Homeಮುಖಪುಟದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ - ಡಿಎಂಕೆ ಸಂಸದ ಎ....

ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

- Advertisement -
- Advertisement -

1947ರಲ್ಲಿ ದೇಶ ವಿಭಜನೆಗೆ ಕಾರಣವಾದ ಎರಡು ರಾಷ್ಟ್ರಗಳ ಸಿದ್ಧಾಂತವನ್ನು 1924 ರಲ್ಲಿ ಮಂಡಿಸಿದವರು ವಿ.ಡಿ. ಸಾವರ್ಕರ್ ಅವರೇ ಹೊರತು ಮಹಮ್ಮದ್ ಅಲಿ ಜಿನ್ನಾ ಅಲ್ಲ ಎಂದು ಡಿಎಂಕೆ ಸಂಸದ ಎ. ರಾಜಾ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ. ಶನಿವಾರ ಲೋಕಸಭೆಯಲ್ಲಿ ಸಂವಿಧಾನದ 75ನೇ ವರ್ಷಾಚರಣೆ ಕುರಿತ ಚರ್ಚೆಯ ಬಗ್ಗೆ ಅವರು ಮಾತನಾಡುತ್ತಿದ್ದರು.

ಈ ವೇಳೆ ಮಾತನಾಡಿದ ಅವರು, “ಸಂವಿಧಾನಕ್ಕೆ ವಲಭಭಾಯಿ ಪಟೇಲ್, ಸರೋಜಿನಿ ನಾಯ್ಡು, ನೆಹರೂ ಸೇರಿದಂತೆ ಹಲವಾರು ಜನರು ಕೊಡುಗೆ ನೀಡಿದ್ದಾರೆ. ಆದರೆ, ನನ್ನ ಒಂದೇ ಒಂದು ಪ್ರಶ್ನೆ ಏನೆಂದರೆ, ಬಿಜೆಪಿಯ ಮಾತೃಸಂಸ್ಥೆಯಾದ ಆರೆಸ್ಸೆಸ್‌ ಮತ್ತು ಹಿಂದೂ ಮಹಾಸಭಾ ಸಂವಿಧಾನ ರಚನೆಗೆ ನೀಡಿರುವ ಕೊಡುಗೆಯ ಒಂದೇ ಒಂದು ಸಂದರ್ಭವನ್ನು ತೋರಿಸಿ” ಎಂದು ಅವರು ಸವಾಲೆಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಚಿವರಾದ ರಾಜನಾಥ್ ಸಿಂಗ್ ಮತ್ತು ಕಿರಣ್ ರಿಜಿಜು ಹಾಗೂ ಎಲ್ಲಾ ಆಡಳಿತ ಪಕ್ಷದ ಸಂಸದರು ಸಂವಿಧಾನಕ್ಕೆ, ಸಮಾಜವಾದಕ್ಕೆ, ಜಾತ್ಯಾತೀತತೆಗೆ ತಲೆಬಾಗಿದ್ದು ಇಡಿ ದೇಶಕ್ಕೆ ಖುಷಿಯಾಗಿರಬಹುದು, ಆದರೆ ಅವೆಲ್ಲವೂ ಕಪಟವಾಗಿದ್ದು, ಅವರ ಈ ಹಿಂದಿನ ನಡವಳಿಗೆ ಅದನ್ನು ಸಾಬೀತು ಮಾಡುತ್ತದೆ” ಎಂದು ರಾಜಾ ಹೇಳಿದ್ದಾರೆ.

ಬಿಜೆಪಿಯು ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ ಎಂದು ಹೇಳಿದೆ ಎಂದು ರಾಜ ಅವರು ಹೇಳಿದ್ದಾರೆ. ಈ ವೇಳೆ ಲೋಕಸಭೆಯಲ್ಲಿ ಗೊಂದಲ ಉಂಟಾಗಿದ್ದು, ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಡಿಎಂಕೆ ಸಂಸದ ಎ. ರಾಜಾ ಅವರ ಅವರ ಹೇಳಿಕೆಯನ್ನು ದೃಢೀಕರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎ. ರಾಜಾ ಅವರು, “ನಿಮ್ಮ ಪಕ್ಷದ ಉಪಾಧ್ಯಕ್ಷರು – ಚುನಾವಣೆಯ ಮೊದಲು ಸಂದರ್ಶನವೊಂದರಲ್ಲಿ – ನಾವು (ಬಿಜೆಪಿ) 400 ಗಳಿಸಿದರೆ ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ಈ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ ಹೇಳಿದ್ದಾರೆ” ಎಂದು ಹೇಳಿದ್ದಾರೆ.

1947 ರಲ್ಲಿ ದೇಶ ವಿಭಜನೆಗೆ ಕಾರಣವಾದ ಎರಡು ರಾಷ್ಟ್ರಗಳ ಸಿದ್ಧಾಂತವನ್ನು 1924 ರಲ್ಲಿ ಮಂಡಿಸಿದವರು ವೀರ್ ಸಾವರ್ಕರ್ ಹೊರತು ಮಹಮ್ಮದ್ ಅಲಿ ಜಿನ್ನಾ ಅಲ್ಲ ಎಂದು ರಾಜ ಹೇಳಿದ್ದಾರೆ.

ಶನಿವಾರ ಲೋಕಸಭೆಯಲ್ಲಿ ಸಂವಿಧಾನದ 75ನೇ ವರ್ಷಾಚರಣೆ ಕುರಿತ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸುವ ನಿರೀಕ್ಷೆಯಿದೆ. ಲೋಕಸಭೆಯು ಸಂವಿಧಾನದ 75 ನೇ ವರ್ಷದ ಆರಂಭದ ಸ್ಮರಣಾರ್ಥ ಡಿಸೆಂಬರ್ 13 ರಂದು ಎರಡು ದಿನಗಳ ಚರ್ಚೆಯನ್ನು ಪ್ರಾರಂಭಿಸಿತು. ಶುಕ್ರವಾರದಂದು, ಸಂವಿಧಾನದ ಮೇಲಿನ ಚರ್ಚೆಯು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಭಾಷಣಗಳಿಗೆ ಸಾಕ್ಷಿಯಾಯಿತು.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ: ಬಹುಮತ ಕಳೆದುಕೊಂಡಾಗ ಪರಿಹಾರವೇನು; ಸಿದ್ದರಾಮಯ್ಯ ಪ್ರಶ್ನೆ

ಒಂದು ರಾಷ್ಟ್ರ, ಒಂದು ಚುನಾವಣೆ: ಬಹುಮತ ಕಳೆದುಕೊಂಡಾಗ ಪರಿಹಾರವೇನು; ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...