Homeಅಂತರಾಷ್ಟ್ರೀಯಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ...

ಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ…

- Advertisement -
- Advertisement -

ನೀವು ಕರೆ ಮಾಡಿದ ತಕ್ಷಣ ಒಂದು ಕಾಲರ್‌ಟ್ಯೂನ್ ಕೇಳು ಬರುತ್ತದೆ. “ಭಾರತದಲ್ಲಿ ಒದಗಿಸಲಾಗುವ ಲಸಿಕೆಗಳು ವಿಶ್ವಾಸಾರ್ಹ. ಹಿಂಜರಿಕೆಯಿಲ್ಲದೆ ನೀವು ಲಸಿಕೆ ಹಾಕಿಸಿಕೊಳ್ಳಿ, ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕುವುದನ್ನು, ಸಾಮಾಜಿಕ ಅಂತರ ಕಾಪಾಡುವುದ್ನು ಮರೆಯಬೇಡಿ”… ಎಂದು ಅದರಲ್ಲಿ ಹೇಳಲಾಗುತ್ತದೆ.

ಆದರೆ, ಅಮೆರಿಕದಲ್ಲಿ ಈಗ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಕಡ್ಡಾಯ ಎಂಬ ನೀತಿಯನ್ನು ಸಡಿಲಿಸಗೊಳಿಸಲಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
“ಕೊರೊನಾ ವೈರಸ್ ವಿರುದ್ಧದ ನಮ್ಮ ಸುದೀರ್ಘ ಯುದ್ಧದಲ್ಲಿ ಇಂದು ಅಮೆರಿಕಕ್ಕೆ ಉತ್ತಮ ದಿನವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ತಿಳಿಸಿದ್ದಾರೆ. ಅವರು ಅಮೆರಿಕದ ಲಸಿಕಾ ಕಾರ್ಯಕ್ರಮವನ್ನು “ಐತಿಹಾಸಿಕ ವ್ಯವಸ್ಥಾಪನಾ ಸಾಧನೆ” ಎಂದು ಕರೆದರು.

ಅಧ್ಯಕ್ಷ ಜೋ ಬೈಡೆನ್ ಅವರು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯವನ್ನು ಘೋಷಿಸುವತ್ತ ಇನ್ನೂ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಂಪೂರ್ಣವಾಗಿ ಲಸಿಕೆ ಪಡೆದ ಅಮೆರಿಕನ್ನರು ಮಾಸ್ಕ್‌ಗಳನ್ನು ಹಾಕಲೇಬೇಕೆಂಬ ಒತ್ತಡವಿಲ್ಲ ಎಂದು ಅಮೆರಿಕ ಘೋಷಿಸಿದೆ.
ಆದರೆ ಇಲ್ಲಿ ಮೊಬೈಲ್ ಕರೆ ಮಾಡಿದರೆ, ‘ಲಸಿಕೆ ವಿಶ್ವಾಸಾರ್ಹ, ಹಾಕಿಸಿಕೊಳ್ಳಿ, ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕಿ’ ಎಂದು ಸರ್ಕಾರ ಸಂದೇಶ ನೀಡುತ್ತಿದೆ! ಅಂದರೆ ನಮ್ಮ ಲಸಿಕೆಗಳು ವಿಶ್ವಾಸಾರ್ಹ ಅಲ್ಲವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಅಮೆರಿಕ ತನ್ನ 35% ಜನಸಂಖ್ಯೆಗೆ ಪೂರ್ಣ ಲಸಿಕೆ ನೀಡಿಯಾಗಿದೆ. ಆದರೆ ಇಲ್ಲಿ ಶೇ.2.8 ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ಸಿಕ್ಕಿದೆ. ಇದು ಮೋದಿ ಸರ್ಕಾರದ ಲಸಿಕಾ ನೀತಿಯ ವೈಫಲ್ಯಕ್ಕೆ ಸಾಕ್ಷಿಯೇ?

