Homeಅಂತರಾಷ್ಟ್ರೀಯಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ...

ಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ…

- Advertisement -
- Advertisement -

ನೀವು ಕರೆ ಮಾಡಿದ ತಕ್ಷಣ ಒಂದು ಕಾಲರ್‌ಟ್ಯೂನ್ ಕೇಳು ಬರುತ್ತದೆ. “ಭಾರತದಲ್ಲಿ ಒದಗಿಸಲಾಗುವ ಲಸಿಕೆಗಳು ವಿಶ್ವಾಸಾರ್ಹ. ಹಿಂಜರಿಕೆಯಿಲ್ಲದೆ ನೀವು ಲಸಿಕೆ ಹಾಕಿಸಿಕೊಳ್ಳಿ, ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕುವುದನ್ನು, ಸಾಮಾಜಿಕ ಅಂತರ ಕಾಪಾಡುವುದ್ನು ಮರೆಯಬೇಡಿ”… ಎಂದು ಅದರಲ್ಲಿ ಹೇಳಲಾಗುತ್ತದೆ.

ಆದರೆ, ಅಮೆರಿಕದಲ್ಲಿ ಈಗ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಕಡ್ಡಾಯ ಎಂಬ ನೀತಿಯನ್ನು ಸಡಿಲಿಸಗೊಳಿಸಲಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
“ಕೊರೊನಾ ವೈರಸ್ ವಿರುದ್ಧದ ನಮ್ಮ ಸುದೀರ್ಘ ಯುದ್ಧದಲ್ಲಿ ಇಂದು ಅಮೆರಿಕಕ್ಕೆ ಉತ್ತಮ ದಿನವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ತಿಳಿಸಿದ್ದಾರೆ. ಅವರು ಅಮೆರಿಕದ ಲಸಿಕಾ ಕಾರ್ಯಕ್ರಮವನ್ನು “ಐತಿಹಾಸಿಕ ವ್ಯವಸ್ಥಾಪನಾ ಸಾಧನೆ” ಎಂದು ಕರೆದರು.

ಅಧ್ಯಕ್ಷ ಜೋ ಬೈಡೆನ್ ಅವರು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯವನ್ನು ಘೋಷಿಸುವತ್ತ ಇನ್ನೂ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಂಪೂರ್ಣವಾಗಿ ಲಸಿಕೆ ಪಡೆದ ಅಮೆರಿಕನ್ನರು ಮಾಸ್ಕ್‌ಗಳನ್ನು ಹಾಕಲೇಬೇಕೆಂಬ ಒತ್ತಡವಿಲ್ಲ ಎಂದು ಅಮೆರಿಕ ಘೋಷಿಸಿದೆ.
ಆದರೆ ಇಲ್ಲಿ ಮೊಬೈಲ್ ಕರೆ ಮಾಡಿದರೆ, ‘ಲಸಿಕೆ ವಿಶ್ವಾಸಾರ್ಹ, ಹಾಕಿಸಿಕೊಳ್ಳಿ, ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕಿ’ ಎಂದು ಸರ್ಕಾರ ಸಂದೇಶ ನೀಡುತ್ತಿದೆ! ಅಂದರೆ ನಮ್ಮ ಲಸಿಕೆಗಳು ವಿಶ್ವಾಸಾರ್ಹ ಅಲ್ಲವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಅಮೆರಿಕ ತನ್ನ 35% ಜನಸಂಖ್ಯೆಗೆ ಪೂರ್ಣ ಲಸಿಕೆ ನೀಡಿಯಾಗಿದೆ. ಆದರೆ ಇಲ್ಲಿ ಶೇ.2.8 ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ಸಿಕ್ಕಿದೆ. ಇದು ಮೋದಿ ಸರ್ಕಾರದ ಲಸಿಕಾ ನೀತಿಯ ವೈಫಲ್ಯಕ್ಕೆ ಸಾಕ್ಷಿಯೇ?

