Homeಅಂತರಾಷ್ಟ್ರೀಯಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ...

ಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ…

- Advertisement -
- Advertisement -

ನೀವು ಕರೆ ಮಾಡಿದ ತಕ್ಷಣ ಒಂದು ಕಾಲರ್‌ಟ್ಯೂನ್ ಕೇಳು ಬರುತ್ತದೆ. “ಭಾರತದಲ್ಲಿ ಒದಗಿಸಲಾಗುವ ಲಸಿಕೆಗಳು ವಿಶ್ವಾಸಾರ್ಹ. ಹಿಂಜರಿಕೆಯಿಲ್ಲದೆ ನೀವು ಲಸಿಕೆ ಹಾಕಿಸಿಕೊಳ್ಳಿ, ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕುವುದನ್ನು, ಸಾಮಾಜಿಕ ಅಂತರ ಕಾಪಾಡುವುದ್ನು ಮರೆಯಬೇಡಿ”… ಎಂದು ಅದರಲ್ಲಿ ಹೇಳಲಾಗುತ್ತದೆ.

ಆದರೆ, ಅಮೆರಿಕದಲ್ಲಿ ಈಗ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಕಡ್ಡಾಯ ಎಂಬ ನೀತಿಯನ್ನು ಸಡಿಲಿಸಗೊಳಿಸಲಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
“ಕೊರೊನಾ ವೈರಸ್ ವಿರುದ್ಧದ ನಮ್ಮ ಸುದೀರ್ಘ ಯುದ್ಧದಲ್ಲಿ ಇಂದು ಅಮೆರಿಕಕ್ಕೆ ಉತ್ತಮ ದಿನವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ತಿಳಿಸಿದ್ದಾರೆ. ಅವರು ಅಮೆರಿಕದ ಲಸಿಕಾ ಕಾರ್ಯಕ್ರಮವನ್ನು “ಐತಿಹಾಸಿಕ ವ್ಯವಸ್ಥಾಪನಾ ಸಾಧನೆ” ಎಂದು ಕರೆದರು.

ಅಧ್ಯಕ್ಷ ಜೋ ಬೈಡೆನ್ ಅವರು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯವನ್ನು ಘೋಷಿಸುವತ್ತ ಇನ್ನೂ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಂಪೂರ್ಣವಾಗಿ ಲಸಿಕೆ ಪಡೆದ ಅಮೆರಿಕನ್ನರು ಮಾಸ್ಕ್‌ಗಳನ್ನು ಹಾಕಲೇಬೇಕೆಂಬ ಒತ್ತಡವಿಲ್ಲ ಎಂದು ಅಮೆರಿಕ ಘೋಷಿಸಿದೆ.
ಆದರೆ ಇಲ್ಲಿ ಮೊಬೈಲ್ ಕರೆ ಮಾಡಿದರೆ, ‘ಲಸಿಕೆ ವಿಶ್ವಾಸಾರ್ಹ, ಹಾಕಿಸಿಕೊಳ್ಳಿ, ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕಿ’ ಎಂದು ಸರ್ಕಾರ ಸಂದೇಶ ನೀಡುತ್ತಿದೆ! ಅಂದರೆ ನಮ್ಮ ಲಸಿಕೆಗಳು ವಿಶ್ವಾಸಾರ್ಹ ಅಲ್ಲವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಅಮೆರಿಕ ತನ್ನ 35% ಜನಸಂಖ್ಯೆಗೆ ಪೂರ್ಣ ಲಸಿಕೆ ನೀಡಿಯಾಗಿದೆ. ಆದರೆ ಇಲ್ಲಿ ಶೇ.2.8 ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ಸಿಕ್ಕಿದೆ. ಇದು ಮೋದಿ ಸರ್ಕಾರದ ಲಸಿಕಾ ನೀತಿಯ ವೈಫಲ್ಯಕ್ಕೆ ಸಾಕ್ಷಿಯೇ?

