Homeಕರ್ನಾಟಕಬಲವಂತವಾಗಿ ಭೂಸ್ವಾಧೀನ; ಬಿಡಿಎ ವಿರುದ್ಧ ಪೊರಕೆ ಹಿಡಿದು ಬೃಹತ್ ಪ್ರತಿಭಟನೆ

ಬಲವಂತವಾಗಿ ಭೂಸ್ವಾಧೀನ; ಬಿಡಿಎ ವಿರುದ್ಧ ಪೊರಕೆ ಹಿಡಿದು ಬೃಹತ್ ಪ್ರತಿಭಟನೆ

- Advertisement -
- Advertisement -

ಬೆಂಗಳೂರು: ಡಾ.ಶಿವರಾಮ ಕಾರಂತ ಬಡಾವಣೆ ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಇಂದು (ಫೆಬ್ರವರಿ 6) ಪೊರಕೆ ಚಳವಳಿ ನಡೆಯಿತು.

ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಸುತ್ತಮುತ್ತಲ 17 ಗ್ರಾಮಗಳ ರೈತರು, ದಲಿತರು, ಹಿಂದುಳಿದ ವರ್ಗಗಳ ಜನರಿಗೆ ಸೇರಿದ ಭೂಮಿ ಹಾಗೂ ಮನೆಗಳನ್ನು ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಮಗೊಂಡನಹಳ್ಳಿಯಿಂದ ಹಿಡಿದು ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಕಚೇರಿಯವರೆಗೆ ನೂರಾರು ಮಹಿಳೆಯರು ಕೈಯಲ್ಲಿ ಪೊರೆಕೆ ಹಿಡಿದು ನಡೆದು ಬಂದರು. ಸತತವಾಗಿ ನಡೆಯುತ್ತಿರುವ ಹೋರಾಟಕ್ಕೆ ಸ್ಪಂದಿಸದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಲಾಯಿತು.

ಕಳೆದ ಸಂಕ್ರಾಂತಿಯಂದು ಇದೇ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿತ್ತು. ಅಂದು 17 ಗ್ರಾಮಗಳ ಮಹಿಳೆಯರು ಪೂರ್ಣಕುಂಭ ಕಳಶಗಳೊಂದಿಗೆ ಆಗಮಿಸಿದ್ದರು. ಗೋವುಗಳನ್ನು ಅಲಂಕರಿಸಿಕೊಂಡು ರಾಮಗೊಂಡನಹಳ್ಳಿಯಿಂದ ಬಿಡಿಎ ಕಚೇರಿಯವರೆಗೆ ಗೋವುಗಳ ಬೃಹತ್‌ ಜಾಥಾ ನಡೆಸಲಾಗಿತ್ತು.

ಏನಿದು ವಿವಾದ?

17 ಗ್ರಾಮಗಳ ಸುಮಾರು 2,000ಕ್ಕೂ ಹೆಚ್ಚು ಕುಟುಂಬಗಳು ಇರುವ ತುಂಡು ಭೂಮಿಯನ್ನು ನಂಬಿಕೊಂಡು ಕೃಷಿ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಸಣ್ಣ ಪುಟ್ಟ ಮನೆಗಳನ್ನು ನಿರ್ಮಿಸಿಕೊಂಡು, ಹೈನುಗಾರಿಕೆ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಭೂ ಸ್ವಾಧೀನ ಹೆಸರಿನಲ್ಲಿ ನಮ್ಮನ್ನು ಒಕ್ಕಲೆಬ್ಬಿಸಿ ತಬ್ಬಲಿಗಳಾಗಿ ಮಾಡಬೇಡಿ, ಬೀದಿಪಾಲು ಮಾಡಬೇಡಿ ಎಂದು ಕಳೆದ 3 ವರ್ಷಗಳಿಂದಲೂ ಇಲ್ಲಿನ ನಿವಾಸಿಗಳು ಹೋರಾಟ ನಡೆಸುತ್ತಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ? ನಮ್ಮನ್ನು ನಮ್ಮ ಮೂಲಸ್ಥಳದಿಂದ ದಯವಿಟ್ಟು ಒಕ್ಕಲೆಬ್ಬಿಸಬೇಡಿ ಎಂದು ಜನರು ಬೇಡಿಕೊಂಡರೂ ಸರ್ಕಾರ ಅವರ ಗೋಳು ಕೇಳಲು ಸಿದ್ದವಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆ.ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಡಿಸೆಂಬರ್ 30, 2008ರಲ್ಲಿ ಹೊರಡಿಸಲಾಗಿದ್ದ ಪೂರ್ವಭಾವಿ ಅಧಿಸೂಚನೆಯ ಅವಧಿ ಮುಗಿದಿದ್ದರೂ ಅದನ್ನೇ ಮುಂದುಮಾಡಿ LAA 1894ರ ಅಡಿಯಲ್ಲಿ 3546 ಎಕರೆ ಮತ್ತು 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ.

