Homeರಾಷ್ಟ್ರೀಯ‘ಬಲವಂತದ ಮತಾಂತರ ರಾಷ್ಟ್ರದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ!’: ಸುಪ್ರೀಂಕೋರ್ಟ್‌

‘ಬಲವಂತದ ಮತಾಂತರ ರಾಷ್ಟ್ರದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ!’: ಸುಪ್ರೀಂಕೋರ್ಟ್‌

- Advertisement -
- Advertisement -

ಬಲವಂತದ ಧಾರ್ಮಿಕ ಮತಾಂತರಗಳನ್ನು ‘ಬಹಳ ಗಂಭೀರ ಸಮಸ್ಯೆ’ ಎಂದು ಕರೆದ ಸುಪ್ರೀಂಕೋರ್ಟ್, ಒಕ್ಕೂಟ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿಗೊಳಿಸಿ, ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಳಿದೆ. ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಆರ್.ಶಾ ಮತ್ತು ಹಿಮಾ ಕೊಹ್ಲಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಅಶ್ವಿನಿ ಅವರು ತನ್ನ ಅರ್ಜಿಯಲ್ಲಿ, “ಬಲವಂತವಾಗಿ ಅಥವಾ ಕೆಲವು ರೀತಿಯ ಪ್ರಚೋದನೆಯಿಂದ ಮತಾಂತರ ನಡೆಸಲಾಗುತ್ತಿದ್ದು, ದೇಶದಲ್ಲಿ ಧಾರ್ಮಿಕ ಮತಾಂತರದಿಂದ ಮುಕ್ತವಾದ ಒಂದು ಜಿಲ್ಲೆ ಇಲ್ಲ” ಎಂದು ಪ್ರತಿಪಾದಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಉಡುಗೊರೆಗಳು ಮತ್ತು ಹಣದ ಬೆದರಿಸುವ, ಬೆದರಿಕೆ ಹಾಕುವ ಮೂಲಕ, ಮೋಸಗೊಳಿಸುವ ಮೂಲಕ ಮತ್ತು ಮಾಟಮಂತ್ರ, ಮೂಢನಂಬಿಕೆ, ಪವಾಡಗಳ ಮೂಲಕ ಮತಾಂತರಗಳನ್ನು ಮಾಡಲಾಗುತ್ತಿದೆ . ಈ ಆಚರಣೆಯನ್ನು ನಿಗ್ರಹಿಸಲು ಸರ್ಕಾರಗಳು ‘ಕಟ್ಟುನಿಟ್ಟಾದ ಕ್ರಮ’ಗಳನ್ನು ತೆಗೆದುಕೊಳ್ಳಬೇಕು” ಎಂದು ಅಶ್ವಿನಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಬಲವಂತದ ಮತಾಂತರದ ಬಲಿಪಶುಗಳಲ್ಲಿ ಹೆಚ್ಚಿನವರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯದ ಜನರಾಗಿದ್ದು, ಈ ರೀತಿಯ ಮತಾಂತರವು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳನ್ನು ಮಾತ್ರವಲ್ಲದೆ ಜಾತ್ಯತೀತತೆಯಂತಹ ಇತರ ಸಾಂವಿಧಾನಿಕ ತತ್ವಗಳನ್ನೂ ಕೂಡಾ ಉಲ್ಲಂಘನೆ ಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸುಪ್ರೀಂಕೋರ್ಟ್‌ ಒಕ್ಕೂಟ ಸರ್ಕಾರ, ಗೃಹ ಸಚಿವಾಲಯ ಮತ್ತು ಕಾನೂನು ಸಚಿವಾಲಯದಿಂದ ಪ್ರತಿಕ್ರಿಯೆಯನ್ನು ಕೇಳಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಸ್ತುತ ವಿಚಾರಣೆ ವೇಳೆ, ಧಾರ್ಮಿಕ ಸ್ವಾತಂತ್ರ್ಯ ಇರಬಹುದಾದರೂ, ಬಲವಂತದ ಮತಾಂತರದ ಸ್ವಾತಂತ್ರ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ನಿಟ್ಟಿನಲ್ಲಿ ಒಕ್ಕೂಟ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರನ್ನು ಕೇಳಿದೆ. “ನಿಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸಿ, ನೀವು ಯಾವ ಕ್ರಮವನ್ನು ತೆಗೆದುಕೊಳ್ಳಲು ಪ್ರಸ್ತಾಪಿಸುತ್ತೀರಿ. ಸಂವಿಧಾನದ ಅಡಿಯಲ್ಲಿ ಮತಾಂತರವು ಕಾನೂನುಬದ್ಧವಾಗಿದೆ, ಆದರೆ ಬಲವಂತದ ಮತಾಂತರವಲ್ಲ” ಎಂದು ಕೋರ್ಟ್‌ ಹೇಳಿದೆ ಎಂದು ‘ಲೈವ್ ಲಾ’ ವರದಿಯು ಉಲ್ಲೇಖಿಸಿದೆ.

