Homeಮುಖಪುಟ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯವು 2017 ರಿಂದ ತನ್ನ ಪಠ್ಯಕ್ರಮದ ಭಾಗವಾಗಿದ್ದ ಅರುಂಧತಿ ರಾಯ್ ಬರೆದಿರುವ ಈ ಕೃತಿಯನ್ನು ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಾಪಸು ಪಡೆದಿತ್ತು.

- Advertisement -
- Advertisement -

ಡಿಎಂಕೆ ಒಳಗೊಂಡಂತೆ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಹಾಗೂ ಸಾಮಾಜಿಕ ಸಂಘಟನೆಗಳು, ಶೈಕ್ಷಣಿಕ ಹಕ್ಕುಗಳ ಸಂರಕ್ಷಣಾ ಸಮನ್ವಯ ಸಮಿತಿಯ (CCPER) ಅಡಿಯಲ್ಲಿ ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯದ ಎಂಎ ಇಂಗ್ಲಿಷ್ ಪಠ್ಯಕ್ರಮದಲ್ಲಿ ಲೇಖಕಿ ಅರುಂಧತಿ ರಾಯ್ ಅವರ “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಕೃತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದೆ.

2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿದ್ದ ಈ ಪುಸ್ತಕವನ್ನು ವಾಪಾಸು ಪಠ್ಯಕ್ರಮಕ್ಕೆ ಸೇರಿಸುವ ನಿಟ್ಟಿನಲ್ಲಿ ಅವರು ಮಂಗಳವಾರ ಉಪಕುಲಪತಿ ಡಾ. ಕೆ.ಪಿಚ್ಚುಮಣಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ.

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಲೇಖಕಿ ಅರುಂದತಿ ರಾಯ್ ಮಾವೋವಾದಿ ಶಿಬಿರಗಳಿಗೆ ನೀಡಿದ್ದ ಭೇಟಿ ಆಧರಿಸಿದ ಪುಸ್ತಕವನ್ನು ವಾಪಸು ಪಡೆದಿತ್ತು. ಅದರ ಬದಲು ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ ಎಂದು ವಿವಿ ಹೇಳಿತ್ತು.

ಇದನ್ನೂ ಓದಿ: ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

CCPER ಸದಸ್ಯರಿಂದ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಡಾ. ಕೆ.ಪಿಚ್ಚುಮಣಿ, “ಈ ಹಿಂದೆ ವಿಶ್ವವಿದ್ಯಾನಿಲಯದೊಂದಿಗೆ ಸಂಬಂಧ ಹೊಂದಿದ್ದ ಶಿಕ್ಷಣ ತಜ್ಞರು ಮೂರು ವರ್ಷಗಳ ಹಿಂದೆಯೆ ಎಂಎ ಇಂಗ್ಲಿಷ್‌ಗಾಗಿ ಪಠ್ಯಕ್ರಮದಲ್ಲಿ ಪುಸ್ತಕವನ್ನು ಸೇರಿಸುವುದನ್ನು ಎಚ್ಚರಿಸಿದ್ದಾರೆ. ಇತ್ತೀಚೆಗೆ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆಗಳಾಗಿದೆ” ಎಂದು ಹೇಳಿದ್ದಾರೆ.

