Homeರಾಷ್ಟ್ರೀಯ‘ಬಲವಂತದ ಮತಾಂತರ ರಾಷ್ಟ್ರದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ!’: ಸುಪ್ರೀಂಕೋರ್ಟ್‌

‘ಬಲವಂತದ ಮತಾಂತರ ರಾಷ್ಟ್ರದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ!’: ಸುಪ್ರೀಂಕೋರ್ಟ್‌

- Advertisement -
- Advertisement -

ಬಲವಂತದ ಧಾರ್ಮಿಕ ಮತಾಂತರಗಳನ್ನು ‘ಬಹಳ ಗಂಭೀರ ಸಮಸ್ಯೆ’ ಎಂದು ಕರೆದ ಸುಪ್ರೀಂಕೋರ್ಟ್, ಒಕ್ಕೂಟ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿಗೊಳಿಸಿ, ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಳಿದೆ. ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಆರ್.ಶಾ ಮತ್ತು ಹಿಮಾ ಕೊಹ್ಲಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಅಶ್ವಿನಿ ಅವರು ತನ್ನ ಅರ್ಜಿಯಲ್ಲಿ, “ಬಲವಂತವಾಗಿ ಅಥವಾ ಕೆಲವು ರೀತಿಯ ಪ್ರಚೋದನೆಯಿಂದ ಮತಾಂತರ ನಡೆಸಲಾಗುತ್ತಿದ್ದು, ದೇಶದಲ್ಲಿ ಧಾರ್ಮಿಕ ಮತಾಂತರದಿಂದ ಮುಕ್ತವಾದ ಒಂದು ಜಿಲ್ಲೆ ಇಲ್ಲ” ಎಂದು ಪ್ರತಿಪಾದಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಉಡುಗೊರೆಗಳು ಮತ್ತು ಹಣದ ಬೆದರಿಸುವ, ಬೆದರಿಕೆ ಹಾಕುವ ಮೂಲಕ, ಮೋಸಗೊಳಿಸುವ ಮೂಲಕ ಮತ್ತು ಮಾಟಮಂತ್ರ, ಮೂಢನಂಬಿಕೆ, ಪವಾಡಗಳ ಮೂಲಕ ಮತಾಂತರಗಳನ್ನು ಮಾಡಲಾಗುತ್ತಿದೆ . ಈ ಆಚರಣೆಯನ್ನು ನಿಗ್ರಹಿಸಲು ಸರ್ಕಾರಗಳು ‘ಕಟ್ಟುನಿಟ್ಟಾದ ಕ್ರಮ’ಗಳನ್ನು ತೆಗೆದುಕೊಳ್ಳಬೇಕು” ಎಂದು ಅಶ್ವಿನಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಬಲವಂತದ ಮತಾಂತರದ ಬಲಿಪಶುಗಳಲ್ಲಿ ಹೆಚ್ಚಿನವರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯದ ಜನರಾಗಿದ್ದು, ಈ ರೀತಿಯ ಮತಾಂತರವು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳನ್ನು ಮಾತ್ರವಲ್ಲದೆ ಜಾತ್ಯತೀತತೆಯಂತಹ ಇತರ ಸಾಂವಿಧಾನಿಕ ತತ್ವಗಳನ್ನೂ ಕೂಡಾ ಉಲ್ಲಂಘನೆ ಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸುಪ್ರೀಂಕೋರ್ಟ್‌ ಒಕ್ಕೂಟ ಸರ್ಕಾರ, ಗೃಹ ಸಚಿವಾಲಯ ಮತ್ತು ಕಾನೂನು ಸಚಿವಾಲಯದಿಂದ ಪ್ರತಿಕ್ರಿಯೆಯನ್ನು ಕೇಳಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಸ್ತುತ ವಿಚಾರಣೆ ವೇಳೆ, ಧಾರ್ಮಿಕ ಸ್ವಾತಂತ್ರ್ಯ ಇರಬಹುದಾದರೂ, ಬಲವಂತದ ಮತಾಂತರದ ಸ್ವಾತಂತ್ರ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ನಿಟ್ಟಿನಲ್ಲಿ ಒಕ್ಕೂಟ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರನ್ನು ಕೇಳಿದೆ. “ನಿಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸಿ, ನೀವು ಯಾವ ಕ್ರಮವನ್ನು ತೆಗೆದುಕೊಳ್ಳಲು ಪ್ರಸ್ತಾಪಿಸುತ್ತೀರಿ. ಸಂವಿಧಾನದ ಅಡಿಯಲ್ಲಿ ಮತಾಂತರವು ಕಾನೂನುಬದ್ಧವಾಗಿದೆ, ಆದರೆ ಬಲವಂತದ ಮತಾಂತರವಲ್ಲ” ಎಂದು ಕೋರ್ಟ್‌ ಹೇಳಿದೆ ಎಂದು ‘ಲೈವ್ ಲಾ’ ವರದಿಯು ಉಲ್ಲೇಖಿಸಿದೆ.

