Homeಮುಖಪುಟ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯವು 2017 ರಿಂದ ತನ್ನ ಪಠ್ಯಕ್ರಮದ ಭಾಗವಾಗಿದ್ದ ಅರುಂಧತಿ ರಾಯ್ ಬರೆದಿರುವ ಈ ಕೃತಿಯನ್ನು ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಾಪಸು ಪಡೆದಿತ್ತು.

- Advertisement -
- Advertisement -

ಡಿಎಂಕೆ ಒಳಗೊಂಡಂತೆ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಹಾಗೂ ಸಾಮಾಜಿಕ ಸಂಘಟನೆಗಳು, ಶೈಕ್ಷಣಿಕ ಹಕ್ಕುಗಳ ಸಂರಕ್ಷಣಾ ಸಮನ್ವಯ ಸಮಿತಿಯ (CCPER) ಅಡಿಯಲ್ಲಿ ತಮಿಳುನಾಡಿನ ಮನೋನ್ಮನಿಯಮ್ ಸುಂದರನಾರ್‌ ವಿಶ್ವವಿದ್ಯಾನಿಲಯದ ಎಂಎ ಇಂಗ್ಲಿಷ್ ಪಠ್ಯಕ್ರಮದಲ್ಲಿ ಲೇಖಕಿ ಅರುಂಧತಿ ರಾಯ್ ಅವರ “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಕೃತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದೆ.

2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿದ್ದ ಈ ಪುಸ್ತಕವನ್ನು ವಾಪಾಸು ಪಠ್ಯಕ್ರಮಕ್ಕೆ ಸೇರಿಸುವ ನಿಟ್ಟಿನಲ್ಲಿ ಅವರು ಮಂಗಳವಾರ ಉಪಕುಲಪತಿ ಡಾ. ಕೆ.ಪಿಚ್ಚುಮಣಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ.

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಲೇಖಕಿ ಅರುಂದತಿ ರಾಯ್ ಮಾವೋವಾದಿ ಶಿಬಿರಗಳಿಗೆ ನೀಡಿದ್ದ ಭೇಟಿ ಆಧರಿಸಿದ ಪುಸ್ತಕವನ್ನು ವಾಪಸು ಪಡೆದಿತ್ತು. ಅದರ ಬದಲು ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ ಎಂದು ವಿವಿ ಹೇಳಿತ್ತು.

ಇದನ್ನೂ ಓದಿ: ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

CCPER ಸದಸ್ಯರಿಂದ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಡಾ. ಕೆ.ಪಿಚ್ಚುಮಣಿ, “ಈ ಹಿಂದೆ ವಿಶ್ವವಿದ್ಯಾನಿಲಯದೊಂದಿಗೆ ಸಂಬಂಧ ಹೊಂದಿದ್ದ ಶಿಕ್ಷಣ ತಜ್ಞರು ಮೂರು ವರ್ಷಗಳ ಹಿಂದೆಯೆ ಎಂಎ ಇಂಗ್ಲಿಷ್‌ಗಾಗಿ ಪಠ್ಯಕ್ರಮದಲ್ಲಿ ಪುಸ್ತಕವನ್ನು ಸೇರಿಸುವುದನ್ನು ಎಚ್ಚರಿಸಿದ್ದಾರೆ. ಇತ್ತೀಚೆಗೆ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆಗಳಾಗಿದೆ” ಎಂದು ಹೇಳಿದ್ದಾರೆ.