ಇದನ್ನೂ ಓದಿ: ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಮಧ್ಯಪ್ರದೇಶ ಮತ್ತು ಒರಿಸ್ಸಾದಂತಹ ರಾಜ್ಯಗಳಲ್ಲಿ ಈ ವಿಷಯದ ಬಗ್ಗೆ ವಿವಿಧ ಕಾನೂನುಗಳಿವೆ. ಜೊತೆಗೆ ಈ ರಾಜ್ಯದ ಕಾನೂನುಗಳ ಸಿಂಧುತ್ವವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ ಎಂದು ಮೆಹ್ತಾ ನ್ಯಾಯಾಲಯಕ್ಕೆ ಹೇಳಿದ್ದಾರೆ. ಇದಲ್ಲದೆ, ಮೆಹ್ತಾ ಅವರು ಜನರು ಮತಾಂತರಗೊಂಡರೆ ಅಕ್ಕಿ ಮತ್ತು ಗೋಧಿಯಂತಹ ಸಹಾಯಗಳನ್ನು ನೀಡಿದ ನಿದರ್ಶನಗಳನ್ನು ಒದಗಿಸಿದ್ದಾರೆ.

ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಸೂಚಿಸಿದ ಪೀಠ

“ಆಪಾದಿತ ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದಂತೆ, ಅದು ನಿಜವೆಂದು ಕಂಡುಬಂದರೆ, ಇದು ಬಹಳ ಗಂಭೀರವಾದ ವಿಷಯವಾಗಿದೆ. ಇದು ಅಂತಿಮವಾಗಿ ರಾಷ್ಟ್ರದ ಭದ್ರತೆ ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ನಾಗರಿಕರ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರಬಹುದು” ಎಂದು ಸುಪ್ರಿಂಕೋರ್ಟ್ ಹೇಳಿದೆ.

“ಆದ್ದರಿಂದ, ಒಕ್ಕೂಟ ಸರ್ಕಾರವು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಬಲವಂತವಾಗಿ, ಆಮಿಷ ಅಥವಾ ಮೋಸದ ವಿಧಾನಗಳಿಂದ ಇಂತಹ ಬಲವಂತದ ಮತಾಂತರಗಳನ್ನು ನಿಗ್ರಹಿಸಲು ಒಕ್ಕೂಟ ಮತ್ತು ಇತರ ಸರ್ಕಾರ ಯಾವ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಪ್ರತಿವಾದವನ್ನು ಸಲ್ಲಿಸುವುದು ಉತ್ತಮ” ಎಂದು ಸುಪ್ರಿಂಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

ಅದರಂತೆ, ನ್ಯಾಯಾಲಯವು ನವೆಂಬರ್ 22 ರೊಳಗೆ ಒಕ್ಕೂಟ ಸರ್ಕಾರದ ಪ್ರತಿ-ಅಫಿಡವಿಟ್ ಅನ್ನು ಕೋರಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 28 ರಂದು ನಡೆಯಲಿದೆ.

ಬಿಜೆಪಿ ನಾಯಕ ಅಶ್ವಿನಿ ಅವರು ದೆಹಲಿ ಹೈಕೋರ್ಟ್‌ಗೆ ಕೂಡಾ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ವರ್ಷ ಜುಲೈನಲ್ಲಿ ಬಲವಂತದ ಮತಾಂತರಗಳನ್ನು ತಡೆಯಲು ಕಾನೂನನ್ನು ರಚಿಸುವಂತೆ ಒಕ್ಕೂಟ ಮತ್ತು ದೆಹಲಿ ಸರ್ಕಾರಗಳಿಗೆ ನಿರ್ದೇಶಿಸಲು ಹೈಕೋರ್ಟ್ ನಿರಾಕರಿಸಿತ್ತು. ಅಶ್ವಿನಿ ಅವರು ತಮ್ಮ ಅರ್ಜಿಯಲ್ಲಿ ಬಲವಂತದ ಮತಾಂತರದ ಯಾವುದೇ ನಿರ್ದಿಷ್ಟ ನಿದರ್ಶನಗಳನ್ನು ಒದಗಿಸಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಒಕ್ಕೂಟ ಮತ್ತು ರಾಜ್ಯ ಶಾಸಕಾಂಗವು ಅಂತಹ ಶಾಸನವನ್ನು ರಚಿಸಲು ಸ್ವತಂತ್ರವಾಗಿದೆ. ಅವರಿಗೆ ನ್ಯಾಯಾಲಯದ ಶಿಫಾರಸು ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...