Homeಎಕಾನಮಿಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. - ಪ್ರಶಾಂತ್ ಭೂಷಣ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ (ಎಲ್‌ಐಸಿ)ವು ಅದಾನಿ ಸಮೂಹದ ಐದು ದೊಡ್ಡ ಕಂಪನಿಗಳಲ್ಲಿ  ಹೂಡಿದ್ದ ಷೇರುಗಳ ಮಾರುಕಟ್ಟೆ ಮೌಲ್ಯವು ಮೊದಲ ಬಾರಿಗೆ ಅದರ ಖರೀದಿ ಮೌಲ್ಯಕ್ಕಿಂತ ಕಡಿಮೆಯಾಗಿದ್ದು ನಿವ್ವಳ ನಷ್ಟಕ್ಕೆ ಸಿಲುಕಿದೆ.

ಗುರುವಾರದ ಅಂತ್ಯದ ವೇಳೆಗೆ ಅದಾನಿ ಗ್ರೂಪ್ ಕಂಪನಿಗಳಲ್ಲಿ (ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿ ಹೊರತುಪಡಿಸಿ) ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯವು ರೂ 26,861 ಕೋಟಿಗಳಿಗೆ ಕುಸಿದೆ. ಅದರ ಖರೀದಿ ಮೌಲ್ಯ ರೂ 30,127 ಕೋಟಿಗಿಂತ ಶೇಕಡ 11ರಷ್ಟು ಕಡಿಮೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

LIC ಅದಾನಿ ಗ್ರೂಪ್ ಕಂಪನಿಗಳಲ್ಲಿ ಅತಿದೊಡ್ಡ ದೇಶೀಯ ಸಾಂಸ್ಥಿಕ ಷೇರುದಾರರಾಗಿದೆ. ಅದು 2022 ರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಅದಾನಿ ಪೋರ್ಟ್ಸ್‌ನಲ್ಲಿ 9.14%, ಅದಾನಿ ಟೋಟಲ್ ಗ್ಯಾಸ್‌ನಲ್ಲಿ 5.96%, ಅದಾನಿ ಎಂಟರ್‌ಪ್ರೈಸಸ್‌ನಲ್ಲಿ 4.23%, ಅದಾನಿ ಟ್ರಾನ್ಸ್‌ಮಿಷನ್‌ನಲ್ಲಿ3.65% ಮತ್ತು ಅದಾನಿ ಗ್ರೀನ್ ಎನರ್ಜಿಯಲ್ಲಿ 1.28% ರಷ್ಟು ಪಾಲು ಹೊಂದಿದೆ.

ಡಿಸೆಂಬರ್ ಅಂತ್ಯದ ವೇಳೆದ ಅದಾನಿ ಗ್ರೂಪ್‌ನಲ್ಲಿನ ಎಲ್‌ಐಸಿ ಹೂಡಿಕೆಯ ಮಾರುಕಟ್ಟೆ ಮೌಲ್ಯ 72,193 ಕೋಟಿ ರೂಗಳಾಗಿತ್ತು. ಆದರೆ ಅದಾನಿ ಸಮೂಹ ವಂಚನೆ ಮತ್ತು ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿ ಪ್ರಕಟವಾದ ನಂತರ ಜನವರಿ 27ರ ಹೊತ್ತಿಗೆ 56,142 ಕೋಟಿ ರೂಗಳಿಗೆ ಕುಸಿದಿತ್ತು. ಆಗಲೂ ಎಲ್‌ಐಸಿ ನಷ್ಟದಲ್ಲಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈಗ ಎಲ್‌ಐಸಿಯ ಮಾರುಕಟ್ಟೆ ಮೌಲ್ಯ 26,861 ಕೋಟಿ ರೂಗಳಿಗೆ ಕುಸಿದು ನಷ್ಟಕ್ಕೆ ಒಳಗಾಗಿದೆ. ಒಟ್ಟಾರೆಯಾಗಿ ಐದು ದೊಡ್ಡ ಅದಾನಿ ಗ್ರೂಪ್ ಕಂಪನಿಗಳಲ್ಲಿ ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯದಲ್ಲಿ 62.8 ಪ್ರತಿಶತದಷ್ಟು ಕುಸಿತ ಕಂಡಿದೆ.

