Homeಮುಖಪುಟ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯವು 2017 ರಿಂದ ತನ್ನ ಪಠ್ಯಕ್ರಮದ ಭಾಗವಾಗಿದ್ದ ಅರುಂಧತಿ ರಾಯ್ ಬರೆದಿರುವ ಈ ಕೃತಿಯನ್ನು ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಾಪಸು ಪಡೆದಿತ್ತು.

- Advertisement -
- Advertisement -

ಡಿಎಂಕೆ ಒಳಗೊಂಡಂತೆ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಹಾಗೂ ಸಾಮಾಜಿಕ ಸಂಘಟನೆಗಳು, ಶೈಕ್ಷಣಿಕ ಹಕ್ಕುಗಳ ಸಂರಕ್ಷಣಾ ಸಮನ್ವಯ ಸಮಿತಿಯ (CCPER) ಅಡಿಯಲ್ಲಿ ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯದ ಎಂಎ ಇಂಗ್ಲಿಷ್ ಪಠ್ಯಕ್ರಮದಲ್ಲಿ ಲೇಖಕಿ ಅರುಂಧತಿ ರಾಯ್ ಅವರ “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಕೃತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದೆ.

2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿದ್ದ ಈ ಪುಸ್ತಕವನ್ನು ವಾಪಾಸು ಪಠ್ಯಕ್ರಮಕ್ಕೆ ಸೇರಿಸುವ ನಿಟ್ಟಿನಲ್ಲಿ ಅವರು ಮಂಗಳವಾರ ಉಪಕುಲಪತಿ ಡಾ. ಕೆ.ಪಿಚ್ಚುಮಣಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ.

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಲೇಖಕಿ ಅರುಂದತಿ ರಾಯ್ ಮಾವೋವಾದಿ ಶಿಬಿರಗಳಿಗೆ ನೀಡಿದ್ದ ಭೇಟಿ ಆಧರಿಸಿದ ಪುಸ್ತಕವನ್ನು ವಾಪಸು ಪಡೆದಿತ್ತು. ಅದರ ಬದಲು ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ ಎಂದು ವಿವಿ ಹೇಳಿತ್ತು.

ಇದನ್ನೂ ಓದಿ: ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

CCPER ಸದಸ್ಯರಿಂದ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಡಾ. ಕೆ.ಪಿಚ್ಚುಮಣಿ, “ಈ ಹಿಂದೆ ವಿಶ್ವವಿದ್ಯಾನಿಲಯದೊಂದಿಗೆ ಸಂಬಂಧ ಹೊಂದಿದ್ದ ಶಿಕ್ಷಣ ತಜ್ಞರು ಮೂರು ವರ್ಷಗಳ ಹಿಂದೆಯೆ ಎಂಎ ಇಂಗ್ಲಿಷ್‌ಗಾಗಿ ಪಠ್ಯಕ್ರಮದಲ್ಲಿ ಪುಸ್ತಕವನ್ನು ಸೇರಿಸುವುದನ್ನು ಎಚ್ಚರಿಸಿದ್ದಾರೆ. ಇತ್ತೀಚೆಗೆ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆಗಳಾಗಿದೆ” ಎಂದು ಹೇಳಿದ್ದಾರೆ.