ಅಮೆರಿಕದಲ್ಲಿ ಕೇಸ್‌ಲೋಡ್ ( ಒಟ್ಟು ಸೋಂಕಿತರ ಸಂಖ್ಯೆ) ಇಳಿಮುಖದ ಹಾದಿಯಲ್ಲಿದ್ದರೆ, ಇಲ್ಲಿ ಕೇಸ್‌ಲೋಡ್ ಹೆಚ್ಚುತ್ತಿದೆ ಮತ್ತು ದೈನಿಕ ಕೋವಿಡ್ ಸಾವುಗಳ ಪ್ರಮಾಣವೂ ಏರುತ್ತಿದೆ.
ಅಲ್ಲಿ ಅಮೆರಿಕದ ಮುಖ್ಯಸ್ಥ ಜನರ ಪರ ನಿಂತು ಪ್ರಕಟಣೆ ನೀಡುತ್ತಾರೆ, ಇಲ್ಲಿ ಮೋದಿ ಪ್ರೆಸ್ ಅವರನ್ನೇ ಭೇಟಿ ಆಗುವುದಿಲ್ಲ!

ಇದೆಲ್ಲ ಇರಲಿ, ಎರಡೂ ಲಸಿಕೆ ಪಡೆದವರೂ ಮಾಸ್ಕ್ ಹಾಕಬೇಕು ಎಂದು ಸರ್ಕಾರ ಹೇಳುತ್ತಿರುವುದೇಕೆ? ಈ ಲಸಿಕೆಗಳೇ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಟ್ಟಿಲ್ಲವೇ?
“ನಿಯಮವು ತುಂಬಾ ಸರಳವಾಗಿದೆ: ಲಸಿಕೆ ಪಡೆಯಿರಿ ಅಥವಾ ನೀವು ಪಡೆಯುವವರೆಗೂ ಮಾಸ್ಕ್ ಧರಿಸಿ” ಎಂದು ಬೈಡೆನ್ ಗುರುವಾರ ಹೇಳಿದರು.

“ಸಂಪೂರ್ಣವಾಗಿ ಲಸಿಕೆ ಪಡೆದ ಯಾರಾದರೂ ಮಾಸ್ಕ್ ಇಲ್ಲದೇ ಅಥವಾ ದೈಹಿಕ ದೂರವನ್ನು ಕಾಪಾಡಿಕೊಳ್ಳದೇ ದೊಡ್ಡ ಅಥವಾ ಸಣ್ಣ ಒಳಾಂಗಣ ಅಥವಾ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಸಿಡಿಸಿ ನಿರ್ದೇಶಕ ರೋಚೆಲ್ ವಾಲೆನ್ಸ್ಕಿ ಹೇಳಿದರು. ‘ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ, ಸಾಂಕ್ರಾಮಿಕ ರೋಗದಿಂದಾಗಿ ನೀವು ಈವರೆಗೆ ನಿಲ್ಲಿಸಿದ್ದ ಎಲ್ಲ ಕೆಲಸಗಳನ್ನೂ ಮಾಡಬಹುದು’ ಎಂದಿದ್ದಾರೆ.

ಇದರ ಜೊತೆಗೇ ಸರ್ಕಾರ ಕೆಲವು ಎಚ್ಚರಿಕೆಗಳನ್ನೂ ವಿಧಿಸಿದೆ. ಮಾಸ್ಕ್‌ಗಳ ಯುಗವು ಇನ್ನೂ ಮುಗಿದಿಲ್ಲ. ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ, ಎಲ್ಲಾ ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದೂ ಹೇಳಿದೆ.

ಅಧ್ಯಕ್ಷ ಬಿಡೆನ್ ಪ್ರಕಾರ, ಶೇ. 70ರಷ್ಟು ವಯಸ್ಕ ಅಮೆರಿಕನ್ನರಿಗೆ ಜುಲೈ 4 ರೊಳಗೆ ಕನಿಷ್ಠ ಒಂದು ಲಸಿಕೆ ಶಾಟ್ ಲಣಿಸಲಿದೆ. ಇದು ಮತ್ತೊಂದು ಸಾಂಕೇತಿಕ ಮೈಲಿಗಲ್ಲು. ವೈರಸ್ ತೊಡೆದುಹಾಕುವ ಮೂಲಕ ದೇಶವು ತನ್ನ ವಾರ್ಷಿಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಕೋವಿಡ್ ಅಲೆಯಲ್ಲಿ ತೀವ್ರವಾಗಿ ತತ್ತರಿಸಿದ್ದ ದೇಶಗಳು ಎಚ್ಚೆತ್ತುಕೊಂಡು ಎರಡನೇ ಅಲೆಯನ್ನು ಹಿಮ್ಮೆಟ್ಟಿಸುವ ಹೊತ್ತಿನಲ್ಲಿ ಈ ದೇಶವು ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳ ಬೇಕಿದೆ!

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...