Homeಎಕಾನಮಿಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. - ಪ್ರಶಾಂತ್ ಭೂಷಣ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ (ಎಲ್‌ಐಸಿ)ವು ಅದಾನಿ ಸಮೂಹದ ಐದು ದೊಡ್ಡ ಕಂಪನಿಗಳಲ್ಲಿ  ಹೂಡಿದ್ದ ಷೇರುಗಳ ಮಾರುಕಟ್ಟೆ ಮೌಲ್ಯವು ಮೊದಲ ಬಾರಿಗೆ ಅದರ ಖರೀದಿ ಮೌಲ್ಯಕ್ಕಿಂತ ಕಡಿಮೆಯಾಗಿದ್ದು ನಿವ್ವಳ ನಷ್ಟಕ್ಕೆ ಸಿಲುಕಿದೆ.

ಗುರುವಾರದ ಅಂತ್ಯದ ವೇಳೆಗೆ ಅದಾನಿ ಗ್ರೂಪ್ ಕಂಪನಿಗಳಲ್ಲಿ (ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿ ಹೊರತುಪಡಿಸಿ) ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯವು ರೂ 26,861 ಕೋಟಿಗಳಿಗೆ ಕುಸಿದೆ. ಅದರ ಖರೀದಿ ಮೌಲ್ಯ ರೂ 30,127 ಕೋಟಿಗಿಂತ ಶೇಕಡ 11ರಷ್ಟು ಕಡಿಮೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

LIC ಅದಾನಿ ಗ್ರೂಪ್ ಕಂಪನಿಗಳಲ್ಲಿ ಅತಿದೊಡ್ಡ ದೇಶೀಯ ಸಾಂಸ್ಥಿಕ ಷೇರುದಾರರಾಗಿದೆ. ಅದು 2022 ರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಅದಾನಿ ಪೋರ್ಟ್ಸ್‌ನಲ್ಲಿ 9.14%, ಅದಾನಿ ಟೋಟಲ್ ಗ್ಯಾಸ್‌ನಲ್ಲಿ 5.96%, ಅದಾನಿ ಎಂಟರ್‌ಪ್ರೈಸಸ್‌ನಲ್ಲಿ 4.23%, ಅದಾನಿ ಟ್ರಾನ್ಸ್‌ಮಿಷನ್‌ನಲ್ಲಿ3.65% ಮತ್ತು ಅದಾನಿ ಗ್ರೀನ್ ಎನರ್ಜಿಯಲ್ಲಿ 1.28% ರಷ್ಟು ಪಾಲು ಹೊಂದಿದೆ.

ಡಿಸೆಂಬರ್ ಅಂತ್ಯದ ವೇಳೆದ ಅದಾನಿ ಗ್ರೂಪ್‌ನಲ್ಲಿನ ಎಲ್‌ಐಸಿ ಹೂಡಿಕೆಯ ಮಾರುಕಟ್ಟೆ ಮೌಲ್ಯ 72,193 ಕೋಟಿ ರೂಗಳಾಗಿತ್ತು. ಆದರೆ ಅದಾನಿ ಸಮೂಹ ವಂಚನೆ ಮತ್ತು ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿ ಪ್ರಕಟವಾದ ನಂತರ ಜನವರಿ 27ರ ಹೊತ್ತಿಗೆ 56,142 ಕೋಟಿ ರೂಗಳಿಗೆ ಕುಸಿದಿತ್ತು. ಆಗಲೂ ಎಲ್‌ಐಸಿ ನಷ್ಟದಲ್ಲಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈಗ ಎಲ್‌ಐಸಿಯ ಮಾರುಕಟ್ಟೆ ಮೌಲ್ಯ 26,861 ಕೋಟಿ ರೂಗಳಿಗೆ ಕುಸಿದು ನಷ್ಟಕ್ಕೆ ಒಳಗಾಗಿದೆ. ಒಟ್ಟಾರೆಯಾಗಿ ಐದು ದೊಡ್ಡ ಅದಾನಿ ಗ್ರೂಪ್ ಕಂಪನಿಗಳಲ್ಲಿ ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯದಲ್ಲಿ 62.8 ಪ್ರತಿಶತದಷ್ಟು ಕುಸಿತ ಕಂಡಿದೆ.

