Homeಮುಖಪುಟ'ಸಸ್ಯಹಾರಿಗಳಿಗೆ ಮಾತ್ರ' - ಬಾಂಬೆ ಐಐಟಿಯಲ್ಲಿ ವಿವಾದ ಎಬ್ಬಿಸಿದ ಪೋಸ್ಟರ್

‘ಸಸ್ಯಹಾರಿಗಳಿಗೆ ಮಾತ್ರ’ – ಬಾಂಬೆ ಐಐಟಿಯಲ್ಲಿ ವಿವಾದ ಎಬ್ಬಿಸಿದ ಪೋಸ್ಟರ್

- Advertisement -
- Advertisement -

‘ಸಸ್ಯಹಾರಿಗಳಿಗೆ ಮಾತ್ರ’ ಎಂದು ಬರೆದಿರುವ ಪೋಸ್ಟರ್‌ಗಳು ಐಐಟಿ ಬಾಂಬೆ ಕಾಲೇಜಿನ ಹಾಸ್ಟಲ್ ಮೆಸ್ ಗೋಡೆಯಲ್ಲಿ ಪತ್ತೆಯಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ ಮುಂಬೈ ವಿದ್ಯಾರ್ಥಿಗಳು ಆಹಾರದ ವಿಚಾರದಲ್ಲಿ ತಾರತಮ್ಯ ಎಸಗುವಂತಹ ಪೋಸ್ಟರ್ ಅಂಟಿಸಿರುವುದರ ವಿರುದ್ಧ ಧ್ವನಿ ಎತ್ತಿದ್ದಾರೆ. 12ನೇ ಹಾಸ್ಟೇಲ್‌ನ ಕ್ಯಾಂಟೀನ್ ಗೋಡೆಯ ಆ ಜಾಗದಲ್ಲಿ ಸಸ್ಯಹಾರಿಗಳು ಮಾತ್ರ ಆಹಾರ ಸೇವಿಸಬೇಕೆಂಬ ಮನಸ್ಥಿತಿಯ ವಿರುದ್ಧ ಕಿಡಿಕಾರಿದ್ದಾರೆ.

“ಪೋಸ್ಟರ್ ನಲ್ಲಿ ಸಸ್ಯಹಾರಿಗಳಿಗೆ ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶ” ಎಂದು ಬರೆಯಲಾಗಿದೆ. ಕಳೆದ ವಾರ ಈ ಪೋಸ್ಟರ್ ಹಾಕಲಾಗಿದೆ ಎನ್ನಲಾಗಿದ್ದು, ಅದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (APPSC) ಸಂಘಟನೆಯ ಮುಖಂಡರು ಘಟನೆಯನ್ನು ಖಂಡಿಸಿದ್ದು, ಆ ಪೋಸ್ಟರ್‌ಗಳನ್ನು ಹರಿದು ಹಾಕಿದ್ದಾರೆ. ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ದಾಖಲಿಸಿದ್ದಾರೆ.

ಹಾಸ್ಟೆಲ್ ನಲ್ಲಿ ಪತ್ತೆಯಾದ ಪೋಸ್ಟರ್ ಬಗ್ಗೆ ಪ್ರತಿಕ್ರಿಯಿಸಿದ ಕಾಲೇಜಿನ ಆಡಳಿತ ಮಂಡಳಿಯು, “ಪೋಸ್ಟರ್ ಯಾರು ಅಂಟಿಸಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ. ನಮ್ಮಲ್ಲಿ ಆಹಾರ ಸೇವನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕವಾದ ಆಸನಗಳನ್ನು ಮೀಸಲಾಗಿಡಲಾಗಿಲ್ಲ. ಯಾರು ಎಲ್ಲಿ ಬೇಕಾದರೂ ಆಹಾರ ಸೇವಿಸಬಹುದು” ಎಂದು ಪ್ರತಿಕ್ರಿಯಿಸಿದೆ.

ಈ ಕುರಿತು ಹಾಸ್ಟೆಲ್ ನ ಜನರಲ್ ಸೆಕ್ರೆಟರಿ ಎಲ್ಲಾ ವಿದ್ಯಾರ್ಥಿಗಳು ಇ-ಮೇಲ್ ಪತ್ರ ಬರೆದಿದ್ದು, “ಹಾಸ್ಟೆಲ್ ನಲ್ಲಿ ಪ್ರತೇಕವಾದ (ಜೈನ್ ಫುಡ್) ಆಹಾರ ಹಂಚಿಕೆಯ ಕ್ಯಾಬಿನ್ ಇದೆ. ಆದರೆ ಇಂತದ್ದೇ ಪ್ರದೇಶದಲ್ಲಿ ಇದೇ ರೀತಿಯ ಆಹಾರ ಸೇವನೆ ಮಾಡಬೇಕು, ಅಥವಾ ಮಾಡಬಾರದು ಎಂದು ನಿಯಮ ಇಲ್ಲ. ಆದರೆ ನಿಯಮವನ್ನು ಮೀರಿ ಕೆಲವರು ಜೈನ್ ಫುಡ್ ವಿಭಾಗದಲ್ಲಿ ಮಾಂಸಾಹಾರಿಗಳು ಊಟ ಮಾಡಬಾರದು ಎಂದು ನಿಬಂಧನೆ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಇಂತಹ ವರ್ತನೆ ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ವಿದ್ಯಾರ್ಥಿಯನ್ನು ಮೆಸ್ ನ ಯಾವುದೇ ಭಾಗದಿಂದ ಎದ್ದೇಳಿಸುವ ಅಧಿಕಾರ ಇಲ್ಲ. ಸಮುದಾಯಗಳ ಆಧಾರದಲ್ಲಿ ಊಟದ ಸ್ಥಳ ನಿಗಧಿ ಮಾಡಲು ಸಾಧ್ಯವಿಲ್ಲ. ಇಂತಹ ಘಟನೆ ಮರುಕಳಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ: ಸಂಘಪರಿವಾರದ ಮೂವರು ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...