ಇದರ ನಂತರ, ಎಬಿವಿಪಿ ತನ್ನ ಮನವಿ ಸಲ್ಲಿಸಿ ಪಠ್ಯಕ್ರಮದಿಂದ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ. ಈ ಸಮಸ್ಯೆಯ ಬಗ್ಗೆ ಪರೀಕ್ಷಿಸಲು ರಚಿಸಲಾದ ಸಮಿತಿಯು ಪುಸ್ತಕದ ವಿಷಯಗಳು “ವಿವಾದಾತ್ಮಕ” ಎಂದು ಭಾವಿಸಿತು. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ಭಾಸ್ಕರನ್, ತಿರುನೆಲ್ವೇಲಿ ಶಾಸಕ ಎ.ಎಲ್.ಎಸ್.ಲಕ್ಷ್ಮಣನ್ ಮತ್ತು ಡಿಎಂಕೆ ತಿರುನೆಲ್ವೇಲಿ ನಗರ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ವಹಾಬ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪುಸ್ತಕದ ಬಗ್ಗೆ ನಿರ್ಧರಿಸಬೇಕಾದ ಅಧ್ಯಯನ ಮಂಡಳಿಯನ್ನು ಕತ್ತಲೆಯಲ್ಲಿ ಇಡಲಾಗಿದೆ. ಸಂಘಟನೆಯೊಂದರ ಪತ್ರವನ್ನು ಅನುಸರಿಸಿದ ವಿವಿಯು ತರಾತುರಿಯಲ್ಲಿ ಪಠ್ಯವನ್ನು ಬದಲಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

“ಪ್ರಸಿದ್ದ ಪ್ರಕಾಶಕರು ಪ್ರಕಟಿಸಿದ ಈ ಪುಸ್ತಕವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ನಿಷೇಧಿಸಿಲ್ಲ. ಪುಸ್ತಕವನ್ನು ಹಿಂಪಡೆಯಲು ಅಧ್ಯಯನ ಮಂಡಳಿಯಿಂದ ಅನುಮೋದನೆ ಪಡೆಯುವ ಬದಲು, ಸಣ್ಣ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ವಿಶ್ವವಿದ್ಯಾನಿಲಯ ಅವಸರದಿಂದ ಮತ್ತು ನಿರಂಕುಶವಾಗಿ ವರ್ತಿಸಿತು” ಎಂದು ಅವರು ಹೇಳಿದ್ದಾರೆ.

ಪುಸ್ತಕವು “ಹೋರಾಟ” ದ ಬಗ್ಗೆ ಇದ್ದು, ಅದನ್ನು ಹಿಂಪಡೆದು ಕೊಳ್ಳುವುದನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಉಪಕುಲಪತಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾಸ್ಕರನ್, ವಿಶ್ವವಿದ್ಯಾನಿಲಯವು ಸ್ವಾತಂತ್ರ್ಯ ಹೋರಾಟವನ್ನು ಅದರ ಪಠ್ಯಕ್ರಮದಿಂದ ತೆಗೆದುಹಾಕುತ್ತದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಈ ವಿಷಯವನ್ನು ವಿಶ್ವವಿದ್ಯಾನಿಲಯವೆ ರಾಜಕೀಯಗೊಳಿಸಿದೆ… ಎಬಿವಿಪಿಯಿಂದ ಬಂದ ಪತ್ರದ ಆಧಾರದ ಮೇಲೆ ವಿವಿ ತೆಗೆದುಕೊಂಡ ತಪ್ಪು ನಿರ್ಧಾರಕ್ಕೆ ಮಾತ್ರ ನಮ್ಮ ಪ್ರತಿಕ್ರಿಯೆ. ವಿಶ್ವವಿದ್ಯಾನಿಲಯವು ಒಂದೇ ಸಂಘಟನೆಯ ಪತ್ರದ ಮೇಲೆ ಕಾರ್ಯನಿರ್ವಹಿಸಿದರೆ, ನಾವು 15 ಸಂಘಟನೆಗಳನ್ನು ಒಳಗೊಂಡಿದ್ದೇವೆ, ಈಗ ಪಠ್ಯಕ್ರಮದಲ್ಲಿ ಪುಸ್ತಕವನ್ನು ಪುನಃ ಸೇರಿಸಲು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ, ನಾವು ಈ ಅನ್ಯಾಯದ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಭಾಸ್ಕರನ್ ಹೇಳಿದ್ದಾರೆ.

ಅವರ ಮನವಿಯನ್ನು ಪರಿಗಣಿಸುವುದಾಗಿ ಉಪಕುಲಪತಿ ಡಾ. ಕೆ.ಪಿಚ್ಚುಮಣಿ ತಿಳಿಸಿದ್ದಾರೆಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...