Homeಕರ್ನಾಟಕದಾವಣಗೆರೆ: ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ; ಪ್ರಕರಣ ದಾಖಲು

ದಾವಣಗೆರೆ: ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ; ಪ್ರಕರಣ ದಾಖಲು

- Advertisement -
- Advertisement -

ಕಾನೂನುಗಳು ಮತ್ತು ನಿಬಂಧನೆಗಳು ಎಷ್ಟೇ ಜಾರಿಯಲ್ಲಿದ್ದರೂ, ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣ ಮತ್ತೆ ಮತ್ತೆ ವರದಿಯಾಗುತ್ತಿದೆ. ದಾವಣಗೆರೆ ಜಿಲ್ಲೆಯ ಕಲ್ಯಾಣ ಮಂಟಪದಲ್ಲಿ ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ ಮಾಡಿಸಿರುವ ಘಟನೆ ನಡೆದಿದ್ದು, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಆಕ್ಟ್‌ ಪ್ರಕಾರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದಾವಣಗೆರೆಯ ಶ್ರೀಮತಿ ರಾಜನಹಳ್ಳಿ ಜಾನಬಾಯಿ, ರಾಜನಹಳ್ಳಿ ಶ್ರೀನಿವಾಸಮೂರ್ತಿ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದೆ. ಕೂಲಿ ಕಾರ್ಮಿಕ ಸಿದ್ದೇಶ ಎಂಬಾತನನ್ನು ಕಲ್ಯಾಣ ಮಂಟಪದ ಒಳಚರಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿದೆ. ಅಧಿಕಾರಿಗಳು ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿದಾಗ ಒಳಚರಂಡಿ ಛೇಂಬರ್ ತೆರೆದಿರುವುದು ಕಂಡು ಬಂದಿದೆ. ಈ ಬಗ್ಗೆ ಕಲ್ಯಾಣ ಮಂಟಪದ ಸಿಬ್ಬಂದಿ ಮುಪ್ಪಯ್ಯರನ್ನು ವಿಚಾರಿಸಿದಾಗ ಕೂಲಿ ಕಾರ್ಮಿಕ ಸಿದ್ದೇಶ್‌ ಎಂಬಾತನಿಂದ ಒಳಚರಂಡಿ ಸ್ವಚ್ಛತೆ ಮಾಡಿಸಿರುವುದಾಗಿ ಹೇಳಿದ್ದಾರೆ.

ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್ ಪಿ.ಮಧುಸೂಧನ್ ಬಡಾವಣೆ ಠಾಣೆಯಲ್ಲಿ ಈ ಕುರಿತು ಪ್ರಕರಣವನ್ನು ದಾಖಲಿಸಿದ್ದು, ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಶ್ರೀಮತಿ ರಾಜನಹಳ್ಳಿ ಜಾನಬಾಯಿ, ರಾಜನಹಳ್ಳಿ ಶ್ರೀನಿವಾಸಮೂರ್ತಿ ಧರ್ಮಶಾಲಾ ಕಲ್ಯಾಣ ಮಂಟಪದ ಒಳಚರಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ್ದು ಪರಿಶೀಲನೆ ವೇಳೆ ಸಾಬೀತಾಗಿದೆ. ಆದ್ದರಿಂದ ಕಲ್ಯಾಣ ಮಂಟಪದ ಮಾಲಕರು, ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ  ದೂರಿನಲ್ಲಿ ಆಗ್ರಹಿಸಿದ್ದಾರೆ.

ಒಳಚರಂಡಿ ವ್ಯವಸ್ಥೆಯ ದುರವಸ್ಥೆ ಬಗ್ಗೆ ಪಾಲಿಕೆಯ ಗಮನಕ್ಕೆ ತರದೆ ಕಾರ್ಮಿಕನಿಂದ ಸ್ವಚ್ಛತೆ ಮಾಡಿಸಲಾಗಿದೆ. ಈ ಸಂಬಂಧ ಕಲ್ಯಾಣ ಮಂಟಪದ ಮಾಲಕರು, ಮೇಲ್ವಿಚಾರಕರು ಹಾಗೂ ಇತರರ ವಿರುದ್ಧ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013 ಕಾಯ್ದೆ ಹಾಗೂ ಸೆಕ್ಷನ್ 20ರ ಅಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್‌ನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ.  ಇದರಿಂದಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಪೌರಕಾರ್ಮಿಕರಿಂದ, ಕೂಲಿ ಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ  ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013ರ ಮ್ಯಾನುವಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

2013ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳ ಅನುಸರಣೆಗೆ ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ. 1993ರಿಂದ 2021ರ ಅವಧಿಯಲ್ಲಿ 971 ಜನರು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮಾಹಿತಿ ತಿಳಿಸುತ್ತದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...