Homeಅಂತರಾಷ್ಟ್ರೀಯಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ...

ಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ…

- Advertisement -
- Advertisement -

ನೀವು ಕರೆ ಮಾಡಿದ ತಕ್ಷಣ ಒಂದು ಕಾಲರ್‌ಟ್ಯೂನ್ ಕೇಳು ಬರುತ್ತದೆ. “ಭಾರತದಲ್ಲಿ ಒದಗಿಸಲಾಗುವ ಲಸಿಕೆಗಳು ವಿಶ್ವಾಸಾರ್ಹ. ಹಿಂಜರಿಕೆಯಿಲ್ಲದೆ ನೀವು ಲಸಿಕೆ ಹಾಕಿಸಿಕೊಳ್ಳಿ, ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕುವುದನ್ನು, ಸಾಮಾಜಿಕ ಅಂತರ ಕಾಪಾಡುವುದ್ನು ಮರೆಯಬೇಡಿ”… ಎಂದು ಅದರಲ್ಲಿ ಹೇಳಲಾಗುತ್ತದೆ.

ಆದರೆ, ಅಮೆರಿಕದಲ್ಲಿ ಈಗ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಕಡ್ಡಾಯ ಎಂಬ ನೀತಿಯನ್ನು ಸಡಿಲಿಸಗೊಳಿಸಲಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
“ಕೊರೊನಾ ವೈರಸ್ ವಿರುದ್ಧದ ನಮ್ಮ ಸುದೀರ್ಘ ಯುದ್ಧದಲ್ಲಿ ಇಂದು ಅಮೆರಿಕಕ್ಕೆ ಉತ್ತಮ ದಿನವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ತಿಳಿಸಿದ್ದಾರೆ. ಅವರು ಅಮೆರಿಕದ ಲಸಿಕಾ ಕಾರ್ಯಕ್ರಮವನ್ನು “ಐತಿಹಾಸಿಕ ವ್ಯವಸ್ಥಾಪನಾ ಸಾಧನೆ” ಎಂದು ಕರೆದರು.

ಅಧ್ಯಕ್ಷ ಜೋ ಬೈಡೆನ್ ಅವರು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯವನ್ನು ಘೋಷಿಸುವತ್ತ ಇನ್ನೂ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಂಪೂರ್ಣವಾಗಿ ಲಸಿಕೆ ಪಡೆದ ಅಮೆರಿಕನ್ನರು ಮಾಸ್ಕ್‌ಗಳನ್ನು ಹಾಕಲೇಬೇಕೆಂಬ ಒತ್ತಡವಿಲ್ಲ ಎಂದು ಅಮೆರಿಕ ಘೋಷಿಸಿದೆ.
ಆದರೆ ಇಲ್ಲಿ ಮೊಬೈಲ್ ಕರೆ ಮಾಡಿದರೆ, ‘ಲಸಿಕೆ ವಿಶ್ವಾಸಾರ್ಹ, ಹಾಕಿಸಿಕೊಳ್ಳಿ, ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕಿ’ ಎಂದು ಸರ್ಕಾರ ಸಂದೇಶ ನೀಡುತ್ತಿದೆ! ಅಂದರೆ ನಮ್ಮ ಲಸಿಕೆಗಳು ವಿಶ್ವಾಸಾರ್ಹ ಅಲ್ಲವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಅಮೆರಿಕ ತನ್ನ 35% ಜನಸಂಖ್ಯೆಗೆ ಪೂರ್ಣ ಲಸಿಕೆ ನೀಡಿಯಾಗಿದೆ. ಆದರೆ ಇಲ್ಲಿ ಶೇ.2.8 ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ಸಿಕ್ಕಿದೆ. ಇದು ಮೋದಿ ಸರ್ಕಾರದ ಲಸಿಕಾ ನೀತಿಯ ವೈಫಲ್ಯಕ್ಕೆ ಸಾಕ್ಷಿಯೇ?

