Homeಅಂತರಾಷ್ಟ್ರೀಯಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ...

ಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ…

- Advertisement -
- Advertisement -

ನೀವು ಕರೆ ಮಾಡಿದ ತಕ್ಷಣ ಒಂದು ಕಾಲರ್‌ಟ್ಯೂನ್ ಕೇಳು ಬರುತ್ತದೆ. “ಭಾರತದಲ್ಲಿ ಒದಗಿಸಲಾಗುವ ಲಸಿಕೆಗಳು ವಿಶ್ವಾಸಾರ್ಹ. ಹಿಂಜರಿಕೆಯಿಲ್ಲದೆ ನೀವು ಲಸಿಕೆ ಹಾಕಿಸಿಕೊಳ್ಳಿ, ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕುವುದನ್ನು, ಸಾಮಾಜಿಕ ಅಂತರ ಕಾಪಾಡುವುದ್ನು ಮರೆಯಬೇಡಿ”… ಎಂದು ಅದರಲ್ಲಿ ಹೇಳಲಾಗುತ್ತದೆ.

ಆದರೆ, ಅಮೆರಿಕದಲ್ಲಿ ಈಗ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಕಡ್ಡಾಯ ಎಂಬ ನೀತಿಯನ್ನು ಸಡಿಲಿಸಗೊಳಿಸಲಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
“ಕೊರೊನಾ ವೈರಸ್ ವಿರುದ್ಧದ ನಮ್ಮ ಸುದೀರ್ಘ ಯುದ್ಧದಲ್ಲಿ ಇಂದು ಅಮೆರಿಕಕ್ಕೆ ಉತ್ತಮ ದಿನವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ತಿಳಿಸಿದ್ದಾರೆ. ಅವರು ಅಮೆರಿಕದ ಲಸಿಕಾ ಕಾರ್ಯಕ್ರಮವನ್ನು “ಐತಿಹಾಸಿಕ ವ್ಯವಸ್ಥಾಪನಾ ಸಾಧನೆ” ಎಂದು ಕರೆದರು.

ಅಧ್ಯಕ್ಷ ಜೋ ಬೈಡೆನ್ ಅವರು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯವನ್ನು ಘೋಷಿಸುವತ್ತ ಇನ್ನೂ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಂಪೂರ್ಣವಾಗಿ ಲಸಿಕೆ ಪಡೆದ ಅಮೆರಿಕನ್ನರು ಮಾಸ್ಕ್‌ಗಳನ್ನು ಹಾಕಲೇಬೇಕೆಂಬ ಒತ್ತಡವಿಲ್ಲ ಎಂದು ಅಮೆರಿಕ ಘೋಷಿಸಿದೆ.
ಆದರೆ ಇಲ್ಲಿ ಮೊಬೈಲ್ ಕರೆ ಮಾಡಿದರೆ, ‘ಲಸಿಕೆ ವಿಶ್ವಾಸಾರ್ಹ, ಹಾಕಿಸಿಕೊಳ್ಳಿ, ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕಿ’ ಎಂದು ಸರ್ಕಾರ ಸಂದೇಶ ನೀಡುತ್ತಿದೆ! ಅಂದರೆ ನಮ್ಮ ಲಸಿಕೆಗಳು ವಿಶ್ವಾಸಾರ್ಹ ಅಲ್ಲವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಅಮೆರಿಕ ತನ್ನ 35% ಜನಸಂಖ್ಯೆಗೆ ಪೂರ್ಣ ಲಸಿಕೆ ನೀಡಿಯಾಗಿದೆ. ಆದರೆ ಇಲ್ಲಿ ಶೇ.2.8 ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ಸಿಕ್ಕಿದೆ. ಇದು ಮೋದಿ ಸರ್ಕಾರದ ಲಸಿಕಾ ನೀತಿಯ ವೈಫಲ್ಯಕ್ಕೆ ಸಾಕ್ಷಿಯೇ?