ಇದನ್ನೂ ಓದಿ: ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಮಧ್ಯಪ್ರದೇಶ ಮತ್ತು ಒರಿಸ್ಸಾದಂತಹ ರಾಜ್ಯಗಳಲ್ಲಿ ಈ ವಿಷಯದ ಬಗ್ಗೆ ವಿವಿಧ ಕಾನೂನುಗಳಿವೆ. ಜೊತೆಗೆ ಈ ರಾಜ್ಯದ ಕಾನೂನುಗಳ ಸಿಂಧುತ್ವವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ ಎಂದು ಮೆಹ್ತಾ ನ್ಯಾಯಾಲಯಕ್ಕೆ ಹೇಳಿದ್ದಾರೆ. ಇದಲ್ಲದೆ, ಮೆಹ್ತಾ ಅವರು ಜನರು ಮತಾಂತರಗೊಂಡರೆ ಅಕ್ಕಿ ಮತ್ತು ಗೋಧಿಯಂತಹ ಸಹಾಯಗಳನ್ನು ನೀಡಿದ ನಿದರ್ಶನಗಳನ್ನು ಒದಗಿಸಿದ್ದಾರೆ.

ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಸೂಚಿಸಿದ ಪೀಠ

“ಆಪಾದಿತ ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದಂತೆ, ಅದು ನಿಜವೆಂದು ಕಂಡುಬಂದರೆ, ಇದು ಬಹಳ ಗಂಭೀರವಾದ ವಿಷಯವಾಗಿದೆ. ಇದು ಅಂತಿಮವಾಗಿ ರಾಷ್ಟ್ರದ ಭದ್ರತೆ ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ನಾಗರಿಕರ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರಬಹುದು” ಎಂದು ಸುಪ್ರಿಂಕೋರ್ಟ್ ಹೇಳಿದೆ.

“ಆದ್ದರಿಂದ, ಒಕ್ಕೂಟ ಸರ್ಕಾರವು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಬಲವಂತವಾಗಿ, ಆಮಿಷ ಅಥವಾ ಮೋಸದ ವಿಧಾನಗಳಿಂದ ಇಂತಹ ಬಲವಂತದ ಮತಾಂತರಗಳನ್ನು ನಿಗ್ರಹಿಸಲು ಒಕ್ಕೂಟ ಮತ್ತು ಇತರ ಸರ್ಕಾರ ಯಾವ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಪ್ರತಿವಾದವನ್ನು ಸಲ್ಲಿಸುವುದು ಉತ್ತಮ” ಎಂದು ಸುಪ್ರಿಂಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

ಅದರಂತೆ, ನ್ಯಾಯಾಲಯವು ನವೆಂಬರ್ 22 ರೊಳಗೆ ಒಕ್ಕೂಟ ಸರ್ಕಾರದ ಪ್ರತಿ-ಅಫಿಡವಿಟ್ ಅನ್ನು ಕೋರಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 28 ರಂದು ನಡೆಯಲಿದೆ.

ಬಿಜೆಪಿ ನಾಯಕ ಅಶ್ವಿನಿ ಅವರು ದೆಹಲಿ ಹೈಕೋರ್ಟ್‌ಗೆ ಕೂಡಾ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ವರ್ಷ ಜುಲೈನಲ್ಲಿ ಬಲವಂತದ ಮತಾಂತರಗಳನ್ನು ತಡೆಯಲು ಕಾನೂನನ್ನು ರಚಿಸುವಂತೆ ಒಕ್ಕೂಟ ಮತ್ತು ದೆಹಲಿ ಸರ್ಕಾರಗಳಿಗೆ ನಿರ್ದೇಶಿಸಲು ಹೈಕೋರ್ಟ್ ನಿರಾಕರಿಸಿತ್ತು. ಅಶ್ವಿನಿ ಅವರು ತಮ್ಮ ಅರ್ಜಿಯಲ್ಲಿ ಬಲವಂತದ ಮತಾಂತರದ ಯಾವುದೇ ನಿರ್ದಿಷ್ಟ ನಿದರ್ಶನಗಳನ್ನು ಒದಗಿಸಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಒಕ್ಕೂಟ ಮತ್ತು ರಾಜ್ಯ ಶಾಸಕಾಂಗವು ಅಂತಹ ಶಾಸನವನ್ನು ರಚಿಸಲು ಸ್ವತಂತ್ರವಾಗಿದೆ. ಅವರಿಗೆ ನ್ಯಾಯಾಲಯದ ಶಿಫಾರಸು ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...