Homeಮುಖಪುಟ‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

- Advertisement -
- Advertisement -

ಬಂಧನಕ್ಕೊಳಗಾಗಿ ಹತ್ತು ತಿಂಗಳ ನಂತರ ನೈಜೀರಿಯಾದಿಂದ ಬಿಡುಗಡೆಯಾಗಿರುವ ಕೇರಳದ ಮೂವರು ನಾವಿಕರು ತಾವು ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡಿದ್ದು, “ಸೆರೆಯಲ್ಲಿದ್ದಾಗ ಶೌಚಾಲಯದ ನೀರನ್ನು ಕುಡಿಯಲು ಒತ್ತಾಯಿಸಲಾಯಿತು” ಎಂದು ಹೇಳಿದ್ದಾರೆ.

ಹತ್ತು ತಿಂಗಳಿಂದ ಸೆರೆಯಲ್ಲಿದ್ದ ನಾವಿಕರು ಜೂನ್ 10ರಂದು ತಮ್ಮ ನಿವಾಸಗಳನ್ನು ತಲುಪಿಸಿದ್ದಾರೆ.

ಹಡಗಿನ ಮುಖ್ಯ ಅಧಿಕಾರಿಯಾಗಿದ್ದ ಕೊಚ್ಚಿಯ ಸಾನು ಜೋಸೆಫ್, ಆಯಿಲರ್ ಮಿಲ್ಟನ್ ಡಿ ಕೌತ್, ಕೊಲ್ಲಂನ ಹಡಗಿನ ಮೂರನೇ ಅಧಿಕಾರಿ ವಿ ವಿಜಿತ್ ಬಂಧನಕ್ಕೊಳಗಾದವರಲ್ಲಿ ಮೂವರು.

ಹಡಗು ತನ್ನ ಪ್ರಾದೇಶಿಕ ನೀರಿನ ಗಡಿಯನ್ನು ದಾಟಿದೆ ಎಂಬ ಆರೋಪದ ಮೇಲೆ ಹಡಗು ಮತ್ತು ಅದರ ಸಿಬ್ಬಂದಿಯನ್ನು ‘ಈಕ್ವಟೋರಿಯಲ್ ಗಿನಿಯಾ’ ದೇಶವು ಮೊದಲು ಬಂಧಿಸಿತು. ಮೂರು ತಿಂಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.

16 ಭಾರತೀಯರನ್ನು ಒಳಗೊಂಡ 26 ಸದಸ್ಯ ಸಿಬ್ಬಂದಿ ಇದರಲ್ಲಿದ್ದರು. ಆ ಪೈಕಿ ಮೂವರು ಕೇರಳೀಯರಿದ್ದರು. ಎಂಟು ಮಂದಿ ಶ್ರೀಲಂಕಾ ಮೂಲದವರಾಗಿದ್ದರು. ಆಗಸ್ಟ್ 2022ರಲ್ಲಿ ಈಕ್ವಟೋರಿಯಲ್ ಗಿನಿಯಾದಲ್ಲಿ ಮೊದಲು ಬಂಧಿಸಲಾಯಿತು. ನವೆಂಬರ್‌ನಲ್ಲಿ ನೈಜೀರಿಯಾ ದೇಶಕ್ಕೆ ಅವರನ್ನು ಒಪ್ಪಿಸಲಾಗಿತ್ತು.

ಇದನ್ನೂ ಓದಿರಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಶಿಪ್ಪಿಂಗ್ ಕಂಪನಿಯು ಈಕ್ವಟೋರಿಯಲ್ ಗಿನಿಯಾ ದೇಶಕ್ಕೆ ಭಾರಿ ಮೊತ್ತವನ್ನು ಪಾವತಿಸಿದೆ ಎಂಬ ವರದಿಗಳಿವೆ. ಆದರೆ ಆರಂಭದಲ್ಲಿ ಬಿಡುಗಡೆ ಮಾಡಲಾಗಿರಲಿಲ್ಲ. ಇದರ ನಡುವೆ ನೈಜೀರಿಯಾ ಸರ್ಕಾರವು ಹೊಸ ಆರೋಪವನ್ನು ಮಾಡಿತು. ಹಡಗಿನ ಸಿಬ್ಬಂದಿ ನೈಜೀರಿಯಾದ ತೈಲ ಟ್ಯಾಂಕರ್‌ಗಳಿಂದ ತೈಲವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ದೂರಿತು.

ನೈಜೀರಿಯಾದ ಪೊಲೀಸರು ಹಡಗು ಮತ್ತು ನಾವಿಕರನ್ನು ಕಸ್ಟಡಿಗೆ ತೆಗೆದುಕೊಂಡರು. ಮುಂದಿನ ಎಂಟು ತಿಂಗಳ ಕಾಲ ಅಗ್ನಿಪರೀಕ್ಷೆಯನ್ನು ನಾವಿಕರು ಎದುರಿಸಬೇಕಾಯಿತು. ಭಾರತ ಸರ್ಕಾರ ಮತ್ತು ಹಲವಾರು ಇತರ ಏಜೆನ್ಸಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ನಾವಿಕರನ್ನು ಬಿಡುಗಡೆಗೊಳಿಸಿದವು.

ನಾವಿಕರು ಸೆರೆಯಲ್ಲಿದ್ದಾಗ ಸಾಕಷ್ಟು ಸಂಕಷ್ಟ ಅನುಭವಿಸಿದರು. ಅನಾರೋಗ್ಯಕ್ಕೆ ಒಳಗಾದರು. ಮಲೇರಿಯಾ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ಭರವಸೆಯನ್ನೇ ಕಳೆದುಕೊಂಡಿದ್ದರು. “ನಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಮತ್ತೆ ನೋಡುವ ನಿರೀಕ್ಷೆಯೇ ಇರಲಿಲ್ಲ” ಎಂದು ನಾವಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...