Homeಮುಖಪುಟ‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

- Advertisement -
- Advertisement -

ಬಂಧನಕ್ಕೊಳಗಾಗಿ ಹತ್ತು ತಿಂಗಳ ನಂತರ ನೈಜೀರಿಯಾದಿಂದ ಬಿಡುಗಡೆಯಾಗಿರುವ ಕೇರಳದ ಮೂವರು ನಾವಿಕರು ತಾವು ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡಿದ್ದು, “ಸೆರೆಯಲ್ಲಿದ್ದಾಗ ಶೌಚಾಲಯದ ನೀರನ್ನು ಕುಡಿಯಲು ಒತ್ತಾಯಿಸಲಾಯಿತು” ಎಂದು ಹೇಳಿದ್ದಾರೆ.

ಹತ್ತು ತಿಂಗಳಿಂದ ಸೆರೆಯಲ್ಲಿದ್ದ ನಾವಿಕರು ಜೂನ್ 10ರಂದು ತಮ್ಮ ನಿವಾಸಗಳನ್ನು ತಲುಪಿಸಿದ್ದಾರೆ.

ಹಡಗಿನ ಮುಖ್ಯ ಅಧಿಕಾರಿಯಾಗಿದ್ದ ಕೊಚ್ಚಿಯ ಸಾನು ಜೋಸೆಫ್, ಆಯಿಲರ್ ಮಿಲ್ಟನ್ ಡಿ ಕೌತ್, ಕೊಲ್ಲಂನ ಹಡಗಿನ ಮೂರನೇ ಅಧಿಕಾರಿ ವಿ ವಿಜಿತ್ ಬಂಧನಕ್ಕೊಳಗಾದವರಲ್ಲಿ ಮೂವರು.

ಹಡಗು ತನ್ನ ಪ್ರಾದೇಶಿಕ ನೀರಿನ ಗಡಿಯನ್ನು ದಾಟಿದೆ ಎಂಬ ಆರೋಪದ ಮೇಲೆ ಹಡಗು ಮತ್ತು ಅದರ ಸಿಬ್ಬಂದಿಯನ್ನು ‘ಈಕ್ವಟೋರಿಯಲ್ ಗಿನಿಯಾ’ ದೇಶವು ಮೊದಲು ಬಂಧಿಸಿತು. ಮೂರು ತಿಂಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.

16 ಭಾರತೀಯರನ್ನು ಒಳಗೊಂಡ 26 ಸದಸ್ಯ ಸಿಬ್ಬಂದಿ ಇದರಲ್ಲಿದ್ದರು. ಆ ಪೈಕಿ ಮೂವರು ಕೇರಳೀಯರಿದ್ದರು. ಎಂಟು ಮಂದಿ ಶ್ರೀಲಂಕಾ ಮೂಲದವರಾಗಿದ್ದರು. ಆಗಸ್ಟ್ 2022ರಲ್ಲಿ ಈಕ್ವಟೋರಿಯಲ್ ಗಿನಿಯಾದಲ್ಲಿ ಮೊದಲು ಬಂಧಿಸಲಾಯಿತು. ನವೆಂಬರ್‌ನಲ್ಲಿ ನೈಜೀರಿಯಾ ದೇಶಕ್ಕೆ ಅವರನ್ನು ಒಪ್ಪಿಸಲಾಗಿತ್ತು.

ಇದನ್ನೂ ಓದಿರಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಶಿಪ್ಪಿಂಗ್ ಕಂಪನಿಯು ಈಕ್ವಟೋರಿಯಲ್ ಗಿನಿಯಾ ದೇಶಕ್ಕೆ ಭಾರಿ ಮೊತ್ತವನ್ನು ಪಾವತಿಸಿದೆ ಎಂಬ ವರದಿಗಳಿವೆ. ಆದರೆ ಆರಂಭದಲ್ಲಿ ಬಿಡುಗಡೆ ಮಾಡಲಾಗಿರಲಿಲ್ಲ. ಇದರ ನಡುವೆ ನೈಜೀರಿಯಾ ಸರ್ಕಾರವು ಹೊಸ ಆರೋಪವನ್ನು ಮಾಡಿತು. ಹಡಗಿನ ಸಿಬ್ಬಂದಿ ನೈಜೀರಿಯಾದ ತೈಲ ಟ್ಯಾಂಕರ್‌ಗಳಿಂದ ತೈಲವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ದೂರಿತು.

ನೈಜೀರಿಯಾದ ಪೊಲೀಸರು ಹಡಗು ಮತ್ತು ನಾವಿಕರನ್ನು ಕಸ್ಟಡಿಗೆ ತೆಗೆದುಕೊಂಡರು. ಮುಂದಿನ ಎಂಟು ತಿಂಗಳ ಕಾಲ ಅಗ್ನಿಪರೀಕ್ಷೆಯನ್ನು ನಾವಿಕರು ಎದುರಿಸಬೇಕಾಯಿತು. ಭಾರತ ಸರ್ಕಾರ ಮತ್ತು ಹಲವಾರು ಇತರ ಏಜೆನ್ಸಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ನಾವಿಕರನ್ನು ಬಿಡುಗಡೆಗೊಳಿಸಿದವು.

ನಾವಿಕರು ಸೆರೆಯಲ್ಲಿದ್ದಾಗ ಸಾಕಷ್ಟು ಸಂಕಷ್ಟ ಅನುಭವಿಸಿದರು. ಅನಾರೋಗ್ಯಕ್ಕೆ ಒಳಗಾದರು. ಮಲೇರಿಯಾ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ಭರವಸೆಯನ್ನೇ ಕಳೆದುಕೊಂಡಿದ್ದರು. “ನಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಮತ್ತೆ ನೋಡುವ ನಿರೀಕ್ಷೆಯೇ ಇರಲಿಲ್ಲ” ಎಂದು ನಾವಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...