Homeಅಂತರಾಷ್ಟ್ರೀಯಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ...

ಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ…

- Advertisement -
- Advertisement -

ನೀವು ಕರೆ ಮಾಡಿದ ತಕ್ಷಣ ಒಂದು ಕಾಲರ್‌ಟ್ಯೂನ್ ಕೇಳು ಬರುತ್ತದೆ. “ಭಾರತದಲ್ಲಿ ಒದಗಿಸಲಾಗುವ ಲಸಿಕೆಗಳು ವಿಶ್ವಾಸಾರ್ಹ. ಹಿಂಜರಿಕೆಯಿಲ್ಲದೆ ನೀವು ಲಸಿಕೆ ಹಾಕಿಸಿಕೊಳ್ಳಿ, ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕುವುದನ್ನು, ಸಾಮಾಜಿಕ ಅಂತರ ಕಾಪಾಡುವುದ್ನು ಮರೆಯಬೇಡಿ”… ಎಂದು ಅದರಲ್ಲಿ ಹೇಳಲಾಗುತ್ತದೆ.

ಆದರೆ, ಅಮೆರಿಕದಲ್ಲಿ ಈಗ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಕಡ್ಡಾಯ ಎಂಬ ನೀತಿಯನ್ನು ಸಡಿಲಿಸಗೊಳಿಸಲಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
“ಕೊರೊನಾ ವೈರಸ್ ವಿರುದ್ಧದ ನಮ್ಮ ಸುದೀರ್ಘ ಯುದ್ಧದಲ್ಲಿ ಇಂದು ಅಮೆರಿಕಕ್ಕೆ ಉತ್ತಮ ದಿನವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ತಿಳಿಸಿದ್ದಾರೆ. ಅವರು ಅಮೆರಿಕದ ಲಸಿಕಾ ಕಾರ್ಯಕ್ರಮವನ್ನು “ಐತಿಹಾಸಿಕ ವ್ಯವಸ್ಥಾಪನಾ ಸಾಧನೆ” ಎಂದು ಕರೆದರು.

ಅಧ್ಯಕ್ಷ ಜೋ ಬೈಡೆನ್ ಅವರು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯವನ್ನು ಘೋಷಿಸುವತ್ತ ಇನ್ನೂ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಂಪೂರ್ಣವಾಗಿ ಲಸಿಕೆ ಪಡೆದ ಅಮೆರಿಕನ್ನರು ಮಾಸ್ಕ್‌ಗಳನ್ನು ಹಾಕಲೇಬೇಕೆಂಬ ಒತ್ತಡವಿಲ್ಲ ಎಂದು ಅಮೆರಿಕ ಘೋಷಿಸಿದೆ.
ಆದರೆ ಇಲ್ಲಿ ಮೊಬೈಲ್ ಕರೆ ಮಾಡಿದರೆ, ‘ಲಸಿಕೆ ವಿಶ್ವಾಸಾರ್ಹ, ಹಾಕಿಸಿಕೊಳ್ಳಿ, ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕಿ’ ಎಂದು ಸರ್ಕಾರ ಸಂದೇಶ ನೀಡುತ್ತಿದೆ! ಅಂದರೆ ನಮ್ಮ ಲಸಿಕೆಗಳು ವಿಶ್ವಾಸಾರ್ಹ ಅಲ್ಲವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಅಮೆರಿಕ ತನ್ನ 35% ಜನಸಂಖ್ಯೆಗೆ ಪೂರ್ಣ ಲಸಿಕೆ ನೀಡಿಯಾಗಿದೆ. ಆದರೆ ಇಲ್ಲಿ ಶೇ.2.8 ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ಸಿಕ್ಕಿದೆ. ಇದು ಮೋದಿ ಸರ್ಕಾರದ ಲಸಿಕಾ ನೀತಿಯ ವೈಫಲ್ಯಕ್ಕೆ ಸಾಕ್ಷಿಯೇ?

