Homeಕರ್ನಾಟಕ2024ನೇ ಸಾಲಿನ 'ಬೋಧಿವೃಕ್ಷ-ಬೋಧಿವರ್ಧನ' ಪ್ರಶಸ್ತಿ ಪ್ರಕಟ; ಹಿರೇಮಠ್, ರಾಮ್‌ದೇವ್ ರಾಖೆ ಸೇರಿದಂತೆ ಐವರು ಆಯ್ಕೆ

2024ನೇ ಸಾಲಿನ ‘ಬೋಧಿವೃಕ್ಷ-ಬೋಧಿವರ್ಧನ’ ಪ್ರಶಸ್ತಿ ಪ್ರಕಟ; ಹಿರೇಮಠ್, ರಾಮ್‌ದೇವ್ ರಾಖೆ ಸೇರಿದಂತೆ ಐವರು ಆಯ್ಕೆ

- Advertisement -
- Advertisement -

ಬೆಂಗಳೂರಿನ ಸ್ಪೂರ್ತಿಧಾಮ ಸಂಸ್ಥೆ ಪ್ರತಿವರ್ಷ ಕೊಡಮಾಡುವ 2024ನೇ ಸಾಲಿನ ‘ಬೋಧಿವೃಕ್ಷ’ ಪ್ರಶಸ್ತಿಗೆ ಸಾಮಾಜಿಕ ಕಾರ್ಯಕರ್ತ ಎಸ್‌.ಆರ್. ಹಿರೇಮಠ್, ಬೋಧಿವರ್ಧನ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ದಲಿತ ಚಳವಳಿ ಮುಖಂಡ ರಾಮ್‌ದೇವ್, ಸುಶೀಲ ನಾಡ, ಜಿ.ಕೆ. ಪ್ರೇಮಾ ಮತ್ತು ಹಸನಬ್ಬ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಎಸ್. ಮರಿಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕಳೆದ ಹದಿನಾರು ವರ್ಷಗಳಿಂದ ಅಂಬೇಡ್ಕರ್ ಜಯಂತಿಯನ್ನು ‘ಅಂಬೇಡ್ಕರ್ ಹಬ್ಬ’ವಾಗಿ ಆಚರಿಸಿಕೊಂಡು ಬರುತ್ತಿರುವ ‘ಸ್ಪೂರ್ತಿಧಾಮ’, ತಳಸ್ತರದವರ ಅಭಿವೃದ್ಧಿ ಮತ್ತು ಏಳಿಗೆಗಾಗಿ ದುಡಿದವರನ್ನು ಗುರುತಿಸುವ, ಗೌರವಿಸುವ ಸಲುವಾಗಿ ‘ಬೋಧಿವೃಕ್ಷ’ ಮತ್ತು ‘ಭೋಧಿವರ್ಧನ’ ಹೆಸರಿನ ರಾಷ್ಟ ಪ್ರಶಸ್ತಿಗಳನ್ನು ನೀಡುತ್ತಿದೆ. ‘ಬೋಧಿವೃಕ್ಷ’ ಪ್ರಶಸ್ತಿಗೆ ಪ್ರಶಸ್ತಿ ಫಲಕ ಮತ್ತು ಒಂದು ಲಕ್ಷರೂಪಾಯಿ ನಗದು ಹಾಗೂ ಐದು ‘ಭೋಧಿವರ್ಧನ’ ಪ್ರಶಸ್ತಿಗೆ ಪ್ರಶಸ್ತಿ ಫಲಕ ಮತ್ತು ತಲಾ ಇಪ್ಪತ್ತೆಂಟು ಸಾವಿರ ರೂಪಾಯಿ ನಗದು ನೀಡಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

