Homeಅಂತರಾಷ್ಟ್ರೀಯಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ...

ಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ…

- Advertisement -
- Advertisement -

ನೀವು ಕರೆ ಮಾಡಿದ ತಕ್ಷಣ ಒಂದು ಕಾಲರ್‌ಟ್ಯೂನ್ ಕೇಳು ಬರುತ್ತದೆ. “ಭಾರತದಲ್ಲಿ ಒದಗಿಸಲಾಗುವ ಲಸಿಕೆಗಳು ವಿಶ್ವಾಸಾರ್ಹ. ಹಿಂಜರಿಕೆಯಿಲ್ಲದೆ ನೀವು ಲಸಿಕೆ ಹಾಕಿಸಿಕೊಳ್ಳಿ, ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕುವುದನ್ನು, ಸಾಮಾಜಿಕ ಅಂತರ ಕಾಪಾಡುವುದ್ನು ಮರೆಯಬೇಡಿ”… ಎಂದು ಅದರಲ್ಲಿ ಹೇಳಲಾಗುತ್ತದೆ.

ಆದರೆ, ಅಮೆರಿಕದಲ್ಲಿ ಈಗ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಕಡ್ಡಾಯ ಎಂಬ ನೀತಿಯನ್ನು ಸಡಿಲಿಸಗೊಳಿಸಲಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
“ಕೊರೊನಾ ವೈರಸ್ ವಿರುದ್ಧದ ನಮ್ಮ ಸುದೀರ್ಘ ಯುದ್ಧದಲ್ಲಿ ಇಂದು ಅಮೆರಿಕಕ್ಕೆ ಉತ್ತಮ ದಿನವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ತಿಳಿಸಿದ್ದಾರೆ. ಅವರು ಅಮೆರಿಕದ ಲಸಿಕಾ ಕಾರ್ಯಕ್ರಮವನ್ನು “ಐತಿಹಾಸಿಕ ವ್ಯವಸ್ಥಾಪನಾ ಸಾಧನೆ” ಎಂದು ಕರೆದರು.

ಅಧ್ಯಕ್ಷ ಜೋ ಬೈಡೆನ್ ಅವರು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯವನ್ನು ಘೋಷಿಸುವತ್ತ ಇನ್ನೂ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಂಪೂರ್ಣವಾಗಿ ಲಸಿಕೆ ಪಡೆದ ಅಮೆರಿಕನ್ನರು ಮಾಸ್ಕ್‌ಗಳನ್ನು ಹಾಕಲೇಬೇಕೆಂಬ ಒತ್ತಡವಿಲ್ಲ ಎಂದು ಅಮೆರಿಕ ಘೋಷಿಸಿದೆ.
ಆದರೆ ಇಲ್ಲಿ ಮೊಬೈಲ್ ಕರೆ ಮಾಡಿದರೆ, ‘ಲಸಿಕೆ ವಿಶ್ವಾಸಾರ್ಹ, ಹಾಕಿಸಿಕೊಳ್ಳಿ, ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕಿ’ ಎಂದು ಸರ್ಕಾರ ಸಂದೇಶ ನೀಡುತ್ತಿದೆ! ಅಂದರೆ ನಮ್ಮ ಲಸಿಕೆಗಳು ವಿಶ್ವಾಸಾರ್ಹ ಅಲ್ಲವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಅಮೆರಿಕ ತನ್ನ 35% ಜನಸಂಖ್ಯೆಗೆ ಪೂರ್ಣ ಲಸಿಕೆ ನೀಡಿಯಾಗಿದೆ. ಆದರೆ ಇಲ್ಲಿ ಶೇ.2.8 ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ಸಿಕ್ಕಿದೆ. ಇದು ಮೋದಿ ಸರ್ಕಾರದ ಲಸಿಕಾ ನೀತಿಯ ವೈಫಲ್ಯಕ್ಕೆ ಸಾಕ್ಷಿಯೇ?

