Homeಅಂತರಾಷ್ಟ್ರೀಯಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ...

ಅಮೆರಿಕದಲ್ಲಿ ಪೂರ್ಣ ಲಸಿಕೆ ಪಡೆದವರಿಗೆ ಮಾಸ್ಕ್ ಅನಗತ್ಯ…

- Advertisement -
- Advertisement -

ನೀವು ಕರೆ ಮಾಡಿದ ತಕ್ಷಣ ಒಂದು ಕಾಲರ್‌ಟ್ಯೂನ್ ಕೇಳು ಬರುತ್ತದೆ. “ಭಾರತದಲ್ಲಿ ಒದಗಿಸಲಾಗುವ ಲಸಿಕೆಗಳು ವಿಶ್ವಾಸಾರ್ಹ. ಹಿಂಜರಿಕೆಯಿಲ್ಲದೆ ನೀವು ಲಸಿಕೆ ಹಾಕಿಸಿಕೊಳ್ಳಿ, ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕುವುದನ್ನು, ಸಾಮಾಜಿಕ ಅಂತರ ಕಾಪಾಡುವುದ್ನು ಮರೆಯಬೇಡಿ”… ಎಂದು ಅದರಲ್ಲಿ ಹೇಳಲಾಗುತ್ತದೆ.

ಆದರೆ, ಅಮೆರಿಕದಲ್ಲಿ ಈಗ ಲಸಿಕೆ ಹಾಕಿಸಿಕೊಂಡವರಿಗೆ ಮಾಸ್ಕ್ ಕಡ್ಡಾಯ ಎಂಬ ನೀತಿಯನ್ನು ಸಡಿಲಿಸಗೊಳಿಸಲಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
“ಕೊರೊನಾ ವೈರಸ್ ವಿರುದ್ಧದ ನಮ್ಮ ಸುದೀರ್ಘ ಯುದ್ಧದಲ್ಲಿ ಇಂದು ಅಮೆರಿಕಕ್ಕೆ ಉತ್ತಮ ದಿನವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ತಿಳಿಸಿದ್ದಾರೆ. ಅವರು ಅಮೆರಿಕದ ಲಸಿಕಾ ಕಾರ್ಯಕ್ರಮವನ್ನು “ಐತಿಹಾಸಿಕ ವ್ಯವಸ್ಥಾಪನಾ ಸಾಧನೆ” ಎಂದು ಕರೆದರು.

ಅಧ್ಯಕ್ಷ ಜೋ ಬೈಡೆನ್ ಅವರು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯವನ್ನು ಘೋಷಿಸುವತ್ತ ಇನ್ನೂ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಂಪೂರ್ಣವಾಗಿ ಲಸಿಕೆ ಪಡೆದ ಅಮೆರಿಕನ್ನರು ಮಾಸ್ಕ್‌ಗಳನ್ನು ಹಾಕಲೇಬೇಕೆಂಬ ಒತ್ತಡವಿಲ್ಲ ಎಂದು ಅಮೆರಿಕ ಘೋಷಿಸಿದೆ.
ಆದರೆ ಇಲ್ಲಿ ಮೊಬೈಲ್ ಕರೆ ಮಾಡಿದರೆ, ‘ಲಸಿಕೆ ವಿಶ್ವಾಸಾರ್ಹ, ಹಾಕಿಸಿಕೊಳ್ಳಿ, ಹಾಕಿಸಿಕೊಂಡ ನಂತರವೂ ಮಾಸ್ಕ್ ಹಾಕಿ’ ಎಂದು ಸರ್ಕಾರ ಸಂದೇಶ ನೀಡುತ್ತಿದೆ! ಅಂದರೆ ನಮ್ಮ ಲಸಿಕೆಗಳು ವಿಶ್ವಾಸಾರ್ಹ ಅಲ್ಲವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಅಮೆರಿಕ ತನ್ನ 35% ಜನಸಂಖ್ಯೆಗೆ ಪೂರ್ಣ ಲಸಿಕೆ ನೀಡಿಯಾಗಿದೆ. ಆದರೆ ಇಲ್ಲಿ ಶೇ.2.8 ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ಸಿಕ್ಕಿದೆ. ಇದು ಮೋದಿ ಸರ್ಕಾರದ ಲಸಿಕಾ ನೀತಿಯ ವೈಫಲ್ಯಕ್ಕೆ ಸಾಕ್ಷಿಯೇ?