ಆದರೆ ಭೂಮಿಯನ್ನು ಕಳೆದುಕೊಂಡವರಿಗೆ, ʼಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ- 2013ʼ (LARR 2013)ರ ಅನ್ವಯ ಪರಿಹಾರವನ್ನು ಒದಗಿಸಬೇಕು ಎಂದು ದಿನಾಂಕ 03.11.2022 ರಂದು ತನ್ನ ತೀರ್ಪಿತ್ತು ಸರ್ವೋಚ್ಛ ನ್ಯಾಯಾಲಯವು ಭೂಮಿಯನ್ನು ಕಳೆದುಕೊಳ್ಳುವವರ ಹಕ್ಕುಗಳನ್ನು ಎತ್ತಿಹಿಡಿದಿದೆ. ಆ ಪ್ರಕಾರ LARR 2013ಯು ಜಾರಿಗೆ ಬಂದ ನಂತರ  LAA 1894 ಅನ್ನು ಅನ್ವಯಿಸಲಾಗುವುದಿಲ್ಲ. ಆದರೂ ಹಳೆಯ ಕ್ರೂರ ಮತ್ತು ಶೋಷಣೆಯ ಪ್ರತೀಕವಾಗಿರುವ, ವಸಾಹತುಶಾಹಿ ಪಳೆಯುಳಿಕೆ ಭೂಸ್ವಾಧೀನ ಕಾಯಿದೆ- 1894ರಡಿಯಲ್ಲಿ ಭೂಮಿ ವಶಪಡಿಸಿಕೊಂಡು ನಮ್ಮನ್ನು ಬೀದಿಗೆ ತಳ್ಳಲಾಗುತ್ತಿದೆ ಎನ್ನುತ್ತಿದ್ದಾರೆ ಇಲ್ಲಿನ ನಿವಾಸಿಗಳು.

ಸದರಿ ಲೇಔಟ್‌ ನಿರ್ಮಾಣಕ್ಕೆ ತೀರ ಅಗತ್ಯವಿದಲ್ಲಿ ಮಾತ್ರವೇ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯು LARR 2013 ಕಾಯ್ದೆಯಡಿಯಲ್ಲಿ ಉಲ್ಲೇಖಿಸಲಾಗಿರುವ ಕಾರ್ಯವಿಧಾನಗಳನ್ನು ಅನುಸರಿಸಿಯೇ ಭೂಸ್ವಾಧೀನ ಪಡಿಸಿಕೊಳ್ಳಬೇಕೆಂಬ ಮನವಿಯನ್ನು ರಾಜ್ಯ ಸರ್ಕಾರದ ಬಳಿ ಸಲ್ಲಿಸುತ್ತಲೇ ಬಂದಿದ್ದೇವೆ. ಆಶ್ಚರ್ಯವೆಂಬಂತೆ ಹಾಗೂ ಗೊಂದಲಕಾರಿಯಾಗಿ BDAಯು ದಿನಾಂಕ 30.10.2018 ರಂದು LARR 2013ರ ನಿಬಂಧನೆಗಳಡಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೂ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ ಪೀಠವು ದಿನಾಂಕ 03.12.2020ರಂದು ನೀಡಿದ ಆದೇಶದ ಮೂಲಕ ಭೂಮಿಯ ಡಿನೋಟಿಫಿಕೇಶನ್‌ಗಾಗಿ ಅರ್ಜಿಗಳನ್ನು ಪರಿಗಣಿಸಲು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಯನ್ನು ಸ್ಥಾಪಿಸಿತು. ಮಾತ್ರವಲ್ಲ ವಸಾಹತುಶಾಹಿ ಕಾಲದ LAA 1894ರ ಪ್ರಕಾರವೇ ಪರಿಹಾರ ನೀಡಬೇಕೆಂದು ತೀರ್ಪಿತ್ತಿತು. ಸರ್ವೋಚ್ಛ ನ್ಯಾಯಾಲದ ಈ ಪೀಠವು ನಮ್ಮ ಮನವಿಯನ್ನು ಆಲಿಸದೆಯೇ ಇಂದಿಗೂ ವಿವಿಧ ಆದೇಶಗಳನ್ನು ನೀಡುತ್ತಲಿದೆ. ಯಾವ ಕಾರಣಕ್ಕೆ ಹೀಗೆ ಎಂದು ನಾವು ಅರಿಯಲು ಸಾಧ್ಯವಾಗುತ್ತಿಲ್ಲವಾದರೂ, ಇದರರ್ಥ LARR, 2013ರ ಅಡಿಯಲ್ಲಿ ನಾವು ಪರಿಹಾರವನ್ನು ಪಡೆದುಕೊಳ್ಳುವ ನಮ್ಮ ಕಾನೂನಾತ್ಮಕ ಹಕ್ಕನ್ನು ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಹಾನದಿ ಕೋಲ್‌ ಫೀಲ್ಡ್ಸ್‌ ಪ್ರಕರಣದಲ್ಲಿ ಅಂದಿನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ನೀಡಿದ ತೀರ್ಪೇ ದೇಶದ ಕಾನೂನು. ಇದರನ್ವಯ ಸದರಿ ಪ್ರಕರಣ ಸೇರಿದಂತೆ, ಭೂಸ್ವಾಧೀನ ಪ್ರಕರಣಗಳೆಲ್ಲವುಗಳಲ್ಲಿಯೂ ಭೂಮಿ ಕಳೆದುಕೊಳ್ಳುವವರ ಹಿತಾಸಕ್ತಿಗಳನ್ನೂ – ಹಕ್ಕುಗಳನ್ನೂ ರಕ್ಷಿಸಲಾಗಿದೆ ಎಂಬುದನ್ನು ಕರ್ನಾಟಕ ರಾಜ್ಯ ಸರ್ಕಾರವು ಖಚಿತಪಡಿಸಿಕೊಳ್ಳಬೇಕಿದೆ. ಹಾಗಾಗಿ  ಸದ್ಯ ಚಾಲ್ತಿಯಲ್ಲಿರುವ ಆದೇಶಗಳ ತುರ್ತು ಮರು-ಪರಿಶೀಲನೆಗೆ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಬೇಕೆಂದು ಕೂಡ ನಾವು ಒತ್ತಾಯಿಸುತ್ತೇವೆ ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...