Homeಚಳವಳಿಪಂಜಾಬ್: ಶಿರೋಮಣಿ ಅಕಾಲಿದಳದ ಕಾರ್ಯಕ್ರಮಕ್ಕೆ ತಡೆ, ರೈತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಬಳಕೆ

ಪಂಜಾಬ್: ಶಿರೋಮಣಿ ಅಕಾಲಿದಳದ ಕಾರ್ಯಕ್ರಮಕ್ಕೆ ತಡೆ, ರೈತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಬಳಕೆ

- Advertisement -
- Advertisement -

ಪಂಜಾಬ್‌ನ ಮೊಗಾದಲ್ಲಿ ಶಿರೋಮಣಿ ಅಕಾಲಿದಳದ ಕಾರ್ಯಕ್ರಮವೊಂದಕ್ಕೆ ತಡೆಯೊಡ್ಡಲು ಬಲವಂತವಾಗಿ ಸಭೆಗೆ ನುಗ್ಗಲು ಯತ್ನಿಸಿದ ಆರೋಪದಲ್ಲಿ ರೈತರ ಮೇಲೆ ಪೊಲೀಸರು ಜಲಫಿರಂಗಿಯನ್ನು ಬಳಸಿದ್ದಾರೆ. ಜೊತೆಗೆ ಲಾಠಿಚಾರ್ಜ್ ಕೂಡ ಮಾಡಲಾಗಿದೆ.

ಮೊಗಾದಲ್ಲಿ ಗುರುವಾರ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಎಸ್‌ಎಡಿ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಇತ್ತೀಚೆಗೆ ಪಂಜಾಬ್‌ನ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ 100 ದಿನಗಳ “ಯಾತ್ರೆಯನ್ನು” ಆರಂಭಿಸಿದ್ದಾರೆ.

ಮೊಗಾದ ಧಾನ್ಯ ಮಾರುಕಟ್ಟೆಯಲ್ಲಿನ ಎಸ್‌ಎಡಿ ಕಾರ್ಯಕ್ರಮದ ಸ್ಥಳದೊಳಗೆ ಬಲವಂತವಾಗಿ ನುಗ್ಗಲು ಯತ್ನಿಸಿದ ಕೆಲವು ರೈತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ನಾವು ಅವರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದೆವು. ಆದರೆ ಕೆಲವು ಪ್ರತಿಭಟನಾಕಾರರು ಕಲ್ಲು ತೂರಾಟಕ್ಕೆ ಮುಂದಾದರು ಹಾಗಾಗಿ ಅವರನ್ನು ಚದುರಿಸಲು ಪೊಲೀಸರು ಮತ್ತು ನೀರಿನ ಫಿರಂಗಿಗಳನ್ನು ಬಳಸಲಾಯಿತು ಎಂದು ಹೇಳಿದ್ದಾರೆ.

“ಅವರು ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದರು. ಕಲ್ಲುಗಳನ್ನು ಎಸೆದಾಗ, ಅವರನ್ನು ಚದುರಿಸಲು ನಾವು ಲಾಠಿ ಚಾರ್ಜ್ ಮಾಡಬೇಕಾಯಿತು. 600 ಪ್ರತಿಭಟನಾಕಾರರಲ್ಲಿ 35 ಜನರನ್ನು ಬಂಧಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಮೊಗಾದ ಪೊಲೀಸ್ ವರಿಷ್ಠಾಧಿಕಾರಿ ಧ್ರುಮಾನ್ ನಿಂಬಾಲೆ ಹೇಳಿದ್ದಾರೆ.

ಇತ್ತಿಚೆಗಷ್ಟೆ ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಮಾನವೀಯ ಲಾಠಿಚಾರ್ಜ್ ಮಾಡಿದ್ದರು. 10 ಕ್ಕೂ ಹೆಚ್ಚು ರೈತರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಒರ್ವ ರೈತ ಸಾವನ್ನಪ್ಪಿದ್ದಾರೆ. ರೈತರ ತಲೆ ಬುರುಡೆ ಹೊಡೆಯಿರಿ ಎಂದು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಹರಿಯಾಣ ಮತ್ತ ಪಂಜಾಬ್‌ಗಳಲ್ಲಿ ರಾಜಕಾರಣಿಗಳ ಕಾರ್ಯಕ್ರಮಗಳಿಗೆ ತಡೆಯೊಡ್ಡುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರಿಕೆಯಾಗುವವರೆಗೂ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...