Homeಮುಖಪುಟ‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

- Advertisement -
- Advertisement -

ಬಂಧನಕ್ಕೊಳಗಾಗಿ ಹತ್ತು ತಿಂಗಳ ನಂತರ ನೈಜೀರಿಯಾದಿಂದ ಬಿಡುಗಡೆಯಾಗಿರುವ ಕೇರಳದ ಮೂವರು ನಾವಿಕರು ತಾವು ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡಿದ್ದು, “ಸೆರೆಯಲ್ಲಿದ್ದಾಗ ಶೌಚಾಲಯದ ನೀರನ್ನು ಕುಡಿಯಲು ಒತ್ತಾಯಿಸಲಾಯಿತು” ಎಂದು ಹೇಳಿದ್ದಾರೆ.

ಹತ್ತು ತಿಂಗಳಿಂದ ಸೆರೆಯಲ್ಲಿದ್ದ ನಾವಿಕರು ಜೂನ್ 10ರಂದು ತಮ್ಮ ನಿವಾಸಗಳನ್ನು ತಲುಪಿಸಿದ್ದಾರೆ.

ಹಡಗಿನ ಮುಖ್ಯ ಅಧಿಕಾರಿಯಾಗಿದ್ದ ಕೊಚ್ಚಿಯ ಸಾನು ಜೋಸೆಫ್, ಆಯಿಲರ್ ಮಿಲ್ಟನ್ ಡಿ ಕೌತ್, ಕೊಲ್ಲಂನ ಹಡಗಿನ ಮೂರನೇ ಅಧಿಕಾರಿ ವಿ ವಿಜಿತ್ ಬಂಧನಕ್ಕೊಳಗಾದವರಲ್ಲಿ ಮೂವರು.

ಹಡಗು ತನ್ನ ಪ್ರಾದೇಶಿಕ ನೀರಿನ ಗಡಿಯನ್ನು ದಾಟಿದೆ ಎಂಬ ಆರೋಪದ ಮೇಲೆ ಹಡಗು ಮತ್ತು ಅದರ ಸಿಬ್ಬಂದಿಯನ್ನು ‘ಈಕ್ವಟೋರಿಯಲ್ ಗಿನಿಯಾ’ ದೇಶವು ಮೊದಲು ಬಂಧಿಸಿತು. ಮೂರು ತಿಂಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.

16 ಭಾರತೀಯರನ್ನು ಒಳಗೊಂಡ 26 ಸದಸ್ಯ ಸಿಬ್ಬಂದಿ ಇದರಲ್ಲಿದ್ದರು. ಆ ಪೈಕಿ ಮೂವರು ಕೇರಳೀಯರಿದ್ದರು. ಎಂಟು ಮಂದಿ ಶ್ರೀಲಂಕಾ ಮೂಲದವರಾಗಿದ್ದರು. ಆಗಸ್ಟ್ 2022ರಲ್ಲಿ ಈಕ್ವಟೋರಿಯಲ್ ಗಿನಿಯಾದಲ್ಲಿ ಮೊದಲು ಬಂಧಿಸಲಾಯಿತು. ನವೆಂಬರ್‌ನಲ್ಲಿ ನೈಜೀರಿಯಾ ದೇಶಕ್ಕೆ ಅವರನ್ನು ಒಪ್ಪಿಸಲಾಗಿತ್ತು.

ಇದನ್ನೂ ಓದಿರಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಶಿಪ್ಪಿಂಗ್ ಕಂಪನಿಯು ಈಕ್ವಟೋರಿಯಲ್ ಗಿನಿಯಾ ದೇಶಕ್ಕೆ ಭಾರಿ ಮೊತ್ತವನ್ನು ಪಾವತಿಸಿದೆ ಎಂಬ ವರದಿಗಳಿವೆ. ಆದರೆ ಆರಂಭದಲ್ಲಿ ಬಿಡುಗಡೆ ಮಾಡಲಾಗಿರಲಿಲ್ಲ. ಇದರ ನಡುವೆ ನೈಜೀರಿಯಾ ಸರ್ಕಾರವು ಹೊಸ ಆರೋಪವನ್ನು ಮಾಡಿತು. ಹಡಗಿನ ಸಿಬ್ಬಂದಿ ನೈಜೀರಿಯಾದ ತೈಲ ಟ್ಯಾಂಕರ್‌ಗಳಿಂದ ತೈಲವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ದೂರಿತು.

ನೈಜೀರಿಯಾದ ಪೊಲೀಸರು ಹಡಗು ಮತ್ತು ನಾವಿಕರನ್ನು ಕಸ್ಟಡಿಗೆ ತೆಗೆದುಕೊಂಡರು. ಮುಂದಿನ ಎಂಟು ತಿಂಗಳ ಕಾಲ ಅಗ್ನಿಪರೀಕ್ಷೆಯನ್ನು ನಾವಿಕರು ಎದುರಿಸಬೇಕಾಯಿತು. ಭಾರತ ಸರ್ಕಾರ ಮತ್ತು ಹಲವಾರು ಇತರ ಏಜೆನ್ಸಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ನಾವಿಕರನ್ನು ಬಿಡುಗಡೆಗೊಳಿಸಿದವು.

ನಾವಿಕರು ಸೆರೆಯಲ್ಲಿದ್ದಾಗ ಸಾಕಷ್ಟು ಸಂಕಷ್ಟ ಅನುಭವಿಸಿದರು. ಅನಾರೋಗ್ಯಕ್ಕೆ ಒಳಗಾದರು. ಮಲೇರಿಯಾ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ಭರವಸೆಯನ್ನೇ ಕಳೆದುಕೊಂಡಿದ್ದರು. “ನಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಮತ್ತೆ ನೋಡುವ ನಿರೀಕ್ಷೆಯೇ ಇರಲಿಲ್ಲ” ಎಂದು ನಾವಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...