಿರುದ್ದೀನ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...