ಅದಾನಿ ಹಗರಣ ಹೊರಬರುತ್ತಿದ್ದಂತೆ ಎಲ್‌ಐಸಿ ಮತ್ತು ಎಸ್‌ಬಿಐ ರೀತಿಯ ಸರ್ಕಾರಿ ವಲಯದ ಸಂಸ್ಥೆಗಳು ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿರುವ ಹಣ ನಷ್ಟಕ್ಕೆ ಸಿಲುಕುತ್ತದೆ ಎಂಬ ಆತಂಕಗಳು ವ್ಯಕ್ತವಾಗಿದ್ದವು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, “ಹಾಗೇನೂ ಆಗುವುದಿಲ್ಲ, ಇದು ಟೀ ಲೋಟದೊಳಗಿನ ಗಾಳಿಯಷ್ಟೆ, ಇದರಿಂದ ದೇಶದ ಆರ್ಥಿಕ ಬುನಾದಿಗೆ ಹೊಡೆತವಾಗುವುದಿಲ್ಲ” ಎಂದಿದ್ದರು. ಆದರೆ ಈಗ ಎಲ್‌ಐಸಿ ಹೂಡಿಕೆ ಹಣದಲ್ಲಿ ನಷ್ಟಕ್ಕೆ ಒಳಗಾಗಿದೆ. ಅದು ಮತ್ತಷ್ಟು ನಷ್ಟಕ್ಕೆ ಸಿಲುಕುವ ಅಪಾಯವಿದೆ ಎಂದು ಹಲವರು ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಹಿತ್ರ ಟ್ವೀಟ್ ಮಾಡಿ, “ಅದಾನಿ ಕಂಪನಿಗಳಲ್ಲಿ ಎಲ್‌ಐಸಿ ಹೂಡಿದ್ದ ಹಣದಲ್ಲಿ 3200 ಕೋಟಿ ರೂ ನಷ್ಟವಾಗಿದೆ. ದೇಶದ ಜನರ ಹಿತಾಸಕ್ತಿ ಬಲಿ ಕೊಟ್ಟು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಲು ಒತ್ತಾಯಿಸಿದವರು ಯಾರು ಎಂಬುದನ್ನು ನಿರ್ಮಲಾ ಸೀತಾರಾಮನ್ ಉತ್ತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. ಆದರೂ LIC ಅಧ್ಯಕ್ಷರು ಅದಾನಿ ಕಂಪನಿಗಳಿನ ಹೂಡಿಕೆ ವಿಸ್ತರಣೆ ಮಾಡಿದ್ದಾರೆ. ಸಾರ್ವಜನಿಕ ಹಣವನ್ನು ಹೀಗೆ ಅದಾನಿ ಮೇಲೆ ಹಾಕುವುದು ಏಕೆ ಎಂದು ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದಾರೆ.

ಇನ್ನು ಹಿಂಡೆನ್‌ಬರ್ಗ್‌ ವರದಿಯ ನಂತರ ಅದಾನಿ ಸಂಪತ್ತಿನಲ್ಲಿ ಗಣನೀಯ ಕುಸಿತ ಉಂಟಾಗಿದೆ. ತಿಂಗಳ ಹಿಂದಷ್ಟೆ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಶ್ರೀಮಂತರಾಗಿದ್ದ ಅವರು ಈಗ $42.2 ಶತಕೋಟಿ ನಿವ್ವಳ ಮೌಲ್ಯದೊಂದಿಗೆ 26 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ: ನಟ ನಾಸಿರುದ್ದೀನ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...