ಅಮೆರಿಕದಲ್ಲಿ ಕೇಸ್‌ಲೋಡ್ ( ಒಟ್ಟು ಸೋಂಕಿತರ ಸಂಖ್ಯೆ) ಇಳಿಮುಖದ ಹಾದಿಯಲ್ಲಿದ್ದರೆ, ಇಲ್ಲಿ ಕೇಸ್‌ಲೋಡ್ ಹೆಚ್ಚುತ್ತಿದೆ ಮತ್ತು ದೈನಿಕ ಕೋವಿಡ್ ಸಾವುಗಳ ಪ್ರಮಾಣವೂ ಏರುತ್ತಿದೆ.
ಅಲ್ಲಿ ಅಮೆರಿಕದ ಮುಖ್ಯಸ್ಥ ಜನರ ಪರ ನಿಂತು ಪ್ರಕಟಣೆ ನೀಡುತ್ತಾರೆ, ಇಲ್ಲಿ ಮೋದಿ ಪ್ರೆಸ್ ಅವರನ್ನೇ ಭೇಟಿ ಆಗುವುದಿಲ್ಲ!

ಇದೆಲ್ಲ ಇರಲಿ, ಎರಡೂ ಲಸಿಕೆ ಪಡೆದವರೂ ಮಾಸ್ಕ್ ಹಾಕಬೇಕು ಎಂದು ಸರ್ಕಾರ ಹೇಳುತ್ತಿರುವುದೇಕೆ? ಈ ಲಸಿಕೆಗಳೇ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಟ್ಟಿಲ್ಲವೇ?
“ನಿಯಮವು ತುಂಬಾ ಸರಳವಾಗಿದೆ: ಲಸಿಕೆ ಪಡೆಯಿರಿ ಅಥವಾ ನೀವು ಪಡೆಯುವವರೆಗೂ ಮಾಸ್ಕ್ ಧರಿಸಿ” ಎಂದು ಬೈಡೆನ್ ಗುರುವಾರ ಹೇಳಿದರು.

“ಸಂಪೂರ್ಣವಾಗಿ ಲಸಿಕೆ ಪಡೆದ ಯಾರಾದರೂ ಮಾಸ್ಕ್ ಇಲ್ಲದೇ ಅಥವಾ ದೈಹಿಕ ದೂರವನ್ನು ಕಾಪಾಡಿಕೊಳ್ಳದೇ ದೊಡ್ಡ ಅಥವಾ ಸಣ್ಣ ಒಳಾಂಗಣ ಅಥವಾ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಸಿಡಿಸಿ ನಿರ್ದೇಶಕ ರೋಚೆಲ್ ವಾಲೆನ್ಸ್ಕಿ ಹೇಳಿದರು. ‘ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ, ಸಾಂಕ್ರಾಮಿಕ ರೋಗದಿಂದಾಗಿ ನೀವು ಈವರೆಗೆ ನಿಲ್ಲಿಸಿದ್ದ ಎಲ್ಲ ಕೆಲಸಗಳನ್ನೂ ಮಾಡಬಹುದು’ ಎಂದಿದ್ದಾರೆ.

ಇದರ ಜೊತೆಗೇ ಸರ್ಕಾರ ಕೆಲವು ಎಚ್ಚರಿಕೆಗಳನ್ನೂ ವಿಧಿಸಿದೆ. ಮಾಸ್ಕ್‌ಗಳ ಯುಗವು ಇನ್ನೂ ಮುಗಿದಿಲ್ಲ. ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ, ಎಲ್ಲಾ ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದೂ ಹೇಳಿದೆ.

ಅಧ್ಯಕ್ಷ ಬಿಡೆನ್ ಪ್ರಕಾರ, ಶೇ. 70ರಷ್ಟು ವಯಸ್ಕ ಅಮೆರಿಕನ್ನರಿಗೆ ಜುಲೈ 4 ರೊಳಗೆ ಕನಿಷ್ಠ ಒಂದು ಲಸಿಕೆ ಶಾಟ್ ಲಣಿಸಲಿದೆ. ಇದು ಮತ್ತೊಂದು ಸಾಂಕೇತಿಕ ಮೈಲಿಗಲ್ಲು. ವೈರಸ್ ತೊಡೆದುಹಾಕುವ ಮೂಲಕ ದೇಶವು ತನ್ನ ವಾರ್ಷಿಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಕೋವಿಡ್ ಅಲೆಯಲ್ಲಿ ತೀವ್ರವಾಗಿ ತತ್ತರಿಸಿದ್ದ ದೇಶಗಳು ಎಚ್ಚೆತ್ತುಕೊಂಡು ಎರಡನೇ ಅಲೆಯನ್ನು ಹಿಮ್ಮೆಟ್ಟಿಸುವ ಹೊತ್ತಿನಲ್ಲಿ ಈ ದೇಶವು ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳ ಬೇಕಿದೆ!

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...