‘A great man is different from an eminent one, in that he is ready to be a servant of the society’ ಎಂದು ಅಂಬೇಡ್ಕರ್ ಹೇಳಿದ ಮಾತುಗಳು ತಳಸ್ತರದವರ ಚಲನೆಗೆ ತಳಪಾಯವಾಗಬೇಕಾದ ಸೇವೆಯ ಮೌಲ್ಯವನ್ನು ಎತ್ತಿ ಹಿಡಿಯುತ್ತದೆ. ತೀರಾ ನಿಕೃಷ್ಟರೆಂದು ಪರಿಗಣಿಸಲ್ಪಡುವ ತಳಸಮುದಾಯದವರ ಹಿತಕ್ಕೆ ತಮ್ಮನ್ನು ತೆತ್ತುಕೊಂಡು, ಅವರ ಬದುಕಿನಲ್ಲಿ ಗುಣಾತ್ಮಕವಾದ ಬದಲಾವಣೆಯನ್ನು ತಂದವರಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ನಮ್ಮ ಕಾಲದ ರೋಗಗ್ರಸ್ಥ ಸ್ಥಿತಿಯನ್ನು, ತಾಯ್ತನದ ಇಂಥ ವಾತ್ಸಲ್ಯದ ಮೂಲಕ ಗುಣಪಡಿಸುವ ‘ಮಹಾತ್ಮ’ರನ್ನು ಪುರಸ್ಕರಿಸುವ ಮೂಲಕ ‘ಸ್ಪೂರ್ತಿಧಾಮ’ ಅವರ ಜೊತೆಗೆ ಹೆಜ್ಜೆ ಹಾಕುತ್ತದೆ’ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಈ ಪ್ರಶಸ್ತಿಗಳು ಹಲವು ಕಾರಣಗಳಿಗಾಗಿ ವಿಭಿನ್ನವಾದವೂ ಹೌದು, ವಿಶಿಷ್ಟವಾದವೂ ಹೌದು. ನಮ್ಮಲ್ಲಿ ರಾಷ್ಟ್ರ ಮತ್ತು ರಾಜ್ಯಮಟ್ಟದ ಸರ್ಕಾರಿ, ಅರೆ ಸರ್ಕಾರಿ, ಪ್ರತಿಷ್ಠಿತ ಅಕಾಡೆಮಿಗಳು, ಸಂಘ-ಸಂಸ್ಥೆಗಳು ಕೊಡುವ ಅನೇಕ ಪ್ರಶಸ್ತಿಗಳಿವೆ. ಆದರೆ, ಆರ್ಥಿಕ, ಸಾಮಾಜಿಕ, ರಾಜಕೀಯ ಅಥವ ಶೈಕ್ಷಣಿಕ ಬಂಡವಾಳವಿಲ್ಲದೆ ತಳಸ್ತರದವರ ಬದುಕನ್ನು ಅರ್ಥಪೂರ್ಣವಾಗಿ ವಿಸ್ತರಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವವರನ್ನು ಗೌರವಿಸುವ ಪ್ರಶಸ್ತಿಗಳು ನಮ್ಮಲ್ಲಿಲ್ಲ. ಸಮಾಜದೊಂದಿಗೆ ಇಂಥ ಸಾವಯುವ ಸಂಬಂಧವನ್ನು ಸ್ಥಾಪಿಸಿಕೊಂಡವರನ್ನು ಸನ್ಮಾನಿಸುವ ಮೂಲಕ ‘ಸ್ಪೂರ್ತಿಧಾಮ’ ತನ್ನ ಘನತೆಯನ್ನು ಹೆಚ್ಚಿಸಿಕೊಳ್ಳಲು ಬಯಸುತ್ತದೆ’ ಎಂದು ಹೇಳಿದ್ದಾರೆ.

ಬೋಧಿವೃಕ್ಷ ಪ್ರಶಸ್ತಿ ವಿಜೇತರ ಕುರಿತು:

ಎಸ್.ಆರ್.ಹಿರೇಮಠ್ ಅವರು 5ನೇ ನವೆಂಬರ್ 1944 ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿಯಲ್ಲಿ ಜನಿಸಿದರು. ಅವರು ಕರ್ನಾಟಕದ ಪ್ರತಿಷ್ಠಿತ ಭಾರತೀಯ ಪರಿಸರವಾದಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರರಾಗಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷರಾಗಿದ್ದು ಈ ಸಂಸ್ಥೆಯು ಸಾಮಾಜಿಕ ಪರಿವರ್ತನೆಗೆ ಹೋರಾಡುತ್ತಿದೆ. ಹಿರೇಮಠ್ ಅವರ ಅಕ್ರಮ ಗಣಿಗಾರಿಕೆ ವಿರುದ್ಧದ ನಿರಂತರ ಹೋರಾಟವು ಬಳ್ಳಾರಿ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸಹಾಯವಾಯಿತು. ಪ್ರಬಲ ಗಣಿ ನಿರ್ವಾಹಕರು, ರಾಜಕೀಯ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ನಿರ್ಭಯವಾಗಿ ಎದುರಿಸಿದ ಇವರ ಅಭಿಯಾನಕ್ಕೆ ವಿವಿಧ ಸಂಘಸಂಸ್ಥೆಗಳಿಂದ ಶ್ಲಾಘನೆ ಸಂದಿದೆ. ಇವರಿಗೆ ಭಾರತದ ಅತ್ಯುನ್ನತ ಪರಿಸರ ಗೌರವ ‘ಇಂದಿರಾ ಗಾಂಧಿ ಪರ್ಯಾವರಣ ಪುರಸ್ಕಾರ; ಸಹ ದೊರೆತಿದೆ.