ಅಮೆರಿಕದಲ್ಲಿ ಕೇಸ್‌ಲೋಡ್ ( ಒಟ್ಟು ಸೋಂಕಿತರ ಸಂಖ್ಯೆ) ಇಳಿಮುಖದ ಹಾದಿಯಲ್ಲಿದ್ದರೆ, ಇಲ್ಲಿ ಕೇಸ್‌ಲೋಡ್ ಹೆಚ್ಚುತ್ತಿದೆ ಮತ್ತು ದೈನಿಕ ಕೋವಿಡ್ ಸಾವುಗಳ ಪ್ರಮಾಣವೂ ಏರುತ್ತಿದೆ.
ಅಲ್ಲಿ ಅಮೆರಿಕದ ಮುಖ್ಯಸ್ಥ ಜನರ ಪರ ನಿಂತು ಪ್ರಕಟಣೆ ನೀಡುತ್ತಾರೆ, ಇಲ್ಲಿ ಮೋದಿ ಪ್ರೆಸ್ ಅವರನ್ನೇ ಭೇಟಿ ಆಗುವುದಿಲ್ಲ!

ಇದೆಲ್ಲ ಇರಲಿ, ಎರಡೂ ಲಸಿಕೆ ಪಡೆದವರೂ ಮಾಸ್ಕ್ ಹಾಕಬೇಕು ಎಂದು ಸರ್ಕಾರ ಹೇಳುತ್ತಿರುವುದೇಕೆ? ಈ ಲಸಿಕೆಗಳೇ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಟ್ಟಿಲ್ಲವೇ?
“ನಿಯಮವು ತುಂಬಾ ಸರಳವಾಗಿದೆ: ಲಸಿಕೆ ಪಡೆಯಿರಿ ಅಥವಾ ನೀವು ಪಡೆಯುವವರೆಗೂ ಮಾಸ್ಕ್ ಧರಿಸಿ” ಎಂದು ಬೈಡೆನ್ ಗುರುವಾರ ಹೇಳಿದರು.

“ಸಂಪೂರ್ಣವಾಗಿ ಲಸಿಕೆ ಪಡೆದ ಯಾರಾದರೂ ಮಾಸ್ಕ್ ಇಲ್ಲದೇ ಅಥವಾ ದೈಹಿಕ ದೂರವನ್ನು ಕಾಪಾಡಿಕೊಳ್ಳದೇ ದೊಡ್ಡ ಅಥವಾ ಸಣ್ಣ ಒಳಾಂಗಣ ಅಥವಾ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಸಿಡಿಸಿ ನಿರ್ದೇಶಕ ರೋಚೆಲ್ ವಾಲೆನ್ಸ್ಕಿ ಹೇಳಿದರು. ‘ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ, ಸಾಂಕ್ರಾಮಿಕ ರೋಗದಿಂದಾಗಿ ನೀವು ಈವರೆಗೆ ನಿಲ್ಲಿಸಿದ್ದ ಎಲ್ಲ ಕೆಲಸಗಳನ್ನೂ ಮಾಡಬಹುದು’ ಎಂದಿದ್ದಾರೆ.

ಇದರ ಜೊತೆಗೇ ಸರ್ಕಾರ ಕೆಲವು ಎಚ್ಚರಿಕೆಗಳನ್ನೂ ವಿಧಿಸಿದೆ. ಮಾಸ್ಕ್‌ಗಳ ಯುಗವು ಇನ್ನೂ ಮುಗಿದಿಲ್ಲ. ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ, ಎಲ್ಲಾ ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದೂ ಹೇಳಿದೆ.

ಅಧ್ಯಕ್ಷ ಬಿಡೆನ್ ಪ್ರಕಾರ, ಶೇ. 70ರಷ್ಟು ವಯಸ್ಕ ಅಮೆರಿಕನ್ನರಿಗೆ ಜುಲೈ 4 ರೊಳಗೆ ಕನಿಷ್ಠ ಒಂದು ಲಸಿಕೆ ಶಾಟ್ ಲಣಿಸಲಿದೆ. ಇದು ಮತ್ತೊಂದು ಸಾಂಕೇತಿಕ ಮೈಲಿಗಲ್ಲು. ವೈರಸ್ ತೊಡೆದುಹಾಕುವ ಮೂಲಕ ದೇಶವು ತನ್ನ ವಾರ್ಷಿಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಕೋವಿಡ್ ಅಲೆಯಲ್ಲಿ ತೀವ್ರವಾಗಿ ತತ್ತರಿಸಿದ್ದ ದೇಶಗಳು ಎಚ್ಚೆತ್ತುಕೊಂಡು ಎರಡನೇ ಅಲೆಯನ್ನು ಹಿಮ್ಮೆಟ್ಟಿಸುವ ಹೊತ್ತಿನಲ್ಲಿ ಈ ದೇಶವು ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳ ಬೇಕಿದೆ!

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...