Homeಎಕಾನಮಿಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. - ಪ್ರಶಾಂತ್ ಭೂಷಣ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ (ಎಲ್‌ಐಸಿ)ವು ಅದಾನಿ ಸಮೂಹದ ಐದು ದೊಡ್ಡ ಕಂಪನಿಗಳಲ್ಲಿ  ಹೂಡಿದ್ದ ಷೇರುಗಳ ಮಾರುಕಟ್ಟೆ ಮೌಲ್ಯವು ಮೊದಲ ಬಾರಿಗೆ ಅದರ ಖರೀದಿ ಮೌಲ್ಯಕ್ಕಿಂತ ಕಡಿಮೆಯಾಗಿದ್ದು ನಿವ್ವಳ ನಷ್ಟಕ್ಕೆ ಸಿಲುಕಿದೆ.

ಗುರುವಾರದ ಅಂತ್ಯದ ವೇಳೆಗೆ ಅದಾನಿ ಗ್ರೂಪ್ ಕಂಪನಿಗಳಲ್ಲಿ (ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿ ಹೊರತುಪಡಿಸಿ) ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯವು ರೂ 26,861 ಕೋಟಿಗಳಿಗೆ ಕುಸಿದೆ. ಅದರ ಖರೀದಿ ಮೌಲ್ಯ ರೂ 30,127 ಕೋಟಿಗಿಂತ ಶೇಕಡ 11ರಷ್ಟು ಕಡಿಮೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

LIC ಅದಾನಿ ಗ್ರೂಪ್ ಕಂಪನಿಗಳಲ್ಲಿ ಅತಿದೊಡ್ಡ ದೇಶೀಯ ಸಾಂಸ್ಥಿಕ ಷೇರುದಾರರಾಗಿದೆ. ಅದು 2022 ರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಅದಾನಿ ಪೋರ್ಟ್ಸ್‌ನಲ್ಲಿ 9.14%, ಅದಾನಿ ಟೋಟಲ್ ಗ್ಯಾಸ್‌ನಲ್ಲಿ 5.96%, ಅದಾನಿ ಎಂಟರ್‌ಪ್ರೈಸಸ್‌ನಲ್ಲಿ 4.23%, ಅದಾನಿ ಟ್ರಾನ್ಸ್‌ಮಿಷನ್‌ನಲ್ಲಿ3.65% ಮತ್ತು ಅದಾನಿ ಗ್ರೀನ್ ಎನರ್ಜಿಯಲ್ಲಿ 1.28% ರಷ್ಟು ಪಾಲು ಹೊಂದಿದೆ.

ಡಿಸೆಂಬರ್ ಅಂತ್ಯದ ವೇಳೆದ ಅದಾನಿ ಗ್ರೂಪ್‌ನಲ್ಲಿನ ಎಲ್‌ಐಸಿ ಹೂಡಿಕೆಯ ಮಾರುಕಟ್ಟೆ ಮೌಲ್ಯ 72,193 ಕೋಟಿ ರೂಗಳಾಗಿತ್ತು. ಆದರೆ ಅದಾನಿ ಸಮೂಹ ವಂಚನೆ ಮತ್ತು ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿ ಪ್ರಕಟವಾದ ನಂತರ ಜನವರಿ 27ರ ಹೊತ್ತಿಗೆ 56,142 ಕೋಟಿ ರೂಗಳಿಗೆ ಕುಸಿದಿತ್ತು. ಆಗಲೂ ಎಲ್‌ಐಸಿ ನಷ್ಟದಲ್ಲಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈಗ ಎಲ್‌ಐಸಿಯ ಮಾರುಕಟ್ಟೆ ಮೌಲ್ಯ 26,861 ಕೋಟಿ ರೂಗಳಿಗೆ ಕುಸಿದು ನಷ್ಟಕ್ಕೆ ಒಳಗಾಗಿದೆ. ಒಟ್ಟಾರೆಯಾಗಿ ಐದು ದೊಡ್ಡ ಅದಾನಿ ಗ್ರೂಪ್ ಕಂಪನಿಗಳಲ್ಲಿ ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯದಲ್ಲಿ 62.8 ಪ್ರತಿಶತದಷ್ಟು ಕುಸಿತ ಕಂಡಿದೆ.