ಅಮೆರಿಕದಲ್ಲಿ ಕೇಸ್‌ಲೋಡ್ ( ಒಟ್ಟು ಸೋಂಕಿತರ ಸಂಖ್ಯೆ) ಇಳಿಮುಖದ ಹಾದಿಯಲ್ಲಿದ್ದರೆ, ಇಲ್ಲಿ ಕೇಸ್‌ಲೋಡ್ ಹೆಚ್ಚುತ್ತಿದೆ ಮತ್ತು ದೈನಿಕ ಕೋವಿಡ್ ಸಾವುಗಳ ಪ್ರಮಾಣವೂ ಏರುತ್ತಿದೆ.
ಅಲ್ಲಿ ಅಮೆರಿಕದ ಮುಖ್ಯಸ್ಥ ಜನರ ಪರ ನಿಂತು ಪ್ರಕಟಣೆ ನೀಡುತ್ತಾರೆ, ಇಲ್ಲಿ ಮೋದಿ ಪ್ರೆಸ್ ಅವರನ್ನೇ ಭೇಟಿ ಆಗುವುದಿಲ್ಲ!

ಇದೆಲ್ಲ ಇರಲಿ, ಎರಡೂ ಲಸಿಕೆ ಪಡೆದವರೂ ಮಾಸ್ಕ್ ಹಾಕಬೇಕು ಎಂದು ಸರ್ಕಾರ ಹೇಳುತ್ತಿರುವುದೇಕೆ? ಈ ಲಸಿಕೆಗಳೇ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಟ್ಟಿಲ್ಲವೇ?
“ನಿಯಮವು ತುಂಬಾ ಸರಳವಾಗಿದೆ: ಲಸಿಕೆ ಪಡೆಯಿರಿ ಅಥವಾ ನೀವು ಪಡೆಯುವವರೆಗೂ ಮಾಸ್ಕ್ ಧರಿಸಿ” ಎಂದು ಬೈಡೆನ್ ಗುರುವಾರ ಹೇಳಿದರು.

“ಸಂಪೂರ್ಣವಾಗಿ ಲಸಿಕೆ ಪಡೆದ ಯಾರಾದರೂ ಮಾಸ್ಕ್ ಇಲ್ಲದೇ ಅಥವಾ ದೈಹಿಕ ದೂರವನ್ನು ಕಾಪಾಡಿಕೊಳ್ಳದೇ ದೊಡ್ಡ ಅಥವಾ ಸಣ್ಣ ಒಳಾಂಗಣ ಅಥವಾ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಸಿಡಿಸಿ ನಿರ್ದೇಶಕ ರೋಚೆಲ್ ವಾಲೆನ್ಸ್ಕಿ ಹೇಳಿದರು. ‘ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ, ಸಾಂಕ್ರಾಮಿಕ ರೋಗದಿಂದಾಗಿ ನೀವು ಈವರೆಗೆ ನಿಲ್ಲಿಸಿದ್ದ ಎಲ್ಲ ಕೆಲಸಗಳನ್ನೂ ಮಾಡಬಹುದು’ ಎಂದಿದ್ದಾರೆ.

ಇದರ ಜೊತೆಗೇ ಸರ್ಕಾರ ಕೆಲವು ಎಚ್ಚರಿಕೆಗಳನ್ನೂ ವಿಧಿಸಿದೆ. ಮಾಸ್ಕ್‌ಗಳ ಯುಗವು ಇನ್ನೂ ಮುಗಿದಿಲ್ಲ. ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ, ಎಲ್ಲಾ ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದೂ ಹೇಳಿದೆ.

ಅಧ್ಯಕ್ಷ ಬಿಡೆನ್ ಪ್ರಕಾರ, ಶೇ. 70ರಷ್ಟು ವಯಸ್ಕ ಅಮೆರಿಕನ್ನರಿಗೆ ಜುಲೈ 4 ರೊಳಗೆ ಕನಿಷ್ಠ ಒಂದು ಲಸಿಕೆ ಶಾಟ್ ಲಣಿಸಲಿದೆ. ಇದು ಮತ್ತೊಂದು ಸಾಂಕೇತಿಕ ಮೈಲಿಗಲ್ಲು. ವೈರಸ್ ತೊಡೆದುಹಾಕುವ ಮೂಲಕ ದೇಶವು ತನ್ನ ವಾರ್ಷಿಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಕೋವಿಡ್ ಅಲೆಯಲ್ಲಿ ತೀವ್ರವಾಗಿ ತತ್ತರಿಸಿದ್ದ ದೇಶಗಳು ಎಚ್ಚೆತ್ತುಕೊಂಡು ಎರಡನೇ ಅಲೆಯನ್ನು ಹಿಮ್ಮೆಟ್ಟಿಸುವ ಹೊತ್ತಿನಲ್ಲಿ ಈ ದೇಶವು ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳ ಬೇಕಿದೆ!

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...