Homeಮುಖಪುಟ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯವು 2017 ರಿಂದ ತನ್ನ ಪಠ್ಯಕ್ರಮದ ಭಾಗವಾಗಿದ್ದ ಅರುಂಧತಿ ರಾಯ್ ಬರೆದಿರುವ ಈ ಕೃತಿಯನ್ನು ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಾಪಸು ಪಡೆದಿತ್ತು.

- Advertisement -
- Advertisement -

ಡಿಎಂಕೆ ಒಳಗೊಂಡಂತೆ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಹಾಗೂ ಸಾಮಾಜಿಕ ಸಂಘಟನೆಗಳು, ಶೈಕ್ಷಣಿಕ ಹಕ್ಕುಗಳ ಸಂರಕ್ಷಣಾ ಸಮನ್ವಯ ಸಮಿತಿಯ (CCPER) ಅಡಿಯಲ್ಲಿ ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯದ ಎಂಎ ಇಂಗ್ಲಿಷ್ ಪಠ್ಯಕ್ರಮದಲ್ಲಿ ಲೇಖಕಿ ಅರುಂಧತಿ ರಾಯ್ ಅವರ “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಕೃತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದೆ.

2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿದ್ದ ಈ ಪುಸ್ತಕವನ್ನು ವಾಪಾಸು ಪಠ್ಯಕ್ರಮಕ್ಕೆ ಸೇರಿಸುವ ನಿಟ್ಟಿನಲ್ಲಿ ಅವರು ಮಂಗಳವಾರ ಉಪಕುಲಪತಿ ಡಾ. ಕೆ.ಪಿಚ್ಚುಮಣಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ.

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಲೇಖಕಿ ಅರುಂದತಿ ರಾಯ್ ಮಾವೋವಾದಿ ಶಿಬಿರಗಳಿಗೆ ನೀಡಿದ್ದ ಭೇಟಿ ಆಧರಿಸಿದ ಪುಸ್ತಕವನ್ನು ವಾಪಸು ಪಡೆದಿತ್ತು. ಅದರ ಬದಲು ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ ಎಂದು ವಿವಿ ಹೇಳಿತ್ತು.

ಇದನ್ನೂ ಓದಿ: ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

CCPER ಸದಸ್ಯರಿಂದ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಡಾ. ಕೆ.ಪಿಚ್ಚುಮಣಿ, “ಈ ಹಿಂದೆ ವಿಶ್ವವಿದ್ಯಾನಿಲಯದೊಂದಿಗೆ ಸಂಬಂಧ ಹೊಂದಿದ್ದ ಶಿಕ್ಷಣ ತಜ್ಞರು ಮೂರು ವರ್ಷಗಳ ಹಿಂದೆಯೆ ಎಂಎ ಇಂಗ್ಲಿಷ್‌ಗಾಗಿ ಪಠ್ಯಕ್ರಮದಲ್ಲಿ ಪುಸ್ತಕವನ್ನು ಸೇರಿಸುವುದನ್ನು ಎಚ್ಚರಿಸಿದ್ದಾರೆ. ಇತ್ತೀಚೆಗೆ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆಗಳಾಗಿದೆ” ಎಂದು ಹೇಳಿದ್ದಾರೆ.

