Homeಮುಖಪುಟದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ - ಡಿಎಂಕೆ ಸಂಸದ ಎ....

ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

- Advertisement -
- Advertisement -

1947ರಲ್ಲಿ ದೇಶ ವಿಭಜನೆಗೆ ಕಾರಣವಾದ ಎರಡು ರಾಷ್ಟ್ರಗಳ ಸಿದ್ಧಾಂತವನ್ನು 1924 ರಲ್ಲಿ ಮಂಡಿಸಿದವರು ವಿ.ಡಿ. ಸಾವರ್ಕರ್ ಅವರೇ ಹೊರತು ಮಹಮ್ಮದ್ ಅಲಿ ಜಿನ್ನಾ ಅಲ್ಲ ಎಂದು ಡಿಎಂಕೆ ಸಂಸದ ಎ. ರಾಜಾ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ. ಶನಿವಾರ ಲೋಕಸಭೆಯಲ್ಲಿ ಸಂವಿಧಾನದ 75ನೇ ವರ್ಷಾಚರಣೆ ಕುರಿತ ಚರ್ಚೆಯ ಬಗ್ಗೆ ಅವರು ಮಾತನಾಡುತ್ತಿದ್ದರು.

ಈ ವೇಳೆ ಮಾತನಾಡಿದ ಅವರು, “ಸಂವಿಧಾನಕ್ಕೆ ವಲಭಭಾಯಿ ಪಟೇಲ್, ಸರೋಜಿನಿ ನಾಯ್ಡು, ನೆಹರೂ ಸೇರಿದಂತೆ ಹಲವಾರು ಜನರು ಕೊಡುಗೆ ನೀಡಿದ್ದಾರೆ. ಆದರೆ, ನನ್ನ ಒಂದೇ ಒಂದು ಪ್ರಶ್ನೆ ಏನೆಂದರೆ, ಬಿಜೆಪಿಯ ಮಾತೃಸಂಸ್ಥೆಯಾದ ಆರೆಸ್ಸೆಸ್‌ ಮತ್ತು ಹಿಂದೂ ಮಹಾಸಭಾ ಸಂವಿಧಾನ ರಚನೆಗೆ ನೀಡಿರುವ ಕೊಡುಗೆಯ ಒಂದೇ ಒಂದು ಸಂದರ್ಭವನ್ನು ತೋರಿಸಿ” ಎಂದು ಅವರು ಸವಾಲೆಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಚಿವರಾದ ರಾಜನಾಥ್ ಸಿಂಗ್ ಮತ್ತು ಕಿರಣ್ ರಿಜಿಜು ಹಾಗೂ ಎಲ್ಲಾ ಆಡಳಿತ ಪಕ್ಷದ ಸಂಸದರು ಸಂವಿಧಾನಕ್ಕೆ, ಸಮಾಜವಾದಕ್ಕೆ, ಜಾತ್ಯಾತೀತತೆಗೆ ತಲೆಬಾಗಿದ್ದು ಇಡಿ ದೇಶಕ್ಕೆ ಖುಷಿಯಾಗಿರಬಹುದು, ಆದರೆ ಅವೆಲ್ಲವೂ ಕಪಟವಾಗಿದ್ದು, ಅವರ ಈ ಹಿಂದಿನ ನಡವಳಿಗೆ ಅದನ್ನು ಸಾಬೀತು ಮಾಡುತ್ತದೆ” ಎಂದು ರಾಜಾ ಹೇಳಿದ್ದಾರೆ.

ಬಿಜೆಪಿಯು ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ ಎಂದು ಹೇಳಿದೆ ಎಂದು ರಾಜ ಅವರು ಹೇಳಿದ್ದಾರೆ. ಈ ವೇಳೆ ಲೋಕಸಭೆಯಲ್ಲಿ ಗೊಂದಲ ಉಂಟಾಗಿದ್ದು, ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಡಿಎಂಕೆ ಸಂಸದ ಎ. ರಾಜಾ ಅವರ ಅವರ ಹೇಳಿಕೆಯನ್ನು ದೃಢೀಕರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎ. ರಾಜಾ ಅವರು, “ನಿಮ್ಮ ಪಕ್ಷದ ಉಪಾಧ್ಯಕ್ಷರು – ಚುನಾವಣೆಯ ಮೊದಲು ಸಂದರ್ಶನವೊಂದರಲ್ಲಿ – ನಾವು (ಬಿಜೆಪಿ) 400 ಗಳಿಸಿದರೆ ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ಈ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ ಹೇಳಿದ್ದಾರೆ” ಎಂದು ಹೇಳಿದ್ದಾರೆ.

1947 ರಲ್ಲಿ ದೇಶ ವಿಭಜನೆಗೆ ಕಾರಣವಾದ ಎರಡು ರಾಷ್ಟ್ರಗಳ ಸಿದ್ಧಾಂತವನ್ನು 1924 ರಲ್ಲಿ ಮಂಡಿಸಿದವರು ವೀರ್ ಸಾವರ್ಕರ್ ಹೊರತು ಮಹಮ್ಮದ್ ಅಲಿ ಜಿನ್ನಾ ಅಲ್ಲ ಎಂದು ರಾಜ ಹೇಳಿದ್ದಾರೆ.

ಶನಿವಾರ ಲೋಕಸಭೆಯಲ್ಲಿ ಸಂವಿಧಾನದ 75ನೇ ವರ್ಷಾಚರಣೆ ಕುರಿತ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸುವ ನಿರೀಕ್ಷೆಯಿದೆ. ಲೋಕಸಭೆಯು ಸಂವಿಧಾನದ 75 ನೇ ವರ್ಷದ ಆರಂಭದ ಸ್ಮರಣಾರ್ಥ ಡಿಸೆಂಬರ್ 13 ರಂದು ಎರಡು ದಿನಗಳ ಚರ್ಚೆಯನ್ನು ಪ್ರಾರಂಭಿಸಿತು. ಶುಕ್ರವಾರದಂದು, ಸಂವಿಧಾನದ ಮೇಲಿನ ಚರ್ಚೆಯು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಭಾಷಣಗಳಿಗೆ ಸಾಕ್ಷಿಯಾಯಿತು.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ: ಬಹುಮತ ಕಳೆದುಕೊಂಡಾಗ ಪರಿಹಾರವೇನು; ಸಿದ್ದರಾಮಯ್ಯ ಪ್ರಶ್ನೆ

ಒಂದು ರಾಷ್ಟ್ರ, ಒಂದು ಚುನಾವಣೆ: ಬಹುಮತ ಕಳೆದುಕೊಂಡಾಗ ಪರಿಹಾರವೇನು; ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...