ಅದಾನಿ ಹಗರಣ ಹೊರಬರುತ್ತಿದ್ದಂತೆ ಎಲ್‌ಐಸಿ ಮತ್ತು ಎಸ್‌ಬಿಐ ರೀತಿಯ ಸರ್ಕಾರಿ ವಲಯದ ಸಂಸ್ಥೆಗಳು ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿರುವ ಹಣ ನಷ್ಟಕ್ಕೆ ಸಿಲುಕುತ್ತದೆ ಎಂಬ ಆತಂಕಗಳು ವ್ಯಕ್ತವಾಗಿದ್ದವು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, “ಹಾಗೇನೂ ಆಗುವುದಿಲ್ಲ, ಇದು ಟೀ ಲೋಟದೊಳಗಿನ ಗಾಳಿಯಷ್ಟೆ, ಇದರಿಂದ ದೇಶದ ಆರ್ಥಿಕ ಬುನಾದಿಗೆ ಹೊಡೆತವಾಗುವುದಿಲ್ಲ” ಎಂದಿದ್ದರು. ಆದರೆ ಈಗ ಎಲ್‌ಐಸಿ ಹೂಡಿಕೆ ಹಣದಲ್ಲಿ ನಷ್ಟಕ್ಕೆ ಒಳಗಾಗಿದೆ. ಅದು ಮತ್ತಷ್ಟು ನಷ್ಟಕ್ಕೆ ಸಿಲುಕುವ ಅಪಾಯವಿದೆ ಎಂದು ಹಲವರು ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಹಿತ್ರ ಟ್ವೀಟ್ ಮಾಡಿ, “ಅದಾನಿ ಕಂಪನಿಗಳಲ್ಲಿ ಎಲ್‌ಐಸಿ ಹೂಡಿದ್ದ ಹಣದಲ್ಲಿ 3200 ಕೋಟಿ ರೂ ನಷ್ಟವಾಗಿದೆ. ದೇಶದ ಜನರ ಹಿತಾಸಕ್ತಿ ಬಲಿ ಕೊಟ್ಟು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಲು ಒತ್ತಾಯಿಸಿದವರು ಯಾರು ಎಂಬುದನ್ನು ನಿರ್ಮಲಾ ಸೀತಾರಾಮನ್ ಉತ್ತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. ಆದರೂ LIC ಅಧ್ಯಕ್ಷರು ಅದಾನಿ ಕಂಪನಿಗಳಿನ ಹೂಡಿಕೆ ವಿಸ್ತರಣೆ ಮಾಡಿದ್ದಾರೆ. ಸಾರ್ವಜನಿಕ ಹಣವನ್ನು ಹೀಗೆ ಅದಾನಿ ಮೇಲೆ ಹಾಕುವುದು ಏಕೆ ಎಂದು ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದಾರೆ.

ಇನ್ನು ಹಿಂಡೆನ್‌ಬರ್ಗ್‌ ವರದಿಯ ನಂತರ ಅದಾನಿ ಸಂಪತ್ತಿನಲ್ಲಿ ಗಣನೀಯ ಕುಸಿತ ಉಂಟಾಗಿದೆ. ತಿಂಗಳ ಹಿಂದಷ್ಟೆ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಶ್ರೀಮಂತರಾಗಿದ್ದ ಅವರು ಈಗ $42.2 ಶತಕೋಟಿ ನಿವ್ವಳ ಮೌಲ್ಯದೊಂದಿಗೆ 26 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ: ನಟ ನಾಸಿರುದ್ದೀನ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...