Homeಮುಖಪುಟ‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

- Advertisement -
- Advertisement -

ಬಂಧನಕ್ಕೊಳಗಾಗಿ ಹತ್ತು ತಿಂಗಳ ನಂತರ ನೈಜೀರಿಯಾದಿಂದ ಬಿಡುಗಡೆಯಾಗಿರುವ ಕೇರಳದ ಮೂವರು ನಾವಿಕರು ತಾವು ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡಿದ್ದು, “ಸೆರೆಯಲ್ಲಿದ್ದಾಗ ಶೌಚಾಲಯದ ನೀರನ್ನು ಕುಡಿಯಲು ಒತ್ತಾಯಿಸಲಾಯಿತು” ಎಂದು ಹೇಳಿದ್ದಾರೆ.

ಹತ್ತು ತಿಂಗಳಿಂದ ಸೆರೆಯಲ್ಲಿದ್ದ ನಾವಿಕರು ಜೂನ್ 10ರಂದು ತಮ್ಮ ನಿವಾಸಗಳನ್ನು ತಲುಪಿಸಿದ್ದಾರೆ.

ಹಡಗಿನ ಮುಖ್ಯ ಅಧಿಕಾರಿಯಾಗಿದ್ದ ಕೊಚ್ಚಿಯ ಸಾನು ಜೋಸೆಫ್, ಆಯಿಲರ್ ಮಿಲ್ಟನ್ ಡಿ ಕೌತ್, ಕೊಲ್ಲಂನ ಹಡಗಿನ ಮೂರನೇ ಅಧಿಕಾರಿ ವಿ ವಿಜಿತ್ ಬಂಧನಕ್ಕೊಳಗಾದವರಲ್ಲಿ ಮೂವರು.

ಹಡಗು ತನ್ನ ಪ್ರಾದೇಶಿಕ ನೀರಿನ ಗಡಿಯನ್ನು ದಾಟಿದೆ ಎಂಬ ಆರೋಪದ ಮೇಲೆ ಹಡಗು ಮತ್ತು ಅದರ ಸಿಬ್ಬಂದಿಯನ್ನು ‘ಈಕ್ವಟೋರಿಯಲ್ ಗಿನಿಯಾ’ ದೇಶವು ಮೊದಲು ಬಂಧಿಸಿತು. ಮೂರು ತಿಂಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.

16 ಭಾರತೀಯರನ್ನು ಒಳಗೊಂಡ 26 ಸದಸ್ಯ ಸಿಬ್ಬಂದಿ ಇದರಲ್ಲಿದ್ದರು. ಆ ಪೈಕಿ ಮೂವರು ಕೇರಳೀಯರಿದ್ದರು. ಎಂಟು ಮಂದಿ ಶ್ರೀಲಂಕಾ ಮೂಲದವರಾಗಿದ್ದರು. ಆಗಸ್ಟ್ 2022ರಲ್ಲಿ ಈಕ್ವಟೋರಿಯಲ್ ಗಿನಿಯಾದಲ್ಲಿ ಮೊದಲು ಬಂಧಿಸಲಾಯಿತು. ನವೆಂಬರ್‌ನಲ್ಲಿ ನೈಜೀರಿಯಾ ದೇಶಕ್ಕೆ ಅವರನ್ನು ಒಪ್ಪಿಸಲಾಗಿತ್ತು.

ಇದನ್ನೂ ಓದಿರಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಶಿಪ್ಪಿಂಗ್ ಕಂಪನಿಯು ಈಕ್ವಟೋರಿಯಲ್ ಗಿನಿಯಾ ದೇಶಕ್ಕೆ ಭಾರಿ ಮೊತ್ತವನ್ನು ಪಾವತಿಸಿದೆ ಎಂಬ ವರದಿಗಳಿವೆ. ಆದರೆ ಆರಂಭದಲ್ಲಿ ಬಿಡುಗಡೆ ಮಾಡಲಾಗಿರಲಿಲ್ಲ. ಇದರ ನಡುವೆ ನೈಜೀರಿಯಾ ಸರ್ಕಾರವು ಹೊಸ ಆರೋಪವನ್ನು ಮಾಡಿತು. ಹಡಗಿನ ಸಿಬ್ಬಂದಿ ನೈಜೀರಿಯಾದ ತೈಲ ಟ್ಯಾಂಕರ್‌ಗಳಿಂದ ತೈಲವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ದೂರಿತು.

ನೈಜೀರಿಯಾದ ಪೊಲೀಸರು ಹಡಗು ಮತ್ತು ನಾವಿಕರನ್ನು ಕಸ್ಟಡಿಗೆ ತೆಗೆದುಕೊಂಡರು. ಮುಂದಿನ ಎಂಟು ತಿಂಗಳ ಕಾಲ ಅಗ್ನಿಪರೀಕ್ಷೆಯನ್ನು ನಾವಿಕರು ಎದುರಿಸಬೇಕಾಯಿತು. ಭಾರತ ಸರ್ಕಾರ ಮತ್ತು ಹಲವಾರು ಇತರ ಏಜೆನ್ಸಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ನಾವಿಕರನ್ನು ಬಿಡುಗಡೆಗೊಳಿಸಿದವು.

ನಾವಿಕರು ಸೆರೆಯಲ್ಲಿದ್ದಾಗ ಸಾಕಷ್ಟು ಸಂಕಷ್ಟ ಅನುಭವಿಸಿದರು. ಅನಾರೋಗ್ಯಕ್ಕೆ ಒಳಗಾದರು. ಮಲೇರಿಯಾ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ಭರವಸೆಯನ್ನೇ ಕಳೆದುಕೊಂಡಿದ್ದರು. “ನಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಮತ್ತೆ ನೋಡುವ ನಿರೀಕ್ಷೆಯೇ ಇರಲಿಲ್ಲ” ಎಂದು ನಾವಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...