ಇದರ ನಂತರ, ಎಬಿವಿಪಿ ತನ್ನ ಮನವಿ ಸಲ್ಲಿಸಿ ಪಠ್ಯಕ್ರಮದಿಂದ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ. ಈ ಸಮಸ್ಯೆಯ ಬಗ್ಗೆ ಪರೀಕ್ಷಿಸಲು ರಚಿಸಲಾದ ಸಮಿತಿಯು ಪುಸ್ತಕದ ವಿಷಯಗಳು “ವಿವಾದಾತ್ಮಕ” ಎಂದು ಭಾವಿಸಿತು. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ಭಾಸ್ಕರನ್, ತಿರುನೆಲ್ವೇಲಿ ಶಾಸಕ ಎ.ಎಲ್.ಎಸ್.ಲಕ್ಷ್ಮಣನ್ ಮತ್ತು ಡಿಎಂಕೆ ತಿರುನೆಲ್ವೇಲಿ ನಗರ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ವಹಾಬ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪುಸ್ತಕದ ಬಗ್ಗೆ ನಿರ್ಧರಿಸಬೇಕಾದ ಅಧ್ಯಯನ ಮಂಡಳಿಯನ್ನು ಕತ್ತಲೆಯಲ್ಲಿ ಇಡಲಾಗಿದೆ. ಸಂಘಟನೆಯೊಂದರ ಪತ್ರವನ್ನು ಅನುಸರಿಸಿದ ವಿವಿಯು ತರಾತುರಿಯಲ್ಲಿ ಪಠ್ಯವನ್ನು ಬದಲಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

“ಪ್ರಸಿದ್ದ ಪ್ರಕಾಶಕರು ಪ್ರಕಟಿಸಿದ ಈ ಪುಸ್ತಕವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ನಿಷೇಧಿಸಿಲ್ಲ. ಪುಸ್ತಕವನ್ನು ಹಿಂಪಡೆಯಲು ಅಧ್ಯಯನ ಮಂಡಳಿಯಿಂದ ಅನುಮೋದನೆ ಪಡೆಯುವ ಬದಲು, ಸಣ್ಣ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ವಿಶ್ವವಿದ್ಯಾನಿಲಯ ಅವಸರದಿಂದ ಮತ್ತು ನಿರಂಕುಶವಾಗಿ ವರ್ತಿಸಿತು” ಎಂದು ಅವರು ಹೇಳಿದ್ದಾರೆ.

ಪುಸ್ತಕವು “ಹೋರಾಟ” ದ ಬಗ್ಗೆ ಇದ್ದು, ಅದನ್ನು ಹಿಂಪಡೆದು ಕೊಳ್ಳುವುದನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಉಪಕುಲಪತಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾಸ್ಕರನ್, ವಿಶ್ವವಿದ್ಯಾನಿಲಯವು ಸ್ವಾತಂತ್ರ್ಯ ಹೋರಾಟವನ್ನು ಅದರ ಪಠ್ಯಕ್ರಮದಿಂದ ತೆಗೆದುಹಾಕುತ್ತದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಈ ವಿಷಯವನ್ನು ವಿಶ್ವವಿದ್ಯಾನಿಲಯವೆ ರಾಜಕೀಯಗೊಳಿಸಿದೆ… ಎಬಿವಿಪಿಯಿಂದ ಬಂದ ಪತ್ರದ ಆಧಾರದ ಮೇಲೆ ವಿವಿ ತೆಗೆದುಕೊಂಡ ತಪ್ಪು ನಿರ್ಧಾರಕ್ಕೆ ಮಾತ್ರ ನಮ್ಮ ಪ್ರತಿಕ್ರಿಯೆ. ವಿಶ್ವವಿದ್ಯಾನಿಲಯವು ಒಂದೇ ಸಂಘಟನೆಯ ಪತ್ರದ ಮೇಲೆ ಕಾರ್ಯನಿರ್ವಹಿಸಿದರೆ, ನಾವು 15 ಸಂಘಟನೆಗಳನ್ನು ಒಳಗೊಂಡಿದ್ದೇವೆ, ಈಗ ಪಠ್ಯಕ್ರಮದಲ್ಲಿ ಪುಸ್ತಕವನ್ನು ಪುನಃ ಸೇರಿಸಲು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ, ನಾವು ಈ ಅನ್ಯಾಯದ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಭಾಸ್ಕರನ್ ಹೇಳಿದ್ದಾರೆ.

ಅವರ ಮನವಿಯನ್ನು ಪರಿಗಣಿಸುವುದಾಗಿ ಉಪಕುಲಪತಿ ಡಾ. ಕೆ.ಪಿಚ್ಚುಮಣಿ ತಿಳಿಸಿದ್ದಾರೆಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...