ಅಮೆರಿಕದಲ್ಲಿ ಕೇಸ್‌ಲೋಡ್ ( ಒಟ್ಟು ಸೋಂಕಿತರ ಸಂಖ್ಯೆ) ಇಳಿಮುಖದ ಹಾದಿಯಲ್ಲಿದ್ದರೆ, ಇಲ್ಲಿ ಕೇಸ್‌ಲೋಡ್ ಹೆಚ್ಚುತ್ತಿದೆ ಮತ್ತು ದೈನಿಕ ಕೋವಿಡ್ ಸಾವುಗಳ ಪ್ರಮಾಣವೂ ಏರುತ್ತಿದೆ.
ಅಲ್ಲಿ ಅಮೆರಿಕದ ಮುಖ್ಯಸ್ಥ ಜನರ ಪರ ನಿಂತು ಪ್ರಕಟಣೆ ನೀಡುತ್ತಾರೆ, ಇಲ್ಲಿ ಮೋದಿ ಪ್ರೆಸ್ ಅವರನ್ನೇ ಭೇಟಿ ಆಗುವುದಿಲ್ಲ!

ಇದೆಲ್ಲ ಇರಲಿ, ಎರಡೂ ಲಸಿಕೆ ಪಡೆದವರೂ ಮಾಸ್ಕ್ ಹಾಕಬೇಕು ಎಂದು ಸರ್ಕಾರ ಹೇಳುತ್ತಿರುವುದೇಕೆ? ಈ ಲಸಿಕೆಗಳೇ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಟ್ಟಿಲ್ಲವೇ?
“ನಿಯಮವು ತುಂಬಾ ಸರಳವಾಗಿದೆ: ಲಸಿಕೆ ಪಡೆಯಿರಿ ಅಥವಾ ನೀವು ಪಡೆಯುವವರೆಗೂ ಮಾಸ್ಕ್ ಧರಿಸಿ” ಎಂದು ಬೈಡೆನ್ ಗುರುವಾರ ಹೇಳಿದರು.

“ಸಂಪೂರ್ಣವಾಗಿ ಲಸಿಕೆ ಪಡೆದ ಯಾರಾದರೂ ಮಾಸ್ಕ್ ಇಲ್ಲದೇ ಅಥವಾ ದೈಹಿಕ ದೂರವನ್ನು ಕಾಪಾಡಿಕೊಳ್ಳದೇ ದೊಡ್ಡ ಅಥವಾ ಸಣ್ಣ ಒಳಾಂಗಣ ಅಥವಾ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಸಿಡಿಸಿ ನಿರ್ದೇಶಕ ರೋಚೆಲ್ ವಾಲೆನ್ಸ್ಕಿ ಹೇಳಿದರು. ‘ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ, ಸಾಂಕ್ರಾಮಿಕ ರೋಗದಿಂದಾಗಿ ನೀವು ಈವರೆಗೆ ನಿಲ್ಲಿಸಿದ್ದ ಎಲ್ಲ ಕೆಲಸಗಳನ್ನೂ ಮಾಡಬಹುದು’ ಎಂದಿದ್ದಾರೆ.

ಇದರ ಜೊತೆಗೇ ಸರ್ಕಾರ ಕೆಲವು ಎಚ್ಚರಿಕೆಗಳನ್ನೂ ವಿಧಿಸಿದೆ. ಮಾಸ್ಕ್‌ಗಳ ಯುಗವು ಇನ್ನೂ ಮುಗಿದಿಲ್ಲ. ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ, ಎಲ್ಲಾ ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದೂ ಹೇಳಿದೆ.

ಅಧ್ಯಕ್ಷ ಬಿಡೆನ್ ಪ್ರಕಾರ, ಶೇ. 70ರಷ್ಟು ವಯಸ್ಕ ಅಮೆರಿಕನ್ನರಿಗೆ ಜುಲೈ 4 ರೊಳಗೆ ಕನಿಷ್ಠ ಒಂದು ಲಸಿಕೆ ಶಾಟ್ ಲಣಿಸಲಿದೆ. ಇದು ಮತ್ತೊಂದು ಸಾಂಕೇತಿಕ ಮೈಲಿಗಲ್ಲು. ವೈರಸ್ ತೊಡೆದುಹಾಕುವ ಮೂಲಕ ದೇಶವು ತನ್ನ ವಾರ್ಷಿಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಕೋವಿಡ್ ಅಲೆಯಲ್ಲಿ ತೀವ್ರವಾಗಿ ತತ್ತರಿಸಿದ್ದ ದೇಶಗಳು ಎಚ್ಚೆತ್ತುಕೊಂಡು ಎರಡನೇ ಅಲೆಯನ್ನು ಹಿಮ್ಮೆಟ್ಟಿಸುವ ಹೊತ್ತಿನಲ್ಲಿ ಈ ದೇಶವು ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳ ಬೇಕಿದೆ!

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...