Homeರಾಷ್ಟ್ರೀಯ‘ಬಲವಂತದ ಮತಾಂತರ ರಾಷ್ಟ್ರದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ!’: ಸುಪ್ರೀಂಕೋರ್ಟ್‌

‘ಬಲವಂತದ ಮತಾಂತರ ರಾಷ್ಟ್ರದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ!’: ಸುಪ್ರೀಂಕೋರ್ಟ್‌

- Advertisement -
- Advertisement -

ಬಲವಂತದ ಧಾರ್ಮಿಕ ಮತಾಂತರಗಳನ್ನು ‘ಬಹಳ ಗಂಭೀರ ಸಮಸ್ಯೆ’ ಎಂದು ಕರೆದ ಸುಪ್ರೀಂಕೋರ್ಟ್, ಒಕ್ಕೂಟ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿಗೊಳಿಸಿ, ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಳಿದೆ. ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಆರ್.ಶಾ ಮತ್ತು ಹಿಮಾ ಕೊಹ್ಲಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಅಶ್ವಿನಿ ಅವರು ತನ್ನ ಅರ್ಜಿಯಲ್ಲಿ, “ಬಲವಂತವಾಗಿ ಅಥವಾ ಕೆಲವು ರೀತಿಯ ಪ್ರಚೋದನೆಯಿಂದ ಮತಾಂತರ ನಡೆಸಲಾಗುತ್ತಿದ್ದು, ದೇಶದಲ್ಲಿ ಧಾರ್ಮಿಕ ಮತಾಂತರದಿಂದ ಮುಕ್ತವಾದ ಒಂದು ಜಿಲ್ಲೆ ಇಲ್ಲ” ಎಂದು ಪ್ರತಿಪಾದಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಉಡುಗೊರೆಗಳು ಮತ್ತು ಹಣದ ಬೆದರಿಸುವ, ಬೆದರಿಕೆ ಹಾಕುವ ಮೂಲಕ, ಮೋಸಗೊಳಿಸುವ ಮೂಲಕ ಮತ್ತು ಮಾಟಮಂತ್ರ, ಮೂಢನಂಬಿಕೆ, ಪವಾಡಗಳ ಮೂಲಕ ಮತಾಂತರಗಳನ್ನು ಮಾಡಲಾಗುತ್ತಿದೆ . ಈ ಆಚರಣೆಯನ್ನು ನಿಗ್ರಹಿಸಲು ಸರ್ಕಾರಗಳು ‘ಕಟ್ಟುನಿಟ್ಟಾದ ಕ್ರಮ’ಗಳನ್ನು ತೆಗೆದುಕೊಳ್ಳಬೇಕು” ಎಂದು ಅಶ್ವಿನಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಬಲವಂತದ ಮತಾಂತರದ ಬಲಿಪಶುಗಳಲ್ಲಿ ಹೆಚ್ಚಿನವರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯದ ಜನರಾಗಿದ್ದು, ಈ ರೀತಿಯ ಮತಾಂತರವು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳನ್ನು ಮಾತ್ರವಲ್ಲದೆ ಜಾತ್ಯತೀತತೆಯಂತಹ ಇತರ ಸಾಂವಿಧಾನಿಕ ತತ್ವಗಳನ್ನೂ ಕೂಡಾ ಉಲ್ಲಂಘನೆ ಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸುಪ್ರೀಂಕೋರ್ಟ್‌ ಒಕ್ಕೂಟ ಸರ್ಕಾರ, ಗೃಹ ಸಚಿವಾಲಯ ಮತ್ತು ಕಾನೂನು ಸಚಿವಾಲಯದಿಂದ ಪ್ರತಿಕ್ರಿಯೆಯನ್ನು ಕೇಳಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಸ್ತುತ ವಿಚಾರಣೆ ವೇಳೆ, ಧಾರ್ಮಿಕ ಸ್ವಾತಂತ್ರ್ಯ ಇರಬಹುದಾದರೂ, ಬಲವಂತದ ಮತಾಂತರದ ಸ್ವಾತಂತ್ರ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ನಿಟ್ಟಿನಲ್ಲಿ ಒಕ್ಕೂಟ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರನ್ನು ಕೇಳಿದೆ. “ನಿಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸಿ, ನೀವು ಯಾವ ಕ್ರಮವನ್ನು ತೆಗೆದುಕೊಳ್ಳಲು ಪ್ರಸ್ತಾಪಿಸುತ್ತೀರಿ. ಸಂವಿಧಾನದ ಅಡಿಯಲ್ಲಿ ಮತಾಂತರವು ಕಾನೂನುಬದ್ಧವಾಗಿದೆ, ಆದರೆ ಬಲವಂತದ ಮತಾಂತರವಲ್ಲ” ಎಂದು ಕೋರ್ಟ್‌ ಹೇಳಿದೆ ಎಂದು ‘ಲೈವ್ ಲಾ’ ವರದಿಯು ಉಲ್ಲೇಖಿಸಿದೆ.