ಬೋಧಿವರ್ಧನ ಪ್ರಶಸ್ತಿ ವಿಜೇತರ ಕುರಿತು::

ರಾಮ್‌ದೇವ್ ರಾಖೆ

ಮಂಡ್ಯ ಜಿಲ್ಲೆಯ ರಾಮ್‌ದೇವ್, ರಾಖೆನವಾಡಿ ಗ್ರಾಮದಲ್ಲಿ ಶಿಕ್ಷಕರ ಮಗನಾಗಿ ಜನಿಸಿದ ರಾಖೆಯವರು ಬಾಬಾ ಸಾಹೇಬರ ಪ್ರೇರಣೆಯಿಂದ ಸಾಹಿತ್ಯ ಮತ್ತು ರಾಜಕೀಯಗಳ ವಿಶಾಲ ಓದಿನೊಂದಿಗೆ ಸಾಮಾಜಿಕ ಪ್ರಜ್ಞೆಯನ್ನೂ ಬೆಳೆಸಿಕೊಂಡರು. ನಂತರ ಸ್ನೇಹಿತರ ಜೊತೆಗೂಡಿ ಸಮಾಜದ ಧ್ವನಿಯಿಲ್ಲದವರಿಗೆ ಧ್ವನಿ ನೀಡಲು ‘ಶೋಷಿತ’ ಪತ್ರಿಕೆ ಪ್ರಾರಂಭಿಸಿದರು. ಶೋಷಿತ ಪತ್ರಿಕೆ ಕೆಲಕಾಲದ ನಂತರ ‘ಪಂಚಮ’ವಾಗಿ ಬದಲಾಯಿತು. ಅದರ ಸಂಪಾದಕತ್ವದ ಹೊರೆಯನ್ನೂ ಹೊತ್ತರು. ಆ ಸಂದರ್ಭದಲ್ಲಿ ಭದ್ರಾವತಿಯಲ್ಲಿ ದಲಿತ ಸಂಘರ್ಷ ಸಮಿತಿ ಸ್ಥಾಪನೆಯಾಯಿತು. ಆ ಸಂಸ್ಥಾಪಕರಲ್ಲಿ ರಾಮದೇವ್ ರಾಖೆರವರು ಸಹ ಒಬ್ಬರು. ಕೋಟಿಗಾನಹಳ್ಳಿ ರಾಮಯ್ಯನವರ ಪ್ರಕಾರ ದಲಿತ ಚಳುವಳಿಯ ಮೊದಲ ಪೂರ್ಣಪ್ರಮಾಣದ ಕಾರ್ಯಕರ್ತ ರಾಮದೇವ್ ರಾಖೆ. ರಾಜ್ಯದಲ್ಲಿ ದಲಿತ ಚಳುವಳಿಯನ್ನು ಕಟ್ಟಿ ಬೆಳೆಸಲು ರಾಮದೇವ್ ರಾಖೆಯವರು ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ.

ಸುಶೀಲ ನಾಡ

ಮೈಸೂರು ಹಾಗೂ ಕೊಡಗು ಜಿಲ್ಲೆಯ ಜೇನುಕುರುಬ, ಬೆಟ್ಟಕುರುಬ, ಎರವ, ಸೋಲಿಗ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಹಸಲರು ಹಾಗೂ ಗೊಂಡರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಹಾಗೂ ಮಲೆಕುಡಿಯರು ಮುಂತಾದ ಕರ್ನಾಟಕದ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದಲ್ಲಿ ಇವರು ಸಕ್ರಿಯರಾಗಿದ್ದಾರೆ. ಈ ಸಮುದಾಯಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಒಕ್ಕೂಟದ ಪ್ರಯತ್ನದಿಂದಾಗಿ 12 ಅರಣ್ಯ ಮೂಲಬುಡಕಟ್ಟು ಸಮುದಾಯಗಳಿಗೆ ಅರಣ್ಯ ಹಕ್ಕು, ಪೌಷ್ಟಿಕ ಆಹಾರ, ಆಶ್ರಮ ಶಾಲೆಗಳ ಉನ್ನತೀಕರಣ ಸಾಧ್ಯವಾಗಿದೆ.