ಇದರ ನಂತರ, ಎಬಿವಿಪಿ ತನ್ನ ಮನವಿ ಸಲ್ಲಿಸಿ ಪಠ್ಯಕ್ರಮದಿಂದ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ. ಈ ಸಮಸ್ಯೆಯ ಬಗ್ಗೆ ಪರೀಕ್ಷಿಸಲು ರಚಿಸಲಾದ ಸಮಿತಿಯು ಪುಸ್ತಕದ ವಿಷಯಗಳು “ವಿವಾದಾತ್ಮಕ” ಎಂದು ಭಾವಿಸಿತು. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ಭಾಸ್ಕರನ್, ತಿರುನೆಲ್ವೇಲಿ ಶಾಸಕ ಎ.ಎಲ್.ಎಸ್.ಲಕ್ಷ್ಮಣನ್ ಮತ್ತು ಡಿಎಂಕೆ ತಿರುನೆಲ್ವೇಲಿ ನಗರ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ವಹಾಬ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪುಸ್ತಕದ ಬಗ್ಗೆ ನಿರ್ಧರಿಸಬೇಕಾದ ಅಧ್ಯಯನ ಮಂಡಳಿಯನ್ನು ಕತ್ತಲೆಯಲ್ಲಿ ಇಡಲಾಗಿದೆ. ಸಂಘಟನೆಯೊಂದರ ಪತ್ರವನ್ನು ಅನುಸರಿಸಿದ ವಿವಿಯು ತರಾತುರಿಯಲ್ಲಿ ಪಠ್ಯವನ್ನು ಬದಲಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

“ಪ್ರಸಿದ್ದ ಪ್ರಕಾಶಕರು ಪ್ರಕಟಿಸಿದ ಈ ಪುಸ್ತಕವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ನಿಷೇಧಿಸಿಲ್ಲ. ಪುಸ್ತಕವನ್ನು ಹಿಂಪಡೆಯಲು ಅಧ್ಯಯನ ಮಂಡಳಿಯಿಂದ ಅನುಮೋದನೆ ಪಡೆಯುವ ಬದಲು, ಸಣ್ಣ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ವಿಶ್ವವಿದ್ಯಾನಿಲಯ ಅವಸರದಿಂದ ಮತ್ತು ನಿರಂಕುಶವಾಗಿ ವರ್ತಿಸಿತು” ಎಂದು ಅವರು ಹೇಳಿದ್ದಾರೆ.

ಪುಸ್ತಕವು “ಹೋರಾಟ” ದ ಬಗ್ಗೆ ಇದ್ದು, ಅದನ್ನು ಹಿಂಪಡೆದು ಕೊಳ್ಳುವುದನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಉಪಕುಲಪತಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾಸ್ಕರನ್, ವಿಶ್ವವಿದ್ಯಾನಿಲಯವು ಸ್ವಾತಂತ್ರ್ಯ ಹೋರಾಟವನ್ನು ಅದರ ಪಠ್ಯಕ್ರಮದಿಂದ ತೆಗೆದುಹಾಕುತ್ತದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಈ ವಿಷಯವನ್ನು ವಿಶ್ವವಿದ್ಯಾನಿಲಯವೆ ರಾಜಕೀಯಗೊಳಿಸಿದೆ… ಎಬಿವಿಪಿಯಿಂದ ಬಂದ ಪತ್ರದ ಆಧಾರದ ಮೇಲೆ ವಿವಿ ತೆಗೆದುಕೊಂಡ ತಪ್ಪು ನಿರ್ಧಾರಕ್ಕೆ ಮಾತ್ರ ನಮ್ಮ ಪ್ರತಿಕ್ರಿಯೆ. ವಿಶ್ವವಿದ್ಯಾನಿಲಯವು ಒಂದೇ ಸಂಘಟನೆಯ ಪತ್ರದ ಮೇಲೆ ಕಾರ್ಯನಿರ್ವಹಿಸಿದರೆ, ನಾವು 15 ಸಂಘಟನೆಗಳನ್ನು ಒಳಗೊಂಡಿದ್ದೇವೆ, ಈಗ ಪಠ್ಯಕ್ರಮದಲ್ಲಿ ಪುಸ್ತಕವನ್ನು ಪುನಃ ಸೇರಿಸಲು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ, ನಾವು ಈ ಅನ್ಯಾಯದ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಭಾಸ್ಕರನ್ ಹೇಳಿದ್ದಾರೆ.

ಅವರ ಮನವಿಯನ್ನು ಪರಿಗಣಿಸುವುದಾಗಿ ಉಪಕುಲಪತಿ ಡಾ. ಕೆ.ಪಿಚ್ಚುಮಣಿ ತಿಳಿಸಿದ್ದಾರೆಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...