ಇದನ್ನೂ ಓದಿ: ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಮಧ್ಯಪ್ರದೇಶ ಮತ್ತು ಒರಿಸ್ಸಾದಂತಹ ರಾಜ್ಯಗಳಲ್ಲಿ ಈ ವಿಷಯದ ಬಗ್ಗೆ ವಿವಿಧ ಕಾನೂನುಗಳಿವೆ. ಜೊತೆಗೆ ಈ ರಾಜ್ಯದ ಕಾನೂನುಗಳ ಸಿಂಧುತ್ವವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ ಎಂದು ಮೆಹ್ತಾ ನ್ಯಾಯಾಲಯಕ್ಕೆ ಹೇಳಿದ್ದಾರೆ. ಇದಲ್ಲದೆ, ಮೆಹ್ತಾ ಅವರು ಜನರು ಮತಾಂತರಗೊಂಡರೆ ಅಕ್ಕಿ ಮತ್ತು ಗೋಧಿಯಂತಹ ಸಹಾಯಗಳನ್ನು ನೀಡಿದ ನಿದರ್ಶನಗಳನ್ನು ಒದಗಿಸಿದ್ದಾರೆ.

ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಸೂಚಿಸಿದ ಪೀಠ

“ಆಪಾದಿತ ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದಂತೆ, ಅದು ನಿಜವೆಂದು ಕಂಡುಬಂದರೆ, ಇದು ಬಹಳ ಗಂಭೀರವಾದ ವಿಷಯವಾಗಿದೆ. ಇದು ಅಂತಿಮವಾಗಿ ರಾಷ್ಟ್ರದ ಭದ್ರತೆ ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ನಾಗರಿಕರ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರಬಹುದು” ಎಂದು ಸುಪ್ರಿಂಕೋರ್ಟ್ ಹೇಳಿದೆ.

“ಆದ್ದರಿಂದ, ಒಕ್ಕೂಟ ಸರ್ಕಾರವು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಬಲವಂತವಾಗಿ, ಆಮಿಷ ಅಥವಾ ಮೋಸದ ವಿಧಾನಗಳಿಂದ ಇಂತಹ ಬಲವಂತದ ಮತಾಂತರಗಳನ್ನು ನಿಗ್ರಹಿಸಲು ಒಕ್ಕೂಟ ಮತ್ತು ಇತರ ಸರ್ಕಾರ ಯಾವ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಪ್ರತಿವಾದವನ್ನು ಸಲ್ಲಿಸುವುದು ಉತ್ತಮ” ಎಂದು ಸುಪ್ರಿಂಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

ಅದರಂತೆ, ನ್ಯಾಯಾಲಯವು ನವೆಂಬರ್ 22 ರೊಳಗೆ ಒಕ್ಕೂಟ ಸರ್ಕಾರದ ಪ್ರತಿ-ಅಫಿಡವಿಟ್ ಅನ್ನು ಕೋರಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 28 ರಂದು ನಡೆಯಲಿದೆ.

ಬಿಜೆಪಿ ನಾಯಕ ಅಶ್ವಿನಿ ಅವರು ದೆಹಲಿ ಹೈಕೋರ್ಟ್‌ಗೆ ಕೂಡಾ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ವರ್ಷ ಜುಲೈನಲ್ಲಿ ಬಲವಂತದ ಮತಾಂತರಗಳನ್ನು ತಡೆಯಲು ಕಾನೂನನ್ನು ರಚಿಸುವಂತೆ ಒಕ್ಕೂಟ ಮತ್ತು ದೆಹಲಿ ಸರ್ಕಾರಗಳಿಗೆ ನಿರ್ದೇಶಿಸಲು ಹೈಕೋರ್ಟ್ ನಿರಾಕರಿಸಿತ್ತು. ಅಶ್ವಿನಿ ಅವರು ತಮ್ಮ ಅರ್ಜಿಯಲ್ಲಿ ಬಲವಂತದ ಮತಾಂತರದ ಯಾವುದೇ ನಿರ್ದಿಷ್ಟ ನಿದರ್ಶನಗಳನ್ನು ಒದಗಿಸಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಒಕ್ಕೂಟ ಮತ್ತು ರಾಜ್ಯ ಶಾಸಕಾಂಗವು ಅಂತಹ ಶಾಸನವನ್ನು ರಚಿಸಲು ಸ್ವತಂತ್ರವಾಗಿದೆ. ಅವರಿಗೆ ನ್ಯಾಯಾಲಯದ ಶಿಫಾರಸು ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...