ಅಮೆರಿಕದಲ್ಲಿ ಕೇಸ್‌ಲೋಡ್ ( ಒಟ್ಟು ಸೋಂಕಿತರ ಸಂಖ್ಯೆ) ಇಳಿಮುಖದ ಹಾದಿಯಲ್ಲಿದ್ದರೆ, ಇಲ್ಲಿ ಕೇಸ್‌ಲೋಡ್ ಹೆಚ್ಚುತ್ತಿದೆ ಮತ್ತು ದೈನಿಕ ಕೋವಿಡ್ ಸಾವುಗಳ ಪ್ರಮಾಣವೂ ಏರುತ್ತಿದೆ.
ಅಲ್ಲಿ ಅಮೆರಿಕದ ಮುಖ್ಯಸ್ಥ ಜನರ ಪರ ನಿಂತು ಪ್ರಕಟಣೆ ನೀಡುತ್ತಾರೆ, ಇಲ್ಲಿ ಮೋದಿ ಪ್ರೆಸ್ ಅವರನ್ನೇ ಭೇಟಿ ಆಗುವುದಿಲ್ಲ!

ಇದೆಲ್ಲ ಇರಲಿ, ಎರಡೂ ಲಸಿಕೆ ಪಡೆದವರೂ ಮಾಸ್ಕ್ ಹಾಕಬೇಕು ಎಂದು ಸರ್ಕಾರ ಹೇಳುತ್ತಿರುವುದೇಕೆ? ಈ ಲಸಿಕೆಗಳೇ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಟ್ಟಿಲ್ಲವೇ?
“ನಿಯಮವು ತುಂಬಾ ಸರಳವಾಗಿದೆ: ಲಸಿಕೆ ಪಡೆಯಿರಿ ಅಥವಾ ನೀವು ಪಡೆಯುವವರೆಗೂ ಮಾಸ್ಕ್ ಧರಿಸಿ” ಎಂದು ಬೈಡೆನ್ ಗುರುವಾರ ಹೇಳಿದರು.

“ಸಂಪೂರ್ಣವಾಗಿ ಲಸಿಕೆ ಪಡೆದ ಯಾರಾದರೂ ಮಾಸ್ಕ್ ಇಲ್ಲದೇ ಅಥವಾ ದೈಹಿಕ ದೂರವನ್ನು ಕಾಪಾಡಿಕೊಳ್ಳದೇ ದೊಡ್ಡ ಅಥವಾ ಸಣ್ಣ ಒಳಾಂಗಣ ಅಥವಾ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಸಿಡಿಸಿ ನಿರ್ದೇಶಕ ರೋಚೆಲ್ ವಾಲೆನ್ಸ್ಕಿ ಹೇಳಿದರು. ‘ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ, ಸಾಂಕ್ರಾಮಿಕ ರೋಗದಿಂದಾಗಿ ನೀವು ಈವರೆಗೆ ನಿಲ್ಲಿಸಿದ್ದ ಎಲ್ಲ ಕೆಲಸಗಳನ್ನೂ ಮಾಡಬಹುದು’ ಎಂದಿದ್ದಾರೆ.

ಇದರ ಜೊತೆಗೇ ಸರ್ಕಾರ ಕೆಲವು ಎಚ್ಚರಿಕೆಗಳನ್ನೂ ವಿಧಿಸಿದೆ. ಮಾಸ್ಕ್‌ಗಳ ಯುಗವು ಇನ್ನೂ ಮುಗಿದಿಲ್ಲ. ಸಂಪೂರ್ಣವಾಗಿ ಲಸಿಕೆ ಪಡೆದವರೂ ಕೂಡ, ಎಲ್ಲಾ ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದೂ ಹೇಳಿದೆ.

ಅಧ್ಯಕ್ಷ ಬಿಡೆನ್ ಪ್ರಕಾರ, ಶೇ. 70ರಷ್ಟು ವಯಸ್ಕ ಅಮೆರಿಕನ್ನರಿಗೆ ಜುಲೈ 4 ರೊಳಗೆ ಕನಿಷ್ಠ ಒಂದು ಲಸಿಕೆ ಶಾಟ್ ಲಣಿಸಲಿದೆ. ಇದು ಮತ್ತೊಂದು ಸಾಂಕೇತಿಕ ಮೈಲಿಗಲ್ಲು. ವೈರಸ್ ತೊಡೆದುಹಾಕುವ ಮೂಲಕ ದೇಶವು ತನ್ನ ವಾರ್ಷಿಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಕೋವಿಡ್ ಅಲೆಯಲ್ಲಿ ತೀವ್ರವಾಗಿ ತತ್ತರಿಸಿದ್ದ ದೇಶಗಳು ಎಚ್ಚೆತ್ತುಕೊಂಡು ಎರಡನೇ ಅಲೆಯನ್ನು ಹಿಮ್ಮೆಟ್ಟಿಸುವ ಹೊತ್ತಿನಲ್ಲಿ ಈ ದೇಶವು ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳ ಬೇಕಿದೆ!

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...