ಹಸನಬ್ಬ

ಹಸನಬ್ಬ ಕಳೆದ ಮೂರು ದಶಕಗಳಿಂದ ಬೆಳ್ತಂಗಡಿಯ ಚಾರ್ಮಡಿ ಘಾಟ್‌ನಲ್ಲಿ ಉಂಟಾಗುವ ಅಪಘಾತಗಳಲ್ಲಿ ಸಿಕ್ಕಿ ಗಾಯಗೊಂಡವರನ್ನು ಆಸ್ಪತ್ರಗೆ ಸಾಗಿಸಿ, ಅವರಿಗೆ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸುವ ಕಾರ್ಯಕ್ಕೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಅವರು ಹೀಗೆ ನೂರಾರು ಜೀವ ಉಳಿಸಿದ್ದಾರೆ. ಸರ್ಕಾರಿ ಆಂಬುಲೆನ್ಸ್‌ಗಳು ತಡಮಾಡಿದಾಗ ಅವರು ತಮ್ಮ ಸ್ವಂತ ಗಾಡಿಯಲ್ಲಿ ಗಾಯಾಳುಗಳನ್ನು ಸಾಗಿಸಿ ಬದುಕಿಸಿದ್ದಾರೆ. ಹಸನಬ್ಬ ಅವರ ಈ ಕೆಲಸವನ್ನು ಮೆಚ್ಚಿ ರಾಜ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರಿಗೆ ಲಭಿಸಿವೆ.

ಜಿ.ಕೆ.ಪ್ರೇಮ

ಕರ್ನಾಟಕದ ಕೆಲ ಭಾಗಗಳಲ್ಲಿ ಋತುಮತಿ ಆದ ಹೆಣ್ಣು ಮಕ್ಕಳನ್ನು ಮನೆಯಿಂದ ಹೊರಗೆ ಒಂದು ಸಣ್ಣ ಗುಡಿಸಿಲಿನಲ್ಲಿ ಅಥವಾ ಮರದ ಕೆಳಗೆ ಬಿಟ್ಟುಬರುವುದು ಒಂದು ವಾಡಿಕೆ. ನಂತರ ಪ್ರತಿ ಸಾರಿ ಮುಟ್ಟಾದಾಗ ಅವರು ಹೀಗೇ ಇರಬೇಕಾಗುತ್ತದೆ. ಅನೇಕ ವೇಳೆ ಹಾವು ಕಚ್ಚಿ ಅಥವಾ ಇನ್ಯಾವುದೋ ಕಾರಣಕ್ಕೆ ಅನೇಕರು ಪ್ರಾಣ ಕಳೆದುಕೊಂಡಿರುತ್ತಾರೆ. ಇಂತಹ ಒಂದು ಅನಿಷ್ಟ ಪದ್ಧತಿಯ ವಿರುದ್ಧ ಟೊಂಕ ಕಟ್ಟಿ ನಿಂತಿರುವವರು ಜಿ.ಕೆ.ಪ್ರೇಮ. ಅವರ ಈ ಪ್ರಯತ್ನದಿಂದಾಗಿ ಅವರ ಕಾಡುಗೊಲ್ಲ ಸಮುದಾಯದ ಮಹಿಳೆಯರು ಈ ಪದ್ಧತಿಯಿಂದ ಹೊರಬರಲು ಸಾಧ್ಯವಾಗಿದೆ. ತುಮಕೂರು, ಚಿತ್ರದುರ್ಗ ಚಿಕ್ಕಮಗಳೂರು, ಹಾಸನ, ಬಳ್ಳಾರಿ ಜಿಲ್ಲೆಗಳ ಕನಿಷ್ಠ 10 ಹಳ್ಳಿಗಳಲ್ಲಿ ಈ ಪದ್ಧತಿ ನಿಂತಿದೆ ಮತ್ತು ಇವರ ಶ್ರಮದಿಂದ ಇತರ ಹಳ್ಳಿಗಳವರೂ ಈ ಬಗ್ಗೆ ಯೋಚಿಸುವಂತಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯಯದ ನಿವೃತ್ತ ಪ್ರಾದ್ಯಾಪಕರಾದ ಡಾ. ಟಿ.ಆರ್.ಚಂದ್ರಶೇಖರ್ ಭಾಗವಹಿಸಲಿದ್ದಾರೆ. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಪ್ರೊ. ಸಬಿಹಾ ಭೂಮಿಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಎಸ್. ಮರಿಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...