ಅಮೆರಿಕದಲ್ಲಿ ಕೇಸ್‌ಲೋಡ್ ( ಒಟ್ಟು ಸೋಂಕಿತರ ಸಂಖ್ಯೆ) ಇಳಿಮುಖದ ಹಾದಿಯಲ್ಲಿದ್ದರೆ, ಇಲ್ಲಿ ಕೇಸ್‌ಲೋಡ್ ಹೆಚ್ಚುತ್ತಿದೆ ಮತ್ತು ದೈನಿಕ ಕೋವಿಡ್ ಸಾವುಗಳ ಪ್ರಮಾಣವೂ ಏರುತ್ತಿದೆ.
ಅಲ್ಲಿ ಅಮೆರಿಕದ ಮುಖ್ಯಸ್ಥ ಜನರ ಪರ ನಿಂತು ಪ್ರಕಟಣೆ ನೀಡುತ್ತಾರೆ, ಇಲ್ಲಿ ಮೋದಿ ಪ್ರೆಸ್ ಅವರನ್ನೇ ಭೇಟಿ ಆಗುವುದಿಲ್ಲ!

ಇದೆಲ್ಲ ಇರಲಿ, ಎರಡೂ ಲಸಿಕೆ ಪಡೆದವರೂ ಮಾಸ್ಕ್ ಹಾಕಬೇಕು ಎಂದು ಸರ್ಕಾರ ಹೇಳುತ್ತಿರುವುದೇಕೆ? ಈ ಲಸಿಕೆಗಳೇ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಟ್ಟಿಲ್ಲವೇ?
“ನಿಯಮವು ತುಂಬಾ ಸರಳವಾಗಿದೆ: ಲಸಿಕೆ ಪಡೆಯಿರಿ ಅಥವಾ ನೀವು ಪಡೆಯುವವರೆಗೂ ಮಾಸ್ಕ್ ಧರಿಸಿ” ಎಂದು ಬೈಡೆನ್ ಗುರುವಾರ ಹೇಳಿದರು.

“ಸಂಪೂರ್ಣವಾಗಿ ಲಸಿಕೆ ಪಡೆದ ಯಾರಾದರೂ ಮಾಸ್ಕ್ ಇಲ್ಲದೇ ಅಥವಾ ದೈಹಿಕ ದೂರವನ್ನು ಕಾಪಾಡಿಕೊಳ್ಳದೇ ದೊಡ್ಡ ಅಥವಾ ಸಣ್ಣ ಒಳಾಂಗಣ ಅಥವಾ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಸಿಡಿಸಿ ನಿರ್ದೇಶಕ ರೋಚೆಲ್ ವಾಲೆನ್ಸ್ಕಿ ಹೇಳಿದರು. ‘ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ, ಸಾಂಕ್ರಾಮಿಕ ರೋಗದಿಂದಾಗಿ ನೀವು ಈವರೆಗೆ ನಿಲ್ಲಿಸಿದ್ದ ಎಲ್ಲ ಕೆಲಸಗಳನ್ನೂ ಮಾಡಬಹುದು’ ಎಂದಿದ್ದಾರೆ.

ಇದರ ಜೊತೆಗೇ ಸರ್ಕಾರ ಕೆಲವು ಎಚ್ಚರಿಕೆಗಳನ್ನೂ ವಿಧಿಸಿದೆ. ಮಾಸ್ಕ್‌ಗಳ ಯುಗವು ಇನ್ನೂ ಮುಗಿದಿಲ್ಲ. ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ, ಎಲ್ಲಾ ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದೂ ಹೇಳಿದೆ.

ಅಧ್ಯಕ್ಷ ಬಿಡೆನ್ ಪ್ರಕಾರ, ಶೇ. 70ರಷ್ಟು ವಯಸ್ಕ ಅಮೆರಿಕನ್ನರಿಗೆ ಜುಲೈ 4 ರೊಳಗೆ ಕನಿಷ್ಠ ಒಂದು ಲಸಿಕೆ ಶಾಟ್ ಲಣಿಸಲಿದೆ. ಇದು ಮತ್ತೊಂದು ಸಾಂಕೇತಿಕ ಮೈಲಿಗಲ್ಲು. ವೈರಸ್ ತೊಡೆದುಹಾಕುವ ಮೂಲಕ ದೇಶವು ತನ್ನ ವಾರ್ಷಿಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಕೋವಿಡ್ ಅಲೆಯಲ್ಲಿ ತೀವ್ರವಾಗಿ ತತ್ತರಿಸಿದ್ದ ದೇಶಗಳು ಎಚ್ಚೆತ್ತುಕೊಂಡು ಎರಡನೇ ಅಲೆಯನ್ನು ಹಿಮ್ಮೆಟ್ಟಿಸುವ ಹೊತ್ತಿನಲ್ಲಿ ಈ ದೇಶವು ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳ ಬೇಕಿದೆ!

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...