ಇದರ ನಂತರ, ಎಬಿವಿಪಿ ತನ್ನ ಮನವಿ ಸಲ್ಲಿಸಿ ಪಠ್ಯಕ್ರಮದಿಂದ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ. ಈ ಸಮಸ್ಯೆಯ ಬಗ್ಗೆ ಪರೀಕ್ಷಿಸಲು ರಚಿಸಲಾದ ಸಮಿತಿಯು ಪುಸ್ತಕದ ವಿಷಯಗಳು “ವಿವಾದಾತ್ಮಕ” ಎಂದು ಭಾವಿಸಿತು. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ಭಾಸ್ಕರನ್, ತಿರುನೆಲ್ವೇಲಿ ಶಾಸಕ ಎ.ಎಲ್.ಎಸ್.ಲಕ್ಷ್ಮಣನ್ ಮತ್ತು ಡಿಎಂಕೆ ತಿರುನೆಲ್ವೇಲಿ ನಗರ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ವಹಾಬ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪುಸ್ತಕದ ಬಗ್ಗೆ ನಿರ್ಧರಿಸಬೇಕಾದ ಅಧ್ಯಯನ ಮಂಡಳಿಯನ್ನು ಕತ್ತಲೆಯಲ್ಲಿ ಇಡಲಾಗಿದೆ. ಸಂಘಟನೆಯೊಂದರ ಪತ್ರವನ್ನು ಅನುಸರಿಸಿದ ವಿವಿಯು ತರಾತುರಿಯಲ್ಲಿ ಪಠ್ಯವನ್ನು ಬದಲಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

“ಪ್ರಸಿದ್ದ ಪ್ರಕಾಶಕರು ಪ್ರಕಟಿಸಿದ ಈ ಪುಸ್ತಕವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ನಿಷೇಧಿಸಿಲ್ಲ. ಪುಸ್ತಕವನ್ನು ಹಿಂಪಡೆಯಲು ಅಧ್ಯಯನ ಮಂಡಳಿಯಿಂದ ಅನುಮೋದನೆ ಪಡೆಯುವ ಬದಲು, ಸಣ್ಣ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ವಿಶ್ವವಿದ್ಯಾನಿಲಯ ಅವಸರದಿಂದ ಮತ್ತು ನಿರಂಕುಶವಾಗಿ ವರ್ತಿಸಿತು” ಎಂದು ಅವರು ಹೇಳಿದ್ದಾರೆ.

ಪುಸ್ತಕವು “ಹೋರಾಟ” ದ ಬಗ್ಗೆ ಇದ್ದು, ಅದನ್ನು ಹಿಂಪಡೆದು ಕೊಳ್ಳುವುದನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಉಪಕುಲಪತಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾಸ್ಕರನ್, ವಿಶ್ವವಿದ್ಯಾನಿಲಯವು ಸ್ವಾತಂತ್ರ್ಯ ಹೋರಾಟವನ್ನು ಅದರ ಪಠ್ಯಕ್ರಮದಿಂದ ತೆಗೆದುಹಾಕುತ್ತದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಈ ವಿಷಯವನ್ನು ವಿಶ್ವವಿದ್ಯಾನಿಲಯವೆ ರಾಜಕೀಯಗೊಳಿಸಿದೆ… ಎಬಿವಿಪಿಯಿಂದ ಬಂದ ಪತ್ರದ ಆಧಾರದ ಮೇಲೆ ವಿವಿ ತೆಗೆದುಕೊಂಡ ತಪ್ಪು ನಿರ್ಧಾರಕ್ಕೆ ಮಾತ್ರ ನಮ್ಮ ಪ್ರತಿಕ್ರಿಯೆ. ವಿಶ್ವವಿದ್ಯಾನಿಲಯವು ಒಂದೇ ಸಂಘಟನೆಯ ಪತ್ರದ ಮೇಲೆ ಕಾರ್ಯನಿರ್ವಹಿಸಿದರೆ, ನಾವು 15 ಸಂಘಟನೆಗಳನ್ನು ಒಳಗೊಂಡಿದ್ದೇವೆ, ಈಗ ಪಠ್ಯಕ್ರಮದಲ್ಲಿ ಪುಸ್ತಕವನ್ನು ಪುನಃ ಸೇರಿಸಲು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ, ನಾವು ಈ ಅನ್ಯಾಯದ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಭಾಸ್ಕರನ್ ಹೇಳಿದ್ದಾರೆ.

ಅವರ ಮನವಿಯನ್ನು ಪರಿಗಣಿಸುವುದಾಗಿ ಉಪಕುಲಪತಿ ಡಾ. ಕೆ.ಪಿಚ್ಚುಮಣಿ ತಿಳಿಸಿದ್ದಾರೆಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...