ಅದಾನಿ ಹಗರಣ ಹೊರಬರುತ್ತಿದ್ದಂತೆ ಎಲ್‌ಐಸಿ ಮತ್ತು ಎಸ್‌ಬಿಐ ರೀತಿಯ ಸರ್ಕಾರಿ ವಲಯದ ಸಂಸ್ಥೆಗಳು ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿರುವ ಹಣ ನಷ್ಟಕ್ಕೆ ಸಿಲುಕುತ್ತದೆ ಎಂಬ ಆತಂಕಗಳು ವ್ಯಕ್ತವಾಗಿದ್ದವು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, “ಹಾಗೇನೂ ಆಗುವುದಿಲ್ಲ, ಇದು ಟೀ ಲೋಟದೊಳಗಿನ ಗಾಳಿಯಷ್ಟೆ, ಇದರಿಂದ ದೇಶದ ಆರ್ಥಿಕ ಬುನಾದಿಗೆ ಹೊಡೆತವಾಗುವುದಿಲ್ಲ” ಎಂದಿದ್ದರು. ಆದರೆ ಈಗ ಎಲ್‌ಐಸಿ ಹೂಡಿಕೆ ಹಣದಲ್ಲಿ ನಷ್ಟಕ್ಕೆ ಒಳಗಾಗಿದೆ. ಅದು ಮತ್ತಷ್ಟು ನಷ್ಟಕ್ಕೆ ಸಿಲುಕುವ ಅಪಾಯವಿದೆ ಎಂದು ಹಲವರು ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಹಿತ್ರ ಟ್ವೀಟ್ ಮಾಡಿ, “ಅದಾನಿ ಕಂಪನಿಗಳಲ್ಲಿ ಎಲ್‌ಐಸಿ ಹೂಡಿದ್ದ ಹಣದಲ್ಲಿ 3200 ಕೋಟಿ ರೂ ನಷ್ಟವಾಗಿದೆ. ದೇಶದ ಜನರ ಹಿತಾಸಕ್ತಿ ಬಲಿ ಕೊಟ್ಟು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಲು ಒತ್ತಾಯಿಸಿದವರು ಯಾರು ಎಂಬುದನ್ನು ನಿರ್ಮಲಾ ಸೀತಾರಾಮನ್ ಉತ್ತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. ಆದರೂ LIC ಅಧ್ಯಕ್ಷರು ಅದಾನಿ ಕಂಪನಿಗಳಿನ ಹೂಡಿಕೆ ವಿಸ್ತರಣೆ ಮಾಡಿದ್ದಾರೆ. ಸಾರ್ವಜನಿಕ ಹಣವನ್ನು ಹೀಗೆ ಅದಾನಿ ಮೇಲೆ ಹಾಕುವುದು ಏಕೆ ಎಂದು ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದಾರೆ.

ಇನ್ನು ಹಿಂಡೆನ್‌ಬರ್ಗ್‌ ವರದಿಯ ನಂತರ ಅದಾನಿ ಸಂಪತ್ತಿನಲ್ಲಿ ಗಣನೀಯ ಕುಸಿತ ಉಂಟಾಗಿದೆ. ತಿಂಗಳ ಹಿಂದಷ್ಟೆ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಶ್ರೀಮಂತರಾಗಿದ್ದ ಅವರು ಈಗ $42.2 ಶತಕೋಟಿ ನಿವ್ವಳ ಮೌಲ್ಯದೊಂದಿಗೆ 26 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ: ನಟ ನಾಸಿರುದ್ದೀನ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...