ಅಮೆರಿಕದಲ್ಲಿ ಕೇಸ್‌ಲೋಡ್ ( ಒಟ್ಟು ಸೋಂಕಿತರ ಸಂಖ್ಯೆ) ಇಳಿಮುಖದ ಹಾದಿಯಲ್ಲಿದ್ದರೆ, ಇಲ್ಲಿ ಕೇಸ್‌ಲೋಡ್ ಹೆಚ್ಚುತ್ತಿದೆ ಮತ್ತು ದೈನಿಕ ಕೋವಿಡ್ ಸಾವುಗಳ ಪ್ರಮಾಣವೂ ಏರುತ್ತಿದೆ.
ಅಲ್ಲಿ ಅಮೆರಿಕದ ಮುಖ್ಯಸ್ಥ ಜನರ ಪರ ನಿಂತು ಪ್ರಕಟಣೆ ನೀಡುತ್ತಾರೆ, ಇಲ್ಲಿ ಮೋದಿ ಪ್ರೆಸ್ ಅವರನ್ನೇ ಭೇಟಿ ಆಗುವುದಿಲ್ಲ!

ಇದೆಲ್ಲ ಇರಲಿ, ಎರಡೂ ಲಸಿಕೆ ಪಡೆದವರೂ ಮಾಸ್ಕ್ ಹಾಕಬೇಕು ಎಂದು ಸರ್ಕಾರ ಹೇಳುತ್ತಿರುವುದೇಕೆ? ಈ ಲಸಿಕೆಗಳೇ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಟ್ಟಿಲ್ಲವೇ?
“ನಿಯಮವು ತುಂಬಾ ಸರಳವಾಗಿದೆ: ಲಸಿಕೆ ಪಡೆಯಿರಿ ಅಥವಾ ನೀವು ಪಡೆಯುವವರೆಗೂ ಮಾಸ್ಕ್ ಧರಿಸಿ” ಎಂದು ಬೈಡೆನ್ ಗುರುವಾರ ಹೇಳಿದರು.

“ಸಂಪೂರ್ಣವಾಗಿ ಲಸಿಕೆ ಪಡೆದ ಯಾರಾದರೂ ಮಾಸ್ಕ್ ಇಲ್ಲದೇ ಅಥವಾ ದೈಹಿಕ ದೂರವನ್ನು ಕಾಪಾಡಿಕೊಳ್ಳದೇ ದೊಡ್ಡ ಅಥವಾ ಸಣ್ಣ ಒಳಾಂಗಣ ಅಥವಾ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಸಿಡಿಸಿ ನಿರ್ದೇಶಕ ರೋಚೆಲ್ ವಾಲೆನ್ಸ್ಕಿ ಹೇಳಿದರು. ‘ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ, ಸಾಂಕ್ರಾಮಿಕ ರೋಗದಿಂದಾಗಿ ನೀವು ಈವರೆಗೆ ನಿಲ್ಲಿಸಿದ್ದ ಎಲ್ಲ ಕೆಲಸಗಳನ್ನೂ ಮಾಡಬಹುದು’ ಎಂದಿದ್ದಾರೆ.

ಇದರ ಜೊತೆಗೇ ಸರ್ಕಾರ ಕೆಲವು ಎಚ್ಚರಿಕೆಗಳನ್ನೂ ವಿಧಿಸಿದೆ. ಮಾಸ್ಕ್‌ಗಳ ಯುಗವು ಇನ್ನೂ ಮುಗಿದಿಲ್ಲ. ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ, ಎಲ್ಲಾ ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದೂ ಹೇಳಿದೆ.

ಅಧ್ಯಕ್ಷ ಬಿಡೆನ್ ಪ್ರಕಾರ, ಶೇ. 70ರಷ್ಟು ವಯಸ್ಕ ಅಮೆರಿಕನ್ನರಿಗೆ ಜುಲೈ 4 ರೊಳಗೆ ಕನಿಷ್ಠ ಒಂದು ಲಸಿಕೆ ಶಾಟ್ ಲಣಿಸಲಿದೆ. ಇದು ಮತ್ತೊಂದು ಸಾಂಕೇತಿಕ ಮೈಲಿಗಲ್ಲು. ವೈರಸ್ ತೊಡೆದುಹಾಕುವ ಮೂಲಕ ದೇಶವು ತನ್ನ ವಾರ್ಷಿಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಕೋವಿಡ್ ಅಲೆಯಲ್ಲಿ ತೀವ್ರವಾಗಿ ತತ್ತರಿಸಿದ್ದ ದೇಶಗಳು ಎಚ್ಚೆತ್ತುಕೊಂಡು ಎರಡನೇ ಅಲೆಯನ್ನು ಹಿಮ್ಮೆಟ್ಟಿಸುವ ಹೊತ್ತಿನಲ್ಲಿ ಈ ದೇಶವು ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳ ಬೇಕಿದೆ!

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...