Homeಕರ್ನಾಟಕದಾವಣಗೆರೆ: ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ; ಪ್ರಕರಣ ದಾಖಲು

ದಾವಣಗೆರೆ: ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ; ಪ್ರಕರಣ ದಾಖಲು

- Advertisement -
- Advertisement -

ಕಾನೂನುಗಳು ಮತ್ತು ನಿಬಂಧನೆಗಳು ಎಷ್ಟೇ ಜಾರಿಯಲ್ಲಿದ್ದರೂ, ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣ ಮತ್ತೆ ಮತ್ತೆ ವರದಿಯಾಗುತ್ತಿದೆ. ದಾವಣಗೆರೆ ಜಿಲ್ಲೆಯ ಕಲ್ಯಾಣ ಮಂಟಪದಲ್ಲಿ ಕೂಲಿ ಕಾರ್ಮಿಕನಿಂದ ಒಳಚರಂಡಿ ಸ್ವಚ್ಛತೆ ಮಾಡಿಸಿರುವ ಘಟನೆ ನಡೆದಿದ್ದು, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಆಕ್ಟ್‌ ಪ್ರಕಾರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದಾವಣಗೆರೆಯ ಶ್ರೀಮತಿ ರಾಜನಹಳ್ಳಿ ಜಾನಬಾಯಿ, ರಾಜನಹಳ್ಳಿ ಶ್ರೀನಿವಾಸಮೂರ್ತಿ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದೆ. ಕೂಲಿ ಕಾರ್ಮಿಕ ಸಿದ್ದೇಶ ಎಂಬಾತನನ್ನು ಕಲ್ಯಾಣ ಮಂಟಪದ ಒಳಚರಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿದೆ. ಅಧಿಕಾರಿಗಳು ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿದಾಗ ಒಳಚರಂಡಿ ಛೇಂಬರ್ ತೆರೆದಿರುವುದು ಕಂಡು ಬಂದಿದೆ. ಈ ಬಗ್ಗೆ ಕಲ್ಯಾಣ ಮಂಟಪದ ಸಿಬ್ಬಂದಿ ಮುಪ್ಪಯ್ಯರನ್ನು ವಿಚಾರಿಸಿದಾಗ ಕೂಲಿ ಕಾರ್ಮಿಕ ಸಿದ್ದೇಶ್‌ ಎಂಬಾತನಿಂದ ಒಳಚರಂಡಿ ಸ್ವಚ್ಛತೆ ಮಾಡಿಸಿರುವುದಾಗಿ ಹೇಳಿದ್ದಾರೆ.

ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್ ಪಿ.ಮಧುಸೂಧನ್ ಬಡಾವಣೆ ಠಾಣೆಯಲ್ಲಿ ಈ ಕುರಿತು ಪ್ರಕರಣವನ್ನು ದಾಖಲಿಸಿದ್ದು, ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಶ್ರೀಮತಿ ರಾಜನಹಳ್ಳಿ ಜಾನಬಾಯಿ, ರಾಜನಹಳ್ಳಿ ಶ್ರೀನಿವಾಸಮೂರ್ತಿ ಧರ್ಮಶಾಲಾ ಕಲ್ಯಾಣ ಮಂಟಪದ ಒಳಚರಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ್ದು ಪರಿಶೀಲನೆ ವೇಳೆ ಸಾಬೀತಾಗಿದೆ. ಆದ್ದರಿಂದ ಕಲ್ಯಾಣ ಮಂಟಪದ ಮಾಲಕರು, ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ  ದೂರಿನಲ್ಲಿ ಆಗ್ರಹಿಸಿದ್ದಾರೆ.

ಒಳಚರಂಡಿ ವ್ಯವಸ್ಥೆಯ ದುರವಸ್ಥೆ ಬಗ್ಗೆ ಪಾಲಿಕೆಯ ಗಮನಕ್ಕೆ ತರದೆ ಕಾರ್ಮಿಕನಿಂದ ಸ್ವಚ್ಛತೆ ಮಾಡಿಸಲಾಗಿದೆ. ಈ ಸಂಬಂಧ ಕಲ್ಯಾಣ ಮಂಟಪದ ಮಾಲಕರು, ಮೇಲ್ವಿಚಾರಕರು ಹಾಗೂ ಇತರರ ವಿರುದ್ಧ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013 ಕಾಯ್ದೆ ಹಾಗೂ ಸೆಕ್ಷನ್ 20ರ ಅಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್‌ನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ.  ಇದರಿಂದಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಪೌರಕಾರ್ಮಿಕರಿಂದ, ಕೂಲಿ ಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ  ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013ರ ಮ್ಯಾನುವಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

2013ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳ ಅನುಸರಣೆಗೆ ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ. 1993ರಿಂದ 2021ರ ಅವಧಿಯಲ್ಲಿ 971 ಜನರು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮಾಹಿತಿ ತಿಳಿಸುತ್ತದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...